‘ರೀಸೈಕ್ಲಿಂಗ್ ಇಂಟೆರ್ನ್ಯಾಷನಲ್’ ಯುರೋಪ್ ನ ಪ್ರಭಾವಿ ಪಟ್ಟಿಯಲ್ಲಿ ಮಲೆನಾಡು ಮೂಲದ ಉದ್ಯಮಿ ವೆಂಕಟೇಶ್ ಮೂರ್ತಿ ಹೆಸರು!

ಚಿಕ್ಕಮಗಳೂರು: ರೀಸೈಕ್ಲಿಂಗ್ ಇಂಟೆರ್ನ್ಯಾಷನಲ್ ಯುರೋಪ್ ವಿಶ್ವದ 100 ಪ್ರಭಾವಿ ಜನರನ್ನು ಆಯ್ಕೆ ಮಾಡಿದ್ದು,ಇದರಲ್ಲಿ ಕೊಪ್ಪ ಮೂಲದ ವೆಂಕಟೇಶ್ ಮೂರ್ತಿಯವರು 28ನೇ ಸ್ಥಾನವನ್ನು ಪಡೆದು ಭಾರತಕ್ಕೆ ಗರಿಮೆಯನ್ನು ತಂದು ಕೊಟ್ಟಿದ್ದಾರೆ. 



ವೆಂಕಟೇಶ್ ಮೂರ್ತಿಯವರು ಮಲೆನಾಡಿನ ಚಿಕ್ಕಮಗಳೂರು ಜಿಲ್ಲೆ, ಕೊಪ್ಪ ತಾಲೂಕಿನ ಬೆಳವಾಡಿಯಲ್ಲಿ ಜನಿಸಿ ,ರೈತಾಪಿ ಕುಟುಂಬದಿಂದ ಬೆಳೆದು ,ತಮ್ಮ ಶ್ರಮ ಹಾಗೂ ಪರಿಶ್ರಮದಿಂದ ವಿಶ್ವದ ಉನ್ನತ ಮಟ್ಟವನ್ನು ತಲುಪಿದ್ದಾರೆ.

ಇವರು ತಮ್ಮ ವಿದ್ಯಾಭ್ಯಾಸವನ್ನು ಹಳ್ಳಿಯಿಂದಲೇ ಪ್ರಾರಂಭಿಸಿ , ಉನ್ನತ ಶಿಕ್ಷಣ ಎಂ.ಟೆಕ್ ಅನ್ನು ಸುರತ್ಕಲ್ಲಿನಲ್ಲಿ ಹಾಗೂ ಎಂಬಿಎ ಪದವಿಯನ್ನು ಸಿಂಗಾಪುರದಲ್ಲಿ ಮಾಡಿದ್ದಾರೆ. ಇವರಿಗೆ “ಈ-ತ್ಯಾಜ್ಯ”ಇಂಡಸ್ಟ್ರಿಯಲ್ಲಿ ಸರಿ ಸುಮಾರು 25 ವರ್ಷ ಅನುಭವಗಳಿದ್ದು ಹತ್ತು ಹಲವು ಸಾಧನೆಗಳನ್ನು ಮಾಡಿದ್ದಾರೆ.

ವ್ಯಾನ್ಸ್ ಕೆಮಿಸ್ಟ್ರಿ ಎಂಬ ಸಂಸ್ಥೆಯ ಸಂಸ್ಥಾಪಕರು ಹಾಗೂ ನಿರ್ದೇಶಕರಾಗಿರುವ ಇವರು, ಯುಎಸ್ಎ, ವಾಷಿಂಗ್ಟನ್ ಡಿಸಿ , ಸೆರಿಯ ವೈಸ್ ಛೇರ್ಮನ್ ಮತ್ತು ಬೋರ್ಡ್ ಆಫ್ ಡೈರಕ್ಟರ್ ಕೂಡ ಆಗಿದ್ದರೆ. ಸದ್ಯ “ಈ-ತ್ಯಾಜ್ಯ” ಸಂಸ್ಥೆಯ ಏಷ್ಯಾ ಖಂಡದ ರಾಯಭಾರಿಯಾಗಿದ್ದಾರೆ.

ಇವರು 2019ರ ಸಿಂಗಾಪುರದ “ಸಿಂಗಾರ” ಪುರಸ್ಕಾರ ಹಾಗು 2014ರ “ಅನಿವಾಸಿ ಭಾರತೀಯ ” ಪ್ರಶಸ್ತಿಗೆ ಭಾಜನರಾಗಿದ್ದು, 60ಕ್ಕೂ ಹೆಚ್ಚು ದೇಶಗಳನ್ನು ಪ್ರವಾಸ ಮಾಡಿ, ಹತ್ತಕ್ಕೂ ಹೆಚ್ಚು ಯೋಜನೆಗಳನ್ನು ಅಮೇರಿಕಾ, ಮಲೇಷಿಯಾ, ದಕ್ಷಿಣ ಆಫ್ರಿಕಾ , ಸಿಂಗಾಪುರ್ ಇತ್ಯಾದಿ ದೇಶಗಳ ಸಹಭಾಗಿತ್ವದೊಂದಿಗೆ ಜಾರಿಗೆ ತಂದಿದ್ದಾರೆ.

