ಗೋಕುಲಾಷ್ಟಮಿಯ ಶುಭದಿನದಂದು ನೇಪಾಳಿ ಭಾಷೆಯಲ್ಲಿ ‘ಸನಾತನ ಸಂಸ್ಥೆ’ಯ ಜಾಲತಾಣದ ಲೋಕಾರ್ಪಣೆ !


ಮಂಗಳೂರು: ಭಾರತ ಮತ್ತು ನೇಪಾಳದ ನಡುವೆ ಸಾವಿರಾರು ವರ್ಷಗಳಿಂದ ಸಾಂಸ್ಕೃತಿಕ ಸಂಬಂಧವಿದೆ. ‘ಹಿಂದೂ ಧರ್ಮ’ ಇದು ಎರಡೂ ದೇಶಗಳಲ್ಲಿನ ಸಮಾನವಾದ ಅಂಶವಾಗಿದೆ. ಸಹಜವಾಗಿಯೇ ಎರಡೂ ದೇಶಗಳಲ್ಲಿಯ ಶ್ರದ್ಧಾಸ್ಥಾನಗಳು, ನಂಬಿಕೆ, ಹಬ್ಬ-ಉತ್ಸವ ಇತ್ಯಾದಿಗಳಲ್ಲಿ ದೊಡ್ಡ ಪ್ರಮಾಣದಲ್ಲಿ ಸಾಮ್ಯತೆ ಇದೆ. ಸನಾತನ ಸಂಸ್ಥೆಯ ಜಾಲತಾಣಕ್ಕೆ ಜಗತ್ತಿನಾದ್ಯಂತ ಹಿಂದೂ ಸಮಾಜದ ವಾಚಕರಿದ್ದಾರೆ. ಈ ಜಾಲತಾಣಕ್ಕೆ ವಿವಿಧ ದೇಶಗಳಲ್ಲಿಯ ಹಿಂದೂ ನಾಗರಿಕರ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ. ಅದಕ್ಕಾಗಿ ಕೆಲವು ನೇಪಾಳಿ ಜಿಜ್ಞಾಸುಗಳು ನೇಪಾಳದಲ್ಲಿರುವ ಹಿಂದೂ ಸಮಾಜಕ್ಕೆ ಧರ್ಮಶಿಕ್ಷಣ ಸಿಗಲು ಸನಾತನದ ಜಾಲತಾಣವು ನೇಪಾಳಿ ಭಾಷೆಯಲ್ಲಿಯೂ ಆರಂಭಿಸುವಂತೆ ಆಗ್ರಹಿಸಿದ್ದರು. ಸನಾತನ ಸಂಸ್ಥೆ ಹಿಂದೂ ಧರ್ಮಪ್ರಸಾರದ ವ್ರತವನ್ನು ಕೈಗೆತ್ತಿಕೊಂಡು ಕಾರ್ಯನಿರತವಾಗಿದ್ದರಿಂದ ನಾವು ಈ ಬೇಡಿಕೆಯನ್ನು ಪೂರ್ಣ ಮಾಡುತ್ತಿದ್ದೇವೆ. ಜಗತ್ತಿನಾದ್ಯಂತ ನೇಪಾಳಿ ಭಾಷೆಯವರಿಗೆ ಧರ್ಮಶಿಕ್ಷಣ ಸಿಗಲು ನಾವು ನೇಪಾಳಿ ಜಾಲತಾಣವನ್ನು ಆರಂಭಿಸುತ್ತಿದ್ದೇವೆ ಎಂದು ಸನಾತನ ಸಂಸ್ಥೆಯ ರಾಷ್ಟ್ರೀಯ ವಕ್ತಾರರಾದ ಶ್ರೀ. ಚೇತನ ರಾಜಹಂಸ್ ಇವರು ಹೇಳಿದ್ದಾರೆ.

