‘ವಾಟ್ಸಾಪ್ ರಾಮಾಯಣ’ ಎಂಬ ವಿನೂತನ ಪ್ರಯೋಗ ಪೌರಾಣಿಕ ಸನ್ನಿವೇಶ ಕಥೆಗಳನ್ನು ಸಾಮಾಜಿಕ ಜಾಲತಾಣದ ಮೂಲಕ ಅರಿವು ಮೂಡಿಸುವ ಪ್ರಯತ್ನದಲ್ಲಿ ಪುತ್ತೂರಿನ ಯುವಕ

"ವಾಟ್ಸಾಪ್ ರಾಮಾಯಣ"

ನಾವೆಲ್ಲರೂ ನಮ್ಮ ವಾಟ್ಸಾಪ್ ಗಳಲ್ಲಿ ಕಲೆ ಸಾಹಿತ್ಯ, ಹರಟೆ, ಮನರಂಜನೆ ಹೀಗೆ ಹಲವು ಬಗೆಯ ವೀಡಿಯೊಗಳನ್ನು ನೋಡುತ್ತೇವೆ.

ಹೀಗೆ ನೋಡಿ ಸಂತೋಷಗೊಳ್ಳುವ ಮನಸ್ಸು ಕೆಲವೇ ನಿಮಿಷಗಳಲ್ಲಿ ನಿರಾಸಕ್ತಿ ಹೊಂದುವುದನ್ನು ನಾವೆಲ್ಲರೂ ಗಮನಿಸಿರುತ್ತೇವೆ.
ಇದಕ್ಕೆ ಕಾರಣ ನಮ್ಮ ಮನಸ್ಸಿನಲ್ಲಿ ಏಕಾಗ್ರತೆ ಇಲ್ಲದಿರುವುದು. ಇದರಿಂದ ನೆನಪಿನ ಶಕ್ತಿಯೂ ಕುಂದುವುದು. ಹಾಗಾಗಿ ಕೆಲವೇ ನಿಮಿಷಗಳಲ್ಲಿ ಅಥವಾ ಸೆಕೆಂಡುಗಳಲ್ಲಿ ತಿಳಿಯಬಯಸುವ ವಿಡಿಯೋಗಳು ಅಥವಾ ಮಾಹಿತಿಗಳು ದೊರಕಿದರೆ ಅದೇ ಖುಷಿ.
ಈ ನಿಟ್ಟಿನಲ್ಲಿ ಪ್ರತಿದಿನವೂ ಅದೇ ಕೆಲವು ಸೆಕೆಂಡುಗಳಲ್ಲಿ ರಾಮಾಯಣದ ಘಟನೆಗಳನ್ನು ನೆನಪಿಸಿಕೊಳ್ಳುವ ಚಿಕ್ಕ ಪ್ರಯತ್ನ ಮಾಡುವುದು ಒಳಿತು.

ಹಾಗಾಗಿ ವಾಟ್ಸಾಪ್ ರಾಮಾಯಣ ಎಂಬ ವಿನೂತನ ಪ್ರಯೋಗದೊಂದಿಗೆ ಮತ್ತೆ ಪುನಃ ನಮ್ಮ ಪೌರಾಣಿಕ ಸನ್ನಿವೇಶ / ಕಥೆಗಳನ್ನು ಸಾಮಾಜಿಕ ಜಾಲತಾಣದ ಮೂಲಕ ನಾಡಿನ ಜನತೆಗೆ ತಲುಪಿಸುವ ಪ್ರಯತ್ನದಲ್ಲಿ ಶ್ರೀಯುತ ದುರ್ಗಾಪರಮೇಶ್ವರ ಭಟ್ ಪುತ್ತೂರು, ಇವರು ತೊಡಗಿದ್ದಾರೆ.
ಜಾಲತಾಣದಲ್ಲಿ ರಾಮಾಯಣದ ಕುರಿತಾಗಿ ದೊರಕುವ ಸಾಂದರ್ಭಿಕ ಚಿತ್ರಗಳಿಗೆ ತಮ್ಮದೇ ಧ್ವನಿಯಲ್ಲಿ ಕಥೆ ಹೇಳುತ್ತಿದ್ದಾರೆ.

