‘ವಾಟ್ಸಾಪ್ ರಾಮಾಯಣ’ ಎಂಬ ವಿನೂತನ ಪ್ರಯೋಗ ಪೌರಾಣಿಕ ಸನ್ನಿವೇಶ ಕಥೆಗಳನ್ನು ಸಾಮಾಜಿಕ ಜಾಲತಾಣದ ಮೂಲಕ ಅರಿವು ಮೂಡಿಸುವ ಪ್ರಯತ್ನದಲ್ಲಿ ಪುತ್ತೂರಿನ ಯುವಕ

"ವಾಟ್ಸಾಪ್ ರಾಮಾಯಣ"

ನಾವೆಲ್ಲರೂ ನಮ್ಮ ವಾಟ್ಸಾಪ್ ಗಳಲ್ಲಿ ಕಲೆ ಸಾಹಿತ್ಯ, ಹರಟೆ, ಮನರಂಜನೆ ಹೀಗೆ ಹಲವು ಬಗೆಯ ವೀಡಿಯೊಗಳನ್ನು ನೋಡುತ್ತೇವೆ.

ಹೀಗೆ ನೋಡಿ ಸಂತೋಷಗೊಳ್ಳುವ ಮನಸ್ಸು ಕೆಲವೇ ನಿಮಿಷಗಳಲ್ಲಿ ನಿರಾಸಕ್ತಿ ಹೊಂದುವುದನ್ನು ನಾವೆಲ್ಲರೂ ಗಮನಿಸಿರುತ್ತೇವೆ.
ಇದಕ್ಕೆ ಕಾರಣ ನಮ್ಮ ಮನಸ್ಸಿನಲ್ಲಿ ಏಕಾಗ್ರತೆ ಇಲ್ಲದಿರುವುದು. ಇದರಿಂದ ನೆನಪಿನ ಶಕ್ತಿಯೂ ಕುಂದುವುದು. ಹಾಗಾಗಿ ಕೆಲವೇ ನಿಮಿಷಗಳಲ್ಲಿ ಅಥವಾ ಸೆಕೆಂಡುಗಳಲ್ಲಿ ತಿಳಿಯಬಯಸುವ ವಿಡಿಯೋಗಳು ಅಥವಾ ಮಾಹಿತಿಗಳು ದೊರಕಿದರೆ ಅದೇ ಖುಷಿ.
ಈ ನಿಟ್ಟಿನಲ್ಲಿ ಪ್ರತಿದಿನವೂ ಅದೇ ಕೆಲವು ಸೆಕೆಂಡುಗಳಲ್ಲಿ ರಾಮಾಯಣದ ಘಟನೆಗಳನ್ನು ನೆನಪಿಸಿಕೊಳ್ಳುವ ಚಿಕ್ಕ ಪ್ರಯತ್ನ ಮಾಡುವುದು ಒಳಿತು.

ಹಾಗಾಗಿ ವಾಟ್ಸಾಪ್ ರಾಮಾಯಣ ಎಂಬ ವಿನೂತನ ಪ್ರಯೋಗದೊಂದಿಗೆ ಮತ್ತೆ ಪುನಃ ನಮ್ಮ ಪೌರಾಣಿಕ ಸನ್ನಿವೇಶ / ಕಥೆಗಳನ್ನು ಸಾಮಾಜಿಕ ಜಾಲತಾಣದ ಮೂಲಕ ನಾಡಿನ ಜನತೆಗೆ ತಲುಪಿಸುವ ಪ್ರಯತ್ನದಲ್ಲಿ ಶ್ರೀಯುತ ದುರ್ಗಾಪರಮೇಶ್ವರ ಭಟ್ ಪುತ್ತೂರು, ಇವರು ತೊಡಗಿದ್ದಾರೆ.
ಜಾಲತಾಣದಲ್ಲಿ ರಾಮಾಯಣದ ಕುರಿತಾಗಿ ದೊರಕುವ ಸಾಂದರ್ಭಿಕ ಚಿತ್ರಗಳಿಗೆ ತಮ್ಮದೇ ಧ್ವನಿಯಲ್ಲಿ ಕಥೆ ಹೇಳುತ್ತಿದ್ದಾರೆ.

