‘ವಾಟ್ಸಾಪ್ ರಾಮಾಯಣ’ ಎಂಬ ವಿನೂತನ ಪ್ರಯೋಗ ಪೌರಾಣಿಕ ಸನ್ನಿವೇಶ ಕಥೆಗಳನ್ನು ಸಾಮಾಜಿಕ ಜಾಲತಾಣದ ಮೂಲಕ ಅರಿವು ಮೂಡಿಸುವ ಪ್ರಯತ್ನದಲ್ಲಿ ಪುತ್ತೂರಿನ ಯುವಕ

"ವಾಟ್ಸಾಪ್ ರಾಮಾಯಣ"

ನಾವೆಲ್ಲರೂ ನಮ್ಮ ವಾಟ್ಸಾಪ್ ಗಳಲ್ಲಿ ಕಲೆ ಸಾಹಿತ್ಯ, ಹರಟೆ, ಮನರಂಜನೆ ಹೀಗೆ ಹಲವು ಬಗೆಯ ವೀಡಿಯೊಗಳನ್ನು ನೋಡುತ್ತೇವೆ.

ಹೀಗೆ ನೋಡಿ ಸಂತೋಷಗೊಳ್ಳುವ ಮನಸ್ಸು ಕೆಲವೇ ನಿಮಿಷಗಳಲ್ಲಿ ನಿರಾಸಕ್ತಿ ಹೊಂದುವುದನ್ನು ನಾವೆಲ್ಲರೂ ಗಮನಿಸಿರುತ್ತೇವೆ.
ಇದಕ್ಕೆ ಕಾರಣ ನಮ್ಮ ಮನಸ್ಸಿನಲ್ಲಿ ಏಕಾಗ್ರತೆ ಇಲ್ಲದಿರುವುದು. ಇದರಿಂದ ನೆನಪಿನ ಶಕ್ತಿಯೂ ಕುಂದುವುದು. ಹಾಗಾಗಿ ಕೆಲವೇ ನಿಮಿಷಗಳಲ್ಲಿ ಅಥವಾ ಸೆಕೆಂಡುಗಳಲ್ಲಿ ತಿಳಿಯಬಯಸುವ ವಿಡಿಯೋಗಳು ಅಥವಾ ಮಾಹಿತಿಗಳು ದೊರಕಿದರೆ ಅದೇ ಖುಷಿ.
ಈ ನಿಟ್ಟಿನಲ್ಲಿ ಪ್ರತಿದಿನವೂ ಅದೇ ಕೆಲವು ಸೆಕೆಂಡುಗಳಲ್ಲಿ ರಾಮಾಯಣದ ಘಟನೆಗಳನ್ನು ನೆನಪಿಸಿಕೊಳ್ಳುವ ಚಿಕ್ಕ ಪ್ರಯತ್ನ ಮಾಡುವುದು ಒಳಿತು.

ಹಾಗಾಗಿ ವಾಟ್ಸಾಪ್ ರಾಮಾಯಣ ಎಂಬ ವಿನೂತನ ಪ್ರಯೋಗದೊಂದಿಗೆ ಮತ್ತೆ ಪುನಃ ನಮ್ಮ ಪೌರಾಣಿಕ ಸನ್ನಿವೇಶ / ಕಥೆಗಳನ್ನು ಸಾಮಾಜಿಕ ಜಾಲತಾಣದ ಮೂಲಕ ನಾಡಿನ ಜನತೆಗೆ ತಲುಪಿಸುವ ಪ್ರಯತ್ನದಲ್ಲಿ ಶ್ರೀಯುತ ದುರ್ಗಾಪರಮೇಶ್ವರ ಭಟ್ ಪುತ್ತೂರು, ಇವರು ತೊಡಗಿದ್ದಾರೆ.
ಜಾಲತಾಣದಲ್ಲಿ ರಾಮಾಯಣದ ಕುರಿತಾಗಿ ದೊರಕುವ ಸಾಂದರ್ಭಿಕ ಚಿತ್ರಗಳಿಗೆ ತಮ್ಮದೇ ಧ್ವನಿಯಲ್ಲಿ ಕಥೆ ಹೇಳುತ್ತಿದ್ದಾರೆ.

