‘ವಾಟ್ಸಾಪ್​’ ಜನಪ್ರಿಯತೆಗೆ ಠಕ್ಕರ್​ ನೀಡಲು ಬಂದಿದೆ ಸ್ವದೇಶಿ ನಿರ್ಮಿತ ‘ಸಂದೇಸ್​’ ಆಪ್​..!

ಭಾರತ ಸರ್ಕಾರವು ಸಂದೇಸ್​ ಎಂಬ ತ್ವರಿತ ಮೆಸೇಜಿಂಗ್​ ಪ್ಲಾಟ್​ಫಾರಂನ್ನು ಆರಂಭಿಸಿದೆ ಎಂದು ಕೇಂದ್ರದ ಎಲೆಕ್ಟ್ರಾನಿಕ್ಸ್​ ಹಾಗೂ ಐಟಿ ರಾಜ್ಯ ಸಚಿವ ರಾಜೀವ್​ ಚಂದ್ರಶೇಖರ್​​​ ಲೋಕಸಭೆಗೆ ಲಿಖಿತ ರೂಪದಲ್ಲಿ ಮಾಹಿತಿ ನೀಡಿದ್ದಾರೆ.

ಫೇಸ್​ಬುಕ್​ ಒಡೆತನದ ವಾಟ್ಸಾಪ್​ ಸೇರಿದಂತೆ ವಿವಿಧ ಖಾಸಗಿ ಮೆಸೆಜಿಂಗ್​ ಅಪ್ಲಿಕೇಶನ್​ಗಳಿಗೆ ಸೆಡ್ಡು ಹೊಡೆಯುವ ಸಲುವಾಗಿ ಕೇಂದ್ರ ಸರ್ಕಾರ ಈ ಪರ್ಯಾಯ ಮಾರ್ಗವನ್ನು ಹುಡುಕಿದೆ.

ಕೇಂದ್ರ ಸರ್ಕಾರದ ಮಾಹಿತಿ ತಂತ್ರಜ್ಞಾನ ವಿಭಾಗದ ರಾಷ್ಟ್ರೀಯ ಮಾಹಿತಿ ಕೇಂದ್ರವು ವಾಟ್ಸಾಪ್​ ಮಾದರಿಯಲ್ಲೇ ಕಾರ್ಯ ನಿರ್ವಹಿಸುವ ಈ ಹೊಸ ವೇದಿಕೆಯನ್ನು ಆರಂಭಿಸಿದೆ. ಮೊಬೈಲ್​ ಸಂಖ್ಯೆ ಅಥವಾ ಇಮೇಲ್​ ಐಡಿ ಸಹಾಯದಿಂದ ಎಲ್ಲಾ ರೀತಿಯ ಸಂವಹನ ಕಾರ್ಯಕ್ಕೆ ವೇದಿಕೆಯಾಗಿ ಬಳಕೆ ಮಾಡಬಹುದಾಗಿದೆ. ಈ ಸಂದೇಸ್​ ಅಪ್ಲಿಕೇಶನ್​ನ್ನು ಪ್ರಸ್ತುತ ಸರ್ಕಾರಿ ನೌಕರರು ಹಾಗೂ ಸರ್ಕಾರದೊಂದಿಗೆ ಸಂಪರ್ಕ ಹೊಂದಿರುವ ಏಜನ್ಸಿಗಳಲ್ಲಿ ಬಳಕೆ ಮಾಡಲಾಗುತ್ತಿದೆ.

