ವಿಜಯನಗರವನ್ನು ರಾಜ್ಯದ 31ನೇ ಜಿಲ್ಲೆ ಎಂದು ಘೋಷಣೆ!

ಬೆಂಗಳೂರು: ಬಳ್ಳಾರಿ ಜಿಲ್ಲೆಯನ್ನು ವಿಭಜಿಸಿ ಹೊಸದಾಗಿ ವಿಜಯನಗರ ಜಿಲ್ಲೆ ಸ್ಥಾಪನೆಗೆ ರಾಜ್ಯ ಸಚಿವ ಸಂಪುಟ ಅಸ್ತು ಎಂದಿದೆ. ಸಚಿವ ಸಂಪುಟ ಸಭೆಯಲ್ಲಿಂದು ಅಧಿಕೃತವಾಗಿ ಅನುಮೋದನೆ ಪಡೆದುಕೊಂಡ ಬಳಿಕ ವಿಜಯನಗರ 31ನೇ ಜಿಲ್ಲೆ ಎಂದು ಸಚಿವ ಮಾಧುಸ್ವಾಮಿ ಅವರು ಘೋಷಣೆ ಮಾದಿದರು.

ಈ ಹಿಂದಿನ ಸಚಿವ ಸಂಪುಟ ಸಭೆಯಲ್ಲಿ ವಿಜಯನಗರ ಜಿಲ್ಲೆ ರಚನೆ, ರೂಪುರೇಷೆಗಳ ಬಗ್ಗೆ ಚರ್ಚಿಸಲಾಗಿತ್ತು. ಈ ಬಗ್ಗೆ ಒಮ್ಮತದ ನಿರ್ಣಯ ಕೈಗೊಳ್ಳಲಾಗಿದ್ದು, ಇದೀಗ ವಿಜಯನಗರ ನೂತನ ಜಿಲ್ಲೆ ಎಂದು ಅಧಿಕೃತಗೊಳಿಸಲಾಗಿದೆ ಎಂದು ಸಚಿವ ಮಾಧುಸ್ವಾಮಿ ಹೇಳಿದರು.

ರೈತರಿಗೆ, ಬಡವರಿಗೆ, ಕೂಲಿ ಕಾರ್ಮಿಕರಿಗೆ ಹಾಗೂ ಜನಸಾಮಾನ್ಯರೆಲ್ಲರಿಗೂ ತಮ್ಮ ಕೆಲಸ ಕಾರ್ಯಗಳಿಗೆ ಜಿಲ್ಲಾ ಕೇಂದ್ರ ತಲುಪುವುದು ಸದ್ಯದ ಪರಿಸ್ಥಿತಿಯಲ್ಲಿ ಕಷ್ಟಕರವಾಗಿತ್ತು.

ಸುಮಾರು 200 ಕಿ.ಮೀ ದೂರ ಕ್ರಮಿಸಬೇಕಾಗಿತ್ತು. ಈ ನಿಟ್ಟಿನಲ್ಲಿ ಸರ್ಕಾರ ಬೇಡಿಕೆಗೆಯನ್ನು ಮನ್ನಿಸಿ ಹೊಸ ಜಿಲ್ಲೆ ಉದಯಕ್ಕೆ ನಾಂದಿ ಹಾಡಿದೆ.

ನೂತನ ಜಿಲ್ಲೆಯ ಗಡಿಗಳ ರೂಪುರೇಷೆಗೆ ಸಚಿವ ಸಂಪುಟದಲ್ಲಿ ಸಮ್ಮತಿ ಸಿಕ್ಕಿದೆ. ಬಳ್ಳಾರಿ ಜಿಲ್ಲೆಯಿಂದ ವಿಭಜಿಸಿ ಹೊಸ ಜಿಲ್ಲೆ ರೂಪುಗೊಂಡಿದೆ.

ನೂತನ ವಿಜಯನಗರ ಜಿಲ್ಲೆಯಲ್ಲಿ ಹೊಸಪೇಟೆ ಜಿಲ್ಲಾಕೇಂದ್ರವಾಗಿರಲಿದ್ದು, ಹೊಸಪೇಟೆ, ಹಗರಿಬೊಮ್ಮನಹಳ್ಳಿ,ಕೂಡ್ಲಿಗಿ, ಕೊಟ್ಟೂರು, ಹೂವಿನ ಹಡಗಲಿ ತಾಲೂಕುಗಳಿರಲಿವೆ.

ಬಳ್ಳಾರಿ 11 ಕಂದಾಯ ತಾಲೂಕು, 3 ಕಂದಾಯ ಉಪ ವಿಭಾಗಗಳನ್ನು ಹೊಂದಿರುವ ದೊಡ್ಡ ಜಿಲ್ಲೆಯಾಗಿತ್ತು.ಈಗ ಬಳ್ಳಾರಿ ಜಿಲ್ಲೆಯಲ್ಲಿ ಬಳ್ಳಾರಿ, ಕುರುಗೋಡು, ಸಿರುಗುಪ್ಪ, ಸಂಡೂರು ಹಾಗೂ ಕಂಪ್ಲಿ ತಾಲೂಕು ಉಳಿಸಿಕೊಳ್ಳಲಾಗುತ್ತದೆ.

