ಮಧ್ಯಪ್ರಾಚ್ಯ ಯುದ್ಧದ ಪರಿಣಾಮ: ಇವಿ ವಾಹನಗಳತ್ತ ರಾಜ್ಯದ ಜನರ ಓಟ, ಒಂದೇ ತಿಂಗಳಲ್ಲಿ 29 ಸಾವಿರ ಮಾರಾಟ!!!

ಬೆಂಗಳೂರು: ಮಧ್ಯಪ್ರಾಚ್ಯ ಯುದ್ದ (Middle East War) ಇಡೀ ವಿಶ್ವವನ್ನೇ ಅಲುಗಾಡಿಸುತ್ತಿದೆ. ಪೆಟ್ರೋಲ್, ಡಿಸೇಲ್ ಸಿಗದೇ ಒದ್ದಾಡುತ್ತಿರುವ ಜನ ಇವಿ ವಾಹನಗಳ ಮೊರೆ ಹೋಗಿದ್ದಾರೆ. ಇದರಿಂದ ಒಂದೇ ತಿಂಗಳಲ್ಲಿ 29 ಸಾವಿರಕ್ಕೂ ಅಧಿಕ ವಾಹನಗಳು ಮಾರಾಟವಾಗಿವೆ.ಯುದ್ಧದಿಂದಾಗಿ ಒಂದೆಡೆ ಜನ ಅಡುಗೆ ಮನೆಗೆ ಸಿಲಿಂಡರ್ ಸಿಗದೇ ಒದ್ದಾಡುತ್ತಿದ್ರೇ, ಮತ್ತೊಂದೆಡೆ ಪೆಟ್ರೋಲ್, ಡಿಸೇಲ್ ಸಿಗದೇ ವಾಹನದಲ್ಲಿ ಹಿಂದೂ ಮುಂದು ನೋಡುವಂತಾಗಿದೆ. ಹೀಗಾಗಿ ರಾಜ್ಯದ ಜನ ನಿಧಾನವಾಗಿ ಎಲೆಕ್ಟ್ರಿಕ್ ವೆಹಿಕಲ್ಸ್‌ನತ್ತ ಮುಖ ಮಾಡಿದ್ದು, ಕಳೆದ ಒಂದು ತಿಂಗಳಿನಿಂದ ಇವಿ ವೆಹಿಕಲ್ಸ್‌ಗಳ ಮಾರಾಟ, ಬುಕ್ಕಿಂಗ್ ಹೆಚ್ಚಾಗಿದೆ.

ಇರಾನ್-ಇಸ್ರೇಲ್-ಅಮೇರಿಕಾ ಕದನಕ್ಕೆ ಸದ್ಯಕ್ಕೆ ವಿರಾಮ ಬೀಳುತ್ತಿಲ್ಲ. ಈ ದೀರ್ಘಕಾಲದ ಯುದ್ದದ ಪರಿಣಾಮ ರಾಜ್ಯದ ಮೇಲೆ ಬಿದ್ದಿದ್ದು ಜನಸಾಮಾನ್ಯರು ತತ್ತರಿಸುವಂತಾಗಿದೆ. ಪ್ರಮುಖವಾಗಿ ಪೆಟ್ರೋಲ್, ಡಿಸೇಲ್, ಸಿಎನ್‌ಜಿಗಾಗಿ ಕಿಲೋಮೀಟರ್‌ಗಟ್ಟಲೇ ಕ್ಯೂ ಹಚ್ಚಿ ನಿಲ್ಲೋ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನೆಲೆ ಕಳೆದ ಒಂದು ತಿಂಗಳಿನಿಂದ ಜನ ನಿಧಾನವಾಗಿ ಎಲೆಕ್ಟ್ರಿಕ್ ವಾಹನಗಳತ್ತ ಮುಖ ಮಾಡುತ್ತಿದ್ದಾರೆ.

ರಾಜ್ಯದಲ್ಲಿ ಕಳೆದ ಮಾರ್ಚ್ 1ರಿಂದ 31ರವರೆಗೆ 28,765 ಎಲೆಕ್ಟ್ರಿಕ್ ವಾಹನಗಳು ರೆಜಿಸ್ಟ್ರೇಷನ್ ಆಗಿದ್ದು, ನಿಧಾನವಾಗಿ ಇವಿ ವೆಹಿಕಲ್ಸ್ಗಳನ್ನು ಕೊಳ್ಳುವುವರ ಸಂಖ್ಯೆ ಹೆಚ್ಚಾಗುತ್ತಿದೆ. ಈ ಮೂಲಕ ಕಳೆದ ತಿಂಗಳವರೆಗೆ 7,56,637 ಎಲೆಕ್ಟ್ರಿಕ್ ವಾಹನಗಳು ರಾಜ್ಯದಲ್ಲಿ ಸಂಚರಿಸುತ್ತಿವೆ. ಈ ಹಿಂದೆ ಇವಿ ವಾಹನಗಳೆಂದ್ರೇ ಮೂಗು ಮುರಿಯೋರು ಎಲೆಕ್ಟ್ರಿಕ್ ವಾಹನಗಳತ್ತ ಹೊರಳುತ್ತಾ ಇದ್ದಾರೆ. ಇನ್ನೂ ಇವಿ ಬೈಕ್, ಇವಿ ಕಾರ್, ಇವಿ ಬಸ್ ಸೇರಿದಂತೆ ದಿನದಿಂದ ದಿನಕ್ಕೆ ಇವಿ ವಾಹನಗಳ ಬುಕ್ಕಿಂಗ್‌ಗಳ ಸಂಖ್ಯೆ ಹೆಚ್ಚಾಗುತ್ತಿದೆ.

