ಗೋಕುಲಾಷ್ಟಮಿಯ ಶುಭದಿನದಂದು ನೇಪಾಳಿ ಭಾಷೆಯಲ್ಲಿ ‘ಸನಾತನ ಸಂಸ್ಥೆ’ಯ ಜಾಲತಾಣದ ಲೋಕಾರ್ಪಣೆ !


ಮಂಗಳೂರು: ಭಾರತ ಮತ್ತು ನೇಪಾಳದ ನಡುವೆ ಸಾವಿರಾರು ವರ್ಷಗಳಿಂದ ಸಾಂಸ್ಕೃತಿಕ ಸಂಬಂಧವಿದೆ. ‘ಹಿಂದೂ ಧರ್ಮ’ ಇದು ಎರಡೂ ದೇಶಗಳಲ್ಲಿನ ಸಮಾನವಾದ ಅಂಶವಾಗಿದೆ. ಸಹಜವಾಗಿಯೇ ಎರಡೂ ದೇಶಗಳಲ್ಲಿಯ ಶ್ರದ್ಧಾಸ್ಥಾನಗಳು, ನಂಬಿಕೆ, ಹಬ್ಬ-ಉತ್ಸವ ಇತ್ಯಾದಿಗಳಲ್ಲಿ ದೊಡ್ಡ ಪ್ರಮಾಣದಲ್ಲಿ ಸಾಮ್ಯತೆ ಇದೆ. ಸನಾತನ ಸಂಸ್ಥೆಯ ಜಾಲತಾಣಕ್ಕೆ ಜಗತ್ತಿನಾದ್ಯಂತ ಹಿಂದೂ ಸಮಾಜದ ವಾಚಕರಿದ್ದಾರೆ. ಈ ಜಾಲತಾಣಕ್ಕೆ ವಿವಿಧ ದೇಶಗಳಲ್ಲಿಯ ಹಿಂದೂ ನಾಗರಿಕರ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ. ಅದಕ್ಕಾಗಿ ಕೆಲವು ನೇಪಾಳಿ ಜಿಜ್ಞಾಸುಗಳು ನೇಪಾಳದಲ್ಲಿರುವ ಹಿಂದೂ ಸಮಾಜಕ್ಕೆ ಧರ್ಮಶಿಕ್ಷಣ ಸಿಗಲು ಸನಾತನದ ಜಾಲತಾಣವು ನೇಪಾಳಿ ಭಾಷೆಯಲ್ಲಿಯೂ ಆರಂಭಿಸುವಂತೆ ಆಗ್ರಹಿಸಿದ್ದರು. ಸನಾತನ ಸಂಸ್ಥೆ ಹಿಂದೂ ಧರ್ಮಪ್ರಸಾರದ ವ್ರತವನ್ನು ಕೈಗೆತ್ತಿಕೊಂಡು ಕಾರ್ಯನಿರತವಾಗಿದ್ದರಿಂದ ನಾವು ಈ ಬೇಡಿಕೆಯನ್ನು ಪೂರ್ಣ ಮಾಡುತ್ತಿದ್ದೇವೆ. ಜಗತ್ತಿನಾದ್ಯಂತ ನೇಪಾಳಿ ಭಾಷೆಯವರಿಗೆ ಧರ್ಮಶಿಕ್ಷಣ ಸಿಗಲು ನಾವು ನೇಪಾಳಿ ಜಾಲತಾಣವನ್ನು ಆರಂಭಿಸುತ್ತಿದ್ದೇವೆ ಎಂದು ಸನಾತನ ಸಂಸ್ಥೆಯ ರಾಷ್ಟ್ರೀಯ ವಕ್ತಾರರಾದ ಶ್ರೀ. ಚೇತನ ರಾಜಹಂಸ್ ಇವರು ಹೇಳಿದ್ದಾರೆ.

