ಮಧ್ಯಪ್ರಾಚ್ಯ ಯುದ್ಧದ ಪರಿಣಾಮ: ಇವಿ ವಾಹನಗಳತ್ತ ರಾಜ್ಯದ ಜನರ ಓಟ, ಒಂದೇ ತಿಂಗಳಲ್ಲಿ 29 ಸಾವಿರ ಮಾರಾಟ!!!

ಬೆಂಗಳೂರು: ಮಧ್ಯಪ್ರಾಚ್ಯ ಯುದ್ದ (Middle East War) ಇಡೀ ವಿಶ್ವವನ್ನೇ ಅಲುಗಾಡಿಸುತ್ತಿದೆ. ಪೆಟ್ರೋಲ್, ಡಿಸೇಲ್ ಸಿಗದೇ ಒದ್ದಾಡುತ್ತಿರುವ ಜನ ಇವಿ ವಾಹನಗಳ ಮೊರೆ ಹೋಗಿದ್ದಾರೆ. ಇದರಿಂದ ಒಂದೇ ತಿಂಗಳಲ್ಲಿ 29 ಸಾವಿರಕ್ಕೂ ಅಧಿಕ ವಾಹನಗಳು ಮಾರಾಟವಾಗಿವೆ.ಯುದ್ಧದಿಂದಾಗಿ ಒಂದೆಡೆ ಜನ ಅಡುಗೆ ಮನೆಗೆ ಸಿಲಿಂಡರ್ ಸಿಗದೇ ಒದ್ದಾಡುತ್ತಿದ್ರೇ, ಮತ್ತೊಂದೆಡೆ ಪೆಟ್ರೋಲ್, ಡಿಸೇಲ್ ಸಿಗದೇ ವಾಹನದಲ್ಲಿ ಹಿಂದೂ ಮುಂದು ನೋಡುವಂತಾಗಿದೆ. ಹೀಗಾಗಿ ರಾಜ್ಯದ ಜನ ನಿಧಾನವಾಗಿ ಎಲೆಕ್ಟ್ರಿಕ್ ವೆಹಿಕಲ್ಸ್‌ನತ್ತ ಮುಖ ಮಾಡಿದ್ದು, ಕಳೆದ ಒಂದು ತಿಂಗಳಿನಿಂದ ಇವಿ ವೆಹಿಕಲ್ಸ್‌ಗಳ ಮಾರಾಟ, ಬುಕ್ಕಿಂಗ್ ಹೆಚ್ಚಾಗಿದೆ.

ಇರಾನ್-ಇಸ್ರೇಲ್-ಅಮೇರಿಕಾ ಕದನಕ್ಕೆ ಸದ್ಯಕ್ಕೆ ವಿರಾಮ ಬೀಳುತ್ತಿಲ್ಲ. ಈ ದೀರ್ಘಕಾಲದ ಯುದ್ದದ ಪರಿಣಾಮ ರಾಜ್ಯದ ಮೇಲೆ ಬಿದ್ದಿದ್ದು ಜನಸಾಮಾನ್ಯರು ತತ್ತರಿಸುವಂತಾಗಿದೆ. ಪ್ರಮುಖವಾಗಿ ಪೆಟ್ರೋಲ್, ಡಿಸೇಲ್, ಸಿಎನ್‌ಜಿಗಾಗಿ ಕಿಲೋಮೀಟರ್‌ಗಟ್ಟಲೇ ಕ್ಯೂ ಹಚ್ಚಿ ನಿಲ್ಲೋ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನೆಲೆ ಕಳೆದ ಒಂದು ತಿಂಗಳಿನಿಂದ ಜನ ನಿಧಾನವಾಗಿ ಎಲೆಕ್ಟ್ರಿಕ್ ವಾಹನಗಳತ್ತ ಮುಖ ಮಾಡುತ್ತಿದ್ದಾರೆ.

ರಾಜ್ಯದಲ್ಲಿ ಕಳೆದ ಮಾರ್ಚ್ 1ರಿಂದ 31ರವರೆಗೆ 28,765 ಎಲೆಕ್ಟ್ರಿಕ್ ವಾಹನಗಳು ರೆಜಿಸ್ಟ್ರೇಷನ್ ಆಗಿದ್ದು, ನಿಧಾನವಾಗಿ ಇವಿ ವೆಹಿಕಲ್ಸ್ಗಳನ್ನು ಕೊಳ್ಳುವುವರ ಸಂಖ್ಯೆ ಹೆಚ್ಚಾಗುತ್ತಿದೆ. ಈ ಮೂಲಕ ಕಳೆದ ತಿಂಗಳವರೆಗೆ 7,56,637 ಎಲೆಕ್ಟ್ರಿಕ್ ವಾಹನಗಳು ರಾಜ್ಯದಲ್ಲಿ ಸಂಚರಿಸುತ್ತಿವೆ. ಈ ಹಿಂದೆ ಇವಿ ವಾಹನಗಳೆಂದ್ರೇ ಮೂಗು ಮುರಿಯೋರು ಎಲೆಕ್ಟ್ರಿಕ್ ವಾಹನಗಳತ್ತ ಹೊರಳುತ್ತಾ ಇದ್ದಾರೆ. ಇನ್ನೂ ಇವಿ ಬೈಕ್, ಇವಿ ಕಾರ್, ಇವಿ ಬಸ್ ಸೇರಿದಂತೆ ದಿನದಿಂದ ದಿನಕ್ಕೆ ಇವಿ ವಾಹನಗಳ ಬುಕ್ಕಿಂಗ್‌ಗಳ ಸಂಖ್ಯೆ ಹೆಚ್ಚಾಗುತ್ತಿದೆ.

