‘ವಾಟ್ಸಾಪ್​’ ಜನಪ್ರಿಯತೆಗೆ ಠಕ್ಕರ್​ ನೀಡಲು ಬಂದಿದೆ ಸ್ವದೇಶಿ ನಿರ್ಮಿತ ‘ಸಂದೇಸ್​’ ಆಪ್​..!

ಭಾರತ ಸರ್ಕಾರವು ಸಂದೇಸ್​ ಎಂಬ ತ್ವರಿತ ಮೆಸೇಜಿಂಗ್​ ಪ್ಲಾಟ್​ಫಾರಂನ್ನು ಆರಂಭಿಸಿದೆ ಎಂದು ಕೇಂದ್ರದ ಎಲೆಕ್ಟ್ರಾನಿಕ್ಸ್​ ಹಾಗೂ ಐಟಿ ರಾಜ್ಯ ಸಚಿವ ರಾಜೀವ್​ ಚಂದ್ರಶೇಖರ್​​​ ಲೋಕಸಭೆಗೆ ಲಿಖಿತ ರೂಪದಲ್ಲಿ ಮಾಹಿತಿ ನೀಡಿದ್ದಾರೆ.

ಫೇಸ್​ಬುಕ್​ ಒಡೆತನದ ವಾಟ್ಸಾಪ್​ ಸೇರಿದಂತೆ ವಿವಿಧ ಖಾಸಗಿ ಮೆಸೆಜಿಂಗ್​ ಅಪ್ಲಿಕೇಶನ್​ಗಳಿಗೆ ಸೆಡ್ಡು ಹೊಡೆಯುವ ಸಲುವಾಗಿ ಕೇಂದ್ರ ಸರ್ಕಾರ ಈ ಪರ್ಯಾಯ ಮಾರ್ಗವನ್ನು ಹುಡುಕಿದೆ.

ಕೇಂದ್ರ ಸರ್ಕಾರದ ಮಾಹಿತಿ ತಂತ್ರಜ್ಞಾನ ವಿಭಾಗದ ರಾಷ್ಟ್ರೀಯ ಮಾಹಿತಿ ಕೇಂದ್ರವು ವಾಟ್ಸಾಪ್​ ಮಾದರಿಯಲ್ಲೇ ಕಾರ್ಯ ನಿರ್ವಹಿಸುವ ಈ ಹೊಸ ವೇದಿಕೆಯನ್ನು ಆರಂಭಿಸಿದೆ. ಮೊಬೈಲ್​ ಸಂಖ್ಯೆ ಅಥವಾ ಇಮೇಲ್​ ಐಡಿ ಸಹಾಯದಿಂದ ಎಲ್ಲಾ ರೀತಿಯ ಸಂವಹನ ಕಾರ್ಯಕ್ಕೆ ವೇದಿಕೆಯಾಗಿ ಬಳಕೆ ಮಾಡಬಹುದಾಗಿದೆ. ಈ ಸಂದೇಸ್​ ಅಪ್ಲಿಕೇಶನ್​ನ್ನು ಪ್ರಸ್ತುತ ಸರ್ಕಾರಿ ನೌಕರರು ಹಾಗೂ ಸರ್ಕಾರದೊಂದಿಗೆ ಸಂಪರ್ಕ ಹೊಂದಿರುವ ಏಜನ್ಸಿಗಳಲ್ಲಿ ಬಳಕೆ ಮಾಡಲಾಗುತ್ತಿದೆ.

ಸಂದೇಸ್​ ಅಪ್ಲಿಕೇಶನ್​​ ಸುರಕ್ಷಿತ, ಓಪನ್​ ಸೋರ್ಸ್ ಆಧಾರಿತ ವೇದಿಕೆಯಾಗಿದೆ. ಇದು ಸರ್ಕಾರಿ ಸ್ವಾಮ್ಯದ ವೇದಿಕೆಯಾಗಿದ್ದು ಸಂಪೂರ್ಣ ನಿಯಂತ್ರಣವು ಕೇಂದ್ರದ ಕೈಯಲ್ಲಿ ಇರಲಿದೆ. ಈ ಅಪ್ಲಿಕೇಶನ್​ ಮೂಲಕ ಸಂದೇಶ ಕಳುಹಿಸುವಿಕೆ, ಫೈಲ್​​ ಹಾಗೂ ಫೋಟೋ, ವಿಡಿಯೋಗಳ ಹಂಚಿಕೆ ಮತ್ತು ಆಡಿಯೋ-ವಿಡಿಯೋ ಕರೆ ಮಾಡಬಹುದಾಗಿದೆ. ಗೂಗಲ್​ ಪ್ಲೇ ಸ್ಟೋರ್​ ಹಾಗೂ ಆಯಪ್​ ಸ್ಟೋರ್​ನಲ್ಲಿ ಈ ಅಪ್ಲಿಕೇಶನ್​ ಲಭ್ಯವಿದೆ ಎಂದು ಚಂದ್ರಶೇಖರ್​​ ಹೇಳಿದ್ದಾರೆ.