ಲೇಖಕನಾಗಿಯೂ,ಭಾಷಣಕಾರರಾಗಿಯೂ ಹಾಗೆಯೇ ವೃತ್ತಿಯಲ್ಲಿ ಶಿಕ್ಷಕರಾಗಿ ಇವರು ಬೆಂಗಳೂರಿನ ಶುಭಂ ಕರೋತಿ ಮೈತ್ರೇಯೀ ಗುರುಕುಲದಲ್ಲಿ ಸೇವೆ ಸಲ್ಲಿಸುತ್ತಿದ್ದು, ಶಾಲೆಗಳು ತೆರೆಯದೇ ಮನೆಯಲ್ಲಿ ಬೇಸತ್ತು ಕುಳಿತಿರುವ ಮಕ್ಕಳ್ನನ್ನು ಉದ್ದೇಶಿಸಿ ಈ ವಿನೂತನ ಪ್ರಯೋಗವನ್ನು ನಡೆಸಲು ಮುಂದಾಗಿದ್ದಾರೆ.

ಪ್ರತಿದಿನವೂ 30 ಸೆಕೆಂಡಿನ ವಾಟ್ಸಾಪ್ ರಾಮಾಯಣವನ್ನು ಪಡೆಯಲು ತಾವು ಈ ಕೆಳಗೆ ನೀಡಿರುವ ನಂಬರನ್ನು ಸೇವ್ ಮಾಡಿಕೊಂಡು ವಾಟ್ಸಾಪ್ ಮಾಡಬಹುದಾಗಿದೆ
ತದನಂತರ ಪ್ರತಿದಿನವೂ ಕೆಲವೇ ಸೆಕೆಂಡುಗಳಲ್ಲಿ ರಾಮಾಯಣದ ಘಟನೆಗಳನ್ನು ತಿಳಿದುಕೊಳ್ಳಬಹುದು.
ವಾಟ್ಸಾಪ್ ಮೊ. ಸಂಖ್ಯೆ 9663826972.
ನಾಡಿನ ಜನತೆಯು ತಮ್ಮ ಜಾಲತಾಣಗಳಲ್ಲಿ ಹಂಚಿಕೊಳ್ಳುವುದರ ಮೂಲಕ ಪ್ರೋತ್ಸಾಹ ಮಾಡುವಂತೆ ವಿನಂತಿಸಿಕೊಂಡಿರುತ್ತಾರೆ.

Spread the love
  • Related Posts

    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    Belthangady: ತಾಲೂಕಿನ ಹಲವೆಡೆ ಶನಿವಾರ ಸಂಜೆ ಉತ್ತಮ ಮಳೆಯಾಗಿದೆ.Shishila, Kokkada, Dharmasthala, Arasinamakki, Ujire ಹಾಗೂ Nidle ಮೊದಲಾದ ಕಡೆಗಳಲ್ಲಿ ಗುಡುಗು-ಸಿಡಿಲು ಸಹಿತ ಉತ್ತಮ ಮಳೆ ಸುರಿದಿದೆ. ಉಳಿದ ಕೆಲವು ಪ್ರದೇಶಗಳಲ್ಲಿ ತುಂತುರು ಹಾಗೂ ಸಾಮಾನ್ಯ ಮಳೆಯಾಗಿದೆ.ತಾಲೂಕಿನಲ್ಲಿ ಫೆಬ್ರವರಿ 21ರಂದು ಕೆಲವೆಡೆ…

    Spread the love

    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    ಬಂಗಾಡಿ: ಸೂರ್ಯ-ಚಂದ್ರ ಹೋಡುಕರೆ ಕಂಬಳ ಸಮಿತಿ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ಕಂಬಳ ಅಸೋಸಿಯೇಶನ್, ಕರ್ನಾಟಕ ಸರಕಾರ ಮತ್ತು ಯುವಜನ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಹಭಾಗಿತ್ವದೊಂದಿಗೆ 28ನೇ ವರ್ಷದ ಹೊನಲು ಬೆಳಕಿನ ಸೂರ್ಯ-ಚಂದ್ರ ಜೋಡುಕರೆ “ಬಂಗಾಡಿ ಕೊಲ್ಲಿ” ಬಯಲು ಕಂಬಳವು ಶ್ರೀ…

    Spread the love

    You Missed

    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    • By admin
    • March 15, 2026
    • 60 views
    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    • By admin
    • March 14, 2026
    • 101 views
    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

    • By admin
    • March 14, 2026
    • 43 views
    ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ  ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    • By admin
    • March 13, 2026
    • 610 views
    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

    • By admin
    • March 10, 2026
    • 150 views
    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ  ಅರ್ಜಿ ಆಹ್ವಾನ

    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ

    • By admin
    • March 10, 2026
    • 63 views
    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