ಆಗಸ್ಟ್ 11 ರಂದು ಗೋಕುಲಾಷ್ಟಮಿಯ ಮಂಗಳ ದಿನದಂದು ‘ಆನ್‌ಲೈನ್’ ಕಾರ್ಯಕ್ರಮದ ಮೂಲಕ ಜಾಲತಾಣವನ್ನು ಲೋಕಾರ್ಪಣೆಯನ್ನು ಮಾಡಲಾಯಿತು. ಈ ಸಮಯದಲ್ಲಿ ‘ರಾಷ್ಟ್ರೀಯ ಧರ್ಮಸಭಾ ನೇಪಾಳ’ದ ಅಧ್ಯಕ್ಷ ಡಾ. ಮಾಧವ ಭಟ್ಟರಾಯಿ ಹಾಗೂ ಅವರ ಧರ್ಮಪತ್ನಿ, ಅದೇರೀತಿ ನೇಪಾಳ ಸರಕಾರದ ಮಾಜಿ ರಾಜ್ಯಸಚಿವ ಸೌ. ಕಾಂತಾ ಭಟ್ಟರಾಯಿ ಇವರ ಹಸ್ತದಿಂದ ಲೋಕಾರ್ಪಣೆಯಾಯಿತು. ಈ ಮಂಗಳ ದಿನದಲ್ಲಿ ಹಿಂದೂ ಜನಜಾಗೃತಿ ಸಮಿತಿಯ ರಾಷ್ಟ್ರೀಯ ಮಾರ್ಗದರ್ಶಕರಾದ ಸದ್ಗುರು ಡಾ. ಚಾರುದತ್ತ ಪಿಂಗಳೆ ಇವರೂ ದೆಹಲಿಯಿಂದ ‘ಆನ್‌ಲೈನ್’ನ ಮೂಲಕ ಉಪಸ್ಥಿತರಿದರು.

ಈ ಪ್ರಸಂಗದಲ್ಲಿ ಡಾ. ಭಟ್ಟರಾಯಿಯವರು ಮಾತನಾಡುತ್ತಾ, “ಸನಾತನ ಸಂಸ್ಥೆಯ ನೇಪಾಳಿ ಭಾಷೆಯ ಜಾಲತಾಣ ನಮಗೆ ಬಹಳ ಉಪಯುಕ್ತವಾಗಿದೆ ಎಂದೆನಿಸಿತು ಮತ್ತು ಇದು ನಮಗೆ ಬಹಳ ಸಹಾಯ ಮಾಡಲಿದೆ. ನೇಪಾಳದಲ್ಲಿ ಈ ರೀತಿಯ ಧಾರ್ಮಿಕ ವೆಬ್‌ಸೈಟ್ಸ್ ತುಂಬ ಕಡಿಮೆ ಇವೆ. ಇದು ಕೇವಲ ಧರ್ಮದ ಬಗ್ಗೆ ಜ್ಞಾನ ಮಾತ್ರವಲ್ಲದೇ, ಹಿಂದೂ ರಾಷ್ಟ್ರದ ಬಗ್ಗೆ ನಮಗೆಲ್ಲರಿಗೂ ಮಾರ್ಗದರ್ಶನ ಮಾಡಲಿದೆ”, ಎಂದರು.

ಈ ಸಮಯದಲ್ಲಿ ಸದ್ಗುರು ಡಾ. ಚಾರುದತ್ತ ಪಿಂಗಳೆಯವರು ಮಾತನಾಡುತ್ತಾ, “ವೆಬ್‌ಸೈಟ್‌ನಲ್ಲಿ ನೀಡಿರುವ ಹಿಂದೂ ಧರ್ಮಶಿಕ್ಷಣ ಇತ್ಯಾದಿ ಮಾಹಿತಿಗಳ ಮಾಧ್ಯಮದಿಂದ ಭಾರತ ಮತ್ತು ನೇಪಾಳ ಇವೆರಡೂ ದೇಶಗಳ ಧರ್ಮಬಾಂಧವ್ಯ ದೃಢವಾಗಲಿದೆ, ಎರಡೂ ದೇಶಗಳಲ್ಲಿ ಹಿಂದೂ ರಾಷ್ಟ್ರದ ಸ್ಥಾಪನೆಗಾಗಿ ನಡೆಯುತ್ತಿರುವ ಅಭಿಯಾನವು ಮುಂದುವರಿಯಲಿದೆ”, ಎಂದರು.

