‘ರೀಸೈಕ್ಲಿಂಗ್ ಇಂಟೆರ್ನ್ಯಾಷನಲ್’ ಯುರೋಪ್ ನ ಪ್ರಭಾವಿ ಪಟ್ಟಿಯಲ್ಲಿ ಮಲೆನಾಡು ಮೂಲದ ಉದ್ಯಮಿ ವೆಂಕಟೇಶ್ ಮೂರ್ತಿ ಹೆಸರು!

ಚಿಕ್ಕಮಗಳೂರು: ರೀಸೈಕ್ಲಿಂಗ್ ಇಂಟೆರ್ನ್ಯಾಷನಲ್ ಯುರೋಪ್ ವಿಶ್ವದ 100 ಪ್ರಭಾವಿ ಜನರನ್ನು ಆಯ್ಕೆ ಮಾಡಿದ್ದು,ಇದರಲ್ಲಿ ಕೊಪ್ಪ ಮೂಲದ ವೆಂಕಟೇಶ್ ಮೂರ್ತಿಯವರು 28ನೇ ಸ್ಥಾನವನ್ನು ಪಡೆದು ಭಾರತಕ್ಕೆ ಗರಿಮೆಯನ್ನು ತಂದು ಕೊಟ್ಟಿದ್ದಾರೆ. 



ವೆಂಕಟೇಶ್ ಮೂರ್ತಿಯವರು ಮಲೆನಾಡಿನ ಚಿಕ್ಕಮಗಳೂರು ಜಿಲ್ಲೆ, ಕೊಪ್ಪ ತಾಲೂಕಿನ ಬೆಳವಾಡಿಯಲ್ಲಿ ಜನಿಸಿ ,ರೈತಾಪಿ ಕುಟುಂಬದಿಂದ ಬೆಳೆದು ,ತಮ್ಮ ಶ್ರಮ ಹಾಗೂ ಪರಿಶ್ರಮದಿಂದ ವಿಶ್ವದ ಉನ್ನತ ಮಟ್ಟವನ್ನು ತಲುಪಿದ್ದಾರೆ.

ಇವರು ತಮ್ಮ ವಿದ್ಯಾಭ್ಯಾಸವನ್ನು ಹಳ್ಳಿಯಿಂದಲೇ ಪ್ರಾರಂಭಿಸಿ , ಉನ್ನತ ಶಿಕ್ಷಣ ಎಂ.ಟೆಕ್ ಅನ್ನು ಸುರತ್ಕಲ್ಲಿನಲ್ಲಿ ಹಾಗೂ ಎಂಬಿಎ ಪದವಿಯನ್ನು ಸಿಂಗಾಪುರದಲ್ಲಿ ಮಾಡಿದ್ದಾರೆ. ಇವರಿಗೆ “ಈ-ತ್ಯಾಜ್ಯ”ಇಂಡಸ್ಟ್ರಿಯಲ್ಲಿ ಸರಿ ಸುಮಾರು 25 ವರ್ಷ ಅನುಭವಗಳಿದ್ದು ಹತ್ತು ಹಲವು ಸಾಧನೆಗಳನ್ನು ಮಾಡಿದ್ದಾರೆ.

ವ್ಯಾನ್ಸ್ ಕೆಮಿಸ್ಟ್ರಿ ಎಂಬ ಸಂಸ್ಥೆಯ ಸಂಸ್ಥಾಪಕರು ಹಾಗೂ ನಿರ್ದೇಶಕರಾಗಿರುವ ಇವರು, ಯುಎಸ್ಎ, ವಾಷಿಂಗ್ಟನ್ ಡಿಸಿ , ಸೆರಿಯ ವೈಸ್ ಛೇರ್ಮನ್ ಮತ್ತು ಬೋರ್ಡ್ ಆಫ್ ಡೈರಕ್ಟರ್ ಕೂಡ ಆಗಿದ್ದರೆ. ಸದ್ಯ “ಈ-ತ್ಯಾಜ್ಯ” ಸಂಸ್ಥೆಯ ಏಷ್ಯಾ ಖಂಡದ ರಾಯಭಾರಿಯಾಗಿದ್ದಾರೆ.

ಇವರು 2019ರ ಸಿಂಗಾಪುರದ “ಸಿಂಗಾರ” ಪುರಸ್ಕಾರ ಹಾಗು 2014ರ “ಅನಿವಾಸಿ ಭಾರತೀಯ ” ಪ್ರಶಸ್ತಿಗೆ ಭಾಜನರಾಗಿದ್ದು, 60ಕ್ಕೂ ಹೆಚ್ಚು ದೇಶಗಳನ್ನು ಪ್ರವಾಸ ಮಾಡಿ, ಹತ್ತಕ್ಕೂ ಹೆಚ್ಚು ಯೋಜನೆಗಳನ್ನು ಅಮೇರಿಕಾ, ಮಲೇಷಿಯಾ, ದಕ್ಷಿಣ ಆಫ್ರಿಕಾ , ಸಿಂಗಾಪುರ್ ಇತ್ಯಾದಿ ದೇಶಗಳ ಸಹಭಾಗಿತ್ವದೊಂದಿಗೆ ಜಾರಿಗೆ ತಂದಿದ್ದಾರೆ.

