ಗೋಕುಲಾಷ್ಟಮಿಯ ಶುಭದಿನದಂದು ನೇಪಾಳಿ ಭಾಷೆಯಲ್ಲಿ ‘ಸನಾತನ ಸಂಸ್ಥೆ’ಯ ಜಾಲತಾಣದ ಲೋಕಾರ್ಪಣೆ !


ಮಂಗಳೂರು: ಭಾರತ ಮತ್ತು ನೇಪಾಳದ ನಡುವೆ ಸಾವಿರಾರು ವರ್ಷಗಳಿಂದ ಸಾಂಸ್ಕೃತಿಕ ಸಂಬಂಧವಿದೆ. ‘ಹಿಂದೂ ಧರ್ಮ’ ಇದು ಎರಡೂ ದೇಶಗಳಲ್ಲಿನ ಸಮಾನವಾದ ಅಂಶವಾಗಿದೆ. ಸಹಜವಾಗಿಯೇ ಎರಡೂ ದೇಶಗಳಲ್ಲಿಯ ಶ್ರದ್ಧಾಸ್ಥಾನಗಳು, ನಂಬಿಕೆ, ಹಬ್ಬ-ಉತ್ಸವ ಇತ್ಯಾದಿಗಳಲ್ಲಿ ದೊಡ್ಡ ಪ್ರಮಾಣದಲ್ಲಿ ಸಾಮ್ಯತೆ ಇದೆ. ಸನಾತನ ಸಂಸ್ಥೆಯ ಜಾಲತಾಣಕ್ಕೆ ಜಗತ್ತಿನಾದ್ಯಂತ ಹಿಂದೂ ಸಮಾಜದ ವಾಚಕರಿದ್ದಾರೆ. ಈ ಜಾಲತಾಣಕ್ಕೆ ವಿವಿಧ ದೇಶಗಳಲ್ಲಿಯ ಹಿಂದೂ ನಾಗರಿಕರ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ. ಅದಕ್ಕಾಗಿ ಕೆಲವು ನೇಪಾಳಿ ಜಿಜ್ಞಾಸುಗಳು ನೇಪಾಳದಲ್ಲಿರುವ ಹಿಂದೂ ಸಮಾಜಕ್ಕೆ ಧರ್ಮಶಿಕ್ಷಣ ಸಿಗಲು ಸನಾತನದ ಜಾಲತಾಣವು ನೇಪಾಳಿ ಭಾಷೆಯಲ್ಲಿಯೂ ಆರಂಭಿಸುವಂತೆ ಆಗ್ರಹಿಸಿದ್ದರು. ಸನಾತನ ಸಂಸ್ಥೆ ಹಿಂದೂ ಧರ್ಮಪ್ರಸಾರದ ವ್ರತವನ್ನು ಕೈಗೆತ್ತಿಕೊಂಡು ಕಾರ್ಯನಿರತವಾಗಿದ್ದರಿಂದ ನಾವು ಈ ಬೇಡಿಕೆಯನ್ನು ಪೂರ್ಣ ಮಾಡುತ್ತಿದ್ದೇವೆ. ಜಗತ್ತಿನಾದ್ಯಂತ ನೇಪಾಳಿ ಭಾಷೆಯವರಿಗೆ ಧರ್ಮಶಿಕ್ಷಣ ಸಿಗಲು ನಾವು ನೇಪಾಳಿ ಜಾಲತಾಣವನ್ನು ಆರಂಭಿಸುತ್ತಿದ್ದೇವೆ ಎಂದು ಸನಾತನ ಸಂಸ್ಥೆಯ ರಾಷ್ಟ್ರೀಯ ವಕ್ತಾರರಾದ ಶ್ರೀ. ಚೇತನ ರಾಜಹಂಸ್ ಇವರು ಹೇಳಿದ್ದಾರೆ.

