ಗೋಕುಲಾಷ್ಟಮಿಯ ಶುಭದಿನದಂದು ನೇಪಾಳಿ ಭಾಷೆಯಲ್ಲಿ ‘ಸನಾತನ ಸಂಸ್ಥೆ’ಯ ಜಾಲತಾಣದ ಲೋಕಾರ್ಪಣೆ !


ಮಂಗಳೂರು: ಭಾರತ ಮತ್ತು ನೇಪಾಳದ ನಡುವೆ ಸಾವಿರಾರು ವರ್ಷಗಳಿಂದ ಸಾಂಸ್ಕೃತಿಕ ಸಂಬಂಧವಿದೆ. ‘ಹಿಂದೂ ಧರ್ಮ’ ಇದು ಎರಡೂ ದೇಶಗಳಲ್ಲಿನ ಸಮಾನವಾದ ಅಂಶವಾಗಿದೆ. ಸಹಜವಾಗಿಯೇ ಎರಡೂ ದೇಶಗಳಲ್ಲಿಯ ಶ್ರದ್ಧಾಸ್ಥಾನಗಳು, ನಂಬಿಕೆ, ಹಬ್ಬ-ಉತ್ಸವ ಇತ್ಯಾದಿಗಳಲ್ಲಿ ದೊಡ್ಡ ಪ್ರಮಾಣದಲ್ಲಿ ಸಾಮ್ಯತೆ ಇದೆ. ಸನಾತನ ಸಂಸ್ಥೆಯ ಜಾಲತಾಣಕ್ಕೆ ಜಗತ್ತಿನಾದ್ಯಂತ ಹಿಂದೂ ಸಮಾಜದ ವಾಚಕರಿದ್ದಾರೆ. ಈ ಜಾಲತಾಣಕ್ಕೆ ವಿವಿಧ ದೇಶಗಳಲ್ಲಿಯ ಹಿಂದೂ ನಾಗರಿಕರ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ. ಅದಕ್ಕಾಗಿ ಕೆಲವು ನೇಪಾಳಿ ಜಿಜ್ಞಾಸುಗಳು ನೇಪಾಳದಲ್ಲಿರುವ ಹಿಂದೂ ಸಮಾಜಕ್ಕೆ ಧರ್ಮಶಿಕ್ಷಣ ಸಿಗಲು ಸನಾತನದ ಜಾಲತಾಣವು ನೇಪಾಳಿ ಭಾಷೆಯಲ್ಲಿಯೂ ಆರಂಭಿಸುವಂತೆ ಆಗ್ರಹಿಸಿದ್ದರು. ಸನಾತನ ಸಂಸ್ಥೆ ಹಿಂದೂ ಧರ್ಮಪ್ರಸಾರದ ವ್ರತವನ್ನು ಕೈಗೆತ್ತಿಕೊಂಡು ಕಾರ್ಯನಿರತವಾಗಿದ್ದರಿಂದ ನಾವು ಈ ಬೇಡಿಕೆಯನ್ನು ಪೂರ್ಣ ಮಾಡುತ್ತಿದ್ದೇವೆ. ಜಗತ್ತಿನಾದ್ಯಂತ ನೇಪಾಳಿ ಭಾಷೆಯವರಿಗೆ ಧರ್ಮಶಿಕ್ಷಣ ಸಿಗಲು ನಾವು ನೇಪಾಳಿ ಜಾಲತಾಣವನ್ನು ಆರಂಭಿಸುತ್ತಿದ್ದೇವೆ ಎಂದು ಸನಾತನ ಸಂಸ್ಥೆಯ ರಾಷ್ಟ್ರೀಯ ವಕ್ತಾರರಾದ ಶ್ರೀ. ಚೇತನ ರಾಜಹಂಸ್ ಇವರು ಹೇಳಿದ್ದಾರೆ.

