ಗೋಕುಲಾಷ್ಟಮಿಯ ಶುಭದಿನದಂದು ನೇಪಾಳಿ ಭಾಷೆಯಲ್ಲಿ ‘ಸನಾತನ ಸಂಸ್ಥೆ’ಯ ಜಾಲತಾಣದ ಲೋಕಾರ್ಪಣೆ !


ಮಂಗಳೂರು: ಭಾರತ ಮತ್ತು ನೇಪಾಳದ ನಡುವೆ ಸಾವಿರಾರು ವರ್ಷಗಳಿಂದ ಸಾಂಸ್ಕೃತಿಕ ಸಂಬಂಧವಿದೆ. ‘ಹಿಂದೂ ಧರ್ಮ’ ಇದು ಎರಡೂ ದೇಶಗಳಲ್ಲಿನ ಸಮಾನವಾದ ಅಂಶವಾಗಿದೆ. ಸಹಜವಾಗಿಯೇ ಎರಡೂ ದೇಶಗಳಲ್ಲಿಯ ಶ್ರದ್ಧಾಸ್ಥಾನಗಳು, ನಂಬಿಕೆ, ಹಬ್ಬ-ಉತ್ಸವ ಇತ್ಯಾದಿಗಳಲ್ಲಿ ದೊಡ್ಡ ಪ್ರಮಾಣದಲ್ಲಿ ಸಾಮ್ಯತೆ ಇದೆ. ಸನಾತನ ಸಂಸ್ಥೆಯ ಜಾಲತಾಣಕ್ಕೆ ಜಗತ್ತಿನಾದ್ಯಂತ ಹಿಂದೂ ಸಮಾಜದ ವಾಚಕರಿದ್ದಾರೆ. ಈ ಜಾಲತಾಣಕ್ಕೆ ವಿವಿಧ ದೇಶಗಳಲ್ಲಿಯ ಹಿಂದೂ ನಾಗರಿಕರ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ. ಅದಕ್ಕಾಗಿ ಕೆಲವು ನೇಪಾಳಿ ಜಿಜ್ಞಾಸುಗಳು ನೇಪಾಳದಲ್ಲಿರುವ ಹಿಂದೂ ಸಮಾಜಕ್ಕೆ ಧರ್ಮಶಿಕ್ಷಣ ಸಿಗಲು ಸನಾತನದ ಜಾಲತಾಣವು ನೇಪಾಳಿ ಭಾಷೆಯಲ್ಲಿಯೂ ಆರಂಭಿಸುವಂತೆ ಆಗ್ರಹಿಸಿದ್ದರು. ಸನಾತನ ಸಂಸ್ಥೆ ಹಿಂದೂ ಧರ್ಮಪ್ರಸಾರದ ವ್ರತವನ್ನು ಕೈಗೆತ್ತಿಕೊಂಡು ಕಾರ್ಯನಿರತವಾಗಿದ್ದರಿಂದ ನಾವು ಈ ಬೇಡಿಕೆಯನ್ನು ಪೂರ್ಣ ಮಾಡುತ್ತಿದ್ದೇವೆ. ಜಗತ್ತಿನಾದ್ಯಂತ ನೇಪಾಳಿ ಭಾಷೆಯವರಿಗೆ ಧರ್ಮಶಿಕ್ಷಣ ಸಿಗಲು ನಾವು ನೇಪಾಳಿ ಜಾಲತಾಣವನ್ನು ಆರಂಭಿಸುತ್ತಿದ್ದೇವೆ ಎಂದು ಸನಾತನ ಸಂಸ್ಥೆಯ ರಾಷ್ಟ್ರೀಯ ವಕ್ತಾರರಾದ ಶ್ರೀ. ಚೇತನ ರಾಜಹಂಸ್ ಇವರು ಹೇಳಿದ್ದಾರೆ.

