‘ವಾಟ್ಸಾಪ್​’ ಜನಪ್ರಿಯತೆಗೆ ಠಕ್ಕರ್​ ನೀಡಲು ಬಂದಿದೆ ಸ್ವದೇಶಿ ನಿರ್ಮಿತ ‘ಸಂದೇಸ್​’ ಆಪ್​..!

ಭಾರತ ಸರ್ಕಾರವು ಸಂದೇಸ್​ ಎಂಬ ತ್ವರಿತ ಮೆಸೇಜಿಂಗ್​ ಪ್ಲಾಟ್​ಫಾರಂನ್ನು ಆರಂಭಿಸಿದೆ ಎಂದು ಕೇಂದ್ರದ ಎಲೆಕ್ಟ್ರಾನಿಕ್ಸ್​ ಹಾಗೂ ಐಟಿ ರಾಜ್ಯ ಸಚಿವ ರಾಜೀವ್​ ಚಂದ್ರಶೇಖರ್​​​ ಲೋಕಸಭೆಗೆ ಲಿಖಿತ ರೂಪದಲ್ಲಿ ಮಾಹಿತಿ ನೀಡಿದ್ದಾರೆ.

ಫೇಸ್​ಬುಕ್​ ಒಡೆತನದ ವಾಟ್ಸಾಪ್​ ಸೇರಿದಂತೆ ವಿವಿಧ ಖಾಸಗಿ ಮೆಸೆಜಿಂಗ್​ ಅಪ್ಲಿಕೇಶನ್​ಗಳಿಗೆ ಸೆಡ್ಡು ಹೊಡೆಯುವ ಸಲುವಾಗಿ ಕೇಂದ್ರ ಸರ್ಕಾರ ಈ ಪರ್ಯಾಯ ಮಾರ್ಗವನ್ನು ಹುಡುಕಿದೆ.

ಕೇಂದ್ರ ಸರ್ಕಾರದ ಮಾಹಿತಿ ತಂತ್ರಜ್ಞಾನ ವಿಭಾಗದ ರಾಷ್ಟ್ರೀಯ ಮಾಹಿತಿ ಕೇಂದ್ರವು ವಾಟ್ಸಾಪ್​ ಮಾದರಿಯಲ್ಲೇ ಕಾರ್ಯ ನಿರ್ವಹಿಸುವ ಈ ಹೊಸ ವೇದಿಕೆಯನ್ನು ಆರಂಭಿಸಿದೆ. ಮೊಬೈಲ್​ ಸಂಖ್ಯೆ ಅಥವಾ ಇಮೇಲ್​ ಐಡಿ ಸಹಾಯದಿಂದ ಎಲ್ಲಾ ರೀತಿಯ ಸಂವಹನ ಕಾರ್ಯಕ್ಕೆ ವೇದಿಕೆಯಾಗಿ ಬಳಕೆ ಮಾಡಬಹುದಾಗಿದೆ. ಈ ಸಂದೇಸ್​ ಅಪ್ಲಿಕೇಶನ್​ನ್ನು ಪ್ರಸ್ತುತ ಸರ್ಕಾರಿ ನೌಕರರು ಹಾಗೂ ಸರ್ಕಾರದೊಂದಿಗೆ ಸಂಪರ್ಕ ಹೊಂದಿರುವ ಏಜನ್ಸಿಗಳಲ್ಲಿ ಬಳಕೆ ಮಾಡಲಾಗುತ್ತಿದೆ.

ಸಂದೇಸ್​ ಅಪ್ಲಿಕೇಶನ್​​ ಸುರಕ್ಷಿತ, ಓಪನ್​ ಸೋರ್ಸ್ ಆಧಾರಿತ ವೇದಿಕೆಯಾಗಿದೆ. ಇದು ಸರ್ಕಾರಿ ಸ್ವಾಮ್ಯದ ವೇದಿಕೆಯಾಗಿದ್ದು ಸಂಪೂರ್ಣ ನಿಯಂತ್ರಣವು ಕೇಂದ್ರದ ಕೈಯಲ್ಲಿ ಇರಲಿದೆ. ಈ ಅಪ್ಲಿಕೇಶನ್​ ಮೂಲಕ ಸಂದೇಶ ಕಳುಹಿಸುವಿಕೆ, ಫೈಲ್​​ ಹಾಗೂ ಫೋಟೋ, ವಿಡಿಯೋಗಳ ಹಂಚಿಕೆ ಮತ್ತು ಆಡಿಯೋ-ವಿಡಿಯೋ ಕರೆ ಮಾಡಬಹುದಾಗಿದೆ. ಗೂಗಲ್​ ಪ್ಲೇ ಸ್ಟೋರ್​ ಹಾಗೂ ಆಯಪ್​ ಸ್ಟೋರ್​ನಲ್ಲಿ ಈ ಅಪ್ಲಿಕೇಶನ್​ ಲಭ್ಯವಿದೆ ಎಂದು ಚಂದ್ರಶೇಖರ್​​ ಹೇಳಿದ್ದಾರೆ.

