‘ರೀಸೈಕ್ಲಿಂಗ್ ಇಂಟೆರ್ನ್ಯಾಷನಲ್’ ಯುರೋಪ್ ನ ಪ್ರಭಾವಿ ಪಟ್ಟಿಯಲ್ಲಿ ಮಲೆನಾಡು ಮೂಲದ ಉದ್ಯಮಿ ವೆಂಕಟೇಶ್ ಮೂರ್ತಿ ಹೆಸರು!

ಚಿಕ್ಕಮಗಳೂರು: ರೀಸೈಕ್ಲಿಂಗ್ ಇಂಟೆರ್ನ್ಯಾಷನಲ್ ಯುರೋಪ್ ವಿಶ್ವದ 100 ಪ್ರಭಾವಿ ಜನರನ್ನು ಆಯ್ಕೆ ಮಾಡಿದ್ದು,ಇದರಲ್ಲಿ ಕೊಪ್ಪ ಮೂಲದ ವೆಂಕಟೇಶ್ ಮೂರ್ತಿಯವರು 28ನೇ ಸ್ಥಾನವನ್ನು ಪಡೆದು ಭಾರತಕ್ಕೆ ಗರಿಮೆಯನ್ನು ತಂದು ಕೊಟ್ಟಿದ್ದಾರೆ. 



ವೆಂಕಟೇಶ್ ಮೂರ್ತಿಯವರು ಮಲೆನಾಡಿನ ಚಿಕ್ಕಮಗಳೂರು ಜಿಲ್ಲೆ, ಕೊಪ್ಪ ತಾಲೂಕಿನ ಬೆಳವಾಡಿಯಲ್ಲಿ ಜನಿಸಿ ,ರೈತಾಪಿ ಕುಟುಂಬದಿಂದ ಬೆಳೆದು ,ತಮ್ಮ ಶ್ರಮ ಹಾಗೂ ಪರಿಶ್ರಮದಿಂದ ವಿಶ್ವದ ಉನ್ನತ ಮಟ್ಟವನ್ನು ತಲುಪಿದ್ದಾರೆ.

ಇವರು ತಮ್ಮ ವಿದ್ಯಾಭ್ಯಾಸವನ್ನು ಹಳ್ಳಿಯಿಂದಲೇ ಪ್ರಾರಂಭಿಸಿ , ಉನ್ನತ ಶಿಕ್ಷಣ ಎಂ.ಟೆಕ್ ಅನ್ನು ಸುರತ್ಕಲ್ಲಿನಲ್ಲಿ ಹಾಗೂ ಎಂಬಿಎ ಪದವಿಯನ್ನು ಸಿಂಗಾಪುರದಲ್ಲಿ ಮಾಡಿದ್ದಾರೆ. ಇವರಿಗೆ “ಈ-ತ್ಯಾಜ್ಯ”ಇಂಡಸ್ಟ್ರಿಯಲ್ಲಿ ಸರಿ ಸುಮಾರು 25 ವರ್ಷ ಅನುಭವಗಳಿದ್ದು ಹತ್ತು ಹಲವು ಸಾಧನೆಗಳನ್ನು ಮಾಡಿದ್ದಾರೆ.

ವ್ಯಾನ್ಸ್ ಕೆಮಿಸ್ಟ್ರಿ ಎಂಬ ಸಂಸ್ಥೆಯ ಸಂಸ್ಥಾಪಕರು ಹಾಗೂ ನಿರ್ದೇಶಕರಾಗಿರುವ ಇವರು, ಯುಎಸ್ಎ, ವಾಷಿಂಗ್ಟನ್ ಡಿಸಿ , ಸೆರಿಯ ವೈಸ್ ಛೇರ್ಮನ್ ಮತ್ತು ಬೋರ್ಡ್ ಆಫ್ ಡೈರಕ್ಟರ್ ಕೂಡ ಆಗಿದ್ದರೆ. ಸದ್ಯ “ಈ-ತ್ಯಾಜ್ಯ” ಸಂಸ್ಥೆಯ ಏಷ್ಯಾ ಖಂಡದ ರಾಯಭಾರಿಯಾಗಿದ್ದಾರೆ.

ಇವರು 2019ರ ಸಿಂಗಾಪುರದ “ಸಿಂಗಾರ” ಪುರಸ್ಕಾರ ಹಾಗು 2014ರ “ಅನಿವಾಸಿ ಭಾರತೀಯ ” ಪ್ರಶಸ್ತಿಗೆ ಭಾಜನರಾಗಿದ್ದು, 60ಕ್ಕೂ ಹೆಚ್ಚು ದೇಶಗಳನ್ನು ಪ್ರವಾಸ ಮಾಡಿ, ಹತ್ತಕ್ಕೂ ಹೆಚ್ಚು ಯೋಜನೆಗಳನ್ನು ಅಮೇರಿಕಾ, ಮಲೇಷಿಯಾ, ದಕ್ಷಿಣ ಆಫ್ರಿಕಾ , ಸಿಂಗಾಪುರ್ ಇತ್ಯಾದಿ ದೇಶಗಳ ಸಹಭಾಗಿತ್ವದೊಂದಿಗೆ ಜಾರಿಗೆ ತಂದಿದ್ದಾರೆ.

