ಕೊರೋನಾ 2ನೇ ಅಲೆ ಎಫೆಕ್ಟ್ : ವಿಧಾನಸೌಧ, ವಿಕಾಸಸೌಧ, ಎಂಎಸ್ ಬಿಲ್ಡಿಂಗ್ ಗೆ ಸಾರ್ವಜನಿಕರ ಪ್ರವೇಶಕ್ಕೆ ನಿಷೇಧ

ಬೆಂಗಳೂರು : ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕೊರೋನಾ ಸೋಂಕಿನ ಪ್ರಕರಣಗಳು ಹೆಚ್ಚಳ ಹಿನ್ನಲೆಯಲ್ಲಿ, ಕೊರೋನಾ ನಿಯಂತ್ರಣ ತಡೆಗಾಗಿ ಇದೀಗ ವಿಧಾನಸೌಧ, ವಿಕಾಸಸೌಧ ಮತ್ತು ಬಹುಮಹಡಿ ಕಟ್ಟಗಳಿಗೆ ಸಾರ್ವಜನಿಕರ ಪ್ರವೇಶಕ್ಕೆ ರಾಜ್ಯ ಸರ್ಕಾರ ನಿರ್ಭಂದ ವಿಧಿಸಿದೆ. ಈ ಮೂಲಕ ಸಾರ್ವಜನಿಕರ ಪ್ರವೇಶಕ್ಕೆ ನಿಷೇಧ ಹೇರಿದೆ.

ಈ ರಾಜ್ಯ ಸರ್ಕಾರದ ಅಧೀನ ಕಾರ್ಯದರ್ಶಿ ಸುತ್ತೋಲೆ ಹೊರಡಿಸಿದ್ದು, ಕೊರೋನಾ ವೈರಸ್ 2ನೇ ಅಲೆ ತೀವ್ರವಾಗಿ ಹರಡುತ್ತಿರುವ ಹಿನ್ನಲೆಯಲ್ಲಿ, ಪ್ರತಿಯೊಂದು ಹಂತದಲ್ಲಿಯೂ ಸಹ ಸೋಂಕು ಹರಡದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವ ಅವಶ್ಯಕತೆ ಇರುತ್ತದೆ.

ಸಚಿವರುಗಳ ಕಚೇರಿ ಮತ್ತು ಸಚಿವಾಲಯದ ಬಹುತೇಕ ಕಚೇರಿಗಳಲ್ಲಿ ದಿನನಿತ್ಯ ಕೋವಿಡ್-19 ಸೋಂಕಿನ ಪ್ರಕರಣಗಳು ವರದಿಯಾಗುತ್ತಿರುವ ಕಾರಣದಿಂದಾಗಿ ಸಚಿವಾಲಯದ ಅಧಿಕಾರಿ, ಸಿಬ್ಬಂದಿ ಹಾಗೂ ಸಾರ್ವಜನಿಕರ ಆರೋಗ್ಯ ಮತ್ತು ಆಡಳಿತದ ಹಿತದೃಷ್ಠಿಯಿಂದ ವಿಧಾನಸೌಧ, ವಿಕಾಸಸೌಧ ಮತ್ತು ಬಹುಮಹಡಿ ಕಟ್ಟಡಗಳಿಗೆ ಸಾರ್ವಜನಿಕರ ಪ್ರವೇಶವನ್ನು ನಿಯಂತ್ರಿಸುವ ಅನಿವಾರ್ಯತೆ ಇದೆ.

ಆದುದರಿಂದ ಸದರಿ ಕಟ್ಟಡಗಳಿಗೆ ಮುಖ್ಯಮಂತ್ರಿಯವರ ಸಚಿವಾಲಯ, ಸಚಿವರು ಹಾಗೂ ಸಚಿವಾಲಯ ಇಲಾಖೆಗಳಿಂದ ಮುಂಚಿತವಾಗಿ ನಿಗದಿಪಡಿಸಲಾದ ಭೇಟಿಯನ್ನು ಹೊರತುಪಡಿಸಿ, ಸಾಮಾನ್ಯ ಭೇಟಿಗೆ ಸಾರ್ವಜನಿಕರ ಪ್ರವೇಷವನ್ನು ತಕ್ಷಣದಿಂದ ಜಾರಿಗೆ ಬರುವಂತೆ ನಿರ್ಬಂಧಿಸಿ ಆದೇಶಿಸಿದ್ದಾರೆ.