ಇ-ತ್ಯಾಜ್ಯದಲ್ಲಿ ತಮ್ಮದೇ ಆದ ಟೆಕ್ನೋಲೊಜಿ ಬಳಸಿ ಅದರಲ್ಲಿ ಬರುವ ಚಿನ್ನ , ತಾಮ್ರ ,ಅಲುಮಿನಿಯಂ, ಪ್ಲಾಟಿನಂ, ಪೇಲಾಡಿಯಂ ಹಾಗೂ ಪ್ಲಾಸ್ಟಿಕ್ ಇನ್ನಿತರ ವಸ್ತುಗಳನ್ನು ಮರುಬಳಕೆ ಮಾಡುವಂತೆ ಹಾಗೂ ಇದರಲ್ಲಿ ಬರುವ ವಿಷಕಾರಕ ಅಂಶಗಳನ್ನೂ ಸಂಸ್ಕರಿಸಿರುತ್ತಾರೆ.

ಭಾರತದಂತಹ ದೇಶಗಳಲ್ಲಿ ಇ-ತ್ಯಾಜ್ಯವನ್ನು ಅಸಂಪ್ರದಾಯ ಹಾಗು ಅವೈಜ್ಞಾನಿಕವಾಗಿ ಸಂಸ್ಕರಿಸುವುದರಿಂದ ಗಂಭೀರ ಆರೋಗ್ಯ ಮತ್ತು ಮಾಲಿನ ಸಮಸ್ಯೆಗಳು ಉಂಟಾಗುತ್ತದೆ. ವೆಂಕಟೇಶ್ ಮೂರ್ತಿಯವರ ಜ್ಞಾನ ಮತ್ತು ಅನುಭವದಿಂದ ಇದನ್ನು ತಡೆಯುವ ಯೋಜನೆಗಳಲ್ಲಿ ಇವರ ಸಂಸ್ಥೆಯು ಮುಂಚೂಣಿಯಲ್ಲಿದೆ.ವೆಂಕಟೇಶ ಮೂರ್ತಿಯವರ ಜೀವನ, ಸಾಧನೆ ಮತ್ತು ಚಿಂತನೆಗಳು ಎಲ್ಲಾ ಭಾರತೀಯರಿಗೆ ಅದರಲ್ಲೂ ಕನ್ನಡಿಗರಿಗೆ ಸ್ಪೂರ್ತಿಯ ಮತ್ತು ಹೆಮ್ಮೆಯ ವಿಷಯವಾಗಿದೆ

Spread the love
  • Related Posts

    ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಬೆಳ್ತಂಗಡಿ ತಾಲೂಕು ಘಟಕ ರಚನೆ: ನಿಶಾನ್ ಬಂಗೇರ ನಾರ್ಯ ಅಧ್ಯಕ್ಷರಾಗಿ ಆಯ್ಕೆ

    ಬೆಳ್ತಂಗಡಿ, ಜೂನ್ 13: ಸ್ಥಳೀಯ ಪತ್ರಿಕೋದ್ಯಮವನ್ನು ಮತ್ತಷ್ಟು ಬಲಪಡಿಸುವ ಹಾಗೂ ಪತ್ರಕರ್ತರ ಹಿತರಕ್ಷಣೆಗೆ ಒತ್ತು ನೀಡುವ ಉದ್ದೇಶದಿಂದ ಕರ್ನಾಟಕ ಜರ್ನಲಿಸ್ಟ್ ಯೂನಿಯನ್‌ನ ಬೆಳ್ತಂಗಡಿ ತಾಲೂಕು ಘಟಕದ 2026-27ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಯಶಸ್ವಿಯಾಗಿ ನಡೆಯಿತು. ಸಂಘದ ಮುಂದಿನ ಅವಧಿಗೆ…

    Spread the love

    ಓರಿಯಂಟೇಶನ್ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಯಶಸ್ಸಿನ ಮಂತ್ರ, ಶ್ರದ್ಧೆ ಮತ್ತು ಪರಿಶ್ರಮದಿಂದ ಉಜ್ವಲ ಭವಿಷ್ಯ ಸಾಧ್ಯ: ಸ್ಮಿತೇಶ್ ಬಾರ್ಯ

    ಗುರುವಾಯನಕೆರೆ: ಹತ್ತನೇ ತರಗತಿಯ ಬಳಿಕ ಒಳ್ಳೆಯ ಕಾಲೇಜನ್ನು ಆಯ್ಕೆ ಮಾಡಿಕೊಳ್ಳುವುದರಲ್ಲಿ ಬುದ್ಧಿವಂತಿಕೆ ಇದೆ. ಎಕ್ಸೆಲ್ ನ್ನು ಆಯ್ಕೆ ಮಾಡಿಕೊಂಡ ನೀವು ಬುದ್ಧಿವಂತರು. ಯಾಕೆಂದರೆ ಕಡಿಮೆ ಅವಧಿಯಲ್ಲಿ ಅತ್ಯಧಿಕ ಸಂಖ್ಯೆಯಲ್ಲಿ ಏಮ್ಸ್, ಜಿಪ್ಯಾರ್,ಐಐಟಿ, ಎನ್ ಐ ಐ ಟಿ ಸೇರಿ ಭಾರತದ ಪ್ರತಿಷ್ಠಿತ…