ತೆರಿಗೆ ಹೆಚ್ಚಳಕ್ಕೂ ಮುನ್ನ ಭಾರೀ ಬುಕ್ಕಿಂಗ್

ಜೊತೆಗೆ ಕರ್ನಾಟಕ ಮೋಟಾರು ವಾಹನಗಳ ತೆರಿಗೆ(ತಿದ್ದುಪಡಿ) ವಿಧೇಯಕ-2026ರ ಪ್ರಕಾರ 10 ಲಕ್ಷ ರೂ.ವರೆಗಿನ ಇವಿ ವಾಹನಗಳಿಗೆ 5% ಪ್ರತಿಶತ ತೆರಿಗೆ, 10 ಲಕ್ಷ ರೂ.ಯಿಂದ 25 ಲಕ್ಷ ರೂ.ವರೆಗಿನ ವಾಹನಗಳಿಗೆ 8 % ಪ್ರತಿಶತ ತೆರಿಗೆ ವಿಧಿಸಲು ಸರ್ಕಾರ ಮುಂದಾಗಿದೆ. ಈ ವಿಧೇಯಕಕ್ಕೆ ರಾಜ್ಯಪಾಲರ ಅಂಕಿತವೊಂದೇ ಬಾಕಿಯಿದೆ. ಈ ಹಿನ್ನೆಲೆ ಇವಿ ವೆಹಿಕಲ್‌ಗಳ ಬೆಲೆ ಹೆಚ್ಚಳವಾಗ್ತಿರೋದ್ರಿಂದ, ಜನ ಎಲೆಕ್ಟ್ರಿಕ್ ವಾಹನಗಳನ್ನು ಬೇಗ ಬೇಗ ಬುಕ್ ಮಾಡುತ್ತಿದ್ದಾರೆ. ಒಟ್ಟಿನಲ್ಲಿ ಈ ಯುದ್ಧದಿಂದಾಗಿ ಜನ ಪರಿಸರಸ್ನೇಹಿ ವಾಹನಗಳತ್ತ ಆಕರ್ಷಿತರಾಗುತ್ತಿದ್ದಾರೆ

Spread the love
  • Related Posts

    ಎತ್ತಿನಹೊಳೆ ಯೋಜನೆಗೆ ಕೇಂದ್ರದಿಂದ ಗ್ರೀನ್ ಸಿಗ್ನಲ್: 277 ಎಕರೆ ಅರಣ್ಯ ಬಳಕೆಗೆ ಷರತ್ತುಬದ್ಧ ಅನುಮತಿ

    ನವದೆಹಲಿ: ಎತ್ತಿನಹೊಳೆ ಯೋಜನೆಗೆ ಹಾಸನ ಹಾಗೂ ತುಮಕೂರು ಜಿಲ್ಲೆಗಳ 277 ಎಕರೆ ಅರಣ್ಯ ಬಳಸಲು ಕೇಂದ್ರ ಪರಿಸರ ಸಚಿವಾಲಯದ ಅರಣ್ಯ ಸಲಹಾ ಸಮಿತಿ ಷರತ್ತುಬದ್ಧ ಅನುಮತಿ ನೀಡಿದ ಬೆನ್ನಲ್ಲೇ ಕೇಂದ್ರ ಸರ್ಕಾರವು ತಾತ್ವಿಕ ಅನುಮೋದನೆ ನೀಡಿದೆ. ಈ ಬಗ್ಗೆ ಪರಿಸರ, ಅರಣ್ಯ ಮತ್ತು…

    Spread the love

    ಫೋಟೋ ಶೂಟ್ ವಿವಾದಕ್ಕೆ ಕಾರಣವಾಗಿದ್ದ ಬೆಟ್ಟದ ಭೈರವೇಶ್ವರಸ್ವಾಮಿ ದೇವಸ್ಥಾನದಲ್ಲಿ ಫೋಟೋ ಶೂಟ್ ಗೆ ಶುಲ್ಕ ನಿಗದಿ

    ಸಕಲೇಶಪುರ: ತಾಲ್ಲೂಕಿನ ಪ್ರಸಿದ್ಧ ಪ್ರವಾಸಿ ಹಾಗೂ ಧಾರ್ಮಿಕ ತಾಣವಾದ ಬೆಟ್ಟದ ಭೈರವೇಶ್ವರಸ್ವಾಮಿ ದೇವಾಲಯದಲ್ಲಿ ಇನ್ನು ಮುಂದೆ ಫೋಟೋ ಶೂಟ್ ಮಾಡಲು 4 ಗಂಟೆಗೆ ₹5,000 ಶುಲ್ಕ ವಿಧಿಸಲು ನಿರ್ಧರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಎಸ್‌. ಲತಾಕುಮಾರಿ ತಿಳಿಸಿದರು. ಮಂಗಳವಾರ ದೇವಸ್ಥಾನಕ್ಕೆ ಭೇಟಿ ನೀಡಿ…