ಸಂದೇಸ್​ ಅಪ್ಲಿಕೇಶನ್​​ ಸುರಕ್ಷಿತ, ಓಪನ್​ ಸೋರ್ಸ್ ಆಧಾರಿತ ವೇದಿಕೆಯಾಗಿದೆ. ಇದು ಸರ್ಕಾರಿ ಸ್ವಾಮ್ಯದ ವೇದಿಕೆಯಾಗಿದ್ದು ಸಂಪೂರ್ಣ ನಿಯಂತ್ರಣವು ಕೇಂದ್ರದ ಕೈಯಲ್ಲಿ ಇರಲಿದೆ. ಈ ಅಪ್ಲಿಕೇಶನ್​ ಮೂಲಕ ಸಂದೇಶ ಕಳುಹಿಸುವಿಕೆ, ಫೈಲ್​​ ಹಾಗೂ ಫೋಟೋ, ವಿಡಿಯೋಗಳ ಹಂಚಿಕೆ ಮತ್ತು ಆಡಿಯೋ-ವಿಡಿಯೋ ಕರೆ ಮಾಡಬಹುದಾಗಿದೆ. ಗೂಗಲ್​ ಪ್ಲೇ ಸ್ಟೋರ್​ ಹಾಗೂ ಆಯಪ್​ ಸ್ಟೋರ್​ನಲ್ಲಿ ಈ ಅಪ್ಲಿಕೇಶನ್​ ಲಭ್ಯವಿದೆ ಎಂದು ಚಂದ್ರಶೇಖರ್​​ ಹೇಳಿದ್ದಾರೆ.

ಭಾರತೀಯ ಅಪ್ಲಿಕೇಶನ್​ ಹಾಗೂ ಸಾಫ್ಟ್​ವೇರ್​ಗಳ ಬಳಕೆಯನ್ನು ಉತ್ತೇಜಿಸುವ ಸರ್ಕಾರದ ಉಪಕ್ರಮದ ಭಾಗವಾಗಿ ಈ ಸಂದೇಸ್​ ಅಪ್ಲಿಕೇಶನ್​ ಅಭಿವೃದ್ಧಿ ಮಾಡಲಾಗಿದೆ. ಕಳೆದ ಅನೇಕ ತಿಂಗಳಿನಿಂದ ಖಾಸಗಿ ಮಾಹಿತಿ ಸೋರಿಕೆ ವಿಚಾರದಲ್ಲಿ ವಾಟ್ಸಾಪ್​ ಹಾಗೂ ಕೇಂದ್ರ ಸರ್ಕಾರದ ನಡುವೆ ಭಿನ್ನಾಭಿಪ್ರಾಯ ಮೂಡಿರುವ ನಡುವೆಯೇ ಕೇಂದ್ರ ಸರ್ಕಾರ ಸಂದೇಸ್​ ಅಪ್ಲಿಕೇಶನ್​ ಮೂಲಕ ಮೆಸೆಜಿಂಗ್​ ಅಪ್ಲಿಕೇಶನ್​ಗಳಿಗೆ ಸೆಡ್ಡು ಹೊಡೆಯಲು ಮುಂದಾಗಿದೆ.

Spread the love
  • Related Posts

    ಕರಾವಳಿಯಲ್ಲಿ ಕೈಕೊಟ್ಟ ಮುಂಗಾರು, ಹೆಚ್ಚಿದ ನೀರಿನ ಬಿಕ್ಕಟ್ಟಿನ ಆತಂಕ; ನದಿಯ ಒಡಲು ಹೇಳುತ್ತಿದೆ ಎಚ್ಚರಿಕೆಯ ಸಂದೇಶ:

    🖊️•ಬರಹ: ರಾಜೇಶ.ಎಂ.ಕಾನರ್ಪ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಈ ಬಾರಿ ಮುಂಗಾರು ಮಳೆ ನಿರೀಕ್ಷಿತ ಪ್ರಮಾಣದಲ್ಲಿ ಸುರಿಯದ ಹಿನ್ನೆಲೆಯಲ್ಲಿ ನದಿಗಳು, ಹೊಳೆಗಳು ಹಾಗೂ ಜಲಮೂಲಗಳಲ್ಲಿ ನೀರಿನ ಮಟ್ಟ ಕುಸಿಯುತ್ತಿರುವುದು ಕಂಡುಬಂದಿದೆ. ಕಳೆದ ವರ್ಷದ 2025ಜೂನ್ ತಿಂಗಳಲ್ಲಿ ಉಕ್ಕಿ ಹರಿಯುತ್ತಿದ್ದ ನದಿ, ಈ ವರ್ಷದ…