ಆಗಸ್ಟ್ 11 ರಂದು ಗೋಕುಲಾಷ್ಟಮಿಯ ಮಂಗಳ ದಿನದಂದು ‘ಆನ್‌ಲೈನ್’ ಕಾರ್ಯಕ್ರಮದ ಮೂಲಕ ಜಾಲತಾಣವನ್ನು ಲೋಕಾರ್ಪಣೆಯನ್ನು ಮಾಡಲಾಯಿತು. ಈ ಸಮಯದಲ್ಲಿ ‘ರಾಷ್ಟ್ರೀಯ ಧರ್ಮಸಭಾ ನೇಪಾಳ’ದ ಅಧ್ಯಕ್ಷ ಡಾ. ಮಾಧವ ಭಟ್ಟರಾಯಿ ಹಾಗೂ ಅವರ ಧರ್ಮಪತ್ನಿ, ಅದೇರೀತಿ ನೇಪಾಳ ಸರಕಾರದ ಮಾಜಿ ರಾಜ್ಯಸಚಿವ ಸೌ. ಕಾಂತಾ ಭಟ್ಟರಾಯಿ ಇವರ ಹಸ್ತದಿಂದ ಲೋಕಾರ್ಪಣೆಯಾಯಿತು. ಈ ಮಂಗಳ ದಿನದಲ್ಲಿ ಹಿಂದೂ ಜನಜಾಗೃತಿ ಸಮಿತಿಯ ರಾಷ್ಟ್ರೀಯ ಮಾರ್ಗದರ್ಶಕರಾದ ಸದ್ಗುರು ಡಾ. ಚಾರುದತ್ತ ಪಿಂಗಳೆ ಇವರೂ ದೆಹಲಿಯಿಂದ ‘ಆನ್‌ಲೈನ್’ನ ಮೂಲಕ ಉಪಸ್ಥಿತರಿದರು.

ಈ ಪ್ರಸಂಗದಲ್ಲಿ ಡಾ. ಭಟ್ಟರಾಯಿಯವರು ಮಾತನಾಡುತ್ತಾ, “ಸನಾತನ ಸಂಸ್ಥೆಯ ನೇಪಾಳಿ ಭಾಷೆಯ ಜಾಲತಾಣ ನಮಗೆ ಬಹಳ ಉಪಯುಕ್ತವಾಗಿದೆ ಎಂದೆನಿಸಿತು ಮತ್ತು ಇದು ನಮಗೆ ಬಹಳ ಸಹಾಯ ಮಾಡಲಿದೆ. ನೇಪಾಳದಲ್ಲಿ ಈ ರೀತಿಯ ಧಾರ್ಮಿಕ ವೆಬ್‌ಸೈಟ್ಸ್ ತುಂಬ ಕಡಿಮೆ ಇವೆ. ಇದು ಕೇವಲ ಧರ್ಮದ ಬಗ್ಗೆ ಜ್ಞಾನ ಮಾತ್ರವಲ್ಲದೇ, ಹಿಂದೂ ರಾಷ್ಟ್ರದ ಬಗ್ಗೆ ನಮಗೆಲ್ಲರಿಗೂ ಮಾರ್ಗದರ್ಶನ ಮಾಡಲಿದೆ”, ಎಂದರು.

ಈ ಸಮಯದಲ್ಲಿ ಸದ್ಗುರು ಡಾ. ಚಾರುದತ್ತ ಪಿಂಗಳೆಯವರು ಮಾತನಾಡುತ್ತಾ, “ವೆಬ್‌ಸೈಟ್‌ನಲ್ಲಿ ನೀಡಿರುವ ಹಿಂದೂ ಧರ್ಮಶಿಕ್ಷಣ ಇತ್ಯಾದಿ ಮಾಹಿತಿಗಳ ಮಾಧ್ಯಮದಿಂದ ಭಾರತ ಮತ್ತು ನೇಪಾಳ ಇವೆರಡೂ ದೇಶಗಳ ಧರ್ಮಬಾಂಧವ್ಯ ದೃಢವಾಗಲಿದೆ, ಎರಡೂ ದೇಶಗಳಲ್ಲಿ ಹಿಂದೂ ರಾಷ್ಟ್ರದ ಸ್ಥಾಪನೆಗಾಗಿ ನಡೆಯುತ್ತಿರುವ ಅಭಿಯಾನವು ಮುಂದುವರಿಯಲಿದೆ”, ಎಂದರು.

