‘ವಾಟ್ಸಾಪ್​’ ಜನಪ್ರಿಯತೆಗೆ ಠಕ್ಕರ್​ ನೀಡಲು ಬಂದಿದೆ ಸ್ವದೇಶಿ ನಿರ್ಮಿತ ‘ಸಂದೇಸ್​’ ಆಪ್​..!

ಭಾರತ ಸರ್ಕಾರವು ಸಂದೇಸ್​ ಎಂಬ ತ್ವರಿತ ಮೆಸೇಜಿಂಗ್​ ಪ್ಲಾಟ್​ಫಾರಂನ್ನು ಆರಂಭಿಸಿದೆ ಎಂದು ಕೇಂದ್ರದ ಎಲೆಕ್ಟ್ರಾನಿಕ್ಸ್​ ಹಾಗೂ ಐಟಿ ರಾಜ್ಯ ಸಚಿವ ರಾಜೀವ್​ ಚಂದ್ರಶೇಖರ್​​​ ಲೋಕಸಭೆಗೆ ಲಿಖಿತ ರೂಪದಲ್ಲಿ ಮಾಹಿತಿ ನೀಡಿದ್ದಾರೆ.

ಫೇಸ್​ಬುಕ್​ ಒಡೆತನದ ವಾಟ್ಸಾಪ್​ ಸೇರಿದಂತೆ ವಿವಿಧ ಖಾಸಗಿ ಮೆಸೆಜಿಂಗ್​ ಅಪ್ಲಿಕೇಶನ್​ಗಳಿಗೆ ಸೆಡ್ಡು ಹೊಡೆಯುವ ಸಲುವಾಗಿ ಕೇಂದ್ರ ಸರ್ಕಾರ ಈ ಪರ್ಯಾಯ ಮಾರ್ಗವನ್ನು ಹುಡುಕಿದೆ.

ಕೇಂದ್ರ ಸರ್ಕಾರದ ಮಾಹಿತಿ ತಂತ್ರಜ್ಞಾನ ವಿಭಾಗದ ರಾಷ್ಟ್ರೀಯ ಮಾಹಿತಿ ಕೇಂದ್ರವು ವಾಟ್ಸಾಪ್​ ಮಾದರಿಯಲ್ಲೇ ಕಾರ್ಯ ನಿರ್ವಹಿಸುವ ಈ ಹೊಸ ವೇದಿಕೆಯನ್ನು ಆರಂಭಿಸಿದೆ. ಮೊಬೈಲ್​ ಸಂಖ್ಯೆ ಅಥವಾ ಇಮೇಲ್​ ಐಡಿ ಸಹಾಯದಿಂದ ಎಲ್ಲಾ ರೀತಿಯ ಸಂವಹನ ಕಾರ್ಯಕ್ಕೆ ವೇದಿಕೆಯಾಗಿ ಬಳಕೆ ಮಾಡಬಹುದಾಗಿದೆ. ಈ ಸಂದೇಸ್​ ಅಪ್ಲಿಕೇಶನ್​ನ್ನು ಪ್ರಸ್ತುತ ಸರ್ಕಾರಿ ನೌಕರರು ಹಾಗೂ ಸರ್ಕಾರದೊಂದಿಗೆ ಸಂಪರ್ಕ ಹೊಂದಿರುವ ಏಜನ್ಸಿಗಳಲ್ಲಿ ಬಳಕೆ ಮಾಡಲಾಗುತ್ತಿದೆ.

ಸಂದೇಸ್​ ಅಪ್ಲಿಕೇಶನ್​​ ಸುರಕ್ಷಿತ, ಓಪನ್​ ಸೋರ್ಸ್ ಆಧಾರಿತ ವೇದಿಕೆಯಾಗಿದೆ. ಇದು ಸರ್ಕಾರಿ ಸ್ವಾಮ್ಯದ ವೇದಿಕೆಯಾಗಿದ್ದು ಸಂಪೂರ್ಣ ನಿಯಂತ್ರಣವು ಕೇಂದ್ರದ ಕೈಯಲ್ಲಿ ಇರಲಿದೆ. ಈ ಅಪ್ಲಿಕೇಶನ್​ ಮೂಲಕ ಸಂದೇಶ ಕಳುಹಿಸುವಿಕೆ, ಫೈಲ್​​ ಹಾಗೂ ಫೋಟೋ, ವಿಡಿಯೋಗಳ ಹಂಚಿಕೆ ಮತ್ತು ಆಡಿಯೋ-ವಿಡಿಯೋ ಕರೆ ಮಾಡಬಹುದಾಗಿದೆ. ಗೂಗಲ್​ ಪ್ಲೇ ಸ್ಟೋರ್​ ಹಾಗೂ ಆಯಪ್​ ಸ್ಟೋರ್​ನಲ್ಲಿ ಈ ಅಪ್ಲಿಕೇಶನ್​ ಲಭ್ಯವಿದೆ ಎಂದು ಚಂದ್ರಶೇಖರ್​​ ಹೇಳಿದ್ದಾರೆ.

