ಗೋಕುಲಾಷ್ಟಮಿಯ ಶುಭದಿನದಂದು ನೇಪಾಳಿ ಭಾಷೆಯಲ್ಲಿ ‘ಸನಾತನ ಸಂಸ್ಥೆ’ಯ ಜಾಲತಾಣದ ಲೋಕಾರ್ಪಣೆ !


ಮಂಗಳೂರು: ಭಾರತ ಮತ್ತು ನೇಪಾಳದ ನಡುವೆ ಸಾವಿರಾರು ವರ್ಷಗಳಿಂದ ಸಾಂಸ್ಕೃತಿಕ ಸಂಬಂಧವಿದೆ. ‘ಹಿಂದೂ ಧರ್ಮ’ ಇದು ಎರಡೂ ದೇಶಗಳಲ್ಲಿನ ಸಮಾನವಾದ ಅಂಶವಾಗಿದೆ. ಸಹಜವಾಗಿಯೇ ಎರಡೂ ದೇಶಗಳಲ್ಲಿಯ ಶ್ರದ್ಧಾಸ್ಥಾನಗಳು, ನಂಬಿಕೆ, ಹಬ್ಬ-ಉತ್ಸವ ಇತ್ಯಾದಿಗಳಲ್ಲಿ ದೊಡ್ಡ ಪ್ರಮಾಣದಲ್ಲಿ ಸಾಮ್ಯತೆ ಇದೆ. ಸನಾತನ ಸಂಸ್ಥೆಯ ಜಾಲತಾಣಕ್ಕೆ ಜಗತ್ತಿನಾದ್ಯಂತ ಹಿಂದೂ ಸಮಾಜದ ವಾಚಕರಿದ್ದಾರೆ. ಈ ಜಾಲತಾಣಕ್ಕೆ ವಿವಿಧ ದೇಶಗಳಲ್ಲಿಯ ಹಿಂದೂ ನಾಗರಿಕರ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ. ಅದಕ್ಕಾಗಿ ಕೆಲವು ನೇಪಾಳಿ ಜಿಜ್ಞಾಸುಗಳು ನೇಪಾಳದಲ್ಲಿರುವ ಹಿಂದೂ ಸಮಾಜಕ್ಕೆ ಧರ್ಮಶಿಕ್ಷಣ ಸಿಗಲು ಸನಾತನದ ಜಾಲತಾಣವು ನೇಪಾಳಿ ಭಾಷೆಯಲ್ಲಿಯೂ ಆರಂಭಿಸುವಂತೆ ಆಗ್ರಹಿಸಿದ್ದರು. ಸನಾತನ ಸಂಸ್ಥೆ ಹಿಂದೂ ಧರ್ಮಪ್ರಸಾರದ ವ್ರತವನ್ನು ಕೈಗೆತ್ತಿಕೊಂಡು ಕಾರ್ಯನಿರತವಾಗಿದ್ದರಿಂದ ನಾವು ಈ ಬೇಡಿಕೆಯನ್ನು ಪೂರ್ಣ ಮಾಡುತ್ತಿದ್ದೇವೆ. ಜಗತ್ತಿನಾದ್ಯಂತ ನೇಪಾಳಿ ಭಾಷೆಯವರಿಗೆ ಧರ್ಮಶಿಕ್ಷಣ ಸಿಗಲು ನಾವು ನೇಪಾಳಿ ಜಾಲತಾಣವನ್ನು ಆರಂಭಿಸುತ್ತಿದ್ದೇವೆ ಎಂದು ಸನಾತನ ಸಂಸ್ಥೆಯ ರಾಷ್ಟ್ರೀಯ ವಕ್ತಾರರಾದ ಶ್ರೀ. ಚೇತನ ರಾಜಹಂಸ್ ಇವರು ಹೇಳಿದ್ದಾರೆ.