ಲೇಖಕನಾಗಿಯೂ,ಭಾಷಣಕಾರರಾಗಿಯೂ ಹಾಗೆಯೇ ವೃತ್ತಿಯಲ್ಲಿ ಶಿಕ್ಷಕರಾಗಿ ಇವರು ಬೆಂಗಳೂರಿನ ಶುಭಂ ಕರೋತಿ ಮೈತ್ರೇಯೀ ಗುರುಕುಲದಲ್ಲಿ ಸೇವೆ ಸಲ್ಲಿಸುತ್ತಿದ್ದು, ಶಾಲೆಗಳು ತೆರೆಯದೇ ಮನೆಯಲ್ಲಿ ಬೇಸತ್ತು ಕುಳಿತಿರುವ ಮಕ್ಕಳ್ನನ್ನು ಉದ್ದೇಶಿಸಿ ಈ ವಿನೂತನ ಪ್ರಯೋಗವನ್ನು ನಡೆಸಲು ಮುಂದಾಗಿದ್ದಾರೆ.

ಪ್ರತಿದಿನವೂ 30 ಸೆಕೆಂಡಿನ ವಾಟ್ಸಾಪ್ ರಾಮಾಯಣವನ್ನು ಪಡೆಯಲು ತಾವು ಈ ಕೆಳಗೆ ನೀಡಿರುವ ನಂಬರನ್ನು ಸೇವ್ ಮಾಡಿಕೊಂಡು ವಾಟ್ಸಾಪ್ ಮಾಡಬಹುದಾಗಿದೆ
ತದನಂತರ ಪ್ರತಿದಿನವೂ ಕೆಲವೇ ಸೆಕೆಂಡುಗಳಲ್ಲಿ ರಾಮಾಯಣದ ಘಟನೆಗಳನ್ನು ತಿಳಿದುಕೊಳ್ಳಬಹುದು.
ವಾಟ್ಸಾಪ್ ಮೊ. ಸಂಖ್ಯೆ 9663826972.
ನಾಡಿನ ಜನತೆಯು ತಮ್ಮ ಜಾಲತಾಣಗಳಲ್ಲಿ ಹಂಚಿಕೊಳ್ಳುವುದರ ಮೂಲಕ ಪ್ರೋತ್ಸಾಹ ಮಾಡುವಂತೆ ವಿನಂತಿಸಿಕೊಂಡಿರುತ್ತಾರೆ.

Spread the love
  • Related Posts

    ಬೆಳ್ತಂಗಡಿ ನೂತನ ನ್ಯಾಯಾಲಯ ಸಂಕೀರ್ಣದ ಶಂಕುಸ್ಥಾಪನೆ

    ಬೆಳ್ತಂಗಡಿ: ಜಿಲ್ಲಾ ನ್ಯಾಯಾಂಗ, ದ.ಕ ಲೋಕೋಪಯೋಗಿ ಇಲಾಖೆ ಹಾಗೂ ವಕೀಲರ ಸಂಘ ಬೆಳ್ತಂಗಡಿ ಇವರ ಸಂಯುಕ್ತ ಆಶ್ರಯದಲ್ಲಿ ಬೆಳ್ತಂಗಡಿ ತಾಲೂಕಿನ ಜನತೆ ಮತ್ತು ವಕೀಲರ ಸಂಘದ ಬಹುದಿನಗಳ ಬೇಡಿಕೆಯಾಗಿದ್ದ ನೂತನ ನ್ಯಾಯಾಲಯ ಸಂಕೀರ್ಣಕ್ಕೆ ಕರ್ನಾಟಕ ಸರಕಾರಕ್ಕೆ ಸಲ್ಲಿಸಲಾದ ಸುಮಾರು 23 ಕೋಟಿ…

    Spread the love

    ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಬೆಳ್ತಂಗಡಿ ತಾಲೂಕು ಘಟಕ ರಚನೆ: ನಿಶಾನ್ ಬಂಗೇರ ನಾರ್ಯ ಅಧ್ಯಕ್ಷರಾಗಿ ಆಯ್ಕೆ

    ಬೆಳ್ತಂಗಡಿ, ಜೂನ್ 13: ಸ್ಥಳೀಯ ಪತ್ರಿಕೋದ್ಯಮವನ್ನು ಮತ್ತಷ್ಟು ಬಲಪಡಿಸುವ ಹಾಗೂ ಪತ್ರಕರ್ತರ ಹಿತರಕ್ಷಣೆಗೆ ಒತ್ತು ನೀಡುವ ಉದ್ದೇಶದಿಂದ ಕರ್ನಾಟಕ ಜರ್ನಲಿಸ್ಟ್ ಯೂನಿಯನ್‌ನ ಬೆಳ್ತಂಗಡಿ ತಾಲೂಕು ಘಟಕದ 2026-27ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಯಶಸ್ವಿಯಾಗಿ ನಡೆಯಿತು. ಸಂಘದ ಮುಂದಿನ ಅವಧಿಗೆ…