ಆಗಸ್ಟ್ 11 ರಂದು ಗೋಕುಲಾಷ್ಟಮಿಯ ಮಂಗಳ ದಿನದಂದು ‘ಆನ್‌ಲೈನ್’ ಕಾರ್ಯಕ್ರಮದ ಮೂಲಕ ಜಾಲತಾಣವನ್ನು ಲೋಕಾರ್ಪಣೆಯನ್ನು ಮಾಡಲಾಯಿತು. ಈ ಸಮಯದಲ್ಲಿ ‘ರಾಷ್ಟ್ರೀಯ ಧರ್ಮಸಭಾ ನೇಪಾಳ’ದ ಅಧ್ಯಕ್ಷ ಡಾ. ಮಾಧವ ಭಟ್ಟರಾಯಿ ಹಾಗೂ ಅವರ ಧರ್ಮಪತ್ನಿ, ಅದೇರೀತಿ ನೇಪಾಳ ಸರಕಾರದ ಮಾಜಿ ರಾಜ್ಯಸಚಿವ ಸೌ. ಕಾಂತಾ ಭಟ್ಟರಾಯಿ ಇವರ ಹಸ್ತದಿಂದ ಲೋಕಾರ್ಪಣೆಯಾಯಿತು. ಈ ಮಂಗಳ ದಿನದಲ್ಲಿ ಹಿಂದೂ ಜನಜಾಗೃತಿ ಸಮಿತಿಯ ರಾಷ್ಟ್ರೀಯ ಮಾರ್ಗದರ್ಶಕರಾದ ಸದ್ಗುರು ಡಾ. ಚಾರುದತ್ತ ಪಿಂಗಳೆ ಇವರೂ ದೆಹಲಿಯಿಂದ ‘ಆನ್‌ಲೈನ್’ನ ಮೂಲಕ ಉಪಸ್ಥಿತರಿದರು.

ಈ ಪ್ರಸಂಗದಲ್ಲಿ ಡಾ. ಭಟ್ಟರಾಯಿಯವರು ಮಾತನಾಡುತ್ತಾ, “ಸನಾತನ ಸಂಸ್ಥೆಯ ನೇಪಾಳಿ ಭಾಷೆಯ ಜಾಲತಾಣ ನಮಗೆ ಬಹಳ ಉಪಯುಕ್ತವಾಗಿದೆ ಎಂದೆನಿಸಿತು ಮತ್ತು ಇದು ನಮಗೆ ಬಹಳ ಸಹಾಯ ಮಾಡಲಿದೆ. ನೇಪಾಳದಲ್ಲಿ ಈ ರೀತಿಯ ಧಾರ್ಮಿಕ ವೆಬ್‌ಸೈಟ್ಸ್ ತುಂಬ ಕಡಿಮೆ ಇವೆ. ಇದು ಕೇವಲ ಧರ್ಮದ ಬಗ್ಗೆ ಜ್ಞಾನ ಮಾತ್ರವಲ್ಲದೇ, ಹಿಂದೂ ರಾಷ್ಟ್ರದ ಬಗ್ಗೆ ನಮಗೆಲ್ಲರಿಗೂ ಮಾರ್ಗದರ್ಶನ ಮಾಡಲಿದೆ”, ಎಂದರು.

ಈ ಸಮಯದಲ್ಲಿ ಸದ್ಗುರು ಡಾ. ಚಾರುದತ್ತ ಪಿಂಗಳೆಯವರು ಮಾತನಾಡುತ್ತಾ, “ವೆಬ್‌ಸೈಟ್‌ನಲ್ಲಿ ನೀಡಿರುವ ಹಿಂದೂ ಧರ್ಮಶಿಕ್ಷಣ ಇತ್ಯಾದಿ ಮಾಹಿತಿಗಳ ಮಾಧ್ಯಮದಿಂದ ಭಾರತ ಮತ್ತು ನೇಪಾಳ ಇವೆರಡೂ ದೇಶಗಳ ಧರ್ಮಬಾಂಧವ್ಯ ದೃಢವಾಗಲಿದೆ, ಎರಡೂ ದೇಶಗಳಲ್ಲಿ ಹಿಂದೂ ರಾಷ್ಟ್ರದ ಸ್ಥಾಪನೆಗಾಗಿ ನಡೆಯುತ್ತಿರುವ ಅಭಿಯಾನವು ಮುಂದುವರಿಯಲಿದೆ”, ಎಂದರು.

