ಕೊರೋನಾ 2ನೇ ಅಲೆ ಎಫೆಕ್ಟ್ : ವಿಧಾನಸೌಧ, ವಿಕಾಸಸೌಧ, ಎಂಎಸ್ ಬಿಲ್ಡಿಂಗ್ ಗೆ ಸಾರ್ವಜನಿಕರ ಪ್ರವೇಶಕ್ಕೆ ನಿಷೇಧ

ಬೆಂಗಳೂರು : ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕೊರೋನಾ ಸೋಂಕಿನ ಪ್ರಕರಣಗಳು ಹೆಚ್ಚಳ ಹಿನ್ನಲೆಯಲ್ಲಿ, ಕೊರೋನಾ ನಿಯಂತ್ರಣ ತಡೆಗಾಗಿ ಇದೀಗ ವಿಧಾನಸೌಧ, ವಿಕಾಸಸೌಧ ಮತ್ತು ಬಹುಮಹಡಿ ಕಟ್ಟಗಳಿಗೆ ಸಾರ್ವಜನಿಕರ ಪ್ರವೇಶಕ್ಕೆ ರಾಜ್ಯ ಸರ್ಕಾರ ನಿರ್ಭಂದ ವಿಧಿಸಿದೆ. ಈ ಮೂಲಕ ಸಾರ್ವಜನಿಕರ ಪ್ರವೇಶಕ್ಕೆ ನಿಷೇಧ ಹೇರಿದೆ.

ಈ ರಾಜ್ಯ ಸರ್ಕಾರದ ಅಧೀನ ಕಾರ್ಯದರ್ಶಿ ಸುತ್ತೋಲೆ ಹೊರಡಿಸಿದ್ದು, ಕೊರೋನಾ ವೈರಸ್ 2ನೇ ಅಲೆ ತೀವ್ರವಾಗಿ ಹರಡುತ್ತಿರುವ ಹಿನ್ನಲೆಯಲ್ಲಿ, ಪ್ರತಿಯೊಂದು ಹಂತದಲ್ಲಿಯೂ ಸಹ ಸೋಂಕು ಹರಡದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವ ಅವಶ್ಯಕತೆ ಇರುತ್ತದೆ.

ಸಚಿವರುಗಳ ಕಚೇರಿ ಮತ್ತು ಸಚಿವಾಲಯದ ಬಹುತೇಕ ಕಚೇರಿಗಳಲ್ಲಿ ದಿನನಿತ್ಯ ಕೋವಿಡ್-19 ಸೋಂಕಿನ ಪ್ರಕರಣಗಳು ವರದಿಯಾಗುತ್ತಿರುವ ಕಾರಣದಿಂದಾಗಿ ಸಚಿವಾಲಯದ ಅಧಿಕಾರಿ, ಸಿಬ್ಬಂದಿ ಹಾಗೂ ಸಾರ್ವಜನಿಕರ ಆರೋಗ್ಯ ಮತ್ತು ಆಡಳಿತದ ಹಿತದೃಷ್ಠಿಯಿಂದ ವಿಧಾನಸೌಧ, ವಿಕಾಸಸೌಧ ಮತ್ತು ಬಹುಮಹಡಿ ಕಟ್ಟಡಗಳಿಗೆ ಸಾರ್ವಜನಿಕರ ಪ್ರವೇಶವನ್ನು ನಿಯಂತ್ರಿಸುವ ಅನಿವಾರ್ಯತೆ ಇದೆ.

ಆದುದರಿಂದ ಸದರಿ ಕಟ್ಟಡಗಳಿಗೆ ಮುಖ್ಯಮಂತ್ರಿಯವರ ಸಚಿವಾಲಯ, ಸಚಿವರು ಹಾಗೂ ಸಚಿವಾಲಯ ಇಲಾಖೆಗಳಿಂದ ಮುಂಚಿತವಾಗಿ ನಿಗದಿಪಡಿಸಲಾದ ಭೇಟಿಯನ್ನು ಹೊರತುಪಡಿಸಿ, ಸಾಮಾನ್ಯ ಭೇಟಿಗೆ ಸಾರ್ವಜನಿಕರ ಪ್ರವೇಷವನ್ನು ತಕ್ಷಣದಿಂದ ಜಾರಿಗೆ ಬರುವಂತೆ ನಿರ್ಬಂಧಿಸಿ ಆದೇಶಿಸಿದ್ದಾರೆ.