    Spread the love

    You Missed

    ಬೆಳ್ತಂಗಡಿ ನೂತನ ನ್ಯಾಯಾಲಯ ಸಂಕೀರ್ಣದ ಶಂಕುಸ್ಥಾಪನೆ

    • By admin
    • June 14, 2026
    • 20 views
    ಬೆಳ್ತಂಗಡಿ ನೂತನ ನ್ಯಾಯಾಲಯ ಸಂಕೀರ್ಣದ ಶಂಕುಸ್ಥಾಪನೆ

    ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಬೆಳ್ತಂಗಡಿ ತಾಲೂಕು ಘಟಕ ರಚನೆ: ನಿಶಾನ್ ಬಂಗೇರ ನಾರ್ಯ ಅಧ್ಯಕ್ಷರಾಗಿ ಆಯ್ಕೆ

    • By admin
    • June 13, 2026
    • 72 views
    ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಬೆಳ್ತಂಗಡಿ ತಾಲೂಕು ಘಟಕ ರಚನೆ: ನಿಶಾನ್ ಬಂಗೇರ ನಾರ್ಯ ಅಧ್ಯಕ್ಷರಾಗಿ ಆಯ್ಕೆ

    ಓರಿಯಂಟೇಶನ್ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಯಶಸ್ಸಿನ ಮಂತ್ರ, ಶ್ರದ್ಧೆ ಮತ್ತು ಪರಿಶ್ರಮದಿಂದ ಉಜ್ವಲ ಭವಿಷ್ಯ ಸಾಧ್ಯ: ಸ್ಮಿತೇಶ್ ಬಾರ್ಯ

    • By admin
    • June 13, 2026
    • 25 views
    ಓರಿಯಂಟೇಶನ್ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಯಶಸ್ಸಿನ ಮಂತ್ರ, ಶ್ರದ್ಧೆ ಮತ್ತು ಪರಿಶ್ರಮದಿಂದ ಉಜ್ವಲ ಭವಿಷ್ಯ ಸಾಧ್ಯ: ಸ್ಮಿತೇಶ್ ಬಾರ್ಯ

    ಸ್ಪರ್ಧಾತ್ಮಕ ಪರೀಕ್ಷೆಗಳತ್ತ ವಿದ್ಯಾರ್ಥಿಗಳನ್ನು ಪ್ರೇರೇಪಿಸುವ ಒಲಿಂಪಿಯಾಡ್ ಕಾರ್ಯಕ್ರಮ,ಸಾಧಕ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ವಿತರಣೆ

    • By admin
    • June 13, 2026
    • 62 views
    ಸ್ಪರ್ಧಾತ್ಮಕ ಪರೀಕ್ಷೆಗಳತ್ತ ವಿದ್ಯಾರ್ಥಿಗಳನ್ನು ಪ್ರೇರೇಪಿಸುವ ಒಲಿಂಪಿಯಾಡ್ ಕಾರ್ಯಕ್ರಮ,ಸಾಧಕ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ವಿತರಣೆ

    ಬೆಳ್ತಂಗಡಿ ನರಸಿಂಹಗಡ (ಗಡಾಯಿಕಲ್ಲು) ಚಾರಣಕ್ಕೆ ಪ್ರವಾಸಿಗರಿಗೆ ನಿಷೇಧ ಹೇರಿದ ಅರಣ್ಯ ಇಲಾಖೆ!!!

    • By admin
    • June 13, 2026
    • 21 views
    ಬೆಳ್ತಂಗಡಿ ನರಸಿಂಹಗಡ (ಗಡಾಯಿಕಲ್ಲು) ಚಾರಣಕ್ಕೆ ಪ್ರವಾಸಿಗರಿಗೆ ನಿಷೇಧ ಹೇರಿದ ಅರಣ್ಯ ಇಲಾಖೆ!!!

    ಲ್ಯಾಂಡಿಂಗ್ ವೇಳೆ ದುರಂತ: ಬೆಂಕಿಗಾಹುತಿಯಾದ ವಾಯುಪಡೆಯ AN-32 ವಿಮಾನ

    • By admin
    • June 13, 2026
    • 191 views
    ಲ್ಯಾಂಡಿಂಗ್ ವೇಳೆ ದುರಂತ: ಬೆಂಕಿಗಾಹುತಿಯಾದ ವಾಯುಪಡೆಯ AN-32 ವಿಮಾನ