ವಿಜಯನಗರವನ್ನು ರಾಜ್ಯದ 31ನೇ ಜಿಲ್ಲೆ ಎಂದು ಘೋಷಣೆ!

ಬೆಂಗಳೂರು: ಬಳ್ಳಾರಿ ಜಿಲ್ಲೆಯನ್ನು ವಿಭಜಿಸಿ ಹೊಸದಾಗಿ ವಿಜಯನಗರ ಜಿಲ್ಲೆ ಸ್ಥಾಪನೆಗೆ ರಾಜ್ಯ ಸಚಿವ ಸಂಪುಟ ಅಸ್ತು ಎಂದಿದೆ. ಸಚಿವ ಸಂಪುಟ ಸಭೆಯಲ್ಲಿಂದು ಅಧಿಕೃತವಾಗಿ ಅನುಮೋದನೆ ಪಡೆದುಕೊಂಡ ಬಳಿಕ ವಿಜಯನಗರ 31ನೇ ಜಿಲ್ಲೆ ಎಂದು ಸಚಿವ ಮಾಧುಸ್ವಾಮಿ ಅವರು ಘೋಷಣೆ ಮಾದಿದರು.

ಈ ಹಿಂದಿನ ಸಚಿವ ಸಂಪುಟ ಸಭೆಯಲ್ಲಿ ವಿಜಯನಗರ ಜಿಲ್ಲೆ ರಚನೆ, ರೂಪುರೇಷೆಗಳ ಬಗ್ಗೆ ಚರ್ಚಿಸಲಾಗಿತ್ತು. ಈ ಬಗ್ಗೆ ಒಮ್ಮತದ ನಿರ್ಣಯ ಕೈಗೊಳ್ಳಲಾಗಿದ್ದು, ಇದೀಗ ವಿಜಯನಗರ ನೂತನ ಜಿಲ್ಲೆ ಎಂದು ಅಧಿಕೃತಗೊಳಿಸಲಾಗಿದೆ ಎಂದು ಸಚಿವ ಮಾಧುಸ್ವಾಮಿ ಹೇಳಿದರು.

ರೈತರಿಗೆ, ಬಡವರಿಗೆ, ಕೂಲಿ ಕಾರ್ಮಿಕರಿಗೆ ಹಾಗೂ ಜನಸಾಮಾನ್ಯರೆಲ್ಲರಿಗೂ ತಮ್ಮ ಕೆಲಸ ಕಾರ್ಯಗಳಿಗೆ ಜಿಲ್ಲಾ ಕೇಂದ್ರ ತಲುಪುವುದು ಸದ್ಯದ ಪರಿಸ್ಥಿತಿಯಲ್ಲಿ ಕಷ್ಟಕರವಾಗಿತ್ತು.

ಸುಮಾರು 200 ಕಿ.ಮೀ ದೂರ ಕ್ರಮಿಸಬೇಕಾಗಿತ್ತು. ಈ ನಿಟ್ಟಿನಲ್ಲಿ ಸರ್ಕಾರ ಬೇಡಿಕೆಗೆಯನ್ನು ಮನ್ನಿಸಿ ಹೊಸ ಜಿಲ್ಲೆ ಉದಯಕ್ಕೆ ನಾಂದಿ ಹಾಡಿದೆ.

ನೂತನ ಜಿಲ್ಲೆಯ ಗಡಿಗಳ ರೂಪುರೇಷೆಗೆ ಸಚಿವ ಸಂಪುಟದಲ್ಲಿ ಸಮ್ಮತಿ ಸಿಕ್ಕಿದೆ. ಬಳ್ಳಾರಿ ಜಿಲ್ಲೆಯಿಂದ ವಿಭಜಿಸಿ ಹೊಸ ಜಿಲ್ಲೆ ರೂಪುಗೊಂಡಿದೆ.

ನೂತನ ವಿಜಯನಗರ ಜಿಲ್ಲೆಯಲ್ಲಿ ಹೊಸಪೇಟೆ ಜಿಲ್ಲಾಕೇಂದ್ರವಾಗಿರಲಿದ್ದು, ಹೊಸಪೇಟೆ, ಹಗರಿಬೊಮ್ಮನಹಳ್ಳಿ,ಕೂಡ್ಲಿಗಿ, ಕೊಟ್ಟೂರು, ಹೂವಿನ ಹಡಗಲಿ ತಾಲೂಕುಗಳಿರಲಿವೆ.