ಭಾರತೀಯ ಅಪ್ಲಿಕೇಶನ್​ ಹಾಗೂ ಸಾಫ್ಟ್​ವೇರ್​ಗಳ ಬಳಕೆಯನ್ನು ಉತ್ತೇಜಿಸುವ ಸರ್ಕಾರದ ಉಪಕ್ರಮದ ಭಾಗವಾಗಿ ಈ ಸಂದೇಸ್​ ಅಪ್ಲಿಕೇಶನ್​ ಅಭಿವೃದ್ಧಿ ಮಾಡಲಾಗಿದೆ. ಕಳೆದ ಅನೇಕ ತಿಂಗಳಿನಿಂದ ಖಾಸಗಿ ಮಾಹಿತಿ ಸೋರಿಕೆ ವಿಚಾರದಲ್ಲಿ ವಾಟ್ಸಾಪ್​ ಹಾಗೂ ಕೇಂದ್ರ ಸರ್ಕಾರದ ನಡುವೆ ಭಿನ್ನಾಭಿಪ್ರಾಯ ಮೂಡಿರುವ ನಡುವೆಯೇ ಕೇಂದ್ರ ಸರ್ಕಾರ ಸಂದೇಸ್​ ಅಪ್ಲಿಕೇಶನ್​ ಮೂಲಕ ಮೆಸೆಜಿಂಗ್​ ಅಪ್ಲಿಕೇಶನ್​ಗಳಿಗೆ ಸೆಡ್ಡು ಹೊಡೆಯಲು ಮುಂದಾಗಿದೆ.

Spread the love
  • Related Posts

    ಬೆಳ್ತಂಗಡಿ: ಗುರುವಾಯನಕೆರೆ-ವೇಣೂರಿನ ಹದಗೆಟ್ಟ ರಸ್ತೆಯ ತುರ್ತು ದುರಸ್ತಿ ಕಾರ್ಯ, ಶಾಸಕರ ತುರ್ತು ಸ್ಪಂದನೆ

    ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಗುರುವಾಯನಕೆರೆ–ವೇಣೂರು ಮುಖ್ಯರಸ್ತೆಯ ಪಡಂಗಡಿ ಭಾಗದಲ್ಲಿ ಇತ್ತೀಚಿನ ಭಾರೀ ಮಳೆಯಿಂದ ರಸ್ತೆ ಹದಗೆಟ್ಟು ಸಾರ್ವಜನಿಕರು ಹಾಗೂ ವಾಹನ ಸವಾರರು ಸಂಚಾರಕ್ಕೆ ತೊಂದರೆ ಅನುಭವಿಸುತ್ತಿದ್ದರು. ಈ ಕುರಿತು ಶಾಸಕ ಶ್ರೀ ಹರೀಶ್ ಪೂಂಜ ಅವರ ಮುತುವರ್ಜಿಯಿಂದ ಸ್ಥಳವನ್ನು ಪರಿಶೀಲಿಸಿ, ಸಾರ್ವಜನಿಕರ…

    Spread the love

    30 ವರ್ಷಗಳಿಂದ ಶಾಪಗ್ರಸ್ತವಾಗಿರುವ ಮುಂಡಾಜೆ ಗ್ರಾಮದ ಸೀಟು–ಕಾಯರ್ತೋಡಿ–ಕೊಡಂಗೆ–ಮೂಲಾರು ಕುಡೆಂಚಿ ರಸ್ತೆ: ಚುನಾವಣೆ ಬಂದಾಗ ಶಿಲಾನ್ಯಾಸ, ಬಳಿಕ ಮರೆತುಬಿಡುವ ಆರೋಪ

    ಬೆಳ್ತಂಗಡಿ: ಮುಂಡಾಜೆ ಗ್ರಾಮದ ಸೀಟು–ಕಾಯರ್ತೋಡಿ–ಕೊಡಂಗೆ–ಮೂಲಾರು ಕುಡೆಂಚಿ ಸಂಪರ್ಕ ರಸ್ತೆ ಕಳೆದ ಹಲವು ದಶಕಗಳಿಂದ ಅಭಿವೃದ್ಧಿಯ ನಿರೀಕ್ಷೆಯಲ್ಲೇ ಉಳಿದಿದ್ದು, ಸ್ಥಳೀಯ ನಿವಾಸಿಗಳ ಆಕ್ರೋಶಕ್ಕೆ ಕಾರಣವಾಗಿದೆ. ಸುಮಾರು 200ಕ್ಕೂ ಹೆಚ್ಚು ಮನೆಗಳಿಗೆ ಪ್ರಮುಖ ಸಂಪರ್ಕ ಕಲ್ಪಿಸುವ 6 ಕಿಲೋಮೀಟರ್ ಉದ್ದದ ಈ ರಸ್ತೆಗೆ ಸಮರ್ಪಕ…

