ತ್ಯಾಗ, ಬಲಿದಾನ, ಮೂಲಕ ವಿಶ್ವ ಹಿಂದೂ ಪರಿಷದ್ ವಿಶ್ವದ ಹಿಂದೂಗಳ ಧ್ವನಿ ಹಾಗೂ ಪ್ರತಿನಿಧಿಯಾಗಿದೆ: ಶರತ್‌ಕೃಷ್ಣ ಪಡ್ವೆಟ್ನಾಯ

ಉಜಿರೆ: ಉಜಿರೆಯ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ರಥಬೀದಿಯಲ್ಲಿ ನಡೆದ ಬೃಹತ್ ಹಿಂದೂ ಸಮಾವೇಶದಲ್ಲಿ ಉಜಿರೆಯ ಶ್ರೀ ಜನಾರ್ದನಸ್ವಾಮಿ ದೇವಸ್ಥಾನದ ಅನುವಂಶೀಯ ಆಡಳಿತ ಮೊಕ್ತೇಸರ ಶರತ್‌ಕೃಷ್ಣ ಪಡ್ವೆಟ್ನಾಯರವರು ಮಾತನಾಡುತ್ತಾ ತ್ಯಾಗ, ಬಲಿದಾನ, ಪ್ರತಿಭಟನೆ ಮೂಲಕ ವಿಶ್ವ ಹಿಂದೂ ಪರಿಷದ್ ವಿಶ್ವದ ಹಿಂದೂಗಳ ಧ್ವನಿ ಹಾಗೂ ಪ್ರತಿನಿಧಿಯಾಗಿದೆ ಹಿರಿಯ ಕಾರ್ಯಕರ್ತರ ಶ್ರಮದ ಫಲದಿಂದ ಸಂಘಟನೆ ಶಕ್ತಿಯುತವಾಗಿ ಬೆಳೆದಿದೆ. ದೇಶದಲ್ಲಿ ಹಿಂದೂಗಳಿಗೆ ಆಗುತ್ತಿರುವ ಅನ್ಯಾಯ ತಡೆಗಟ್ಟಬೇಕು. ಧರ್ಮ ಉಳಿದರೆ ಮಾತ್ರ ದೇಶ ಉಳಿಯುತ್ತದೆ ಎಂದು ಹೇಳಿದರು.

ದಿಕ್ಸೂಚಿ ಭಾಷಣ ಮಾಡಿದ ಮಂಗಳೂರು ವಿಭಾಗದ ಕಾರ್ಯದರ್ಶಿ ದೇವಿಪ್ರಸಾದ್ ಶೆಟ್ಟಿ ಮಾತನಾಡಿ, ಹಿಂದೂ ಸಮಾಜದ ಮೇಲೆ ನಡೆಯುವ ರಾಜಕೀಯ ಮತ್ತು ಸಾಮಾಜಿಕ ದಾಳಿಯನ್ನು ಖಂಡಿಸಬೇಕು. ಜಾತಿ ವಿಚಾರದಲ್ಲಿ ಹಿಂದೂ ಸಮಾಜ ವಿಂಗಡಣೆಯಾಗಬಾರದು ಎಂದು ಹೇಳಿದರು.

ಸಮಾರಂಭವನ್ನು ಉದ್ಘಾಟಿಸಿದ ಉತ್ಸವಸಮಿತಿ ಅಧ್ಯಕ್ಷ ಡಾ. ಎಂ. ಎಂ. ದಯಾಕರ್ ಮಾತನಾಡಿ, ನಮ್ಮೊಳಗಿನ ಶಕ್ತಿ ಇನ್ನಷ್ಟು ಬಲಗೊಂಡು ನ್ಯಾಯಮಾರ್ಗದಲ್ಲಿ ಹೋರಾಟ ನಡೆಸಬೇಕು ಎಂದು ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ 60 ಹಿರಿಯ ಕಾರ್ಯಕರ್ತರನ್ನು ಗೌರವಿಸಲಾಯಿತು.

ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಸದಸ್ಯ ಕೆ. ಪ್ರತಾಪಸಿಂಹ ನಾಯಕ್, ನವೀನ್ ನೆರಿಯಾ, ಡಾ. ಭಾರತಿ, ಜಿ.ಕೆ., ಎಕ್ಸೆಲ್ ಕಾಲೇಜಿನ ಆಡಳಿತ ನಿರ್ದೇಶಕ ಸುಮಂತ್ ಕುಮಾರ್ ಜೈನ್, ಮೊದಲಾದವರು ಉಪಸ್ಥಿತರಿದ್ದರು. ಸಂಪತ್ ಸುವರ್ಣ ಸ್ವಾಗತಿಸಿ ಮೋಹನ್ ಬೆಳ್ತಂಗಡಿ ವಂದಿಸಿದರು.

Spread the love
  • Related Posts

    ವಾತ್ಸಲ್ಯ ಮನೆ ನಿರ್ಮಾಣದಿಂದ ವೃದ್ಧರ ಮುಖದಲ್ಲಿ ಕಾಣುವ ನಗು, ಯೋಜನೆಯ ಸಿಬ್ಬಂದಿ ಶ್ರಮ ಸಾರ್ಥಕವಾಗಿರುವುದಕ್ಕೆ ಸಾಕ್ಷಿಯಾಗಿದೆ: ಶ್ರದ್ಧಾ ಅಮಿತ್

    ಸಕಲೇಶಪುರ: ನಿರ್ಗತಿಕ ವೃದ್ಧರು ಹಾಗೂ ಆರ್ಥಿಕವಾಗಿ ಹಿಂದುಳಿದ ಕುಟುಂಬಗಳ ಅಭಿವೃದ್ಧಿಯೊಂದಿಗೆ ಸೂರು ಇಲ್ಲದೇ ಇರುವ ನಿರ್ಗತಿಕರಿಗೆ ಆಸರೆಗಾಗಿ ಸ್ವಂತ ಸೂರು ಒದಗಿಸುವುದೇ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜಯೆ ಉದ್ದೇಶ ಎಂದು ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆ ಅವರ ಪುತ್ರಿ…

    Spread the love

    ಉಜಿರೆಯ ಬೆನಕ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ. ಗೋಪಾಲಕೃಷ್ಣ ಕೆ ಅವರಿಗೆ “ಆಯುಷ್ ಶ್ರೀ” ಪ್ರಶಸ್ತಿ

    ಮಂಗಳೂರು: ಮಂಗಳೂರಿನಲ್ಲಿ ಆಯೋಜಿಸಲಾದ ಆಯುಷ್‌ ಹಬ್ಬ 2026ರ ಅಂಗವಾಗಿ ನಡೆದ ಆಯುಷ್ ಅಭಿನಂದನ ಕಾರ್ಯಕ್ರಮದಲ್ಲಿ ಆಯುಷ್ ವೈದ್ಯ ಪದ್ಧತಿಗಳ ಸಾಧಕರಿಗೆ ಗೌರವ ಸಲ್ಲಿಸಲಾಯಿತು. ಬೆನಕ ಹೆಲ್ತ್ ಸೆಂಟರ್, ಉಜಿರೆಯ ಸಂಸ್ಥಾಪಕರು ಹಾಗೂ ವೈದ್ಯಕೀಯ ನಿರ್ದೇಶಕ ಡಾ.ಗೋಪಾಲಕೃಷ್ಣ ಕೆ ಅವರಿಗೆ ಸಮಾಜಕ್ಕೆ ಆಯುಷ್‌…

    Spread the love

    You Missed

    ಚಿರತೆ ದಾಳಿ ಕೂಲಿಕಾರ್ಮಿಕರಿಗೆ ಗಾಯ ಆನೆಹಾವಳಿಯ ಬಳಿಕ ಇದೀಗ ಚಿರತೆ ಕಾಟಕ್ಕೆ ಬೆಚ್ಚಿಬಿದ್ದ ಕಾರ್ಮಿಕರು