ಭಾರತೀಯ ಅಪ್ಲಿಕೇಶನ್​ ಹಾಗೂ ಸಾಫ್ಟ್​ವೇರ್​ಗಳ ಬಳಕೆಯನ್ನು ಉತ್ತೇಜಿಸುವ ಸರ್ಕಾರದ ಉಪಕ್ರಮದ ಭಾಗವಾಗಿ ಈ ಸಂದೇಸ್​ ಅಪ್ಲಿಕೇಶನ್​ ಅಭಿವೃದ್ಧಿ ಮಾಡಲಾಗಿದೆ. ಕಳೆದ ಅನೇಕ ತಿಂಗಳಿನಿಂದ ಖಾಸಗಿ ಮಾಹಿತಿ ಸೋರಿಕೆ ವಿಚಾರದಲ್ಲಿ ವಾಟ್ಸಾಪ್​ ಹಾಗೂ ಕೇಂದ್ರ ಸರ್ಕಾರದ ನಡುವೆ ಭಿನ್ನಾಭಿಪ್ರಾಯ ಮೂಡಿರುವ ನಡುವೆಯೇ ಕೇಂದ್ರ ಸರ್ಕಾರ ಸಂದೇಸ್​ ಅಪ್ಲಿಕೇಶನ್​ ಮೂಲಕ ಮೆಸೆಜಿಂಗ್​ ಅಪ್ಲಿಕೇಶನ್​ಗಳಿಗೆ ಸೆಡ್ಡು ಹೊಡೆಯಲು ಮುಂದಾಗಿದೆ.

Spread the love
  • Related Posts

    ಬೆಳ್ತಂಗಡಿ : ಅತಿ ಹಿಂದುಳಿದ ಮಠಾಧೀಶರ ಮಹಾಸಭಾವತಿಯಿಂದ ಡಾ.ಡಿ. ವೀರೇಂದ್ರ ಹೆಗ್ಗಡೆಯವರ ಭೇಟಿ

    ಬೆಳ್ತಂಗಡಿ: ಇತ್ತೀಚಿನ ದಿನಗಳಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ವಿರುದ್ಧ ಕೇಳಿಬರುತ್ತಿರುವ ಆರೋಪಗಳ ಹಿನ್ನೆಲೆಯಲ್ಲಿ ಅತಿ ಹಿಂದುಳಿದ ಮಠಾಧೀಶರ ಮಹಾಸಭೆ (ರಿ.) ಕೋರ್ ಕಮಿಟಿಯ ಸದಸ್ಯರಾದ ಸ್ವಾಮೀಜಿಗಳು ಧರ್ಮಸ್ಥಳಕ್ಕೆ ಜು.10 ರಂದು ಭೇಟಿ ನೀಡಿ,…

    Spread the love

    ಬೆಳ್ತಂಗಡಿ ತಹಶೀಲ್ದಾರ್ ಆಗಿ ಎಸ್.ಎನ್.ನರಗುಂದ ಅಧಿಕಾರ ಸ್ವೀಕಾರ

    ಬೆಳ್ತಂಗಡಿ : ತಹಶೀಲ್ದಾರ್ ಪೃಥ್ವಿ ಸಾನಿಕಂ ವರ್ಗಾವಣೆಯಾದ ಜಾಗಕ್ಕೆ ಹೊಸ ತಹಶೀಲ್ದಾರ್ ಆಗಿ ಎಸ್.ಎನ್.ನರಗುಂದ ಅವರನ್ನು ಸರಕಾರ ನೇಮಕ ಮಾಡಿ ಜು.2 ರಂದು ಆದೇಶ ಹೊರಡಿಸಿತ್ತು.‌ ಇದೀಗ ಮೈಸೂರು ಜಿಲ್ಲೆಯ ಅಭಿವೃದ್ಧಿ ಪ್ರಾಧಿಕಾರದ ವಿಶೇಷ ಗ್ರೇಡ್-1 ತಹಶೀಲ್ದಾರ್ ಆಗಿರುವ ಎಸ್.ಎನ್.ನರಗುಂದ ಅವರು…