ಆಗಸ್ಟ್ 11 ರಂದು ಗೋಕುಲಾಷ್ಟಮಿಯ ಮಂಗಳ ದಿನದಂದು ‘ಆನ್‌ಲೈನ್’ ಕಾರ್ಯಕ್ರಮದ ಮೂಲಕ ಜಾಲತಾಣವನ್ನು ಲೋಕಾರ್ಪಣೆಯನ್ನು ಮಾಡಲಾಯಿತು. ಈ ಸಮಯದಲ್ಲಿ ‘ರಾಷ್ಟ್ರೀಯ ಧರ್ಮಸಭಾ ನೇಪಾಳ’ದ ಅಧ್ಯಕ್ಷ ಡಾ. ಮಾಧವ ಭಟ್ಟರಾಯಿ ಹಾಗೂ ಅವರ ಧರ್ಮಪತ್ನಿ, ಅದೇರೀತಿ ನೇಪಾಳ ಸರಕಾರದ ಮಾಜಿ ರಾಜ್ಯಸಚಿವ ಸೌ. ಕಾಂತಾ ಭಟ್ಟರಾಯಿ ಇವರ ಹಸ್ತದಿಂದ ಲೋಕಾರ್ಪಣೆಯಾಯಿತು. ಈ ಮಂಗಳ ದಿನದಲ್ಲಿ ಹಿಂದೂ ಜನಜಾಗೃತಿ ಸಮಿತಿಯ ರಾಷ್ಟ್ರೀಯ ಮಾರ್ಗದರ್ಶಕರಾದ ಸದ್ಗುರು ಡಾ. ಚಾರುದತ್ತ ಪಿಂಗಳೆ ಇವರೂ ದೆಹಲಿಯಿಂದ ‘ಆನ್‌ಲೈನ್’ನ ಮೂಲಕ ಉಪಸ್ಥಿತರಿದರು.

ಈ ಪ್ರಸಂಗದಲ್ಲಿ ಡಾ. ಭಟ್ಟರಾಯಿಯವರು ಮಾತನಾಡುತ್ತಾ, “ಸನಾತನ ಸಂಸ್ಥೆಯ ನೇಪಾಳಿ ಭಾಷೆಯ ಜಾಲತಾಣ ನಮಗೆ ಬಹಳ ಉಪಯುಕ್ತವಾಗಿದೆ ಎಂದೆನಿಸಿತು ಮತ್ತು ಇದು ನಮಗೆ ಬಹಳ ಸಹಾಯ ಮಾಡಲಿದೆ. ನೇಪಾಳದಲ್ಲಿ ಈ ರೀತಿಯ ಧಾರ್ಮಿಕ ವೆಬ್‌ಸೈಟ್ಸ್ ತುಂಬ ಕಡಿಮೆ ಇವೆ. ಇದು ಕೇವಲ ಧರ್ಮದ ಬಗ್ಗೆ ಜ್ಞಾನ ಮಾತ್ರವಲ್ಲದೇ, ಹಿಂದೂ ರಾಷ್ಟ್ರದ ಬಗ್ಗೆ ನಮಗೆಲ್ಲರಿಗೂ ಮಾರ್ಗದರ್ಶನ ಮಾಡಲಿದೆ”, ಎಂದರು.

ಈ ಸಮಯದಲ್ಲಿ ಸದ್ಗುರು ಡಾ. ಚಾರುದತ್ತ ಪಿಂಗಳೆಯವರು ಮಾತನಾಡುತ್ತಾ, “ವೆಬ್‌ಸೈಟ್‌ನಲ್ಲಿ ನೀಡಿರುವ ಹಿಂದೂ ಧರ್ಮಶಿಕ್ಷಣ ಇತ್ಯಾದಿ ಮಾಹಿತಿಗಳ ಮಾಧ್ಯಮದಿಂದ ಭಾರತ ಮತ್ತು ನೇಪಾಳ ಇವೆರಡೂ ದೇಶಗಳ ಧರ್ಮಬಾಂಧವ್ಯ ದೃಢವಾಗಲಿದೆ, ಎರಡೂ ದೇಶಗಳಲ್ಲಿ ಹಿಂದೂ ರಾಷ್ಟ್ರದ ಸ್ಥಾಪನೆಗಾಗಿ ನಡೆಯುತ್ತಿರುವ ಅಭಿಯಾನವು ಮುಂದುವರಿಯಲಿದೆ”, ಎಂದರು.

ಕನ್ನಡ, ಹಿಂದಿ, ಮರಾಠಿ, ಗುಜರಾತಿ, ಆಂಗ್ಲ, ತೆಲುಗು, ತಮಿಳು, ಮಲ್ಯಾಳಮ್ ಈ ೮ ಭಾಷೆಗಳಲ್ಲಿ ಇರುವ ಈ ಜಾಲತಾಣವು ಇನ್ನು ಮುಂದೆ ನೇಪಾಳಿ ಭಾಷೆಯಲ್ಲೂ ಲಭ್ಯವಿರಲಿದೆ. ಈ ಜಾಲತಾಣದಲ್ಲಿ ಅಧ್ಯಾತ್ಮಿಕ ವಿಷಯದ ಸಂದೇಹ ನಿವಾರಣೆ ಮಾಡಲು ‘ಆನ್‌ಲೈನ್’ ಸಂಪರ್ಕದ ಸೌಲಭ್ಯವು ಲಭ್ಯವಿರಲಿದೆ. ಸನಾತನದ ಜಾಲತಾಣದ ಮೂಲಕ ಜಿಜ್ಞಾಸುಗಳು ಸಾಧನೆಯನ್ನು ಆರಂಭಿಸಿದ್ದಾರೆ ಹಾಗೂ ತಮ್ಮ ಜೀವನವನ್ನು ಆನಂದಮಯವಾಗಿಸಿಕೊಂಡಿದ್ದಾರೆ. ಆದ್ದರಿಂದ ಹೆಚ್ಚೆಚ್ಚು ಜಿಜ್ಞಾಸುಗಳು ಈ ಜಾಲತಾಣಕ್ಕೆ ಭೇಟಿ ನೀಡಿ ಸಾಧನೆಯನ್ನು ಆರಂಭಿಸಬೇಕು, ಎಂದು ಸನಾತನ ಸಂಸ್ಥೆಯ ವತಿಯಿಂದ ಕರೆ ನೀಡಲಾಗಿದೆ.