ಇನ್ನೂ ಸಚಿವರು, ಅಧಿಕಾರಿಗಳನ್ನು ಭೇಟಿ ಮಾಡಲು, ಸಂಪರ್ಕಿಸಲು ನಿರ್ಧಿಷ್ಟ ಉದ್ದೇಶವನ್ನು ಹೊಂದಿ, ಮುಖ್ಯಮಂತ್ರಿಯವರ ಸಚಿವಾಲಯ, ಸಚಿವರು ಹಾಗೂ ಸಚಿವಾಲಯದ ಇಲಾಖೆಗಳ ಹಿರಿಯ ಅಧಿಕಾರಿಗಳಿಂದ ಪೂರ್ವಾನುಮತಿ ಪಡೆದಿರುವ ಸಾರ್ವಜನಿಕರಿಗೆ ಮಾತ್ರ, ಪೂರ್ವಾನುಮತಿ ಪತ್ರಗಳನ್ನು ಪರಿಶೀಲಿಸಿ, ಮಧ್ಯಾಹ್ನ 3.30 ಗಂಟೆಯ ನಂತ್ರವಷ್ಟೇ ವಿಧಾನಸೌಧ, ವಿಕಾಸಸೌಧ ಮತ್ತು ಬಹುಮಹಡಿ ಕಟ್ಟಡಗಳಿಗೆ ಮಿತಿಗೊಳಿಸಲಾದ ಪ್ರವೇಶವನ್ನು ಕಲ್ಪಿಸಲು ಅವಕಾಶ ಮಾಡಿಕೊಡಲಾಗಿದೆ.

Spread the love
  • Related Posts

    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    ಧರ್ಮಸ್ಥಳ: ಧರ್ಮಸ್ಥಳ ಕಡೆಯಿಂದ ಬೆಂಗಳೂರಿನತ್ತ ಸಾಗುತ್ತಿದ್ದ ಟಾಟಾ ಸಫಾರಿ ಕಾರು ಹಾಗೂ ಕುಕ್ಕೆ ಸುಬ್ರಹ್ಮಣ್ಯದಿಂದ ಧರ್ಮಸ್ಥಳದತ್ತ ಬರುತ್ತಿದ್ದ ಸರ್ಕಾರಿ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದ ಘಟನೆ ಇಂದು ಕೊಕ್ಕಡ ಸಮೀಪ ನಡೆದಿದೆ. ಅಪಘಾತದ ತೀವ್ರತೆಗೆ ಬಸ್ ಹಾಗೂ ಕಾರು ಸಂಪೂರ್ಣ…

    Spread the love

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ರಂಜನ್ ರಾವ್ ಯರ್ಡೂರು ಸುಪ್ರಿಂ ಕೋರ್ಟ್ ನಲ್ಲಿ ಸಲ್ಲಿಸಿದ್ದ ಮೇಲ್ಮನವಿಯನ್ನು ಆಲಿಸಿದ ನ್ಯಾಯಾಲಯ ದೂರುದಾರರು ನೀಡಿದ ಈ ದೂರು ಆಧಾರ ರಹಿತವಾಗಿದೆ ಎಂದು, ದಾವೆಯನ್ನು ಪ್ರಾಥಮಿಕ ಹಂತದಲ್ಲೇ ವಜಾಗೊಳಿಸಿದೆ. ಶ್ರೀ ಕ್ಷೇತ್ರ…

    Spread the love

    You Missed

    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    • By admin
    • September 12, 2026
    • 2 views
    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    • By admin
    • September 8, 2026
    • 8 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    • By admin
    • September 8, 2026
    • 14 views
    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    • By admin
    • September 3, 2026
    • 13 views
    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    • By admin
    • September 3, 2026
    • 9 views
    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    • By admin
    • September 3, 2026
    • 11 views
    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