ತೆರಿಗೆ ಹೆಚ್ಚಳಕ್ಕೂ ಮುನ್ನ ಭಾರೀ ಬುಕ್ಕಿಂಗ್

ಜೊತೆಗೆ ಕರ್ನಾಟಕ ಮೋಟಾರು ವಾಹನಗಳ ತೆರಿಗೆ(ತಿದ್ದುಪಡಿ) ವಿಧೇಯಕ-2026ರ ಪ್ರಕಾರ 10 ಲಕ್ಷ ರೂ.ವರೆಗಿನ ಇವಿ ವಾಹನಗಳಿಗೆ 5% ಪ್ರತಿಶತ ತೆರಿಗೆ, 10 ಲಕ್ಷ ರೂ.ಯಿಂದ 25 ಲಕ್ಷ ರೂ.ವರೆಗಿನ ವಾಹನಗಳಿಗೆ 8 % ಪ್ರತಿಶತ ತೆರಿಗೆ ವಿಧಿಸಲು ಸರ್ಕಾರ ಮುಂದಾಗಿದೆ. ಈ ವಿಧೇಯಕಕ್ಕೆ ರಾಜ್ಯಪಾಲರ ಅಂಕಿತವೊಂದೇ ಬಾಕಿಯಿದೆ. ಈ ಹಿನ್ನೆಲೆ ಇವಿ ವೆಹಿಕಲ್‌ಗಳ ಬೆಲೆ ಹೆಚ್ಚಳವಾಗ್ತಿರೋದ್ರಿಂದ, ಜನ ಎಲೆಕ್ಟ್ರಿಕ್ ವಾಹನಗಳನ್ನು ಬೇಗ ಬೇಗ ಬುಕ್ ಮಾಡುತ್ತಿದ್ದಾರೆ. ಒಟ್ಟಿನಲ್ಲಿ ಈ ಯುದ್ಧದಿಂದಾಗಿ ಜನ ಪರಿಸರಸ್ನೇಹಿ ವಾಹನಗಳತ್ತ ಆಕರ್ಷಿತರಾಗುತ್ತಿದ್ದಾರೆ

Spread the love
  • Related Posts

    ಬೆಳ್ತಂಗಡಿ :ಕನ್ನಡಿಕಟ್ಟೆ ಬಳಿ ಬೈಕ್- ಕಾರು ನಡುವೆ ಭೀಕರ ರಸ್ತೆ ಅಪಘಾತ,ಮಹಿಳೆ ಸಾವು

    ಬೆಳ್ತಂಗಡಿ: ಭೀಕರ ರಸ್ತೆ ಅಪಘಾತದಲ್ಲಿ ಸ್ಥಳದಲ್ಲೇ ಮಹಿಳೆಯೊಬ್ಬರು ದುರ್ಮರಣ ಹೊಂದಿರುವಂತಹ ಘಟನೆ ಬೆಳ್ತಂಗಡಿ ತಾಲೂಕಿನ ಪಡಂಗಡಿ ಗ್ರಾಮದ ಕನ್ನಡಿಕಟ್ಟೆ ಬಳಿ ಮೇ.17 ರಂದು ರಾತ್ರಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಬಳಂಜ ಗ್ರಾಮದ ಅನಿಲ್ ಪಾರ್ಮ್ ನ ಮಾಲೀಕ ಅನಿಲ್ ಭಟ್(45) ಅವರ…

    Spread the love

    ಶ್ರೀ.ಕ್ಷೇ.ಧ.ಗ್ರಾ ಯೋಜನೆ ವತಿಯಿಂದ ಸಕಲೇಶಪುರದಲ್ಲಿ 2054ನೇ ಮದ್ಯವರ್ಜನ ಶಿಬಿರದ ಉದ್ಘಾಟನೆ, ಮದ್ಯವರ್ಜನ ಶಿಬಿರ ಜೀವನದ ಪಾಠ ಶಾಲೆ: ವನರಾಜ್ ವಿ.ಸಿ,

    ಸಕಲೇಶಪುರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ಸಕಲೇಶಪುರ, 2054ನೇ ಮದ್ಯವರ್ಜನ ಶಿಬಿರದ ವ್ಯವಸ್ಥಾಪನಾ ಸಮಿತಿ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ) ಬೆಳ್ತಂಗಡಿ, ಅಖಿಲ ಕರ್ನಾಟಕ ಜಿಲ್ಲಾ ಜನಜಾಗೃತಿ ವೇದಿಕೆ ಹಾಸನ ಜಿಲ್ಲೆ, ಕರ್ನಾಟಕ…