ಜಾಲತಾಣದ ಲಿಂಕ್ : www.Sanatan.org/nepali

Spread the love
  • Related Posts

    ಬೆನಕ ಹೆಲ್ತ್ ಸೆಂಟರ್ ನಲ್ಲಿ ಉಚಿತ ನರ್ಸಿಂಗ್ ತರಬೇತಿಗೆ ಅರ್ಜಿ ಆಹ್ವಾನ

    ಉಜಿರೆ: ಬೆಳ್ತಂಗಡಿ ತಾಲೂಕಿನ ಉಜಿರೆಯ ಬೆನಕ ಹೆಲ್ತ್ ಸೆಂಟರ್ ಮಲ್ಟಿ ಸ್ಪೆಷಾಲಿಟಿ ಹಾಸ್ಪಿಟಲ್ ನಲ್ಲಿ ಪಿಯುಸಿ ವಿದ್ಯಾಭ್ಯಾಸ ಮುಗಿಸಿದ ಯುವತಿಯರಿಗೆ ಉಚಿತವಾಗಿ ತರಬೇತಿಯೊಂದಿಗೆ ಉದ್ಯೋಗಾವಕಾಶ ಪಡೆಯುವ ಸುವರ್ಣಾವಕಾಶವನ್ನು ಕಲ್ಪಿಸಲಾಗಿದೆ. NABH ಪುರಸ್ಕೃತ ಬೆನಕ ಹೆಲ್ತ್ ಸೆಂಟರ್ ನಲ್ಲಿ 2ವರ್ಷದ ANM ತರಬೇತಿಯನ್ನು…

    Spread the love

    ವಾಹನ ಸವಾರರೇ ಗಮನಿಸಿ HSRP ನಂಬರ್ ಪ್ಲೇಟ್ ಆಳವಡಿಸದೇ ಇದ್ದಲ್ಲಿ ಸೆ.16ರಿಂದ ದಂಡ ಫಿಕ್ಸ್

    Bangalore: ರಾಜ್ಯದಲ್ಲಿ ಎಚ್ಎಸ್ಆರ್ಪಿ ಅಳವಡಿಸಲು ಸೆಪ್ಟೆಂಬರ್ 15ರವರೆಗೆ ಅವಕಾಶ ನೀಡಲಾಗಿದೆ. HSRP ಗಳನ್ನು ಪಡೆಯದ ವಾಹನ ಮಾಲೀಕರು ಸೆ.16 ರಿಂದ ದಂಡವನ್ನು ಪಾವತಿಸಬೇಕಾಗಬಹುದು ಅಥವಾ ಇತರ ದಂಡದ ಕ್ರಮವನ್ನು ಎದುರಿಸಬೇಕಾಗುತ್ತದೆ. 2019ರ ಏಪ್ರಿಲ್ 1ರ ಮೊದಲು ರಾಜ್ಯದಲ್ಲಿ ನೋಂದಣಿಯಾಗಿರುವ ಎಲ್ಲ ವಾಹನಗಳಿಗೆ…

    Spread the love

    You Missed

    ಗಣಪನಿಗೆ 20 ಕೆಜಿ ಚಿನ್ನದ ಕಿರೀಟ ಕಾಣಿಕೆಯಾಗಿ ನೀಡಿದ ಅನಂತ್ ಅಂಬಾನಿ

    • By admin
    • September 7, 2024
    • 65 views
    ಗಣಪನಿಗೆ 20 ಕೆಜಿ ಚಿನ್ನದ ಕಿರೀಟ ಕಾಣಿಕೆಯಾಗಿ ನೀಡಿದ ಅನಂತ್ ಅಂಬಾನಿ