ಆಗಸ್ಟ್ 11 ರಂದು ಗೋಕುಲಾಷ್ಟಮಿಯ ಮಂಗಳ ದಿನದಂದು ‘ಆನ್‌ಲೈನ್’ ಕಾರ್ಯಕ್ರಮದ ಮೂಲಕ ಜಾಲತಾಣವನ್ನು ಲೋಕಾರ್ಪಣೆಯನ್ನು ಮಾಡಲಾಯಿತು. ಈ ಸಮಯದಲ್ಲಿ ‘ರಾಷ್ಟ್ರೀಯ ಧರ್ಮಸಭಾ ನೇಪಾಳ’ದ ಅಧ್ಯಕ್ಷ ಡಾ. ಮಾಧವ ಭಟ್ಟರಾಯಿ ಹಾಗೂ ಅವರ ಧರ್ಮಪತ್ನಿ, ಅದೇರೀತಿ ನೇಪಾಳ ಸರಕಾರದ ಮಾಜಿ ರಾಜ್ಯಸಚಿವ ಸೌ. ಕಾಂತಾ ಭಟ್ಟರಾಯಿ ಇವರ ಹಸ್ತದಿಂದ ಲೋಕಾರ್ಪಣೆಯಾಯಿತು. ಈ ಮಂಗಳ ದಿನದಲ್ಲಿ ಹಿಂದೂ ಜನಜಾಗೃತಿ ಸಮಿತಿಯ ರಾಷ್ಟ್ರೀಯ ಮಾರ್ಗದರ್ಶಕರಾದ ಸದ್ಗುರು ಡಾ. ಚಾರುದತ್ತ ಪಿಂಗಳೆ ಇವರೂ ದೆಹಲಿಯಿಂದ ‘ಆನ್‌ಲೈನ್’ನ ಮೂಲಕ ಉಪಸ್ಥಿತರಿದರು.

ಈ ಪ್ರಸಂಗದಲ್ಲಿ ಡಾ. ಭಟ್ಟರಾಯಿಯವರು ಮಾತನಾಡುತ್ತಾ, “ಸನಾತನ ಸಂಸ್ಥೆಯ ನೇಪಾಳಿ ಭಾಷೆಯ ಜಾಲತಾಣ ನಮಗೆ ಬಹಳ ಉಪಯುಕ್ತವಾಗಿದೆ ಎಂದೆನಿಸಿತು ಮತ್ತು ಇದು ನಮಗೆ ಬಹಳ ಸಹಾಯ ಮಾಡಲಿದೆ. ನೇಪಾಳದಲ್ಲಿ ಈ ರೀತಿಯ ಧಾರ್ಮಿಕ ವೆಬ್‌ಸೈಟ್ಸ್ ತುಂಬ ಕಡಿಮೆ ಇವೆ. ಇದು ಕೇವಲ ಧರ್ಮದ ಬಗ್ಗೆ ಜ್ಞಾನ ಮಾತ್ರವಲ್ಲದೇ, ಹಿಂದೂ ರಾಷ್ಟ್ರದ ಬಗ್ಗೆ ನಮಗೆಲ್ಲರಿಗೂ ಮಾರ್ಗದರ್ಶನ ಮಾಡಲಿದೆ”, ಎಂದರು.

ಈ ಸಮಯದಲ್ಲಿ ಸದ್ಗುರು ಡಾ. ಚಾರುದತ್ತ ಪಿಂಗಳೆಯವರು ಮಾತನಾಡುತ್ತಾ, “ವೆಬ್‌ಸೈಟ್‌ನಲ್ಲಿ ನೀಡಿರುವ ಹಿಂದೂ ಧರ್ಮಶಿಕ್ಷಣ ಇತ್ಯಾದಿ ಮಾಹಿತಿಗಳ ಮಾಧ್ಯಮದಿಂದ ಭಾರತ ಮತ್ತು ನೇಪಾಳ ಇವೆರಡೂ ದೇಶಗಳ ಧರ್ಮಬಾಂಧವ್ಯ ದೃಢವಾಗಲಿದೆ, ಎರಡೂ ದೇಶಗಳಲ್ಲಿ ಹಿಂದೂ ರಾಷ್ಟ್ರದ ಸ್ಥಾಪನೆಗಾಗಿ ನಡೆಯುತ್ತಿರುವ ಅಭಿಯಾನವು ಮುಂದುವರಿಯಲಿದೆ”, ಎಂದರು.