ಬಳ್ಳಾರಿ 11 ಕಂದಾಯ ತಾಲೂಕು, 3 ಕಂದಾಯ ಉಪ ವಿಭಾಗಗಳನ್ನು ಹೊಂದಿರುವ ದೊಡ್ಡ ಜಿಲ್ಲೆಯಾಗಿತ್ತು.ಈಗ ಬಳ್ಳಾರಿ ಜಿಲ್ಲೆಯಲ್ಲಿ ಬಳ್ಳಾರಿ, ಕುರುಗೋಡು, ಸಿರುಗುಪ್ಪ, ಸಂಡೂರು ಹಾಗೂ ಕಂಪ್ಲಿ ತಾಲೂಕು ಉಳಿಸಿಕೊಳ್ಳಲಾಗುತ್ತದೆ.

ಆಡಳಿತ ದೃಷ್ಟಿಯಿಂದ ಬಳ್ಳಾರಿ ಜಿಲ್ಲೆ ವಿಭಜನೆಗೆ ಬಿಜೆಪಿ ಸರ್ಕಾರ ಮುಂದಾಗಿದ್ದು, ಗಾಲಿ ರೆಡ್ಡಿ ಸೋದರರು ವಿರೋಧ ವ್ಯಕ್ತಪಡಿಸಿದ್ದರೆ, ಆನಂದ್ ಸಿಂಗ್ ಬಣ ಸಹಮತ ವ್ಯಕ್ತಪಡಿಸಿದ್ದರು. ಸಾರ್ವಜನಿಕರಲ್ಲೂ ಪರ-ವಿರೋಧ ಚರ್ಚೆ ಮುಂದುವರೆದಿತ್ತು.

Spread the love
  • Related Posts

    SSLC ಪರೀಕ್ಷೆಯಲ್ಲಿ ರಾಜ್ಯಕ್ಕೆ 6ಸ್ಥಾನ ಪಡೆದ ಪ್ರಾಪ್ತಿ.ಎಂ ಗೌಡ, ಪ್ರಗತಿ ಸಂಘದಿಂದ ವಿದ್ಯಾರ್ಥಿನಿಗೆ ಸನ್ಮಾನ

    ಬೆಳ್ತಂಗಡಿ: 2025-26ನೇ ಸಾಲಿನ SSLC ಪರೀಕ್ಷೆಯಲ್ಲಿ ವಾಣಿ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿನಿ ಕುವೆಟ್ಟು ಗ್ರಾಮದ ಶಕ್ತಿನಗರ ನಿವಾಸಿ ಪ್ರಗತಿ ಸ್ವ-ಸಹಾಯ ಸಂಘದ ಸದಸ್ಯರಾಗಿರುವ ಮಿನಾಕ್ಷಿ ಮತ್ತು ಮಹಾಬಲಗೌಡ ದಂಪತಿಯ ಪುತ್ರಿ ಕುIಪ್ರಾಪ್ತಿ ಎಂ. ಗೌಡ ರಾಜ್ಯ ಮಟ್ಟದಲ್ಲಿ 6ನೇ ಸ್ಥಾನ, ಜಿಲ್ಲಾ…

    Spread the love

    ಮಾಲಾಡಿ–ಪುರಿಯ ರಸ್ತೆ ಡಾಮರೀಕರಣ ಕಾಮಗಾರಿಗೆ ಚಾಲನೆ: ಶಾಸಕ ಹರೀಶ್ ಪೂಂಜ

    ಬೆಳ್ತಂಗಡಿ: ಪುರಿಯ–ಮಾಲಾಡಿ–ಪುಂಜಾಲ ಕಟ್ಟೆ–ಮಡಂತ್ಯಾರು–ಕುಕ್ಕೇಡಿ ಭಾಗದ ಸಾರ್ವಜನಿಕರ ದೀರ್ಘಕಾಲದ ಬೇಡಿಕೆಯಾಗಿದ್ದ ಮಾಲಾಡಿ–ಪುರಿಯ ರಸ್ತೆ ಡಾಮರೀಕರಣ ಕಾಮಗಾರಿಗೆ ಇಂದು ಅಧಿಕೃತವಾಗಿ ಚಾಲನೆ ನೀಡಲಾಯಿತು. ಈ ಮಹತ್ವದ ಕಾಮಗಾರಿಗಾಗಿ ರೂ.50.00 ಲಕ್ಷ ಅನುದಾನವನ್ನು ಬಿಡುಗಡೆಗೊಳಿಸಲಾಗಿದ್ದು, ಮಂಗಳೂರು ಕಾವೂರು ಮೂಲದ ಮುಗೆರೋಡಿ ಕನ್ಸ್ಟ್ರಕ್ಷನ್ ಸಂಸ್ಥೆಯವರು ಕಾಮಗಾರಿಯನ್ನು ಕೈಗೆತ್ತಿಕೊಂಡಿದ್ದಾರೆ.…

    Spread the love

    You Missed

    SSLC ಪರೀಕ್ಷೆಯಲ್ಲಿ ರಾಜ್ಯಕ್ಕೆ 6ಸ್ಥಾನ ಪಡೆದ ಪ್ರಾಪ್ತಿ.ಎಂ ಗೌಡ, ಪ್ರಗತಿ ಸಂಘದಿಂದ ವಿದ್ಯಾರ್ಥಿನಿಗೆ ಸನ್ಮಾನ