ಭಾರತೀಯ ಅಪ್ಲಿಕೇಶನ್​ ಹಾಗೂ ಸಾಫ್ಟ್​ವೇರ್​ಗಳ ಬಳಕೆಯನ್ನು ಉತ್ತೇಜಿಸುವ ಸರ್ಕಾರದ ಉಪಕ್ರಮದ ಭಾಗವಾಗಿ ಈ ಸಂದೇಸ್​ ಅಪ್ಲಿಕೇಶನ್​ ಅಭಿವೃದ್ಧಿ ಮಾಡಲಾಗಿದೆ. ಕಳೆದ ಅನೇಕ ತಿಂಗಳಿನಿಂದ ಖಾಸಗಿ ಮಾಹಿತಿ ಸೋರಿಕೆ ವಿಚಾರದಲ್ಲಿ ವಾಟ್ಸಾಪ್​ ಹಾಗೂ ಕೇಂದ್ರ ಸರ್ಕಾರದ ನಡುವೆ ಭಿನ್ನಾಭಿಪ್ರಾಯ ಮೂಡಿರುವ ನಡುವೆಯೇ ಕೇಂದ್ರ ಸರ್ಕಾರ ಸಂದೇಸ್​ ಅಪ್ಲಿಕೇಶನ್​ ಮೂಲಕ ಮೆಸೆಜಿಂಗ್​ ಅಪ್ಲಿಕೇಶನ್​ಗಳಿಗೆ ಸೆಡ್ಡು ಹೊಡೆಯಲು ಮುಂದಾಗಿದೆ.

Spread the love
  • Related Posts

    ವೈದ್ಯಕೀಯ ವಿದ್ಯಾರ್ಥಿಗಳ ಕನಸು ನನಸಾಗಿಸುವ ‘ಎಕ್ಸೆಲ್ ನೀಟ್ ಅಕಾಡೆಮಿ’ ವೈದ್ಯರಾಗಲು ವಿಶ್ವಾಸದ ಆಯ್ಕೆ – ಎಕ್ಸೆಲ್ ಗುರುವಾಯನಕೆರೆ

    ಗುರುವಾಯನಕೆರೆಯಲ್ಲಿ ನೀಟ್ ತರಬೇತಿಗೆ ಹೊಸ ಅಧ್ಯಾಯ – ಗುಣಮಟ್ಟದ ಶಿಕ್ಷಣ, ಅನುಭವಿ ಶಿಕ್ಷಕರ ಮಾರ್ಗದರ್ಶನ ಹಾಗೂ ಅತ್ಯುತ್ತಮ ಫಲಿತಾಂಶಗಳಿಂದ ವಿದ್ಯಾರ್ಥಿಗಳ ವಿಶ್ವಾಸದ ಕೇಂದ್ರ ಎಕ್ಸೆಲ್ ಗುರುವಾಯನಕೆರೆ: ವೈದ್ಯಕೀಯ ಕ್ಷೇತ್ರದಲ್ಲಿ ಸಾಧನೆ ಮಾಡುವ ಕನಸು ಹೊಂದಿರುವ ವಿದ್ಯಾರ್ಥಿಗಳಿಗೆ ಉನ್ನತ ಮಟ್ಟದ ನೀಟ್ ತರಬೇತಿ…

    Spread the love

    ಪುತ್ತೂರು: ರಸ್ತೆ ಕಾಮಗಾರಿ ನಡುವೆ ಮಣ್ಣಿನಲ್ಲಿ ಹೂತು ಹೋದ ಕೆ.ಎಸ್‌.ಆರ್‌.ಟಿ.ಸಿ ಸ್ಲೀಪರ್ ಕೋಚ್ ಬಸ್; ರಸ್ತೆ ಸುರಕ್ಷತಾ ಕ್ರಮಗಳ ಕೊರತೆಗೆ ಸ್ಥಳೀಯರ ಆಕ್ರೋಶ!

    ಪುತ್ತೂರು : ಪುತ್ತೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಸ್ಲೀಪ‌ರ್ ಬಸ್‌ ರಸ್ತೆ ಬದಿಯ ಮಣ್ಣಿನಲ್ಲಿ ಹೂತು ಹೋಗಿರುವ ಘಟನೆ ಆ.11ರ ರಾತ್ರಿ ಪುತ್ತೂರು-ಉಪ್ಪಿನಂಗಡಿ ರಸ್ತೆಯ ಸೇಡಿಯಾಪು ಬಳಿ ನಡೆದಿದೆ. ಪುತ್ತೂರು ಬಸ್ ನಿಲ್ದಾಣದಿಂದ ಬೆಂಗಳೂರಿನತ್ತ ತೆರಳುತ್ತಿದ್ದ ಸರಕಾರಿ ಬಸ್, ಸೇಡಿಯಾಪು ಬಳಿ…