    • By admin
    • February 9, 2026
    • 55 views
    ಚಿರತೆ ದಾಳಿ ಕೂಲಿಕಾರ್ಮಿಕರಿಗೆ ಗಾಯ ಆನೆಹಾವಳಿಯ ಬಳಿಕ ಇದೀಗ ಚಿರತೆ ಕಾಟಕ್ಕೆ ಬೆಚ್ಚಿಬಿದ್ದ ಕಾರ್ಮಿಕರು

    ಶ್ರೀ ಕ್ಷೇತ್ರ ಮೊಂಟೆತ್ತಡ್ಕದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ

    • By admin
    • February 8, 2026
    • 41 views
    ಶ್ರೀ ಕ್ಷೇತ್ರ ಮೊಂಟೆತ್ತಡ್ಕದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ

    ಮಕ್ಕಳಿಗೆ ಸಂಸ್ಕಾರಯುತ ಶಿಕ್ಷಣದ ಜೊತೆಗೆ ಧಾರ್ಮಿಕ ನಂಬಿಕೆ ಆಚಾರ ವಿಚಾರಗಳ ಬಗ್ಗೆ ಅರಿವು ಮೂಡಿಸುವ ಜವಾಬ್ದಾರಿ ತಾಯಂದಿರದ್ದು: ತೆಂಕಲಗೂಡು ಶ್ರೀ

    • By admin
    • February 7, 2026
    • 28 views
    ಮಕ್ಕಳಿಗೆ ಸಂಸ್ಕಾರಯುತ ಶಿಕ್ಷಣದ ಜೊತೆಗೆ ಧಾರ್ಮಿಕ ನಂಬಿಕೆ ಆಚಾರ ವಿಚಾರಗಳ ಬಗ್ಗೆ ಅರಿವು ಮೂಡಿಸುವ  ಜವಾಬ್ದಾರಿ ತಾಯಂದಿರದ್ದು: ತೆಂಕಲಗೂಡು ಶ್ರೀ

    ಗ್ರಾ.ಪಂ ಕಡಿರುದ್ಯಾವರ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಹಭಾಗಿತ್ವದಲ್ಲಿ ಕಾನರ್ಪದಲ್ಲಿ ನಿರ್ಮಾಣ ಗೊಂಡ ಮುಕ್ತಿದಾಮ ಲೋಕಾರ್ಪಣೆ

    • By admin
    • February 7, 2026
    • 232 views
    ಗ್ರಾ.ಪಂ ಕಡಿರುದ್ಯಾವರ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಹಭಾಗಿತ್ವದಲ್ಲಿ ಕಾನರ್ಪದಲ್ಲಿ  ನಿರ್ಮಾಣ ಗೊಂಡ ಮುಕ್ತಿದಾಮ ಲೋಕಾರ್ಪಣೆ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವಾತ್ಸಲ್ಯ ಸೂರು ಹಸ್ತಾಂತರ

    • By admin
    • February 5, 2026
    • 65 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವಾತ್ಸಲ್ಯ ಸೂರು ಹಸ್ತಾಂತರ

    ಚಾರ್ಮಾಡಿ ಅರಣ್ಯದಲ್ಲಿ ಬಾರಿ ಪ್ರಮಾಣದಲ್ಲಿ ಹಬ್ಬಿದ ಬೆಂಕಿಯ ಕೆನ್ನಾಲಿಗೆ

    • By admin
    • February 2, 2026
    • 33 views
    ಚಾರ್ಮಾಡಿ ಅರಣ್ಯದಲ್ಲಿ  ಬಾರಿ ಪ್ರಮಾಣದಲ್ಲಿ ಹಬ್ಬಿದ ಬೆಂಕಿಯ ಕೆನ್ನಾಲಿಗೆ