ಕನ್ನಡ, ಹಿಂದಿ, ಮರಾಠಿ, ಗುಜರಾತಿ, ಆಂಗ್ಲ, ತೆಲುಗು, ತಮಿಳು, ಮಲ್ಯಾಳಮ್ ಈ ೮ ಭಾಷೆಗಳಲ್ಲಿ ಇರುವ ಈ ಜಾಲತಾಣವು ಇನ್ನು ಮುಂದೆ ನೇಪಾಳಿ ಭಾಷೆಯಲ್ಲೂ ಲಭ್ಯವಿರಲಿದೆ. ಈ ಜಾಲತಾಣದಲ್ಲಿ ಅಧ್ಯಾತ್ಮಿಕ ವಿಷಯದ ಸಂದೇಹ ನಿವಾರಣೆ ಮಾಡಲು ‘ಆನ್‌ಲೈನ್’ ಸಂಪರ್ಕದ ಸೌಲಭ್ಯವು ಲಭ್ಯವಿರಲಿದೆ. ಸನಾತನದ ಜಾಲತಾಣದ ಮೂಲಕ ಜಿಜ್ಞಾಸುಗಳು ಸಾಧನೆಯನ್ನು ಆರಂಭಿಸಿದ್ದಾರೆ ಹಾಗೂ ತಮ್ಮ ಜೀವನವನ್ನು ಆನಂದಮಯವಾಗಿಸಿಕೊಂಡಿದ್ದಾರೆ. ಆದ್ದರಿಂದ ಹೆಚ್ಚೆಚ್ಚು ಜಿಜ್ಞಾಸುಗಳು ಈ ಜಾಲತಾಣಕ್ಕೆ ಭೇಟಿ ನೀಡಿ ಸಾಧನೆಯನ್ನು ಆರಂಭಿಸಬೇಕು, ಎಂದು ಸನಾತನ ಸಂಸ್ಥೆಯ ವತಿಯಿಂದ ಕರೆ ನೀಡಲಾಗಿದೆ.

ಜಾಲತಾಣದ ಲಿಂಕ್ : www.Sanatan.org/nepali

Spread the love
  • Related Posts

    ಬೆಳ್ತಂಗಡಿ : ಅತಿ ಹಿಂದುಳಿದ ಮಠಾಧೀಶರ ಮಹಾಸಭಾವತಿಯಿಂದ ಡಾ.ಡಿ. ವೀರೇಂದ್ರ ಹೆಗ್ಗಡೆಯವರ ಭೇಟಿ

    ಬೆಳ್ತಂಗಡಿ: ಇತ್ತೀಚಿನ ದಿನಗಳಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ವಿರುದ್ಧ ಕೇಳಿಬರುತ್ತಿರುವ ಆರೋಪಗಳ ಹಿನ್ನೆಲೆಯಲ್ಲಿ ಅತಿ ಹಿಂದುಳಿದ ಮಠಾಧೀಶರ ಮಹಾಸಭೆ (ರಿ.) ಕೋರ್ ಕಮಿಟಿಯ ಸದಸ್ಯರಾದ ಸ್ವಾಮೀಜಿಗಳು ಧರ್ಮಸ್ಥಳಕ್ಕೆ ಜು.10 ರಂದು ಭೇಟಿ ನೀಡಿ,…

    Spread the love

    ಬೆಳ್ತಂಗಡಿ ತಹಶೀಲ್ದಾರ್ ಆಗಿ ಎಸ್.ಎನ್.ನರಗುಂದ ಅಧಿಕಾರ ಸ್ವೀಕಾರ

    ಬೆಳ್ತಂಗಡಿ : ತಹಶೀಲ್ದಾರ್ ಪೃಥ್ವಿ ಸಾನಿಕಂ ವರ್ಗಾವಣೆಯಾದ ಜಾಗಕ್ಕೆ ಹೊಸ ತಹಶೀಲ್ದಾರ್ ಆಗಿ ಎಸ್.ಎನ್.ನರಗುಂದ ಅವರನ್ನು ಸರಕಾರ ನೇಮಕ ಮಾಡಿ ಜು.2 ರಂದು ಆದೇಶ ಹೊರಡಿಸಿತ್ತು.‌ ಇದೀಗ ಮೈಸೂರು ಜಿಲ್ಲೆಯ ಅಭಿವೃದ್ಧಿ ಪ್ರಾಧಿಕಾರದ ವಿಶೇಷ ಗ್ರೇಡ್-1 ತಹಶೀಲ್ದಾರ್ ಆಗಿರುವ ಎಸ್.ಎನ್.ನರಗುಂದ ಅವರು…