    Spread the love

    You Missed

    ಮಧ್ಯಪ್ರಾಚ್ಯ ಯುದ್ಧದ ಪರಿಣಾಮ: ಇವಿ ವಾಹನಗಳತ್ತ ರಾಜ್ಯದ ಜನರ ಓಟ, ಒಂದೇ ತಿಂಗಳಲ್ಲಿ 29 ಸಾವಿರ ಮಾರಾಟ!!!

    • By admin
    • April 3, 2026
    • 17 views
    ಮಧ್ಯಪ್ರಾಚ್ಯ ಯುದ್ಧದ ಪರಿಣಾಮ: ಇವಿ ವಾಹನಗಳತ್ತ ರಾಜ್ಯದ ಜನರ ಓಟ, ಒಂದೇ ತಿಂಗಳಲ್ಲಿ 29 ಸಾವಿರ ಮಾರಾಟ!!!

    ಎತ್ತಿನಹೊಳೆ ಯೋಜನೆಗೆ ಕೇಂದ್ರದಿಂದ ಗ್ರೀನ್ ಸಿಗ್ನಲ್: 277 ಎಕರೆ ಅರಣ್ಯ ಬಳಕೆಗೆ ಷರತ್ತುಬದ್ಧ ಅನುಮತಿ

    • By admin
    • April 3, 2026
    • 20 views
    ಎತ್ತಿನಹೊಳೆ ಯೋಜನೆಗೆ ಕೇಂದ್ರದಿಂದ ಗ್ರೀನ್ ಸಿಗ್ನಲ್: 277 ಎಕರೆ ಅರಣ್ಯ ಬಳಕೆಗೆ ಷರತ್ತುಬದ್ಧ ಅನುಮತಿ

    ಫೋಟೋ ಶೂಟ್ ವಿವಾದಕ್ಕೆ ಕಾರಣವಾಗಿದ್ದ ಬೆಟ್ಟದ ಭೈರವೇಶ್ವರಸ್ವಾಮಿ ದೇವಸ್ಥಾನದಲ್ಲಿ ಫೋಟೋ ಶೂಟ್ ಗೆ ಶುಲ್ಕ ನಿಗದಿ

    • By admin
    • April 2, 2026
    • 28 views
    ಫೋಟೋ ಶೂಟ್ ವಿವಾದಕ್ಕೆ ಕಾರಣವಾಗಿದ್ದ ಬೆಟ್ಟದ ಭೈರವೇಶ್ವರಸ್ವಾಮಿ ದೇವಸ್ಥಾನದಲ್ಲಿ ಫೋಟೋ ಶೂಟ್ ಗೆ ಶುಲ್ಕ ನಿಗದಿ

    ಭೀಮ ಗೋಲ್ಡ್ CSR ಸಹಕಾರದಿಂದ ಬೈಂದೂರು ಸೇವಾಧಾಮದಲ್ಲಿ ನೀರಿನ ಘಟಕದ ಉದ್ಘಾಟನೆ

    • By admin
    • April 1, 2026
    • 19 views
    ಭೀಮ ಗೋಲ್ಡ್ CSR ಸಹಕಾರದಿಂದ ಬೈಂದೂರು ಸೇವಾಧಾಮದಲ್ಲಿ ನೀರಿನ ಘಟಕದ ಉದ್ಘಾಟನೆ

    ಬಳಂಜ ಶಿಕ್ಷಣ ಟ್ರಸ್ಟ್ ನ ಅಧ್ಯಕ್ಷರಾಗಿ ಶಿಕ್ಷಣ ಪ್ರೇಮಿ ಮನೋಹರ್ ಬಳಂಜ ಪುನರಾಯ್ಕೆ

    • By admin
    • April 1, 2026
    • 37 views
    ಬಳಂಜ ಶಿಕ್ಷಣ ಟ್ರಸ್ಟ್ ನ ಅಧ್ಯಕ್ಷರಾಗಿ ಶಿಕ್ಷಣ ಪ್ರೇಮಿ ಮನೋಹರ್ ಬಳಂಜ ಪುನರಾಯ್ಕೆ

    “ಶಾಂತಿಯ ಕಡೆ ಹೆಜ್ಜೆ: ಯುರೋಪಿಯನ್ ಯೂನಿಯನ್ ಕಡೆ ಇರಾನ್ ಕಣ್ಣೋಟ”

    • By admin
    • April 1, 2026
    • 45 views
    “ಶಾಂತಿಯ ಕಡೆ ಹೆಜ್ಜೆ: ಯುರೋಪಿಯನ್ ಯೂನಿಯನ್ ಕಡೆ ಇರಾನ್ ಕಣ್ಣೋಟ”