ಇನ್ನೂ ಸಚಿವರು, ಅಧಿಕಾರಿಗಳನ್ನು ಭೇಟಿ ಮಾಡಲು, ಸಂಪರ್ಕಿಸಲು ನಿರ್ಧಿಷ್ಟ ಉದ್ದೇಶವನ್ನು ಹೊಂದಿ, ಮುಖ್ಯಮಂತ್ರಿಯವರ ಸಚಿವಾಲಯ, ಸಚಿವರು ಹಾಗೂ ಸಚಿವಾಲಯದ ಇಲಾಖೆಗಳ ಹಿರಿಯ ಅಧಿಕಾರಿಗಳಿಂದ ಪೂರ್ವಾನುಮತಿ ಪಡೆದಿರುವ ಸಾರ್ವಜನಿಕರಿಗೆ ಮಾತ್ರ, ಪೂರ್ವಾನುಮತಿ ಪತ್ರಗಳನ್ನು ಪರಿಶೀಲಿಸಿ, ಮಧ್ಯಾಹ್ನ 3.30 ಗಂಟೆಯ ನಂತ್ರವಷ್ಟೇ ವಿಧಾನಸೌಧ, ವಿಕಾಸಸೌಧ ಮತ್ತು ಬಹುಮಹಡಿ ಕಟ್ಟಡಗಳಿಗೆ ಮಿತಿಗೊಳಿಸಲಾದ ಪ್ರವೇಶವನ್ನು ಕಲ್ಪಿಸಲು ಅವಕಾಶ ಮಾಡಿಕೊಡಲಾಗಿದೆ.

Spread the love
  • Related Posts

    ಬೆಳ್ತಂಗಡಿ: ಗುರುವಾಯನಕೆರೆ-ವೇಣೂರಿನ ಹದಗೆಟ್ಟ ರಸ್ತೆಯ ತುರ್ತು ದುರಸ್ತಿ ಕಾರ್ಯ, ಶಾಸಕರ ತುರ್ತು ಸ್ಪಂದನೆ

    ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಗುರುವಾಯನಕೆರೆ–ವೇಣೂರು ಮುಖ್ಯರಸ್ತೆಯ ಪಡಂಗಡಿ ಭಾಗದಲ್ಲಿ ಇತ್ತೀಚಿನ ಭಾರೀ ಮಳೆಯಿಂದ ರಸ್ತೆ ಹದಗೆಟ್ಟು ಸಾರ್ವಜನಿಕರು ಹಾಗೂ ವಾಹನ ಸವಾರರು ಸಂಚಾರಕ್ಕೆ ತೊಂದರೆ ಅನುಭವಿಸುತ್ತಿದ್ದರು. ಈ ಕುರಿತು ಶಾಸಕ ಶ್ರೀ ಹರೀಶ್ ಪೂಂಜ ಅವರ ಮುತುವರ್ಜಿಯಿಂದ ಸ್ಥಳವನ್ನು ಪರಿಶೀಲಿಸಿ, ಸಾರ್ವಜನಿಕರ…

    Spread the love

    30 ವರ್ಷಗಳಿಂದ ಶಾಪಗ್ರಸ್ತವಾಗಿರುವ ಮುಂಡಾಜೆ ಗ್ರಾಮದ ಸೀಟು–ಕಾಯರ್ತೋಡಿ–ಕೊಡಂಗೆ–ಮೂಲಾರು ಕುಡೆಂಚಿ ರಸ್ತೆ: ಚುನಾವಣೆ ಬಂದಾಗ ಶಿಲಾನ್ಯಾಸ, ಬಳಿಕ ಮರೆತುಬಿಡುವ ಆರೋಪ

    ಬೆಳ್ತಂಗಡಿ: ಮುಂಡಾಜೆ ಗ್ರಾಮದ ಸೀಟು–ಕಾಯರ್ತೋಡಿ–ಕೊಡಂಗೆ–ಮೂಲಾರು ಕುಡೆಂಚಿ ಸಂಪರ್ಕ ರಸ್ತೆ ಕಳೆದ ಹಲವು ದಶಕಗಳಿಂದ ಅಭಿವೃದ್ಧಿಯ ನಿರೀಕ್ಷೆಯಲ್ಲೇ ಉಳಿದಿದ್ದು, ಸ್ಥಳೀಯ ನಿವಾಸಿಗಳ ಆಕ್ರೋಶಕ್ಕೆ ಕಾರಣವಾಗಿದೆ. ಸುಮಾರು 200ಕ್ಕೂ ಹೆಚ್ಚು ಮನೆಗಳಿಗೆ ಪ್ರಮುಖ ಸಂಪರ್ಕ ಕಲ್ಪಿಸುವ 6 ಕಿಲೋಮೀಟರ್ ಉದ್ದದ ಈ ರಸ್ತೆಗೆ ಸಮರ್ಪಕ…

