ವಾಟ್ಸಾಪ್ ಬಳಕೆದಾರರಿಗೆ ಗೌಪ್ಯತಾ ನೀತಿ ರಕ್ಷಿಸುವುದಾಗಿ “ಸ್ಟೇಟಸ್” ಮೂಲಕ ಸಂದೇಶ!

ಬೆಂಗಳೂರು: ತನ್ನ ಬಳಕೆದಾರರ ಗೌಪ್ಯತಾ ನೀತಿಯಲ್ಲಿ ಬದಲಾವಣೆ ಮಾಡುವುದಾಗಿ ಹೇಳಿ ಸಾಕಷ್ಟು ಟೀಕೆಗಳಿಗೆ ಗುರಿಯಾಗಿದ್ದ ವಾಟ್ಸಪ್ ಈಗ ಬಳಕೆದಾರರಿಗೆ ಸ್ಟೇಟಸ್ ಕಳಿಸುವ ಮೂಲಕ ಬಳಕೆದಾರರ ಗೌಪ್ಯತಾ ನೀತಿಯನ್ನು ರಕ್ಷಿಸುವುದಾಗಿ ಹೇಳಿಕೊಂಡಿದೆ.

WhatsApp status

ವಾಟ್ಸಪ್​ನಿಂದ ಸ್ಟೇಟಸ್​

ಭಾನುವಾರ ತನ್ನ ವಾಟ್ಸಪ್​ ಮೆಸೇಜಿಂಗ್ ಅಪ್ಲಿಕೇಶನ್‌ನಲ್ಲಿ ನಾಲ್ಕು ಸ್ಟೇಟಸ್​ಗಳನ್ನು ಹಂಚಿಕೊಂಡಿದ್ದು, ಈ ಮೂಲಕ ವಾಟ್ಸಪ್ ಬಳಕೆದಾರರ ಗೌಪ್ಯತೆಗೆ ಸಂಬಂಧಿಸಿದಂತೆ ಇರುವ ಅನುಮಾನಗಳನ್ನು ನಿವಾರಿಸಲು ಪ್ರಯತ್ನಿಸಿದೆ.

ವಾಟ್ಸಪ್ ತನ್ನ ಬಳಕೆದಾರರ ಜೊತೆಗೆ ಹಂಚಿಕೊಂಡಿರುವ ನಾಲ್ಕು ಸ್ಟೇಟಸ್​ಗಳು ಇಂತಿವೆ.

  1. ನಾವು ನಿಮ್ಮ ಗೌಪ್ಯತೆ ರಕ್ಷಿಸಲು ಬದ್ಧರಾಗಿದ್ದೇವೆ.
  2. ನಿಮ್ಮ ವೈಯಕ್ತಿಕ ಸಂಭಾಷಣೆಯನ್ನು ವಾಟ್ಸಪ್ ಓದಲು ಸಾಧ್ಯವಿಲ್ಲ.
  3. ನೀವು ಹಂಚಿಕೊಂಡ ಸ್ಥಳವನ್ನು ವಾಟ್ಸಪ್ ನೋಡುವುದಿಲ್ಲ.
  4. ನಿಮ್ಮ ಸಂಪರ್ಕಗಳನ್ನು ಫೇಸ್​ಬುಕ್​ನೊಂದಿಗೆ ಹಂಚಿಕೊಳ್ಳುವುದಿಲ್ಲ.

ಈ ರೀತಿಯ ಸ್ಟೇಟಸ್​ಗಳನ್ನು ವಾಟ್ಸಪ್​ ತನ್ನ ಬಳಕೆದಾರರೊಂದಿಗೆ ಹಂಚಿಕೊಂಡಿದೆ. ಕಳೆದ ವಾರ ತನ್ನ ಮೆಸೇಜಿಂಗ್ ಅಪ್ಲಿಕೇಶನ್‌ನಲ್ಲಿ ಸೇವಾ ನಿಯಮಗಳು ಮತ್ತು ಸಾರ್ವಜನಿಕ ಗೌಪ್ಯತೆ ವಿಚಾರದಲ್ಲಿ ಬದಲಾವಣೆ ತರುವುದಾಗಿ ಹೇಳಿತ್ತು. ಈ ನೀತಿಯನ್ನು ಫೆಬ್ರವರಿ 8ರಿಂದ ಜಾರಿಗೆ ತರುವುದಾಗಿ ಹೇಳಿತ್ತು.