ಆಗಸ್ಟ್ 11 ರಂದು ಗೋಕುಲಾಷ್ಟಮಿಯ ಮಂಗಳ ದಿನದಂದು ‘ಆನ್‌ಲೈನ್’ ಕಾರ್ಯಕ್ರಮದ ಮೂಲಕ ಜಾಲತಾಣವನ್ನು ಲೋಕಾರ್ಪಣೆಯನ್ನು ಮಾಡಲಾಯಿತು. ಈ ಸಮಯದಲ್ಲಿ ‘ರಾಷ್ಟ್ರೀಯ ಧರ್ಮಸಭಾ ನೇಪಾಳ’ದ ಅಧ್ಯಕ್ಷ ಡಾ. ಮಾಧವ ಭಟ್ಟರಾಯಿ ಹಾಗೂ ಅವರ ಧರ್ಮಪತ್ನಿ, ಅದೇರೀತಿ ನೇಪಾಳ ಸರಕಾರದ ಮಾಜಿ ರಾಜ್ಯಸಚಿವ ಸೌ. ಕಾಂತಾ ಭಟ್ಟರಾಯಿ ಇವರ ಹಸ್ತದಿಂದ ಲೋಕಾರ್ಪಣೆಯಾಯಿತು. ಈ ಮಂಗಳ ದಿನದಲ್ಲಿ ಹಿಂದೂ ಜನಜಾಗೃತಿ ಸಮಿತಿಯ ರಾಷ್ಟ್ರೀಯ ಮಾರ್ಗದರ್ಶಕರಾದ ಸದ್ಗುರು ಡಾ. ಚಾರುದತ್ತ ಪಿಂಗಳೆ ಇವರೂ ದೆಹಲಿಯಿಂದ ‘ಆನ್‌ಲೈನ್’ನ ಮೂಲಕ ಉಪಸ್ಥಿತರಿದರು.

ಈ ಪ್ರಸಂಗದಲ್ಲಿ ಡಾ. ಭಟ್ಟರಾಯಿಯವರು ಮಾತನಾಡುತ್ತಾ, “ಸನಾತನ ಸಂಸ್ಥೆಯ ನೇಪಾಳಿ ಭಾಷೆಯ ಜಾಲತಾಣ ನಮಗೆ ಬಹಳ ಉಪಯುಕ್ತವಾಗಿದೆ ಎಂದೆನಿಸಿತು ಮತ್ತು ಇದು ನಮಗೆ ಬಹಳ ಸಹಾಯ ಮಾಡಲಿದೆ. ನೇಪಾಳದಲ್ಲಿ ಈ ರೀತಿಯ ಧಾರ್ಮಿಕ ವೆಬ್‌ಸೈಟ್ಸ್ ತುಂಬ ಕಡಿಮೆ ಇವೆ. ಇದು ಕೇವಲ ಧರ್ಮದ ಬಗ್ಗೆ ಜ್ಞಾನ ಮಾತ್ರವಲ್ಲದೇ, ಹಿಂದೂ ರಾಷ್ಟ್ರದ ಬಗ್ಗೆ ನಮಗೆಲ್ಲರಿಗೂ ಮಾರ್ಗದರ್ಶನ ಮಾಡಲಿದೆ”, ಎಂದರು.

ಈ ಸಮಯದಲ್ಲಿ ಸದ್ಗುರು ಡಾ. ಚಾರುದತ್ತ ಪಿಂಗಳೆಯವರು ಮಾತನಾಡುತ್ತಾ, “ವೆಬ್‌ಸೈಟ್‌ನಲ್ಲಿ ನೀಡಿರುವ ಹಿಂದೂ ಧರ್ಮಶಿಕ್ಷಣ ಇತ್ಯಾದಿ ಮಾಹಿತಿಗಳ ಮಾಧ್ಯಮದಿಂದ ಭಾರತ ಮತ್ತು ನೇಪಾಳ ಇವೆರಡೂ ದೇಶಗಳ ಧರ್ಮಬಾಂಧವ್ಯ ದೃಢವಾಗಲಿದೆ, ಎರಡೂ ದೇಶಗಳಲ್ಲಿ ಹಿಂದೂ ರಾಷ್ಟ್ರದ ಸ್ಥಾಪನೆಗಾಗಿ ನಡೆಯುತ್ತಿರುವ ಅಭಿಯಾನವು ಮುಂದುವರಿಯಲಿದೆ”, ಎಂದರು.