    Spread the love

    ದಿಡುಪೆ-ಪೈಚಾರು ರಾಜ್ಯ ಹೆದ್ದಾರಿಯ ಸೋಮಂತ್ತಡ್ಕದಿಂದ ಹೇಡ್ಯಾ ವರೆಗಿನ ರಸ್ತೆ ನವೀಕರಣಕ್ಕೆ ಅನುದಾನ ಮಂಜೂರು

    ಉಜಿರೆ: ರಾಷ್ಟ್ರೀಯ ಹೆದ್ದಾರಿ 275ರಿಂದ ರಾಜ್ಯ ಹೆದ್ದಾರಿ 276ನ್ನು ಸಂಪರ್ಕಿಸುವ ಬೆಳ್ತಂಗಡಿ ತಾಲೂಕಿನ ಸೋಮಂತಡ್ಕ- ಹೇಡ್ಯ ರಸ್ತೆ ನವೀಕರಣ ಹಾಗೂ ವಿಸ್ತರಣೆಗೆ ಕೇಂದ್ರ ಸರಕಾರ ಆಡಳಿತಾತ್ಮಕ ಅನುಮೋದನೆ ನೀಡಿದ್ದು, ಈ ರಸ್ತೆಯ ಅಭಿವೃದ್ಧಿ ಭಾಗ್ಯ ಸನ್ನಿಹಿತವಾಗಿದೆ. ಕೇಂದ್ರ ಸರಕಾರ ದ.ಕ. ಜಿಲ್ಲೆಯ…

    Spread the love

    You Missed

    ಕರಾವಳಿಯಲ್ಲಿ ಕೈಕೊಟ್ಟ ಮುಂಗಾರು, ಹೆಚ್ಚಿದ ನೀರಿನ ಬಿಕ್ಕಟ್ಟಿನ ಆತಂಕ; ನದಿಯ ಒಡಲು ಹೇಳುತ್ತಿದೆ ಎಚ್ಚರಿಕೆಯ ಸಂದೇಶ:

    • By admin
    • June 20, 2026
    • 15 views
    ಕರಾವಳಿಯಲ್ಲಿ ಕೈಕೊಟ್ಟ ಮುಂಗಾರು, ಹೆಚ್ಚಿದ ನೀರಿನ ಬಿಕ್ಕಟ್ಟಿನ ಆತಂಕ; ನದಿಯ ಒಡಲು ಹೇಳುತ್ತಿದೆ ಎಚ್ಚರಿಕೆಯ ಸಂದೇಶ:

    ದಿಡುಪೆ-ಪೈಚಾರು ರಾಜ್ಯ ಹೆದ್ದಾರಿಯ ಸೋಮಂತ್ತಡ್ಕದಿಂದ ಹೇಡ್ಯಾ ವರೆಗಿನ ರಸ್ತೆ ನವೀಕರಣಕ್ಕೆ ಅನುದಾನ ಮಂಜೂರು

    • By admin
    • June 18, 2026
    • 43 views
    ದಿಡುಪೆ-ಪೈಚಾರು ರಾಜ್ಯ ಹೆದ್ದಾರಿಯ ಸೋಮಂತ್ತಡ್ಕದಿಂದ ಹೇಡ್ಯಾ ವರೆಗಿನ ರಸ್ತೆ ನವೀಕರಣಕ್ಕೆ ಅನುದಾನ ಮಂಜೂರು

    “ಸಿ.ಎಂ.-ಡಿಕೆಶಿ ಮೊದಲ ಪರೀಕ್ಷೆಯಲ್ಲಿ ಸಕ್ಸಸ್: ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ 5 ಸ್ಥಾನ” ಜೆಡಿಎಸ್ ಅಭ್ಯರ್ಥಿಗೆ ಸೋಲು, ಅಡ್ಡಮತದಾನ ಚರ್ಚೆಗೆ ಗ್ರಾಸ