    Spread the love

    You Missed

    ಬೆಳ್ತಂಗಡಿ :ಕನ್ನಡಿಕಟ್ಟೆ ಬಳಿ ಬೈಕ್- ಕಾರು ನಡುವೆ ಭೀಕರ ರಸ್ತೆ ಅಪಘಾತ,ಮಹಿಳೆ ಸಾವು

    • By admin
    • May 17, 2026
    • 2188 views
    ಬೆಳ್ತಂಗಡಿ :ಕನ್ನಡಿಕಟ್ಟೆ ಬಳಿ ಬೈಕ್- ಕಾರು ನಡುವೆ ಭೀಕರ ರಸ್ತೆ ಅಪಘಾತ,ಮಹಿಳೆ ಸಾವು

    ಶ್ರೀ.ಕ್ಷೇ.ಧ.ಗ್ರಾ ಯೋಜನೆ ವತಿಯಿಂದ ಸಕಲೇಶಪುರದಲ್ಲಿ 2054ನೇ ಮದ್ಯವರ್ಜನ ಶಿಬಿರದ ಉದ್ಘಾಟನೆ, ಮದ್ಯವರ್ಜನ ಶಿಬಿರ ಜೀವನದ ಪಾಠ ಶಾಲೆ: ವನರಾಜ್ ವಿ.ಸಿ,

    • By admin
    • May 16, 2026
    • 581 views
    ಶ್ರೀ.ಕ್ಷೇ.ಧ.ಗ್ರಾ ಯೋಜನೆ ವತಿಯಿಂದ ಸಕಲೇಶಪುರದಲ್ಲಿ 2054ನೇ ಮದ್ಯವರ್ಜನ ಶಿಬಿರದ ಉದ್ಘಾಟನೆ, ಮದ್ಯವರ್ಜನ ಶಿಬಿರ ಜೀವನದ ಪಾಠ ಶಾಲೆ: ವನರಾಜ್ ವಿ.ಸಿ,

    ಬೆಳಾಲು ಗ್ರಾಮದ ಮೂಕುತ್ತಿ ಮಜಲು ಹಾಗೂ ನಾಗಕಲ್ಲು ಪ್ರದೇಶದಲ್ಲಿ ಸೇತುವೆ ನಿರ್ಮಾಣಕ್ಕೆ ರೂ.5 ಕೋಟಿ ಅನುದಾನ: ಶಾಸಕ ಹರೀಶ್ ಪೂಂಜ

    • By admin
    • May 12, 2026
    • 227 views
    ಬೆಳಾಲು ಗ್ರಾಮದ ಮೂಕುತ್ತಿ ಮಜಲು ಹಾಗೂ ನಾಗಕಲ್ಲು ಪ್ರದೇಶದಲ್ಲಿ ಸೇತುವೆ ನಿರ್ಮಾಣಕ್ಕೆ ರೂ.5 ಕೋಟಿ ಅನುದಾನ: ಶಾಸಕ ಹರೀಶ್ ಪೂಂಜ

    ರಡ್ಡ್ ಮಂಡೆಯ ಹಾವಿಗೆ ಲಕ್ಷಲಕ್ಷ ಬೆಲೆ ಕಟ್ಟಿ ಮಾರಾಟಕ್ಕೆ ಯತ್ನ, ಐವರನ್ನು ಬಂಧಿಸಿದ ಸಿಐಡಿ ಅರಣ್ಯ ಸಂಚಾರಿ ದಳದ ಅಧಿಕಾರಿಗಳು!!!!

    • By admin
    • May 12, 2026
    • 71 views
    ರಡ್ಡ್ ಮಂಡೆಯ ಹಾವಿಗೆ  ಲಕ್ಷಲಕ್ಷ ಬೆಲೆ ಕಟ್ಟಿ ಮಾರಾಟಕ್ಕೆ ಯತ್ನ, ಐವರನ್ನು ಬಂಧಿಸಿದ ಸಿಐಡಿ ಅರಣ್ಯ ಸಂಚಾರಿ ದಳದ ಅಧಿಕಾರಿಗಳು!!!!

    ನೀಟಾಗಿ ನಡೆಯದ ನೀಟ್ ಪರೀಕ್ಷೆ!!! ಪ್ರಶ್ನೆಪತ್ರಿಕೆ ಸೋರಿಕೆ ಹಿನ್ನಲೆಯಲ್ಲಿ ಪರೀಕ್ಷೆ ರದ್ದು, ಸಿಬಿಐ ತನಿಖೆಗೆ ಆದೇಶ

    • By admin
    • May 12, 2026
    • 50 views
    ನೀಟಾಗಿ ನಡೆಯದ ನೀಟ್ ಪರೀಕ್ಷೆ!!! ಪ್ರಶ್ನೆಪತ್ರಿಕೆ ಸೋರಿಕೆ ಹಿನ್ನಲೆಯಲ್ಲಿ ಪರೀಕ್ಷೆ ರದ್ದು, ಸಿಬಿಐ ತನಿಖೆಗೆ ಆದೇಶ

    ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ ಬಸ್”

    • By admin
    • May 11, 2026
    • 46 views
    ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ ಬಸ್”