    Spread the love

    You Missed

    ಬೆಳ್ತಂಗಡಿ: ಗುರುವಾಯನಕೆರೆ-ವೇಣೂರಿನ ಹದಗೆಟ್ಟ ರಸ್ತೆಯ ತುರ್ತು ದುರಸ್ತಿ ಕಾರ್ಯ, ಶಾಸಕರ ತುರ್ತು ಸ್ಪಂದನೆ

    • By admin
    • July 29, 2026
    • 4 views
    ಬೆಳ್ತಂಗಡಿ: ಗುರುವಾಯನಕೆರೆ-ವೇಣೂರಿನ  ಹದಗೆಟ್ಟ ರಸ್ತೆಯ ತುರ್ತು ದುರಸ್ತಿ ಕಾರ್ಯ, ಶಾಸಕರ ತುರ್ತು ಸ್ಪಂದನೆ

    30 ವರ್ಷಗಳಿಂದ ಶಾಪಗ್ರಸ್ತವಾಗಿರುವ ಮುಂಡಾಜೆ ಗ್ರಾಮದ ಸೀಟು–ಕಾಯರ್ತೋಡಿ–ಕೊಡಂಗೆ–ಮೂಲಾರು ಕುಡೆಂಚಿ ರಸ್ತೆ: ಚುನಾವಣೆ ಬಂದಾಗ ಶಿಲಾನ್ಯಾಸ, ಬಳಿಕ ಮರೆತುಬಿಡುವ ಆರೋಪ

    • By admin
    • July 29, 2026
    • 5 views
    30 ವರ್ಷಗಳಿಂದ ಶಾಪಗ್ರಸ್ತವಾಗಿರುವ ಮುಂಡಾಜೆ ಗ್ರಾಮದ ಸೀಟು–ಕಾಯರ್ತೋಡಿ–ಕೊಡಂಗೆ–ಮೂಲಾರು ಕುಡೆಂಚಿ ರಸ್ತೆ: ಚುನಾವಣೆ ಬಂದಾಗ ಶಿಲಾನ್ಯಾಸ, ಬಳಿಕ ಮರೆತುಬಿಡುವ ಆರೋಪ

    ಸಕಲೇಶಪುರ: ಅಕ್ರಮ ಭೂ ಮಂಜೂರಾತಿ ಹಗರಣ – ಬಂಧನ ಭೀತಿಯಿಂದ ನೂರಕ್ಕೂ ಹೆಚ್ಚು ಅಧಿಕಾರಿಗಳು ಸಾಮೂಹಿಕ ರಜೆ!

    • By admin
    • July 25, 2026
    • 9 views
    ಸಕಲೇಶಪುರ: ಅಕ್ರಮ ಭೂ ಮಂಜೂರಾತಿ ಹಗರಣ – ಬಂಧನ ಭೀತಿಯಿಂದ ನೂರಕ್ಕೂ ಹೆಚ್ಚು ಅಧಿಕಾರಿಗಳು ಸಾಮೂಹಿಕ ರಜೆ!

    ಕಲ್ಪವೃಕ್ಷ ಜ್ಞಾನ ವಿಕಾಸ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಪ್ರಾತ್ಯಕ್ಷಿಕೆ: ಆರೋಗ್ಯಕರ ಜೀವನಕ್ಕೆ ಸಮತೋಲಿತ ಆಹಾರ ಹಾಗೂ ಸ್ವಚ್ಛತೆ ಅಗತ್ಯ – ಡಾ. ನಿಶ್ಚಯ್ ಎಚ್.ಎನ್.

    • By admin
    • July 24, 2026
    • 7 views
    ಕಲ್ಪವೃಕ್ಷ ಜ್ಞಾನ ವಿಕಾಸ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಪ್ರಾತ್ಯಕ್ಷಿಕೆ: ಆರೋಗ್ಯಕರ ಜೀವನಕ್ಕೆ ಸಮತೋಲಿತ ಆಹಾರ ಹಾಗೂ ಸ್ವಚ್ಛತೆ ಅಗತ್ಯ – ಡಾ. ನಿಶ್ಚಯ್ ಎಚ್.ಎನ್.

    ಕರಾವಳಿಯಲ್ಲಿ ಮುಂದುವರಿದ ಮಳೆ, ಉಡುಪಿ ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

    • By admin
    • July 24, 2026
    • 7 views
    ಕರಾವಳಿಯಲ್ಲಿ ಮುಂದುವರಿದ ಮಳೆ, ಉಡುಪಿ ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

    ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಹಿನ್ನೆಲೆಯಲ್ಲಿ ಶುಕ್ರವಾರ 24ರಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

    • By admin
    • July 23, 2026
    • 9 views
    ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಹಿನ್ನೆಲೆಯಲ್ಲಿ ಶುಕ್ರವಾರ 24ರಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