ಲೇಖಕನಾಗಿಯೂ,ಭಾಷಣಕಾರರಾಗಿಯೂ ಹಾಗೆಯೇ ವೃತ್ತಿಯಲ್ಲಿ ಶಿಕ್ಷಕರಾಗಿ ಇವರು ಬೆಂಗಳೂರಿನ ಶುಭಂ ಕರೋತಿ ಮೈತ್ರೇಯೀ ಗುರುಕುಲದಲ್ಲಿ ಸೇವೆ ಸಲ್ಲಿಸುತ್ತಿದ್ದು, ಶಾಲೆಗಳು ತೆರೆಯದೇ ಮನೆಯಲ್ಲಿ ಬೇಸತ್ತು ಕುಳಿತಿರುವ ಮಕ್ಕಳ್ನನ್ನು ಉದ್ದೇಶಿಸಿ ಈ ವಿನೂತನ ಪ್ರಯೋಗವನ್ನು ನಡೆಸಲು ಮುಂದಾಗಿದ್ದಾರೆ.

ಪ್ರತಿದಿನವೂ 30 ಸೆಕೆಂಡಿನ ವಾಟ್ಸಾಪ್ ರಾಮಾಯಣವನ್ನು ಪಡೆಯಲು ತಾವು ಈ ಕೆಳಗೆ ನೀಡಿರುವ ನಂಬರನ್ನು ಸೇವ್ ಮಾಡಿಕೊಂಡು ವಾಟ್ಸಾಪ್ ಮಾಡಬಹುದಾಗಿದೆ
ತದನಂತರ ಪ್ರತಿದಿನವೂ ಕೆಲವೇ ಸೆಕೆಂಡುಗಳಲ್ಲಿ ರಾಮಾಯಣದ ಘಟನೆಗಳನ್ನು ತಿಳಿದುಕೊಳ್ಳಬಹುದು.
ವಾಟ್ಸಾಪ್ ಮೊ. ಸಂಖ್ಯೆ 9663826972.
ನಾಡಿನ ಜನತೆಯು ತಮ್ಮ ಜಾಲತಾಣಗಳಲ್ಲಿ ಹಂಚಿಕೊಳ್ಳುವುದರ ಮೂಲಕ ಪ್ರೋತ್ಸಾಹ ಮಾಡುವಂತೆ ವಿನಂತಿಸಿಕೊಂಡಿರುತ್ತಾರೆ.

Spread the love
  • Related Posts

    ನಾಗರಪಂಚಮಿ ಪ್ರಯುಕ್ತ ಸೋಮವಾರ ದ.ಕ. ಜಿಲ್ಲೆಗೆ ಸಾರ್ವತ್ರಿಕ ರಜೆ

    ಮಂಗಳೂರು: ನಾಗರಪಂಚಮಿ ಹಬ್ಬದ ಪ್ರಯುಕ್ತ ಆಗಸ್ಟ್ 17ರಂದು ಸೋಮವಾರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ ಘೋಷಿಸಲಾಗಿದೆ. ಜಿಲ್ಲೆಯಾದ್ಯಂತ ಶಾಲಾ-ಕಾಲೇಜುಗಳು ಸೇರಿದಂತೆ ಎಲ್ಲಾ ಶಿಕ್ಷಣ ಸಂಸ್ಥೆಗಳು ಹಾಗೂ ಸರಕಾರಿ ಕಚೇರಿಗಳಿಗೆ ಸೋಮವಾರ ರಜೆ ಇರಲಿದೆ ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.…

    Spread the love

    ಮುಂಡಾಜೆ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದಲ್ಲಿ ಸ್ವಾತಂತ್ರ್ಯೋತ್ಸವ

    ಬೆಳ್ತಂಗಡಿ: ಮುಂಡಾಜೆಯ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಧ್ವಜಾರೋಹಣ ನೆರವೇರಿಸುವ ಮೂಲಕ ಆಚರಿಸಲಾಯಿತು.ಸಂಘದ ಅಧ್ಯಕ್ಷ ವಿಜಯ ಆರ್. ಧ್ವಜಾರೋಹಣ ನೆರವೇರಿಸಿ, ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.ಈ ಸಂದರ್ಭದಲ್ಲಿ ಒಂಜರೆಬೈಲು ಅಂಗನವಾಡಿ ಕೇಂದ್ರದ ಪುಷ್ಪಾ, ಕೊಟ್ರೊಟ್ಟು ಅಂಗನವಾಡಿ ಕೇಂದ್ರದ ಪುಷ್ಪಾ,…