ಆಡಳಿತ ದೃಷ್ಟಿಯಿಂದ ಬಳ್ಳಾರಿ ಜಿಲ್ಲೆ ವಿಭಜನೆಗೆ ಬಿಜೆಪಿ ಸರ್ಕಾರ ಮುಂದಾಗಿದ್ದು, ಗಾಲಿ ರೆಡ್ಡಿ ಸೋದರರು ವಿರೋಧ ವ್ಯಕ್ತಪಡಿಸಿದ್ದರೆ, ಆನಂದ್ ಸಿಂಗ್ ಬಣ ಸಹಮತ ವ್ಯಕ್ತಪಡಿಸಿದ್ದರು. ಸಾರ್ವಜನಿಕರಲ್ಲೂ ಪರ-ವಿರೋಧ ಚರ್ಚೆ ಮುಂದುವರೆದಿತ್ತು.

Spread the love
  • Related Posts

    ಸಕಲೇಶಪುರ: ಅಕ್ರಮ ಭೂ ಮಂಜೂರಾತಿ ಹಗರಣ – ಬಂಧನ ಭೀತಿಯಿಂದ ನೂರಕ್ಕೂ ಹೆಚ್ಚು ಅಧಿಕಾರಿಗಳು ಸಾಮೂಹಿಕ ರಜೆ!

    ಸಕಲೇಶಪುರ: ಅಕ್ರಮ ಭೂ ಮಂಜೂರಾತಿ(Illegal land allocation) ಬೃಹತ್ ಹಗರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಬಂಧನದ(Arrest) ಭೀತಿ ಎದುರಿಸುತ್ತಿರುವ ಕಂದಾಯ ಮತ್ತು ಭೂಮಾಪನಾ (Survey) ಇಲಾಖೆಯ ನೂರಕ್ಕೂ ಹೆಚ್ಚು ಅಧಿಕಾರಿಗಳು ಹಾಗೂ ಸಿಬ್ಬಂದಿ ಸಾಮೂಹಿಕ ರಜೆ ಮೇಲೆ ತೆರಳಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ…

    Spread the love

    ಕರಾವಳಿಯಲ್ಲಿ ಮುಂದುವರಿದ ಮಳೆ, ಉಡುಪಿ ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

    ಮಂಗಳೂರು: ಕರಾವಳಿಯ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ನಾಳೆ (ಜುಲೈ 25) ರಜೆ ಘೋಷಿಸಿ…

    Spread the love

    You Missed

    ಸಕಲೇಶಪುರ: ಅಕ್ರಮ ಭೂ ಮಂಜೂರಾತಿ ಹಗರಣ – ಬಂಧನ ಭೀತಿಯಿಂದ ನೂರಕ್ಕೂ ಹೆಚ್ಚು ಅಧಿಕಾರಿಗಳು ಸಾಮೂಹಿಕ ರಜೆ!

    • By admin
    • July 25, 2026
    • 7 views
    ಸಕಲೇಶಪುರ: ಅಕ್ರಮ ಭೂ ಮಂಜೂರಾತಿ ಹಗರಣ – ಬಂಧನ ಭೀತಿಯಿಂದ ನೂರಕ್ಕೂ ಹೆಚ್ಚು ಅಧಿಕಾರಿಗಳು ಸಾಮೂಹಿಕ ರಜೆ!

    ಕಲ್ಪವೃಕ್ಷ ಜ್ಞಾನ ವಿಕಾಸ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಪ್ರಾತ್ಯಕ್ಷಿಕೆ: ಆರೋಗ್ಯಕರ ಜೀವನಕ್ಕೆ ಸಮತೋಲಿತ ಆಹಾರ ಹಾಗೂ ಸ್ವಚ್ಛತೆ ಅಗತ್ಯ – ಡಾ. ನಿಶ್ಚಯ್ ಎಚ್.ಎನ್.

    • By admin
    • July 24, 2026
    • 6 views
    ಕಲ್ಪವೃಕ್ಷ ಜ್ಞಾನ ವಿಕಾಸ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಪ್ರಾತ್ಯಕ್ಷಿಕೆ: ಆರೋಗ್ಯಕರ ಜೀವನಕ್ಕೆ ಸಮತೋಲಿತ ಆಹಾರ ಹಾಗೂ ಸ್ವಚ್ಛತೆ ಅಗತ್ಯ – ಡಾ. ನಿಶ್ಚಯ್ ಎಚ್.ಎನ್.

    ಕರಾವಳಿಯಲ್ಲಿ ಮುಂದುವರಿದ ಮಳೆ, ಉಡುಪಿ ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

    • By admin
    • July 24, 2026
    • 5 views
    ಕರಾವಳಿಯಲ್ಲಿ ಮುಂದುವರಿದ ಮಳೆ, ಉಡುಪಿ ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

    ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಹಿನ್ನೆಲೆಯಲ್ಲಿ ಶುಕ್ರವಾರ 24ರಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

    • By admin
    • July 23, 2026
    • 7 views
    ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಹಿನ್ನೆಲೆಯಲ್ಲಿ ಶುಕ್ರವಾರ 24ರಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

    ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಯೆಲ್ಲೊ – ಅಲರ್ಟ್ ಘೋಷಣೆಯಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ

    • By admin
    • July 22, 2026
    • 9 views
    ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಯೆಲ್ಲೊ – ಅಲರ್ಟ್ ಘೋಷಣೆಯಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ

    ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಪತ್ನಿ ಚನ್ನಮ್ಮ ವಿಧಿವಶ

    • By admin
    • July 18, 2026
    • 11 views
    ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಪತ್ನಿ ಚನ್ನಮ್ಮ ವಿಧಿವಶ