ಕನ್ನಡ, ಹಿಂದಿ, ಮರಾಠಿ, ಗುಜರಾತಿ, ಆಂಗ್ಲ, ತೆಲುಗು, ತಮಿಳು, ಮಲ್ಯಾಳಮ್ ಈ ೮ ಭಾಷೆಗಳಲ್ಲಿ ಇರುವ ಈ ಜಾಲತಾಣವು ಇನ್ನು ಮುಂದೆ ನೇಪಾಳಿ ಭಾಷೆಯಲ್ಲೂ ಲಭ್ಯವಿರಲಿದೆ. ಈ ಜಾಲತಾಣದಲ್ಲಿ ಅಧ್ಯಾತ್ಮಿಕ ವಿಷಯದ ಸಂದೇಹ ನಿವಾರಣೆ ಮಾಡಲು ‘ಆನ್‌ಲೈನ್’ ಸಂಪರ್ಕದ ಸೌಲಭ್ಯವು ಲಭ್ಯವಿರಲಿದೆ. ಸನಾತನದ ಜಾಲತಾಣದ ಮೂಲಕ ಜಿಜ್ಞಾಸುಗಳು ಸಾಧನೆಯನ್ನು ಆರಂಭಿಸಿದ್ದಾರೆ ಹಾಗೂ ತಮ್ಮ ಜೀವನವನ್ನು ಆನಂದಮಯವಾಗಿಸಿಕೊಂಡಿದ್ದಾರೆ. ಆದ್ದರಿಂದ ಹೆಚ್ಚೆಚ್ಚು ಜಿಜ್ಞಾಸುಗಳು ಈ ಜಾಲತಾಣಕ್ಕೆ ಭೇಟಿ ನೀಡಿ ಸಾಧನೆಯನ್ನು ಆರಂಭಿಸಬೇಕು, ಎಂದು ಸನಾತನ ಸಂಸ್ಥೆಯ ವತಿಯಿಂದ ಕರೆ ನೀಡಲಾಗಿದೆ.

ಜಾಲತಾಣದ ಲಿಂಕ್ : www.Sanatan.org/nepali

Spread the love
  • Related Posts

    ಕಟ್ಟಡ ಟೆಂಡರ್ ನಲ್ಲಿ ಆಗುತ್ತಿರುವ ಭ್ರಷ್ಟಾಚಾರ ಹಾಗೂ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಮರಳು, ಕೆಂಪುಕಲ್ಲು ಪೂರೈಕೆಯಲ್ಲಿ ಉಂಟಾದ ತೊಡಕುಗಳ ಕುರಿತು ಭಾರತೀಯ ಮಜ್ದೂರ್ ಸಂಘದ ವತಿಯಿಂದ ಸಮಾಲೋಚನಾ ಸಭೆ ಹಾಗೂ ಮನವಿ ಸಲ್ಲಿಕೆ

    ಬೆಳ್ತಂಗಡಿ: ಭಾರತೀಯ ಮಜ್ದೂರ್ ಸಂಘ ತಾಲೂಕು ಸಮಿತಿ ಬೆಳ್ತಂಗಡಿ ವತಿಯಿಂದ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರಿಗೆ ಮರಳು ಹಾಗೂ ಕೆಂಪು ಕಲ್ಲು ಪೂರೈಕೆಯಲ್ಲಿ ಆಗಿರುವ ತೊಂದರೆಯ ಕುರಿತು ಹಾಗೂ ಕಾರ್ಮಿಕ ಇಲಾಖೆಯ ಕಟ್ಟಡ ಮಂಡಳಿಯ ಟೆಂಡರ್ ಕೂಪದ ಭ್ರಷ್ಟಾಚಾರವನ್ನು ಖಂಡಿಸಲು…

    Spread the love

    ಚಿರಂಜೀವಿ ಯುವಕ ಮಂಡಲ ಕಾನರ್ಪ ಇದರ 34ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    ಬೆಳ್ತಂಗಡಿ: ಚಿರಂಜೀವಿ ಯುವಕ ಮಂಡಲ ಕಾನರ್ಪ ಕಡಿರುದ್ಯಾವರ ಇದರ 34ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮದ ನಿಮಿತ್ತ ಪೂರ್ವಭಾವಿ ಸಭೆಯನ್ನು ಯುವಕ ಮಂಡಲದ ವಠಾರದಲ್ಲಿ ನಡೆಸಲಾಯಿತು. ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ ಸಮಿತಿಯ ಅಧ್ಯಕ್ಷರಾಗಿ ರಾಘವೇಂದ್ರ ಭಟ್ ಪಣಿಕಲ್ ಹಾಗೂ…