ಕನ್ನಡ, ಹಿಂದಿ, ಮರಾಠಿ, ಗುಜರಾತಿ, ಆಂಗ್ಲ, ತೆಲುಗು, ತಮಿಳು, ಮಲ್ಯಾಳಮ್ ಈ ೮ ಭಾಷೆಗಳಲ್ಲಿ ಇರುವ ಈ ಜಾಲತಾಣವು ಇನ್ನು ಮುಂದೆ ನೇಪಾಳಿ ಭಾಷೆಯಲ್ಲೂ ಲಭ್ಯವಿರಲಿದೆ. ಈ ಜಾಲತಾಣದಲ್ಲಿ ಅಧ್ಯಾತ್ಮಿಕ ವಿಷಯದ ಸಂದೇಹ ನಿವಾರಣೆ ಮಾಡಲು ‘ಆನ್‌ಲೈನ್’ ಸಂಪರ್ಕದ ಸೌಲಭ್ಯವು ಲಭ್ಯವಿರಲಿದೆ. ಸನಾತನದ ಜಾಲತಾಣದ ಮೂಲಕ ಜಿಜ್ಞಾಸುಗಳು ಸಾಧನೆಯನ್ನು ಆರಂಭಿಸಿದ್ದಾರೆ ಹಾಗೂ ತಮ್ಮ ಜೀವನವನ್ನು ಆನಂದಮಯವಾಗಿಸಿಕೊಂಡಿದ್ದಾರೆ. ಆದ್ದರಿಂದ ಹೆಚ್ಚೆಚ್ಚು ಜಿಜ್ಞಾಸುಗಳು ಈ ಜಾಲತಾಣಕ್ಕೆ ಭೇಟಿ ನೀಡಿ ಸಾಧನೆಯನ್ನು ಆರಂಭಿಸಬೇಕು, ಎಂದು ಸನಾತನ ಸಂಸ್ಥೆಯ ವತಿಯಿಂದ ಕರೆ ನೀಡಲಾಗಿದೆ.

ಜಾಲತಾಣದ ಲಿಂಕ್ : www.Sanatan.org/nepali

Spread the love
  • Related Posts

    ಬೃಹತ್ ಪ್ರಮಾಣದ ಎಂಡಿಎಂಎ ಮಾರಾಟ ಮಾಡುತ್ತಿದ್ದ ಇಬ್ಬರು ಡ್ರಗ್ ಪೆಡ್ಲರ್ ಗಳ ಬಂಧನ: 46.50ಲಕ್ಷ ಮೌಲ್ಯದ ಡ್ರಗ್ಸ್ ವಶಕ್ಕೆ

    Manglore: ಬೃಹತ್ ಪ್ರಮಾಣದ ಎಂಡಿಎಂಎ ಮಾರಾಟ ಮಾಡುತ್ತಿದ್ದ ಇಬ್ಬರು ಡ್ರಗ್ ಪೆಡ್ಲರ್ ಗಳನ್ನು ಕಂಕನಾಡಿ ನಗರ ಪೊಲೀಸರು ಬಂಧಿಸಿದ್ದಾರೆ. ನಗರ ಜೆಪ್ಪಿನಮೊಗರು ಎಂಬಲ್ಲಿ ದ್ವಿಚಕ್ರ ವಾಹನದಲ್ಲಿ ದೊಡ್ಡ ಪ್ರಮಾಣದ MDMA ಮಾದಕ ವಸ್ತುವನ್ನು ಮಾರಾಟ ಮಾಡಲು ಬರುತ್ತಿರುವುದಾಗಿ ಕಂಕನಾಡಿ ನಗರ ಪೊಲೀಸರಿಗೆ…

    Spread the love

    ಅಕ್ಷಯ ತೃತೀಯದ ಶುಭ ಘಳಿಗೆಯಲ್ಲಿ: ಕನ್ಯಾಡಿಯ ಅಕ್ಷರ ದೇಗುಲಕ್ಕೆ ಸ್ವಾಗತ!

    ಕನ್ಯಾಡಿ: ಇಂದು ಅಕ್ಷಯ ತೃತೀಯ – ಹೊಸ ಆರಂಭಗಳಿಗೆ, ಸಮೃದ್ಧಿಗೆ ನಾಂದಿ ಹಾಡುವ ಪವಿತ್ರ ದಿನ. ಈ ಶುಭ ಸಂದರ್ಭದಲ್ಲಿ ನಮ್ಮ ಮಕ್ಕಳ ಭವಿಷ್ಯವನ್ನು ಉಜ್ವಲಗೊಳಿಸುವ ನಿಟ್ಟಿನಲ್ಲಿ ಒಂದು ಮಹತ್ವದ ನಿರ್ಧಾರ ತೆಗೆದುಕೊಳ್ಳೋಣ. ಜ್ಞಾನದ ಅಕ್ಷಯ ಪಾತ್ರೆಯಂತಿರುವ ಸರ್ಕಾರಿ ಉನ್ನತೀಕರಿಸಿದ ಹಿರಿಯ…