ಕನ್ನಡ, ಹಿಂದಿ, ಮರಾಠಿ, ಗುಜರಾತಿ, ಆಂಗ್ಲ, ತೆಲುಗು, ತಮಿಳು, ಮಲ್ಯಾಳಮ್ ಈ ೮ ಭಾಷೆಗಳಲ್ಲಿ ಇರುವ ಈ ಜಾಲತಾಣವು ಇನ್ನು ಮುಂದೆ ನೇಪಾಳಿ ಭಾಷೆಯಲ್ಲೂ ಲಭ್ಯವಿರಲಿದೆ. ಈ ಜಾಲತಾಣದಲ್ಲಿ ಅಧ್ಯಾತ್ಮಿಕ ವಿಷಯದ ಸಂದೇಹ ನಿವಾರಣೆ ಮಾಡಲು ‘ಆನ್‌ಲೈನ್’ ಸಂಪರ್ಕದ ಸೌಲಭ್ಯವು ಲಭ್ಯವಿರಲಿದೆ. ಸನಾತನದ ಜಾಲತಾಣದ ಮೂಲಕ ಜಿಜ್ಞಾಸುಗಳು ಸಾಧನೆಯನ್ನು ಆರಂಭಿಸಿದ್ದಾರೆ ಹಾಗೂ ತಮ್ಮ ಜೀವನವನ್ನು ಆನಂದಮಯವಾಗಿಸಿಕೊಂಡಿದ್ದಾರೆ. ಆದ್ದರಿಂದ ಹೆಚ್ಚೆಚ್ಚು ಜಿಜ್ಞಾಸುಗಳು ಈ ಜಾಲತಾಣಕ್ಕೆ ಭೇಟಿ ನೀಡಿ ಸಾಧನೆಯನ್ನು ಆರಂಭಿಸಬೇಕು, ಎಂದು ಸನಾತನ ಸಂಸ್ಥೆಯ ವತಿಯಿಂದ ಕರೆ ನೀಡಲಾಗಿದೆ.

ಜಾಲತಾಣದ ಲಿಂಕ್ : www.Sanatan.org/nepali

Spread the love
  • Related Posts

    ಬೆಳ್ತಂಗಡಿಯ KAF ಕ್ರಿಯೇಟಿವ್ ಶಾಪ್ ನಲ್ಲಿ ಹಿಲಿಯಂ ಗ್ಯಾಸ್ ಬ್ಲಾಸ್ಟ್

    ಬೆಳ್ತಂಗಡಿ : ಹೀಲಿಯಂ ಗ್ಯಾಸ್ ಸೋರಿಕೆಯಿಂದ ಉಂಟಾದ ಬೆಂಕಿಯಿಂದ ಅಂಗಡಿ ಸುಟ್ಟು ಭಸ್ಮವಾದ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ. ಬೆಳ್ತಂಗಡಿ ನಗರದ ಸಂತೆಕಟ್ಟೆಯಲ್ಲಿರುವ ಹೇರಾಜೆ ಕಾಂಪ್ಲೆಕ್ಸ್ ನಲ್ಲಿ ಮೊದಲ ಮಹಡಿಯ ಮೊಹಮ್ಮದ್ ಸಮೀಲ್ ಎಂಬವರ ಮಾಲೀಕತ್ವದ KAF ಕ್ರಿಯೇಟಿವ್ ಆರ್ಟ್ & ಕ್ರಾಫ್ಟ್…

    Spread the love

    ಪುತ್ತೂರಿನಲ್ಲಿ ಲಕ್ಷ್ಯ ಡೇ ಕೇರ್ ಸೆಂಟರ್ ಹಾಗೂ ಲಕ್ಷ್ಯ ಕೌನ್ಸಲಿಂಗ್ ಸೆಂಟರ್ ಲೋಕಾರ್ಪಣೆ

    ಪುತ್ತೂರು: ಬೈಪಾಸ್ ರಸ್ತೆ ಇಲ್ಲಿನ ರವಿಂದ ಕಾಂಪ್ಲೆಕ್ಸ್ ನಲ್ಲಿ ಪ್ರಥಮ ಬಾರಿಗೆ ಸೈಕಾಲಜಿಸ್ಟ್ ಹಾಗೂ ಶಿಕ್ಷಣ ತಜ್ಞರಿಂದಲೇ ನಡೆಸಲ್ಪಡುವ ದಕ್ಷಿಣ ಕನ್ನಡ ಜಿಲ್ಲೆಯ ಪ್ರಥಮ ಲಕ್ಷ್ಯ ಡೇ ಕೇರ್ ಸೆಂಟರ್ ಹಾಗೂ ಲಕ್ಷ್ಯ ಕೌನ್ಸಲಿಂಗ್ ಸೆಂಟರ್ ಲೋಕಾರ್ಪಣೆಗೊಂಡಿತು. ಮಂಗಳೂರು ರಾಮಕೃಷ್ಣ ಮಠದ…