ಕನ್ನಡ, ಹಿಂದಿ, ಮರಾಠಿ, ಗುಜರಾತಿ, ಆಂಗ್ಲ, ತೆಲುಗು, ತಮಿಳು, ಮಲ್ಯಾಳಮ್ ಈ ೮ ಭಾಷೆಗಳಲ್ಲಿ ಇರುವ ಈ ಜಾಲತಾಣವು ಇನ್ನು ಮುಂದೆ ನೇಪಾಳಿ ಭಾಷೆಯಲ್ಲೂ ಲಭ್ಯವಿರಲಿದೆ. ಈ ಜಾಲತಾಣದಲ್ಲಿ ಅಧ್ಯಾತ್ಮಿಕ ವಿಷಯದ ಸಂದೇಹ ನಿವಾರಣೆ ಮಾಡಲು ‘ಆನ್‌ಲೈನ್’ ಸಂಪರ್ಕದ ಸೌಲಭ್ಯವು ಲಭ್ಯವಿರಲಿದೆ. ಸನಾತನದ ಜಾಲತಾಣದ ಮೂಲಕ ಜಿಜ್ಞಾಸುಗಳು ಸಾಧನೆಯನ್ನು ಆರಂಭಿಸಿದ್ದಾರೆ ಹಾಗೂ ತಮ್ಮ ಜೀವನವನ್ನು ಆನಂದಮಯವಾಗಿಸಿಕೊಂಡಿದ್ದಾರೆ. ಆದ್ದರಿಂದ ಹೆಚ್ಚೆಚ್ಚು ಜಿಜ್ಞಾಸುಗಳು ಈ ಜಾಲತಾಣಕ್ಕೆ ಭೇಟಿ ನೀಡಿ ಸಾಧನೆಯನ್ನು ಆರಂಭಿಸಬೇಕು, ಎಂದು ಸನಾತನ ಸಂಸ್ಥೆಯ ವತಿಯಿಂದ ಕರೆ ನೀಡಲಾಗಿದೆ.

ಜಾಲತಾಣದ ಲಿಂಕ್ : www.Sanatan.org/nepali

Spread the love
  • Related Posts

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    ಬೆಳ್ತಂಗಡಿ: ತಾಲೂಕಿನ ಬೆಳಾಲು ಗ್ರಾಮದ ಮಿನಂದೇಲು ಬಸ್ ನಿಲ್ದಾಣದ ಸಮೀಪ ಸೆ. 3ರಂದು ರಾತ್ರಿ ವೇಳೆ ರಸ್ತೆಯಲ್ಲಿ ಸಂಚರಿಸುತ್ತಿದ್ದ ಬೈಕ್ ಸವಾರನಿಗೆ ಆನೆ ಪ್ರತ್ಯಕ್ಷವಾಗಿ ಆತಂಕ ಉಂಟುಮಾಡಿದ ಘಟನೆ ವರದಿಯಾಗಿದೆ. ಉಜಿರೆ–ಬೆಳಾಲು–ಬಂದಾರು ಮುಖ್ಯ ರಸ್ತೆಯ ಮಿನಂದೇಲು ಬಸ್ ನಿಲ್ದಾಣ ಹಾಗೂ ಡಿ.ಪಿ.…