    Spread the love

    You Missed

    ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಬೆಳ್ತಂಗಡಿ ತಾಲೂಕು ಘಟಕ ರಚನೆ: ನಿಶಾನ್ ಬಂಗೇರ ನಾರ್ಯ ಅಧ್ಯಕ್ಷರಾಗಿ ಆಯ್ಕೆ

    • By admin
    • June 13, 2026
    • 43 views
    ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಬೆಳ್ತಂಗಡಿ ತಾಲೂಕು ಘಟಕ ರಚನೆ: ನಿಶಾನ್ ಬಂಗೇರ ನಾರ್ಯ ಅಧ್ಯಕ್ಷರಾಗಿ ಆಯ್ಕೆ

    ಓರಿಯಂಟೇಶನ್ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಯಶಸ್ಸಿನ ಮಂತ್ರ, ಶ್ರದ್ಧೆ ಮತ್ತು ಪರಿಶ್ರಮದಿಂದ ಉಜ್ವಲ ಭವಿಷ್ಯ ಸಾಧ್ಯ: ಸ್ಮಿತೇಶ್ ಬಾರ್ಯ

    • By admin
    • June 13, 2026
    • 18 views
    ಓರಿಯಂಟೇಶನ್ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಯಶಸ್ಸಿನ ಮಂತ್ರ, ಶ್ರದ್ಧೆ ಮತ್ತು ಪರಿಶ್ರಮದಿಂದ ಉಜ್ವಲ ಭವಿಷ್ಯ ಸಾಧ್ಯ: ಸ್ಮಿತೇಶ್ ಬಾರ್ಯ

    ಸ್ಪರ್ಧಾತ್ಮಕ ಪರೀಕ್ಷೆಗಳತ್ತ ವಿದ್ಯಾರ್ಥಿಗಳನ್ನು ಪ್ರೇರೇಪಿಸುವ ಒಲಿಂಪಿಯಾಡ್ ಕಾರ್ಯಕ್ರಮ,ಸಾಧಕ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ವಿತರಣೆ

    • By admin
    • June 13, 2026
    • 58 views
    ಸ್ಪರ್ಧಾತ್ಮಕ ಪರೀಕ್ಷೆಗಳತ್ತ ವಿದ್ಯಾರ್ಥಿಗಳನ್ನು ಪ್ರೇರೇಪಿಸುವ ಒಲಿಂಪಿಯಾಡ್ ಕಾರ್ಯಕ್ರಮ,ಸಾಧಕ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ವಿತರಣೆ

    ಬೆಳ್ತಂಗಡಿ ನರಸಿಂಹಗಡ (ಗಡಾಯಿಕಲ್ಲು) ಚಾರಣಕ್ಕೆ ಪ್ರವಾಸಿಗರಿಗೆ ನಿಷೇಧ ಹೇರಿದ ಅರಣ್ಯ ಇಲಾಖೆ!!!

    • By admin
    • June 13, 2026
    • 21 views
    ಬೆಳ್ತಂಗಡಿ ನರಸಿಂಹಗಡ (ಗಡಾಯಿಕಲ್ಲು) ಚಾರಣಕ್ಕೆ ಪ್ರವಾಸಿಗರಿಗೆ ನಿಷೇಧ ಹೇರಿದ ಅರಣ್ಯ ಇಲಾಖೆ!!!

    ಲ್ಯಾಂಡಿಂಗ್ ವೇಳೆ ದುರಂತ: ಬೆಂಕಿಗಾಹುತಿಯಾದ ವಾಯುಪಡೆಯ AN-32 ವಿಮಾನ

    • By admin
    • June 13, 2026
    • 186 views
    ಲ್ಯಾಂಡಿಂಗ್ ವೇಳೆ ದುರಂತ: ಬೆಂಕಿಗಾಹುತಿಯಾದ ವಾಯುಪಡೆಯ AN-32 ವಿಮಾನ

    ಎಕ್ಸೆಲ್ ಕಾಲೇಜಿನ ಮಾನ್ಯತೆ ರದ್ದು ಸುದ್ದಿ ಸುಳ್ಳು: ಆಡಳಿತ ಮಂಡಳಿ ಸ್ಪಷ್ಟನೆ

    • By admin
    • June 12, 2026
    • 2177 views
    ಎಕ್ಸೆಲ್ ಕಾಲೇಜಿನ ಮಾನ್ಯತೆ ರದ್ದು ಸುದ್ದಿ ಸುಳ್ಳು: ಆಡಳಿತ ಮಂಡಳಿ ಸ್ಪಷ್ಟನೆ