    Spread the love

    You Missed

    ಬೆಳ್ತಂಗಡಿಯ KAF ಕ್ರಿಯೇಟಿವ್ ಶಾಪ್ ನಲ್ಲಿ ಹಿಲಿಯಂ ಗ್ಯಾಸ್ ಬ್ಲಾಸ್ಟ್

    • By admin
    • February 14, 2026
    • 44 views
    ಬೆಳ್ತಂಗಡಿಯ KAF ಕ್ರಿಯೇಟಿವ್ ಶಾಪ್ ನಲ್ಲಿ  ಹಿಲಿಯಂ ಗ್ಯಾಸ್ ಬ್ಲಾಸ್ಟ್

    ಪುತ್ತೂರಿನಲ್ಲಿ ಲಕ್ಷ್ಯ ಡೇ ಕೇರ್ ಸೆಂಟರ್ ಹಾಗೂ ಲಕ್ಷ್ಯ ಕೌನ್ಸಲಿಂಗ್ ಸೆಂಟರ್ ಲೋಕಾರ್ಪಣೆ

    • By admin
    • February 13, 2026
    • 35 views
    ಪುತ್ತೂರಿನಲ್ಲಿ ಲಕ್ಷ್ಯ ಡೇ ಕೇರ್ ಸೆಂಟರ್ ಹಾಗೂ ಲಕ್ಷ್ಯ ಕೌನ್ಸಲಿಂಗ್ ಸೆಂಟರ್ ಲೋಕಾರ್ಪಣೆ

    ಅಪಘಾತದ ಪರಿಹಾರದ ಹಣ ನೀಡದ ಕಾರಣ 2 ಕೆಎಸ್ಆರ್ ಟಿಸಿ ಬಸ್ ಸೀಜ್ ಮಾಡಿದ ಕೋರ್ಟ್

    • By admin
    • February 13, 2026
    • 31 views
    ಅಪಘಾತದ ಪರಿಹಾರದ ಹಣ ನೀಡದ ಕಾರಣ 2 ಕೆಎಸ್ಆರ್ ಟಿಸಿ ಬಸ್ ಸೀಜ್ ಮಾಡಿದ ಕೋರ್ಟ್

    ಬೆಳ್ತಂಗಡಿ ಪೊಲೀಸ್ ಇನ್ಸ್ಪೆಕ್ಟರ್ BG ಸುಬ್ಬಾಪುರಮಠ ವರ್ಗಾವಣೆ

    • By admin
    • February 11, 2026
    • 691 views
    ಬೆಳ್ತಂಗಡಿ ಪೊಲೀಸ್ ಇನ್ಸ್ಪೆಕ್ಟರ್ BG ಸುಬ್ಬಾಪುರಮಠ ವರ್ಗಾವಣೆ

    ಕರಾವಳಿಯ ಜಾನಪದ ಕ್ರೀಡೆಯನ್ನಾಧರಿಸಿದ “ವೀರ ಕಂಬಳ” ಚಿತ್ರ ಫೆ.27ಕ್ಕೆ ಬಿಡುಗಡೆ ಚಿತ್ರದಲ್ಲಿ ವಿಶೇಷ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ ಡಿ ವೀರೇಂದ್ರ ಹೆಗ್ಗಡೆಯವರು

    • By admin
    • February 11, 2026
    • 275 views
    ಕರಾವಳಿಯ ಜಾನಪದ ಕ್ರೀಡೆಯನ್ನಾಧರಿಸಿದ “ವೀರ ಕಂಬಳ” ಚಿತ್ರ ಫೆ.27ಕ್ಕೆ ಬಿಡುಗಡೆ ಚಿತ್ರದಲ್ಲಿ ವಿಶೇಷ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ ಡಿ ವೀರೇಂದ್ರ ಹೆಗ್ಗಡೆಯವರು

    ಬೆಳ್ತಂಗಡಿ ಚಿರತೆ ಹಾವಳಿ ಕ್ರಮಕ್ಕೆ ಒತ್ತಾಯಿಸಿ ಸ್ನೇಹಜ್ಯೋತಿ ಮಹಿಳಾ ತಾಲೂಕು ಒಕ್ಕೂಟ ದಿಂದ ಮನವಿ

    • By admin
    • February 10, 2026
    • 97 views
    ಬೆಳ್ತಂಗಡಿ ಚಿರತೆ ಹಾವಳಿ ಕ್ರಮಕ್ಕೆ ಒತ್ತಾಯಿಸಿ ಸ್ನೇಹಜ್ಯೋತಿ ಮಹಿಳಾ ತಾಲೂಕು ಒಕ್ಕೂಟ ದಿಂದ ಮನವಿ