    Spread the love

    You Missed

    ವೈದ್ಯಕೀಯ ವಿದ್ಯಾರ್ಥಿಗಳ ಕನಸು ನನಸಾಗಿಸುವ ‘ಎಕ್ಸೆಲ್ ನೀಟ್ ಅಕಾಡೆಮಿ’ ವೈದ್ಯರಾಗಲು ವಿಶ್ವಾಸದ ಆಯ್ಕೆ – ಎಕ್ಸೆಲ್ ಗುರುವಾಯನಕೆರೆ

    • By admin
    • August 11, 2026
    • 9 views
    ವೈದ್ಯಕೀಯ ವಿದ್ಯಾರ್ಥಿಗಳ ಕನಸು ನನಸಾಗಿಸುವ ‘ಎಕ್ಸೆಲ್ ನೀಟ್ ಅಕಾಡೆಮಿ’ ವೈದ್ಯರಾಗಲು ವಿಶ್ವಾಸದ ಆಯ್ಕೆ – ಎಕ್ಸೆಲ್  ಗುರುವಾಯನಕೆರೆ

    ಪುತ್ತೂರು: ರಸ್ತೆ ಕಾಮಗಾರಿ ನಡುವೆ ಮಣ್ಣಿನಲ್ಲಿ ಹೂತು ಹೋದ ಕೆ.ಎಸ್‌.ಆರ್‌.ಟಿ.ಸಿ ಸ್ಲೀಪರ್ ಕೋಚ್ ಬಸ್; ರಸ್ತೆ ಸುರಕ್ಷತಾ ಕ್ರಮಗಳ ಕೊರತೆಗೆ ಸ್ಥಳೀಯರ ಆಕ್ರೋಶ!

    • By admin
    • August 11, 2026
    • 9 views
    ಪುತ್ತೂರು: ರಸ್ತೆ ಕಾಮಗಾರಿ ನಡುವೆ ಮಣ್ಣಿನಲ್ಲಿ ಹೂತು ಹೋದ ಕೆ.ಎಸ್‌.ಆರ್‌.ಟಿ.ಸಿ ಸ್ಲೀಪರ್ ಕೋಚ್ ಬಸ್; ರಸ್ತೆ ಸುರಕ್ಷತಾ ಕ್ರಮಗಳ ಕೊರತೆಗೆ ಸ್ಥಳೀಯರ ಆಕ್ರೋಶ!

    ಬೆಳ್ತಂಗಡಿ: ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನಕ್ಕೆ ಯುವ ಕಾಂಗ್ರೆಸ್ ಚಾಲನೆ

    • By admin
    • August 10, 2026
    • 6 views
    ಬೆಳ್ತಂಗಡಿ: ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನಕ್ಕೆ ಯುವ ಕಾಂಗ್ರೆಸ್ ಚಾಲನೆ

    ಚಾರ್ಮಾಡಿ ಘಾಟಿಯಲ್ಲಿ ನಿರಂತರವಾಗಿ ಕಾಣಿಸಿಕೊಳ್ಳುತ್ತಿರುವ ಏಕದಂತ

    • By admin
    • August 10, 2026
    • 11 views
    ಚಾರ್ಮಾಡಿ ಘಾಟಿಯಲ್ಲಿ ನಿರಂತರವಾಗಿ ಕಾಣಿಸಿಕೊಳ್ಳುತ್ತಿರುವ ಏಕದಂತ

    ಪಶ್ಚಿಮ ಘಟ್ಟದ ಪ್ರಕೃತಿ ಮಡಿಲಿನ ‘ನೇತ್ರಾವತಿ ಹೋಂ ಸ್ಟೇ’ – ಪ್ರವಾಸಿಗರಿಗಾಗಿ ಪರಿಪೂರ್ಣ ತಾಣ

    • By admin
    • August 9, 2026
    • 11 views

    ಬೆಳ್ತಂಗಡಿ: ಅನಾರೋಗ್ಯದಿಂದ ಬಳಲುತ್ತಿರುವ 2 ತಿಂಗಳ ಮಗುವಿನ ಚಿಕಿತ್ಸೆಗೆ ಸಹೃದಯಿಗಳ ತುರ್ತು ನೆರವಿನ ಹಸ್ತ ಅಗತ್ಯ

    • By admin
    • August 8, 2026
    • 14 views
    ಬೆಳ್ತಂಗಡಿ: ಅನಾರೋಗ್ಯದಿಂದ ಬಳಲುತ್ತಿರುವ 2 ತಿಂಗಳ ಮಗುವಿನ ಚಿಕಿತ್ಸೆಗೆ ಸಹೃದಯಿಗಳ ತುರ್ತು ನೆರವಿನ ಹಸ್ತ ಅಗತ್ಯ