ಇ-ತ್ಯಾಜ್ಯದಲ್ಲಿ ತಮ್ಮದೇ ಆದ ಟೆಕ್ನೋಲೊಜಿ ಬಳಸಿ ಅದರಲ್ಲಿ ಬರುವ ಚಿನ್ನ , ತಾಮ್ರ ,ಅಲುಮಿನಿಯಂ, ಪ್ಲಾಟಿನಂ, ಪೇಲಾಡಿಯಂ ಹಾಗೂ ಪ್ಲಾಸ್ಟಿಕ್ ಇನ್ನಿತರ ವಸ್ತುಗಳನ್ನು ಮರುಬಳಕೆ ಮಾಡುವಂತೆ ಹಾಗೂ ಇದರಲ್ಲಿ ಬರುವ ವಿಷಕಾರಕ ಅಂಶಗಳನ್ನೂ ಸಂಸ್ಕರಿಸಿರುತ್ತಾರೆ.

ಭಾರತದಂತಹ ದೇಶಗಳಲ್ಲಿ ಇ-ತ್ಯಾಜ್ಯವನ್ನು ಅಸಂಪ್ರದಾಯ ಹಾಗು ಅವೈಜ್ಞಾನಿಕವಾಗಿ ಸಂಸ್ಕರಿಸುವುದರಿಂದ ಗಂಭೀರ ಆರೋಗ್ಯ ಮತ್ತು ಮಾಲಿನ ಸಮಸ್ಯೆಗಳು ಉಂಟಾಗುತ್ತದೆ. ವೆಂಕಟೇಶ್ ಮೂರ್ತಿಯವರ ಜ್ಞಾನ ಮತ್ತು ಅನುಭವದಿಂದ ಇದನ್ನು ತಡೆಯುವ ಯೋಜನೆಗಳಲ್ಲಿ ಇವರ ಸಂಸ್ಥೆಯು ಮುಂಚೂಣಿಯಲ್ಲಿದೆ.ವೆಂಕಟೇಶ ಮೂರ್ತಿಯವರ ಜೀವನ, ಸಾಧನೆ ಮತ್ತು ಚಿಂತನೆಗಳು ಎಲ್ಲಾ ಭಾರತೀಯರಿಗೆ ಅದರಲ್ಲೂ ಕನ್ನಡಿಗರಿಗೆ ಸ್ಪೂರ್ತಿಯ ಮತ್ತು ಹೆಮ್ಮೆಯ ವಿಷಯವಾಗಿದೆ

Spread the love
  • Related Posts

    ಕನ್ಯಾಡಿಯ ಸೇವಾನಿಕೇತನಕ್ಕೆ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ:

    ಕನ್ಯಾಡಿ : ದಕ್ಷಿಣ ಕನ್ನಡ ಜಿಲ್ಲೆಯ ಲೋಕಸಭಾ ಸದಸ್ಯರಾಗಿರುವ ಶ್ರೀ ಕ್ಯಾಪ್ಟನ್ ಬ್ರಿಜೇಶ್ ಚೌಟ ತಂಡವು ಕನ್ಯಾಡಿಯ ಸೇವಾನಿಕೇತನಕ್ಕೆ ಫೆಬ್ರವರಿ 8 ರಂದು ಭೇಟಿ ನೀಡಿದರು. ಸೇವಾಭಾರತಿ ಸಂಸ್ಥೆಯ ಸಂಸ್ಥಾಪಕರಾದ ಶ್ರೀ ಕೆ. ವಿನಾಯಕ ರಾವ್ ಸಂಸ್ಥೆಯ ಬಗ್ಗೆ ಮಾತನಾಡಿ, ಬೆನ್ನುಹುರಿ…

    Spread the love

    ಯುವ ಸಿರಿ ರೈತ ಭಾರತದ ಐಸಿರಿ ಎಂಬ ಪರಿಕಲ್ಪನೆಯೊಂದಿಗೆ ಏಕಕಾಲದಲ್ಲಿ 1000ಕ್ಕೂ ಮಿಕ್ಕಿ ಯುವ ಜನತೆಯಿಂದ ಭತ್ತ ಕಟಾವು ಕಾರ್ಯಕ್ರಮ

    ಉಜಿರೆ: ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವಿರೇಂದ್ರ ಹೆಗ್ಗಡೆಯವರ ಹಾಗೂ ಮಾತೃ ಶ್ರೀ ಹೇಮಾವತಿ.ವಿ.ಹೆಗ್ಗಡೆಯವರ ಮಾರ್ಗದರ್ಶನದೊಂದಿಗೆ ಶ್ರೀ.ಧ.ಮಂ.ಕಾಲೇಜು(ಸ್ವಾಯತ್ತ) ಉಜಿರೆ, ಶ್ರೀ.ಧ.ಮಂ.ಕಾಲೇಜು ರಾಷ್ಟ್ರೀಯ ಸೇವಾ ಯೋಜನಾ ಘಟಕಗಳು, ಶ್ರೀ.ಧ.ಮಂ.ಸ್ಪೋರ್ಟ್ಸ್ ಕ್ಲಬ್ ಉಜಿರೆ, ರೋಟರಿ ಕ್ಲಬ್ ಬೆಳ್ತಂಗಡಿ, ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘ(ರಿ) ಬೆಳ್ತಂಗಡಿ, ವ್ಯವಸ್ಥಾಪನಾ ಸಮಿತಿ…