    Spread the love

    You Missed

    ನಾಗರಪಂಚಮಿ ಪ್ರಯುಕ್ತ ಸೋಮವಾರ ದ.ಕ. ಜಿಲ್ಲೆಗೆ ಸಾರ್ವತ್ರಿಕ ರಜೆ

    • By admin
    • August 16, 2026
    • 3 views
    ನಾಗರಪಂಚಮಿ ಪ್ರಯುಕ್ತ ಸೋಮವಾರ ದ.ಕ. ಜಿಲ್ಲೆಗೆ ಸಾರ್ವತ್ರಿಕ ರಜೆ

    ಮುಂಡಾಜೆ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದಲ್ಲಿ ಸ್ವಾತಂತ್ರ್ಯೋತ್ಸವ

    • By admin
    • August 15, 2026
    • 7 views
    ಮುಂಡಾಜೆ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದಲ್ಲಿ ಸ್ವಾತಂತ್ರ್ಯೋತ್ಸವ

    ನೀಟ್‌ನಲ್ಲಿ ಅತ್ಯುತ್ತಮ ಸಾಧನೆ: ಎಕ್ಸೆಲ್ ಪಿಯು ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ‘ಆರೋಗ್ಯ ರತ್ನ’ ಪ್ರಶಸ್ತಿ

    • By admin
    • August 14, 2026
    • 22 views
    ನೀಟ್‌ನಲ್ಲಿ ಅತ್ಯುತ್ತಮ ಸಾಧನೆ: ಎಕ್ಸೆಲ್ ಪಿಯು ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ‘ಆರೋಗ್ಯ ರತ್ನ’ ಪ್ರಶಸ್ತಿ

    ಬಂಟ್ವಾಳ ಕಾವಳ ಪಡೂರಿನಲ್ಲಿ ಪೊಲೀಸ್‌ ದಾಳಿ: ನಿಷೇಧಿತ ಎಂ.ಡಿ.ಎಂ.ಎ ಸೇರಿದಂತೆ 4 ಲಕ್ಷ 90 ಸಾವಿರ ಮೌಲ್ಯದ ಸೊತ್ತುಗಳು ವಶಕ್ಕೆ

    • By admin
    • August 14, 2026
    • 12 views
    ಬಂಟ್ವಾಳ ಕಾವಳ ಪಡೂರಿನಲ್ಲಿ ಪೊಲೀಸ್‌ ದಾಳಿ: ನಿಷೇಧಿತ ಎಂ.ಡಿ.ಎಂ.ಎ ಸೇರಿದಂತೆ 4 ಲಕ್ಷ 90 ಸಾವಿರ ಮೌಲ್ಯದ ಸೊತ್ತುಗಳು ವಶಕ್ಕೆ

    ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ 80ನೇ ಸ್ವಾತಂತ್ರ್ಯ ಸಂಭ್ರಮದಲ್ಲಿ ಆಗಸ್ಟ್ 15-16ರಂದು ಶೈಕ್ಷಣಿಕ ಸಾಧಕರ ಅಭಿನಂದನೆ ಮತ್ತು “ರಕ್ಷಕ ನಮನ-2026” ಕಾರ್ಯಕ್ರಮ

    • By admin
    • August 14, 2026
    • 7 views
    ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ 80ನೇ ಸ್ವಾತಂತ್ರ್ಯ ಸಂಭ್ರಮದಲ್ಲಿ ಆಗಸ್ಟ್ 15-16ರಂದು ಶೈಕ್ಷಣಿಕ ಸಾಧಕರ ಅಭಿನಂದನೆ ಮತ್ತು “ರಕ್ಷಕ ನಮನ-2026” ಕಾರ್ಯಕ್ರಮ

    ವೈದ್ಯಕೀಯ ವಿದ್ಯಾರ್ಥಿಗಳ ಕನಸು ನನಸಾಗಿಸುವ ‘ಎಕ್ಸೆಲ್ ನೀಟ್ ಅಕಾಡೆಮಿ’ ವೈದ್ಯರಾಗಲು ವಿಶ್ವಾಸದ ಆಯ್ಕೆ – ಎಕ್ಸೆಲ್ ಗುರುವಾಯನಕೆರೆ

    • By admin
    • August 11, 2026
    • 13 views
    ವೈದ್ಯಕೀಯ ವಿದ್ಯಾರ್ಥಿಗಳ ಕನಸು ನನಸಾಗಿಸುವ ‘ಎಕ್ಸೆಲ್ ನೀಟ್ ಅಕಾಡೆಮಿ’ ವೈದ್ಯರಾಗಲು ವಿಶ್ವಾಸದ ಆಯ್ಕೆ – ಎಕ್ಸೆಲ್  ಗುರುವಾಯನಕೆರೆ