ವಾಟ್ಸಪ್ ಈ ರೀತಿ ಹೇಳಿಕೊಂಡ ನಂತರ ಭಾರತ ಸೇರಿದಂತೆ ಹಲವು ರಾಷ್ಟ್ರಗಳಲ್ಲಿ ತೀವ್ರ ವಿರೋಧ ವ್ಯಕ್ತವಾಗಿತ್ತು. ಈಗ ಬಳಕೆದಾರರೊಂದಿಗೆ ಸ್ಟೇಟಸ್ ಹಂಚಿಕೊಳ್ಳುವ ಮೂಲಕ ಟೆಲಿಗ್ರಾಮ್, ಸಿಗ್ನಲ್ ಮುಂತಾದ ಮೆಸೇಜಿಂಗ್ ಆ್ಯಪ್​ಗಳಿಗೆ ಪಲಾಯನವಾಗುತ್ತಿದ್ದ ಬಳಕೆದಾರರ ಮನವೊಲಿಸಲು ಮುಂದಾಗಿದೆ.

Spread the love
  • Related Posts

    ತೆಂಗಿನ ಮರ ಏರುವ ಕಾರ್ಮಿಕರಿಗೆ ‘ಕೇರಾ’ ಸುರಕ್ಷಾ ವಿಮಾ ಯೋಜನೆ ಜಾರಿಗೊಳಿಸಿದ ಕೇಂದ್ರ ಸರ್ಕಾರ

    ಮೈಸೂರು: ಕೇಂದ್ರ ಸರ್ಕಾರ ಜಾರಿಗೊಳಿಸಿರುವ ‘ಕೇರಾ’ ಸುರಕ್ಷಾ ವಿಮಾ ಯೋಜನೆಯು ತೆಂಗಿನ ಮರಗಳನ್ನು ಏರುವ ಕೆಲಸ ನಂಬಿರುವವರಿಗೆ ವರದಾನವಾಗಿದೆ. ತೆಂಗು ಅಭಿವೃದ್ಧಿ ಮಂಡಳಿ , ಕೃಷಿ ಮತ್ತು ರೈತ ಕಲ್ಯಾಣ ಇಲಾಖೆಯಿಂದ ದಿ ನ್ಯೂ ಇಂಡಿಯಾ ಅಶ್ಶೂರೆನ್ಸ್‌ ಕಂಪನಿ ಮೂಲಕ ಈ ವಿಮಾ…

    Spread the love

    ಬೆಳ್ತಂಗಡಿಗೆ ಹೊಸ ನ್ಯಾಯಾಲಯ ಕಟ್ಟಡ ಮಂಜೂರುಗೊಳಿಸುವಂತೆ ಉಸ್ತುವಾರಿ ಸಚಿವರಿಗೆ ವಕೀಲರ ನಿಯೋಗದಿಂದ ಮನವಿ

    ಬೆಳ್ತಂಗಡಿ: ಸುಮಾರು 60 ವರ್ಷ ಹಳೆಯದಾದ ಬೆಳ್ತಂಗಡಿಯ ನ್ಯಾಯಾಲಯದ ಕಟ್ಟಡನಾದುರಸ್ತಿಯಲ್ಲಿದ್ದು ಮುಂದಿನ ಬಜೆಟ್ ನಲ್ಲಿ ಹೊಸ ನ್ಯಾಯಾಲಯದ ಕಟ್ಟಡಕ್ಕೆ ಅನುದಾನ ಮಂಜೂರುಗೊಳಿಸುವಂತೆ ಬೆಳ್ತಂಗಡಿ ವಕೀಲರ ಸಂಘದ ನಿಯೋಗ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್…