    Spread the love

    You Missed

    ಕನ್ಯಾಡಿಯ ಸೇವಾನಿಕೇತನಕ್ಕೆ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ:

    • By admin
    • February 9, 2025
    • 16 views
    ಕನ್ಯಾಡಿಯ ಸೇವಾನಿಕೇತನಕ್ಕೆ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ:

    ಯುವ ಸಿರಿ ರೈತ ಭಾರತದ ಐಸಿರಿ ಎಂಬ ಪರಿಕಲ್ಪನೆಯೊಂದಿಗೆ ಏಕಕಾಲದಲ್ಲಿ 1000ಕ್ಕೂ ಮಿಕ್ಕಿ ಯುವ ಜನತೆಯಿಂದ ಭತ್ತ ಕಟಾವು ಕಾರ್ಯಕ್ರಮ

    • By admin
    • February 9, 2025
    • 15 views
    ಯುವ ಸಿರಿ ರೈತ ಭಾರತದ ಐಸಿರಿ ಎಂಬ ಪರಿಕಲ್ಪನೆಯೊಂದಿಗೆ ಏಕಕಾಲದಲ್ಲಿ 1000ಕ್ಕೂ ಮಿಕ್ಕಿ ಯುವ ಜನತೆಯಿಂದ ಭತ್ತ ಕಟಾವು ಕಾರ್ಯಕ್ರಮ

    ರಾಷ್ಟ್ರಮಟ್ಟದ ರಸ್ತೆ ಸುರಕ್ಷತಾ ಕಾರ್ಟೂನ್ ಸ್ಪರ್ಧೆಯಲ್ಲಿ ವಿಶೇಷ ಬಹುಮಾನ ಪಡೆದ ಶೈಲೇಶ್ ಉಜಿರೆ

    • By admin
    • February 7, 2025
    • 46 views
    ರಾಷ್ಟ್ರಮಟ್ಟದ ರಸ್ತೆ ಸುರಕ್ಷತಾ ಕಾರ್ಟೂನ್ ಸ್ಪರ್ಧೆಯಲ್ಲಿ ವಿಶೇಷ ಬಹುಮಾನ ಪಡೆದ ಶೈಲೇಶ್ ಉಜಿರೆ

    ಮೈಕ್ರೋ ಫೈನಾನ್ಸ್ ವಿರುದ್ಧದ ಸುಗ್ರೀವಾಜ್ಞೆಗಿಲ್ಲ ರಾಜ್ಯಪಾಲರ ಅಂಕಿತ

    • By admin
    • February 7, 2025
    • 35 views
    ಮೈಕ್ರೋ ಫೈನಾನ್ಸ್ ವಿರುದ್ಧದ ಸುಗ್ರೀವಾಜ್ಞೆಗಿಲ್ಲ ರಾಜ್ಯಪಾಲರ ಅಂಕಿತ

    ಒಟ್ಲ ಶ್ರೀ ಧರ್ಮರಸು ಉಳ್ಳಾಕ್ಲು ಬ್ರಹ್ಮ ಬೈದೇರುಗಳ ಗರಡಿ ಹಾಗೂ ಪರಿವಾರ ದೈವಗಳ ಕ್ಷೇತ್ರ ಶಿಶಿಲದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ

    • By admin
    • February 2, 2025
    • 85 views
    ಒಟ್ಲ ಶ್ರೀ ಧರ್ಮರಸು ಉಳ್ಳಾಕ್ಲು ಬ್ರಹ್ಮ ಬೈದೇರುಗಳ ಗರಡಿ ಹಾಗೂ ಪರಿವಾರ ದೈವಗಳ ಕ್ಷೇತ್ರ ಶಿಶಿಲದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ

    ಉಪ್ಪಿನಂಗಡಿ ಸಹಕಾರಿ ವ್ಯವಸಾಯಿಕ ಸಂಘ (ನಿ.) ಆಡಳಿತ ಮಂಡಳಿ ಚುನಾವಣೆಯಲ್ಲಿ ಸಹಕಾರ ಭಾರತೀಯ ಅಭ್ಯರ್ಥಿಗಳ ಪ್ರಚಂಡ ಗೆಲುವು

    • By admin
    • February 2, 2025
    • 276 views
    ಉಪ್ಪಿನಂಗಡಿ ಸಹಕಾರಿ ವ್ಯವಸಾಯಿಕ ಸಂಘ (ನಿ.) ಆಡಳಿತ ಮಂಡಳಿ ಚುನಾವಣೆಯಲ್ಲಿ   ಸಹಕಾರ ಭಾರತೀಯ ಅಭ್ಯರ್ಥಿಗಳ ಪ್ರಚಂಡ ಗೆಲುವು