    Spread the love

    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    ಬೆಳ್ತಂಗಡಿ: ಧರ್ಮಸ್ಥಳ- ಕೊಕ್ಕಡ ರಸ್ತೆಯ ಧರ್ಮಸ್ಥಳ ಸಮೀಪದ ಕಲ್ಲೇರಿ ಪರಿಸರದ ಪುದುವೆಟ್ಟು ಕ್ರಾಸ್ ಬಳಿ ಗುರುವಾರ ರಾತ್ರಿ ಕಾಡಾನೆಯೊಂದು ಕಾಣಿಸಿಕೊಂಡಿದ್ದು, ಸ್ಥಳೀಯರು ಹಾಗೂ ವಾಹನ ಸವಾರರಲ್ಲಿ ಆತಂಕ ಮೂಡಿಸಿದೆ. ಗುರುವಾರ ರಾತ್ರಿ ಸುಮಾರು 9 ಗಂಟೆಯ ವೇಳೆಗೆ ಕಾಡಾನೆ ಹೆದ್ದಾರಿ ಬದಿಯಲ್ಲಿ…

    Spread the love

    You Missed

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    • By admin
    • September 3, 2026
    • 4 views
    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    • By admin
    • September 3, 2026
    • 3 views
    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    • By admin
    • September 3, 2026
    • 4 views
    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    ಚಿರಂಜೀವಿ ಯುವಕ ಮಂಡಲ ಕಾನರ್ಪದಲ್ಲಿ ಸೆ.6ರಂದು 35ನೇ ವರ್ಷದ ಮೊಸರು ಕುಡಿಕೆ ಅಷ್ಟಮಿ ಉತ್ಸವ ಹಾಗೂ ಕೆಸರುಗದ್ದೆಯಲ್ಲಿ ಗ್ರಾಮೀಣ ಕ್ರೀಡಾಕೂಟ ಆಯೋಜನೆ

    • By admin
    • September 3, 2026
    • 11 views
    ಚಿರಂಜೀವಿ ಯುವಕ ಮಂಡಲ ಕಾನರ್ಪದಲ್ಲಿ ಸೆ.6ರಂದು 35ನೇ ವರ್ಷದ ಮೊಸರು ಕುಡಿಕೆ ಅಷ್ಟಮಿ ಉತ್ಸವ ಹಾಗೂ ಕೆಸರುಗದ್ದೆಯಲ್ಲಿ ಗ್ರಾಮೀಣ ಕ್ರೀಡಾಕೂಟ ಆಯೋಜನೆ

    ಬೆಳ್ತಂಗಡಿ : ಲಾಯಿಲ ಗ್ರಾಮಸಭೆಯಲ್ಲಿ ಅಕ್ರಮಗಳ ಆರೋಪಕ್ಕೆ ಕಿಡಿ, ನಿವೇಶನದಿಂದ ಸರ್ಕಾರಿ ಜಮೀನು, ಕಳಪೆ ಕಾಮಗಾರಿವರೆಗೆ ಸಮಗ್ರ ತನಿಖೆಗೆ ಒತ್ತಾಯ

    • By admin
    • August 31, 2026
    • 6 views
    ಬೆಳ್ತಂಗಡಿ : ಲಾಯಿಲ ಗ್ರಾಮಸಭೆಯಲ್ಲಿ ಅಕ್ರಮಗಳ ಆರೋಪಕ್ಕೆ ಕಿಡಿ, ನಿವೇಶನದಿಂದ ಸರ್ಕಾರಿ ಜಮೀನು, ಕಳಪೆ ಕಾಮಗಾರಿವರೆಗೆ ಸಮಗ್ರ ತನಿಖೆಗೆ ಒತ್ತಾಯ

    ನಾಟ ಫಲಿತಾಂಶ: ಎಕ್ಸೆಲ್ ವಿದ್ಯಾರ್ಥಿಗಳ ಅಪೂರ್ವ ಸಾಧನೆ

    • By admin
    • August 27, 2026
    • 8 views
    ನಾಟ ಫಲಿತಾಂಶ: ಎಕ್ಸೆಲ್ ವಿದ್ಯಾರ್ಥಿಗಳ ಅಪೂರ್ವ ಸಾಧನೆ