    Spread the love

    You Missed

    ಬೃಹತ್ ಪ್ರಮಾಣದ ಎಂಡಿಎಂಎ ಮಾರಾಟ ಮಾಡುತ್ತಿದ್ದ ಇಬ್ಬರು ಡ್ರಗ್ ಪೆಡ್ಲರ್ ಗಳ ಬಂಧನ: 46.50ಲಕ್ಷ ಮೌಲ್ಯದ ಡ್ರಗ್ಸ್ ವಶಕ್ಕೆ

    • By admin
    • April 20, 2026
    • 33 views
    ಬೃಹತ್ ಪ್ರಮಾಣದ ಎಂಡಿಎಂಎ ಮಾರಾಟ ಮಾಡುತ್ತಿದ್ದ ಇಬ್ಬರು ಡ್ರಗ್ ಪೆಡ್ಲರ್ ಗಳ ಬಂಧನ: 46.50ಲಕ್ಷ ಮೌಲ್ಯದ ಡ್ರಗ್ಸ್ ವಶಕ್ಕೆ

    ಅಕ್ಷಯ ತೃತೀಯದ ಶುಭ ಘಳಿಗೆಯಲ್ಲಿ: ಕನ್ಯಾಡಿಯ ಅಕ್ಷರ ದೇಗುಲಕ್ಕೆ ಸ್ವಾಗತ!

    • By admin
    • April 20, 2026
    • 28 views
    ಅಕ್ಷಯ ತೃತೀಯದ ಶುಭ ಘಳಿಗೆಯಲ್ಲಿ: ಕನ್ಯಾಡಿಯ ಅಕ್ಷರ ದೇಗುಲಕ್ಕೆ ಸ್ವಾಗತ!

    ಚಲಿಸುತ್ತಿದ್ದ ಕಾರಿನ ಮೇಲೆ ಮುರಿದು ಬಿದ್ದ ಮರದ ರೆಂಬೆ: ಕಾರು ಜಖಂ

    • By admin
    • April 20, 2026
    • 77 views
    ಚಲಿಸುತ್ತಿದ್ದ ಕಾರಿನ ಮೇಲೆ ಮುರಿದು ಬಿದ್ದ ಮರದ ರೆಂಬೆ: ಕಾರು ಜಖಂ

    ನೆರಿಯದಲ್ಲಿ ಸಂಪನ್ನಗೊಂಡ 36 ನೇ ಉಚಿತ ಟೈಲರಿಂಗ್ ತರಬೇತಿ ಶಿಬಿರ:

    • By admin
    • April 19, 2026
    • 37 views
    ನೆರಿಯದಲ್ಲಿ ಸಂಪನ್ನಗೊಂಡ 36 ನೇ ಉಚಿತ ಟೈಲರಿಂಗ್ ತರಬೇತಿ ಶಿಬಿರ:

    ಅಪ್ರಾಪ್ತ ಬಾಲಕಿ ಮೇಲೆ ಯುವಕರಿಬ್ಬರಿಂದ ಅತ್ಯಾಚಾರ: ಧರ್ಮಸ್ಥಳ ಪೋಲೀಸರಿಂದ ಇಬ್ಬರು ಬಂಧನ

    • By admin
    • April 19, 2026
    • 147 views
    ಅಪ್ರಾಪ್ತ ಬಾಲಕಿ ಮೇಲೆ  ಯುವಕರಿಬ್ಬರಿಂದ ಅತ್ಯಾಚಾರ: ಧರ್ಮಸ್ಥಳ ಪೋಲೀಸರಿಂದ ಇಬ್ಬರು  ಬಂಧನ

    ಅಧಿಕೃತ ಆದೇಶವಿದ್ದರೂ ಬಸ್ ನಿಲ್ಲಿಸದೇ ನಿರ್ಲಕ್ಷ್ಯ: “ಬೋರ್ಡ್ ಇದೆ, ಆದೇಶ ಇದೆ… ಬಸ್ ಮಾತ್ರ ನಿಲ್ಲಲ್ಲ!”

    • By admin
    • April 18, 2026
    • 226 views
    ಅಧಿಕೃತ ಆದೇಶವಿದ್ದರೂ ಬಸ್ ನಿಲ್ಲಿಸದೇ ನಿರ್ಲಕ್ಷ್ಯ: “ಬೋರ್ಡ್ ಇದೆ, ಆದೇಶ ಇದೆ… ಬಸ್ ಮಾತ್ರ ನಿಲ್ಲಲ್ಲ!”