    Spread the love

    You Missed

    ಕಟ್ಟಡ ಟೆಂಡರ್ ನಲ್ಲಿ ಆಗುತ್ತಿರುವ ಭ್ರಷ್ಟಾಚಾರ ಹಾಗೂ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಮರಳು, ಕೆಂಪುಕಲ್ಲು ಪೂರೈಕೆಯಲ್ಲಿ ಉಂಟಾದ ತೊಡಕುಗಳ ಕುರಿತು ಭಾರತೀಯ ಮಜ್ದೂರ್ ಸಂಘದ ವತಿಯಿಂದ ಸಮಾಲೋಚನಾ ಸಭೆ ಹಾಗೂ ಮನವಿ ಸಲ್ಲಿಕೆ

    • By admin
    • June 30, 2025
    • 141 views
    ಕಟ್ಟಡ  ಟೆಂಡರ್ ನಲ್ಲಿ ಆಗುತ್ತಿರುವ ಭ್ರಷ್ಟಾಚಾರ ಹಾಗೂ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಮರಳು, ಕೆಂಪುಕಲ್ಲು ಪೂರೈಕೆಯಲ್ಲಿ ಉಂಟಾದ ತೊಡಕುಗಳ ಕುರಿತು ಭಾರತೀಯ ಮಜ್ದೂರ್ ಸಂಘದ ವತಿಯಿಂದ ಸಮಾಲೋಚನಾ ಸಭೆ ಹಾಗೂ ಮನವಿ ಸಲ್ಲಿಕೆ

    ಚಿರಂಜೀವಿ ಯುವಕ ಮಂಡಲ ಕಾನರ್ಪ ಇದರ 34ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    • By admin
    • June 28, 2025
    • 285 views
    ಚಿರಂಜೀವಿ ಯುವಕ ಮಂಡಲ ಕಾನರ್ಪ ಇದರ 34ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    ವಕೀಲರ ಸಂಘ (ರಿ ) ಬಂಟ್ವಾಳ ಇದರ ನೂತನ ಪದಾಧಿಕಾರಿಗಳ ಪದಗ್ರಹಣ

    • By admin
    • June 26, 2025
    • 192 views
    ವಕೀಲರ ಸಂಘ (ರಿ ) ಬಂಟ್ವಾಳ ಇದರ ನೂತನ ಪದಾಧಿಕಾರಿಗಳ ಪದಗ್ರಹಣ

    ಭಾರಿಮಳೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿತ, ಶಿರಾಡಿ ಘಾಟ್ ನಲ್ಲಿ ವಾಹನ ಸಂಚಾರ ಬಂದ್

    • By admin
    • June 26, 2025
    • 295 views
    ಭಾರಿಮಳೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ  ಕುಸಿತ, ಶಿರಾಡಿ ಘಾಟ್ ನಲ್ಲಿ ವಾಹನ ಸಂಚಾರ ಬಂದ್

    ಮುಂದುವರಿದ ವರುಣಾರ್ಭಟ ಬೆಳ್ತಂಗಡಿ ತಾಲೂಕಿನ ಶಾಲೆಗಳಿಗೆ ಜೂನ್ 26 ಗುರುವಾರ ರಜೆ: ತಹಶಿಲ್ದಾರ್ ಫೋಷಣೆ

    • By admin
    • June 25, 2025
    • 155 views
    ಮುಂದುವರಿದ ವರುಣಾರ್ಭಟ ಬೆಳ್ತಂಗಡಿ ತಾಲೂಕಿನ  ಶಾಲೆಗಳಿಗೆ ಜೂನ್ 26 ಗುರುವಾರ ರಜೆ: ತಹಶಿಲ್ದಾರ್ ಫೋಷಣೆ

    ಹಾಸನದ ಸಕಲೇಶಪುರ ಎಡಕುಮೇರಿ ಎಂಬಲ್ಲಿ ರೈಲು ಹಳಿಗಳ ಮೇಲೆ ಬಿದ್ದ ಬಂಡೆ ಕಲ್ಲುಗಳು ರೈಲು ಸಂಚಾರದಲ್ಲಿ ವ್ಯತ್ಯಯ

    • By admin
    • June 21, 2025
    • 88 views
    ಹಾಸನದ ಸಕಲೇಶಪುರ ಎಡಕುಮೇರಿ ಎಂಬಲ್ಲಿ ರೈಲು ಹಳಿಗಳ ಮೇಲೆ ಬಿದ್ದ ಬಂಡೆ ಕಲ್ಲುಗಳು ರೈಲು ಸಂಚಾರದಲ್ಲಿ ವ್ಯತ್ಯಯ