    Spread the love

    You Missed

    ಮಾರುವೇಷ ಯಾಕೆ ಸ್ವಾಮಿ.. ಇದು ಚಿಲ್ಲರೆ ಕಾಲವಲ್ಲ, ಕ್ಯೂಆರ್ ಕೋಡ್ ಕಾಲ: ಸಚಿವ ಸುರೇಶ್‌ಗೆ ಶಾಸಕ ಸುರೇಶ್ ಕುಮಾರ್ ಪಾಠ

    • By admin
    • July 13, 2026
    • 5 views
    ಮಾರುವೇಷ ಯಾಕೆ ಸ್ವಾಮಿ.. ಇದು ಚಿಲ್ಲರೆ ಕಾಲವಲ್ಲ, ಕ್ಯೂಆರ್ ಕೋಡ್ ಕಾಲ: ಸಚಿವ ಸುರೇಶ್‌ಗೆ ಶಾಸಕ ಸುರೇಶ್ ಕುಮಾರ್ ಪಾಠ

    ನಾರಾವಿ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆ ಹಾಗೂ ಹಳೆಕೋಟೆ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯಕ್ಕೆ ತಲಾ ರೂ.2 ಕೋಟಿ; ಸರ್ಕಾರಕ್ಕೆ ಶಾಸಕ ಹರೀಶ್ ಪೂಂಜ ಕೃತಜ್ಞತೆ.

    • By admin
    • July 12, 2026
    • 10 views
    ನಾರಾವಿ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆ ಹಾಗೂ ಹಳೆಕೋಟೆ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯಕ್ಕೆ ತಲಾ ರೂ.2 ಕೋಟಿ; ಸರ್ಕಾರಕ್ಕೆ ಶಾಸಕ ಹರೀಶ್ ಪೂಂಜ ಕೃತಜ್ಞತೆ.

    ಬಳಂಜ- ಸುದೆಗುಂಡಿ ಸಂಪರ್ಕ ರಸ್ತೆ ಕಾಂಕ್ರೀಟಿಕರಣ: ಶಾಸಕ ಹರೀಶ್ ಪೂಂಜಾರವರಿಂದ ಶಿಲಾನ್ಯಾಸ:

    • By admin
    • July 12, 2026
    • 19 views
    ಬಳಂಜ- ಸುದೆಗುಂಡಿ ಸಂಪರ್ಕ ರಸ್ತೆ ಕಾಂಕ್ರೀಟಿಕರಣ: ಶಾಸಕ ಹರೀಶ್ ಪೂಂಜಾರವರಿಂದ ಶಿಲಾನ್ಯಾಸ:

    ಎತ್ತಿನಹೊಳೆ ಯೋಜನೆಯ ಪೈಪ್‌ಲೈನ್ ಸ್ಫೋಟಗೊಂಡು ನೂರು ಅಡಿ ಎತ್ತರಕ್ಕೆ ಚಿಮ್ಮಿದ ನೀರು

    • By admin
    • July 12, 2026
    • 38 views
    ಎತ್ತಿನಹೊಳೆ ಯೋಜನೆಯ ಪೈಪ್‌ಲೈನ್ ಸ್ಫೋಟಗೊಂಡು ನೂರು ಅಡಿ ಎತ್ತರಕ್ಕೆ ಚಿಮ್ಮಿದ ನೀರು

    ವಿದ್ಯಾರ್ಥಿಗಳಿಗೆ ನೇಜಿ ನಾಟಿ ಪ್ರಾತ್ಯಕ್ಷಿಕೆ: ಕೃಷಿ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ

    • By admin
    • July 12, 2026
    • 87 views
    ವಿದ್ಯಾರ್ಥಿಗಳಿಗೆ ನೇಜಿ ನಾಟಿ ಪ್ರಾತ್ಯಕ್ಷಿಕೆ: ಕೃಷಿ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ

    ಗಾನ ನಿಲ್ಲಿಸಿದ ಗಾನಕೋಗಿಲೆ ಎಸ್. ಜಾನಕಿ

    • By admin
    • July 11, 2026
    • 37 views
    ಗಾನ ನಿಲ್ಲಿಸಿದ ಗಾನಕೋಗಿಲೆ ಎಸ್. ಜಾನಕಿ