    Spread the love

    You Missed

    ಮಾರುವೇಷ ಯಾಕೆ ಸ್ವಾಮಿ.. ಇದು ಚಿಲ್ಲರೆ ಕಾಲವಲ್ಲ, ಕ್ಯೂಆರ್ ಕೋಡ್ ಕಾಲ: ಸಚಿವ ಸುರೇಶ್‌ಗೆ ಶಾಸಕ ಸುರೇಶ್ ಕುಮಾರ್ ಪಾಠ

    • By admin
    • July 13, 2026
    • 5 views
    ಮಾರುವೇಷ ಯಾಕೆ ಸ್ವಾಮಿ.. ಇದು ಚಿಲ್ಲರೆ ಕಾಲವಲ್ಲ, ಕ್ಯೂಆರ್ ಕೋಡ್ ಕಾಲ: ಸಚಿವ ಸುರೇಶ್‌ಗೆ ಶಾಸಕ ಸುರೇಶ್ ಕುಮಾರ್ ಪಾಠ

    ನಾರಾವಿ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆ ಹಾಗೂ ಹಳೆಕೋಟೆ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯಕ್ಕೆ ತಲಾ ರೂ.2 ಕೋಟಿ; ಸರ್ಕಾರಕ್ಕೆ ಶಾಸಕ ಹರೀಶ್ ಪೂಂಜ ಕೃತಜ್ಞತೆ.

    • By admin
    • July 12, 2026
    • 9 views
    ನಾರಾವಿ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆ ಹಾಗೂ ಹಳೆಕೋಟೆ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯಕ್ಕೆ ತಲಾ ರೂ.2 ಕೋಟಿ; ಸರ್ಕಾರಕ್ಕೆ ಶಾಸಕ ಹರೀಶ್ ಪೂಂಜ ಕೃತಜ್ಞತೆ.

    ಬಳಂಜ- ಸುದೆಗುಂಡಿ ಸಂಪರ್ಕ ರಸ್ತೆ ಕಾಂಕ್ರೀಟಿಕರಣ: ಶಾಸಕ ಹರೀಶ್ ಪೂಂಜಾರವರಿಂದ ಶಿಲಾನ್ಯಾಸ:

    • By admin
    • July 12, 2026
    • 19 views
    ಬಳಂಜ- ಸುದೆಗುಂಡಿ ಸಂಪರ್ಕ ರಸ್ತೆ ಕಾಂಕ್ರೀಟಿಕರಣ: ಶಾಸಕ ಹರೀಶ್ ಪೂಂಜಾರವರಿಂದ ಶಿಲಾನ್ಯಾಸ:

    ಎತ್ತಿನಹೊಳೆ ಯೋಜನೆಯ ಪೈಪ್‌ಲೈನ್ ಸ್ಫೋಟಗೊಂಡು ನೂರು ಅಡಿ ಎತ್ತರಕ್ಕೆ ಚಿಮ್ಮಿದ ನೀರು

    • By admin
    • July 12, 2026
    • 38 views
    ಎತ್ತಿನಹೊಳೆ ಯೋಜನೆಯ ಪೈಪ್‌ಲೈನ್ ಸ್ಫೋಟಗೊಂಡು ನೂರು ಅಡಿ ಎತ್ತರಕ್ಕೆ ಚಿಮ್ಮಿದ ನೀರು

    ವಿದ್ಯಾರ್ಥಿಗಳಿಗೆ ನೇಜಿ ನಾಟಿ ಪ್ರಾತ್ಯಕ್ಷಿಕೆ: ಕೃಷಿ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ

    • By admin
    • July 12, 2026
    • 87 views
    ವಿದ್ಯಾರ್ಥಿಗಳಿಗೆ ನೇಜಿ ನಾಟಿ ಪ್ರಾತ್ಯಕ್ಷಿಕೆ: ಕೃಷಿ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ

    ಗಾನ ನಿಲ್ಲಿಸಿದ ಗಾನಕೋಗಿಲೆ ಎಸ್. ಜಾನಕಿ

    • By admin
    • July 11, 2026
    • 36 views
    ಗಾನ ನಿಲ್ಲಿಸಿದ ಗಾನಕೋಗಿಲೆ ಎಸ್. ಜಾನಕಿ