    Spread the love

    You Missed

    ತೆಂಗಿನ ಮರ ಏರುವ ಕಾರ್ಮಿಕರಿಗೆ ‘ಕೇರಾ’ ಸುರಕ್ಷಾ ವಿಮಾ ಯೋಜನೆ ಜಾರಿಗೊಳಿಸಿದ ಕೇಂದ್ರ ಸರ್ಕಾರ

    • By admin
    • January 19, 2025
    • 114 views
    ತೆಂಗಿನ ಮರ ಏರುವ ಕಾರ್ಮಿಕರಿಗೆ ‘ಕೇರಾ’ ಸುರಕ್ಷಾ ವಿಮಾ ಯೋಜನೆ ಜಾರಿಗೊಳಿಸಿದ ಕೇಂದ್ರ ಸರ್ಕಾರ

    ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ

    • By admin
    • January 19, 2025
    • 27 views
    ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ

    ಬೆಳ್ತಂಗಡಿಗೆ ಹೊಸ ನ್ಯಾಯಾಲಯ ಕಟ್ಟಡ ಮಂಜೂರುಗೊಳಿಸುವಂತೆ ಉಸ್ತುವಾರಿ ಸಚಿವರಿಗೆ ವಕೀಲರ ನಿಯೋಗದಿಂದ ಮನವಿ

    • By admin
    • January 18, 2025
    • 29 views
    ಬೆಳ್ತಂಗಡಿಗೆ ಹೊಸ ನ್ಯಾಯಾಲಯ ಕಟ್ಟಡ ಮಂಜೂರುಗೊಳಿಸುವಂತೆ ಉಸ್ತುವಾರಿ ಸಚಿವರಿಗೆ ವಕೀಲರ ನಿಯೋಗದಿಂದ ಮನವಿ

    ಬೆನಕ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ರಜತ ಸಂಭ್ರಮ ಕಾರ್ಯಕ್ರಮ ಹಾಗೂ ನೂತನ ವಿಸ್ತೃತ ಕಟ್ಟಡದ ಲೋಕಾರ್ಪಣೆ

    • By admin
    • January 18, 2025
    • 60 views
    ಬೆನಕ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ರಜತ ಸಂಭ್ರಮ ಕಾರ್ಯಕ್ರಮ ಹಾಗೂ ನೂತನ ವಿಸ್ತೃತ ಕಟ್ಟಡದ ಲೋಕಾರ್ಪಣೆ

    ಸಿ.ಸಿ ಟಿ.ವಿ ಕ್ಯಾಮೆರಾ ಅಳವಡಿಕೆ ಮತ್ತು ಸರ್ವಿಸ್‌ ಉಚಿತ ತರಬೇತಿ ಕಾರ್ಯಾಗಾರ

    • By admin
    • January 17, 2025
    • 33 views
    ಸಿ.ಸಿ ಟಿ.ವಿ ಕ್ಯಾಮೆರಾ ಅಳವಡಿಕೆ ಮತ್ತು ಸರ್ವಿಸ್‌ ಉಚಿತ ತರಬೇತಿ ಕಾರ್ಯಾಗಾರ

    ರಜತ ಮಹೋತ್ಸವದ ಹೊಸ್ತಿಲಲ್ಲಿ ಬೆನಕ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ, ನಾಳೆ ವಿಸ್ತ್ರತ ನೂತನ ಕಟ್ಟಡದ ಉದ್ಘಾಟನೆ

    • By admin
    • January 17, 2025
    • 35 views
    ರಜತ ಮಹೋತ್ಸವದ ಹೊಸ್ತಿಲಲ್ಲಿ ಬೆನಕ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ, ನಾಳೆ ವಿಸ್ತ್ರತ ನೂತನ ಕಟ್ಟಡದ ಉದ್ಘಾಟನೆ