ಇ-ತ್ಯಾಜ್ಯದಲ್ಲಿ ತಮ್ಮದೇ ಆದ ಟೆಕ್ನೋಲೊಜಿ ಬಳಸಿ ಅದರಲ್ಲಿ ಬರುವ ಚಿನ್ನ , ತಾಮ್ರ ,ಅಲುಮಿನಿಯಂ, ಪ್ಲಾಟಿನಂ, ಪೇಲಾಡಿಯಂ ಹಾಗೂ ಪ್ಲಾಸ್ಟಿಕ್ ಇನ್ನಿತರ ವಸ್ತುಗಳನ್ನು ಮರುಬಳಕೆ ಮಾಡುವಂತೆ ಹಾಗೂ ಇದರಲ್ಲಿ ಬರುವ ವಿಷಕಾರಕ ಅಂಶಗಳನ್ನೂ ಸಂಸ್ಕರಿಸಿರುತ್ತಾರೆ.

ಭಾರತದಂತಹ ದೇಶಗಳಲ್ಲಿ ಇ-ತ್ಯಾಜ್ಯವನ್ನು ಅಸಂಪ್ರದಾಯ ಹಾಗು ಅವೈಜ್ಞಾನಿಕವಾಗಿ ಸಂಸ್ಕರಿಸುವುದರಿಂದ ಗಂಭೀರ ಆರೋಗ್ಯ ಮತ್ತು ಮಾಲಿನ ಸಮಸ್ಯೆಗಳು ಉಂಟಾಗುತ್ತದೆ. ವೆಂಕಟೇಶ್ ಮೂರ್ತಿಯವರ ಜ್ಞಾನ ಮತ್ತು ಅನುಭವದಿಂದ ಇದನ್ನು ತಡೆಯುವ ಯೋಜನೆಗಳಲ್ಲಿ ಇವರ ಸಂಸ್ಥೆಯು ಮುಂಚೂಣಿಯಲ್ಲಿದೆ.ವೆಂಕಟೇಶ ಮೂರ್ತಿಯವರ ಜೀವನ, ಸಾಧನೆ ಮತ್ತು ಚಿಂತನೆಗಳು ಎಲ್ಲಾ ಭಾರತೀಯರಿಗೆ ಅದರಲ್ಲೂ ಕನ್ನಡಿಗರಿಗೆ ಸ್ಪೂರ್ತಿಯ ಮತ್ತು ಹೆಮ್ಮೆಯ ವಿಷಯವಾಗಿದೆ

Spread the love
  • Related Posts

    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    Belthangady: ತಾಲೂಕಿನ ಹಲವೆಡೆ ಶನಿವಾರ ಸಂಜೆ ಉತ್ತಮ ಮಳೆಯಾಗಿದೆ.Shishila, Kokkada, Dharmasthala, Arasinamakki, Ujire ಹಾಗೂ Nidle ಮೊದಲಾದ ಕಡೆಗಳಲ್ಲಿ ಗುಡುಗು-ಸಿಡಿಲು ಸಹಿತ ಉತ್ತಮ ಮಳೆ ಸುರಿದಿದೆ. ಉಳಿದ ಕೆಲವು ಪ್ರದೇಶಗಳಲ್ಲಿ ತುಂತುರು ಹಾಗೂ ಸಾಮಾನ್ಯ ಮಳೆಯಾಗಿದೆ.ತಾಲೂಕಿನಲ್ಲಿ ಫೆಬ್ರವರಿ 21ರಂದು ಕೆಲವೆಡೆ…

    Spread the love

    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    ಬಂಗಾಡಿ: ಸೂರ್ಯ-ಚಂದ್ರ ಹೋಡುಕರೆ ಕಂಬಳ ಸಮಿತಿ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ಕಂಬಳ ಅಸೋಸಿಯೇಶನ್, ಕರ್ನಾಟಕ ಸರಕಾರ ಮತ್ತು ಯುವಜನ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಹಭಾಗಿತ್ವದೊಂದಿಗೆ 28ನೇ ವರ್ಷದ ಹೊನಲು ಬೆಳಕಿನ ಸೂರ್ಯ-ಚಂದ್ರ ಜೋಡುಕರೆ “ಬಂಗಾಡಿ ಕೊಲ್ಲಿ” ಬಯಲು ಕಂಬಳವು ಶ್ರೀ…

    Spread the love

    You Missed

    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    • By admin
    • March 15, 2026
    • 48 views
    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    • By admin
    • March 14, 2026
    • 85 views
    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

    • By admin
    • March 14, 2026
    • 36 views
    ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ  ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    • By admin
    • March 13, 2026
    • 604 views
    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

    • By admin
    • March 10, 2026
    • 148 views
    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ  ಅರ್ಜಿ ಆಹ್ವಾನ

    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ

    • By admin
    • March 10, 2026
    • 62 views
    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