    • By admin
    • June 18, 2026
    • 40 views
    “ಸಿ.ಎಂ.-ಡಿಕೆಶಿ ಮೊದಲ ಪರೀಕ್ಷೆಯಲ್ಲಿ ಸಕ್ಸಸ್: ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ 5 ಸ್ಥಾನ” ಜೆಡಿಎಸ್ ಅಭ್ಯರ್ಥಿಗೆ ಸೋಲು, ಅಡ್ಡಮತದಾನ ಚರ್ಚೆಗೆ ಗ್ರಾಸ

    “ಜೆಒಸಾ ಕೌನ್ಸಿಲಿಂಗ್‌ನಲ್ಲಿ ಎಕ್ಸೆಲ್ ವಿದ್ಯಾರ್ಥಿಗಳ ಸಾಧನೆ; ಉನ್ನತ ಶಿಕ್ಷಣ ಸಂಸ್ಥೆಗಳಾದ ಐಐಟಿ-ಎನ್‌ಐಟಿಗಳಲ್ಲಿ ಸ್ಥಾನ”

    • By admin
    • June 18, 2026
    • 96 views
    “ಜೆಒಸಾ ಕೌನ್ಸಿಲಿಂಗ್‌ನಲ್ಲಿ ಎಕ್ಸೆಲ್ ವಿದ್ಯಾರ್ಥಿಗಳ ಸಾಧನೆ; ಉನ್ನತ ಶಿಕ್ಷಣ ಸಂಸ್ಥೆಗಳಾದ ಐಐಟಿ-ಎನ್‌ಐಟಿಗಳಲ್ಲಿ ಸ್ಥಾನ”

    “ಸಾಂಕ್ರಾಮಿಕ ರೋಗಕ್ಕೆ ಉಚಿತ ಆಹ್ವಾನ: ಉಜಿರೆ ಚರಂಡಿಯಲ್ಲಿ ತ್ಯಾಜ್ಯ ನೀರು ಶೇಖರಣೆ”

    • By admin
    • June 18, 2026
    • 79 views
    “ಸಾಂಕ್ರಾಮಿಕ ರೋಗಕ್ಕೆ ಉಚಿತ ಆಹ್ವಾನ: ಉಜಿರೆ ಚರಂಡಿಯಲ್ಲಿ ತ್ಯಾಜ್ಯ ನೀರು ಶೇಖರಣೆ”

    “ಮೋಡಗಳ ಮುದ್ದಾಟದಲ್ಲಿ ಮಿಂದೇಳುವ ಪರ್ವತಗಳು, ಜಲಪಾತಗಳ ಜೋಗುಳದಲ್ಲಿ ತೇಲುವ ಕಣಿವೆಗಳು, ಹಸಿರಿನ ಹೊದಿಕೆಯಲ್ಲಿ ಕಂಗೊಳಿಸುವ ಭೂಮಿ – ಇದೇ ಪ್ರಕೃತಿಯ ಮಡಿಲಲ್ಲಿ ಸಿಗುವ ನಿಜವಾದ ಸ್ವರ್ಗಾನುಭವ”

    • By admin
    • June 18, 2026
    • 64 views
    “ಮೋಡಗಳ ಮುದ್ದಾಟದಲ್ಲಿ ಮಿಂದೇಳುವ ಪರ್ವತಗಳು, ಜಲಪಾತಗಳ ಜೋಗುಳದಲ್ಲಿ ತೇಲುವ ಕಣಿವೆಗಳು, ಹಸಿರಿನ ಹೊದಿಕೆಯಲ್ಲಿ ಕಂಗೊಳಿಸುವ ಭೂಮಿ – ಇದೇ ಪ್ರಕೃತಿಯ ಮಡಿಲಲ್ಲಿ ಸಿಗುವ ನಿಜವಾದ ಸ್ವರ್ಗಾನುಭವ”