    • By admin
    • April 28, 2026
    • 37 views
    SSLC ಪರೀಕ್ಷೆಯಲ್ಲಿ ರಾಜ್ಯಕ್ಕೆ 6ಸ್ಥಾನ ಪಡೆದ ಪ್ರಾಪ್ತಿ.ಎಂ ಗೌಡ, ಪ್ರಗತಿ ಸಂಘದಿಂದ ವಿದ್ಯಾರ್ಥಿನಿಗೆ ಸನ್ಮಾನ

    ಮಾಲಾಡಿ–ಪುರಿಯ ರಸ್ತೆ ಡಾಮರೀಕರಣ ಕಾಮಗಾರಿಗೆ ಚಾಲನೆ: ಶಾಸಕ ಹರೀಶ್ ಪೂಂಜ

    • By admin
    • April 27, 2026
    • 13 views
    ಮಾಲಾಡಿ–ಪುರಿಯ ರಸ್ತೆ ಡಾಮರೀಕರಣ ಕಾಮಗಾರಿಗೆ ಚಾಲನೆ: ಶಾಸಕ ಹರೀಶ್ ಪೂಂಜ

    ಚಾರ್ಮಾಡಿ ಘಾಟ್ ನಲ್ಲಿ ಗೂಡ್ಸ್ ವಾಹನ ಪಲ್ಟಿ

    • By admin
    • April 26, 2026
    • 76 views
    ಚಾರ್ಮಾಡಿ ಘಾಟ್ ನಲ್ಲಿ ಗೂಡ್ಸ್ ವಾಹನ ಪಲ್ಟಿ

    ಜಾಗಕ್ಕೆ ಅಕ್ರಮ ಪ್ರವೇಶಗೈದು ಪರವಾನಿಗೆ ಇಲ್ಲದ ಗನ್ ನಿಂದ ಹಲ್ಲೆ!! 8ಮಂದಿಯ ವಿರುದ್ಧ ಆರ್ಮ್ಸ್ ಆಕ್ಟ್ ಅಡಿಯಲ್ಲಿ ಪ್ರಕರಣ ದಾಖಲು

    • By admin
    • April 26, 2026
    • 73 views
    ಜಾಗಕ್ಕೆ ಅಕ್ರಮ ಪ್ರವೇಶಗೈದು ಪರವಾನಿಗೆ ಇಲ್ಲದ ಗನ್ ನಿಂದ ಹಲ್ಲೆ!! 8ಮಂದಿಯ ವಿರುದ್ಧ ಆರ್ಮ್ಸ್ ಆಕ್ಟ್ ಅಡಿಯಲ್ಲಿ ಪ್ರಕರಣ ದಾಖಲು

    ಬೆಳ್ತಂಗಡಿ : ಗರ್ಡಾಡಿ ಖಾಸಗಿ ಜಾಗಕ್ಕೆ ಅಕ್ರಮ ಪ್ರವೇಶ ಮಾಡಿ ಹಲ್ಲೆ, ವಕೀಲೆ ಸಮೇತ ಮೂವರ ವಿರುದ್ಧ ಪ್ರಕರಣ ದಾಖಲು

    • By admin
    • April 25, 2026
    • 78 views
    ಬೆಳ್ತಂಗಡಿ : ಗರ್ಡಾಡಿ ಖಾಸಗಿ ಜಾಗಕ್ಕೆ ಅಕ್ರಮ ಪ್ರವೇಶ ಮಾಡಿ ಹಲ್ಲೆ, ವಕೀಲೆ ಸಮೇತ ಮೂವರ ವಿರುದ್ಧ ಪ್ರಕರಣ ದಾಖಲು

    ಮುಂಡಾಜೆ Airtel ಟವರ್ ಗೆ ಸಿಡಿಲಾಘಾತವಾಯಿತೇ??? 5ಜಿ ದುನಿಯಾದಲ್ಲಿ 2ಜಿಗೆ ಬರ – ಮುಂಡಾಜೆ, ಕಡಿರುದ್ಯಾವರ ಜನರ ವ್ಯಥೆ!!!

    • By admin
    • April 25, 2026
    • 170 views
    ಮುಂಡಾಜೆ Airtel ಟವರ್ ಗೆ ಸಿಡಿಲಾಘಾತವಾಯಿತೇ??? 5ಜಿ ದುನಿಯಾದಲ್ಲಿ 2ಜಿಗೆ ಬರ – ಮುಂಡಾಜೆ, ಕಡಿರುದ್ಯಾವರ ಜನರ ವ್ಯಥೆ!!!