    ಬೆನಕ ಹೆಲ್ತ್ ಸೆಂಟರ್ ನಲ್ಲಿ ಉಚಿತ ನರ್ಸಿಂಗ್ ತರಬೇತಿಗೆ ಅರ್ಜಿ ಆಹ್ವಾನ

    • By admin
    • September 4, 2024
    • 194 views
    ಬೆನಕ ಹೆಲ್ತ್ ಸೆಂಟರ್ ನಲ್ಲಿ ಉಚಿತ ನರ್ಸಿಂಗ್ ತರಬೇತಿಗೆ ಅರ್ಜಿ ಆಹ್ವಾನ

    ವಾಹನ ಸವಾರರೇ ಗಮನಿಸಿ HSRP ನಂಬರ್ ಪ್ಲೇಟ್ ಆಳವಡಿಸದೇ ಇದ್ದಲ್ಲಿ ಸೆ.16ರಿಂದ ದಂಡ ಫಿಕ್ಸ್

    • By admin
    • September 4, 2024
    • 28 views
    ವಾಹನ ಸವಾರರೇ ಗಮನಿಸಿ HSRP ನಂಬರ್ ಪ್ಲೇಟ್ ಆಳವಡಿಸದೇ ಇದ್ದಲ್ಲಿ ಸೆ.16ರಿಂದ ದಂಡ ಫಿಕ್ಸ್

    ಸ್ಮಾರ್ಟ್ ಫೋನ್ ಬಳಕೆಗೂ ಮಿದುಳಿನ ಕ್ಯಾನ್ಸರ್ ಗೂ ಯಾವುದೇ ಸಂಬಂಧವಿಲ್ಲ: WHO ಸ್ಪಷ್ಟನೆ

    • By admin
    • September 4, 2024
    • 21 views
    ಸ್ಮಾರ್ಟ್ ಫೋನ್ ಬಳಕೆಗೂ ಮಿದುಳಿನ ಕ್ಯಾನ್ಸರ್ ಗೂ ಯಾವುದೇ ಸಂಬಂಧವಿಲ್ಲ: WHO ಸ್ಪಷ್ಟನೆ

    ಪ್ಯಾರಾಲಿಂಪಿಕ್ಸ್ ನಲ್ಲಿ ಭಾರತಕ್ಕೆ ಮತ್ತೆರಡು ಪದಕ, ಶರದ್ ಗೆ ಬೆಳ್ಳಿ ಮರಿಯಪ್ಪನ್ ಗೆ ಕಂಚಿನ ಪದಕ

    • By admin
    • September 4, 2024
    • 18 views
    ಪ್ಯಾರಾಲಿಂಪಿಕ್ಸ್ ನಲ್ಲಿ ಭಾರತಕ್ಕೆ ಮತ್ತೆರಡು ಪದಕ, ಶರದ್ ಗೆ ಬೆಳ್ಳಿ ಮರಿಯಪ್ಪನ್ ಗೆ ಕಂಚಿನ ಪದಕ

    ಕೆಐಒಸಿಎಲ್ ಸಂಸ್ಥೆಯನ್ನು ಎನ್.ಎಮ್.ಡಿ.ಸಿ ಸಂಸ್ಥೆಯೊಂದಿಗೆ ವೀಲೀನ ಪ್ರಕ್ರಿಯೆ ಚಾಲನೆ ನೀಡುವ ನಿಟ್ಟಿನಲ್ಲಿ ಪ್ರಧಾನಿ ಹಾಗೂ ಕೇಂದ್ರ ಸಚಿವರನ್ನು ಒತ್ತಾಯಿಸುವಂತೆ ರಾಜ್ಯ ಸಭಾ ಸದಸ್ಯರಾದ ಡಾ.ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಬಿಎಮ್ಎಸ್ ನಿಯೋಗದಿಂದ ಮನವಿ ಸಲ್ಲಿಕೆ

    • By admin
    • September 3, 2024
    • 45 views
    ಕೆಐಒಸಿಎಲ್ ಸಂಸ್ಥೆಯನ್ನು ಎನ್.ಎಮ್.ಡಿ.ಸಿ ಸಂಸ್ಥೆಯೊಂದಿಗೆ ವೀಲೀನ ಪ್ರಕ್ರಿಯೆ ಚಾಲನೆ ನೀಡುವ ನಿಟ್ಟಿನಲ್ಲಿ ಪ್ರಧಾನಿ ಹಾಗೂ ಕೇಂದ್ರ ಸಚಿವರನ್ನು ಒತ್ತಾಯಿಸುವಂತೆ ರಾಜ್ಯ ಸಭಾ ಸದಸ್ಯರಾದ ಡಾ.ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಬಿಎಮ್ಎಸ್ ನಿಯೋಗದಿಂದ ಮನವಿ ಸಲ್ಲಿಕೆ