    Spread the love

    You Missed

    ಬೆಳ್ತಂಗಡಿ: ಗುರುವಾಯನಕೆರೆ-ವೇಣೂರಿನ ಹದಗೆಟ್ಟ ರಸ್ತೆಯ ತುರ್ತು ದುರಸ್ತಿ ಕಾರ್ಯ, ಶಾಸಕರ ತುರ್ತು ಸ್ಪಂದನೆ

    • By admin
    • July 29, 2026
    • 6 views
    ಬೆಳ್ತಂಗಡಿ: ಗುರುವಾಯನಕೆರೆ-ವೇಣೂರಿನ  ಹದಗೆಟ್ಟ ರಸ್ತೆಯ ತುರ್ತು ದುರಸ್ತಿ ಕಾರ್ಯ, ಶಾಸಕರ ತುರ್ತು ಸ್ಪಂದನೆ

    30 ವರ್ಷಗಳಿಂದ ಶಾಪಗ್ರಸ್ತವಾಗಿರುವ ಮುಂಡಾಜೆ ಗ್ರಾಮದ ಸೀಟು–ಕಾಯರ್ತೋಡಿ–ಕೊಡಂಗೆ–ಮೂಲಾರು ಕುಡೆಂಚಿ ರಸ್ತೆ: ಚುನಾವಣೆ ಬಂದಾಗ ಶಿಲಾನ್ಯಾಸ, ಬಳಿಕ ಮರೆತುಬಿಡುವ ಆರೋಪ

    • By admin
    • July 29, 2026
    • 6 views
    30 ವರ್ಷಗಳಿಂದ ಶಾಪಗ್ರಸ್ತವಾಗಿರುವ ಮುಂಡಾಜೆ ಗ್ರಾಮದ ಸೀಟು–ಕಾಯರ್ತೋಡಿ–ಕೊಡಂಗೆ–ಮೂಲಾರು ಕುಡೆಂಚಿ ರಸ್ತೆ: ಚುನಾವಣೆ ಬಂದಾಗ ಶಿಲಾನ್ಯಾಸ, ಬಳಿಕ ಮರೆತುಬಿಡುವ ಆರೋಪ

    ಸಕಲೇಶಪುರ: ಅಕ್ರಮ ಭೂ ಮಂಜೂರಾತಿ ಹಗರಣ – ಬಂಧನ ಭೀತಿಯಿಂದ ನೂರಕ್ಕೂ ಹೆಚ್ಚು ಅಧಿಕಾರಿಗಳು ಸಾಮೂಹಿಕ ರಜೆ!

    • By admin
    • July 25, 2026
    • 11 views
    ಸಕಲೇಶಪುರ: ಅಕ್ರಮ ಭೂ ಮಂಜೂರಾತಿ ಹಗರಣ – ಬಂಧನ ಭೀತಿಯಿಂದ ನೂರಕ್ಕೂ ಹೆಚ್ಚು ಅಧಿಕಾರಿಗಳು ಸಾಮೂಹಿಕ ರಜೆ!

    ಕಲ್ಪವೃಕ್ಷ ಜ್ಞಾನ ವಿಕಾಸ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಪ್ರಾತ್ಯಕ್ಷಿಕೆ: ಆರೋಗ್ಯಕರ ಜೀವನಕ್ಕೆ ಸಮತೋಲಿತ ಆಹಾರ ಹಾಗೂ ಸ್ವಚ್ಛತೆ ಅಗತ್ಯ – ಡಾ. ನಿಶ್ಚಯ್ ಎಚ್.ಎನ್.

    • By admin
    • July 24, 2026
    • 8 views
    ಕಲ್ಪವೃಕ್ಷ ಜ್ಞಾನ ವಿಕಾಸ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಪ್ರಾತ್ಯಕ್ಷಿಕೆ: ಆರೋಗ್ಯಕರ ಜೀವನಕ್ಕೆ ಸಮತೋಲಿತ ಆಹಾರ ಹಾಗೂ ಸ್ವಚ್ಛತೆ ಅಗತ್ಯ – ಡಾ. ನಿಶ್ಚಯ್ ಎಚ್.ಎನ್.

    ಕರಾವಳಿಯಲ್ಲಿ ಮುಂದುವರಿದ ಮಳೆ, ಉಡುಪಿ ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

    • By admin
    • July 24, 2026
    • 8 views
    ಕರಾವಳಿಯಲ್ಲಿ ಮುಂದುವರಿದ ಮಳೆ, ಉಡುಪಿ ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

    ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಹಿನ್ನೆಲೆಯಲ್ಲಿ ಶುಕ್ರವಾರ 24ರಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

    • By admin
    • July 23, 2026
    • 10 views
    ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಹಿನ್ನೆಲೆಯಲ್ಲಿ ಶುಕ್ರವಾರ 24ರಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