‘ವಾಟ್ಸಾಪ್​’ ಜನಪ್ರಿಯತೆಗೆ ಠಕ್ಕರ್​ ನೀಡಲು ಬಂದಿದೆ ಸ್ವದೇಶಿ ನಿರ್ಮಿತ ‘ಸಂದೇಸ್​’ ಆಪ್​..!

ಭಾರತ ಸರ್ಕಾರವು ಸಂದೇಸ್​ ಎಂಬ ತ್ವರಿತ ಮೆಸೇಜಿಂಗ್​ ಪ್ಲಾಟ್​ಫಾರಂನ್ನು ಆರಂಭಿಸಿದೆ ಎಂದು ಕೇಂದ್ರದ ಎಲೆಕ್ಟ್ರಾನಿಕ್ಸ್​ ಹಾಗೂ ಐಟಿ ರಾಜ್ಯ ಸಚಿವ ರಾಜೀವ್​ ಚಂದ್ರಶೇಖರ್​​​ ಲೋಕಸಭೆಗೆ ಲಿಖಿತ ರೂಪದಲ್ಲಿ ಮಾಹಿತಿ ನೀಡಿದ್ದಾರೆ.

ಫೇಸ್​ಬುಕ್​ ಒಡೆತನದ ವಾಟ್ಸಾಪ್​ ಸೇರಿದಂತೆ ವಿವಿಧ ಖಾಸಗಿ ಮೆಸೆಜಿಂಗ್​ ಅಪ್ಲಿಕೇಶನ್​ಗಳಿಗೆ ಸೆಡ್ಡು ಹೊಡೆಯುವ ಸಲುವಾಗಿ ಕೇಂದ್ರ ಸರ್ಕಾರ ಈ ಪರ್ಯಾಯ ಮಾರ್ಗವನ್ನು ಹುಡುಕಿದೆ.

ಕೇಂದ್ರ ಸರ್ಕಾರದ ಮಾಹಿತಿ ತಂತ್ರಜ್ಞಾನ ವಿಭಾಗದ ರಾಷ್ಟ್ರೀಯ ಮಾಹಿತಿ ಕೇಂದ್ರವು ವಾಟ್ಸಾಪ್​ ಮಾದರಿಯಲ್ಲೇ ಕಾರ್ಯ ನಿರ್ವಹಿಸುವ ಈ ಹೊಸ ವೇದಿಕೆಯನ್ನು ಆರಂಭಿಸಿದೆ. ಮೊಬೈಲ್​ ಸಂಖ್ಯೆ ಅಥವಾ ಇಮೇಲ್​ ಐಡಿ ಸಹಾಯದಿಂದ ಎಲ್ಲಾ ರೀತಿಯ ಸಂವಹನ ಕಾರ್ಯಕ್ಕೆ ವೇದಿಕೆಯಾಗಿ ಬಳಕೆ ಮಾಡಬಹುದಾಗಿದೆ. ಈ ಸಂದೇಸ್​ ಅಪ್ಲಿಕೇಶನ್​ನ್ನು ಪ್ರಸ್ತುತ ಸರ್ಕಾರಿ ನೌಕರರು ಹಾಗೂ ಸರ್ಕಾರದೊಂದಿಗೆ ಸಂಪರ್ಕ ಹೊಂದಿರುವ ಏಜನ್ಸಿಗಳಲ್ಲಿ ಬಳಕೆ ಮಾಡಲಾಗುತ್ತಿದೆ.

ಸಂದೇಸ್​ ಅಪ್ಲಿಕೇಶನ್​​ ಸುರಕ್ಷಿತ, ಓಪನ್​ ಸೋರ್ಸ್ ಆಧಾರಿತ ವೇದಿಕೆಯಾಗಿದೆ. ಇದು ಸರ್ಕಾರಿ ಸ್ವಾಮ್ಯದ ವೇದಿಕೆಯಾಗಿದ್ದು ಸಂಪೂರ್ಣ ನಿಯಂತ್ರಣವು ಕೇಂದ್ರದ ಕೈಯಲ್ಲಿ ಇರಲಿದೆ. ಈ ಅಪ್ಲಿಕೇಶನ್​ ಮೂಲಕ ಸಂದೇಶ ಕಳುಹಿಸುವಿಕೆ, ಫೈಲ್​​ ಹಾಗೂ ಫೋಟೋ, ವಿಡಿಯೋಗಳ ಹಂಚಿಕೆ ಮತ್ತು ಆಡಿಯೋ-ವಿಡಿಯೋ ಕರೆ ಮಾಡಬಹುದಾಗಿದೆ. ಗೂಗಲ್​ ಪ್ಲೇ ಸ್ಟೋರ್​ ಹಾಗೂ ಆಯಪ್​ ಸ್ಟೋರ್​ನಲ್ಲಿ ಈ ಅಪ್ಲಿಕೇಶನ್​ ಲಭ್ಯವಿದೆ ಎಂದು ಚಂದ್ರಶೇಖರ್​​ ಹೇಳಿದ್ದಾರೆ.

ಭಾರತೀಯ ಅಪ್ಲಿಕೇಶನ್​ ಹಾಗೂ ಸಾಫ್ಟ್​ವೇರ್​ಗಳ ಬಳಕೆಯನ್ನು ಉತ್ತೇಜಿಸುವ ಸರ್ಕಾರದ ಉಪಕ್ರಮದ ಭಾಗವಾಗಿ ಈ ಸಂದೇಸ್​ ಅಪ್ಲಿಕೇಶನ್​ ಅಭಿವೃದ್ಧಿ ಮಾಡಲಾಗಿದೆ. ಕಳೆದ ಅನೇಕ ತಿಂಗಳಿನಿಂದ ಖಾಸಗಿ ಮಾಹಿತಿ ಸೋರಿಕೆ ವಿಚಾರದಲ್ಲಿ ವಾಟ್ಸಾಪ್​ ಹಾಗೂ ಕೇಂದ್ರ ಸರ್ಕಾರದ ನಡುವೆ ಭಿನ್ನಾಭಿಪ್ರಾಯ ಮೂಡಿರುವ ನಡುವೆಯೇ ಕೇಂದ್ರ ಸರ್ಕಾರ ಸಂದೇಸ್​ ಅಪ್ಲಿಕೇಶನ್​ ಮೂಲಕ ಮೆಸೆಜಿಂಗ್​ ಅಪ್ಲಿಕೇಶನ್​ಗಳಿಗೆ ಸೆಡ್ಡು ಹೊಡೆಯಲು ಮುಂದಾಗಿದೆ.

Spread the love
  • Related Posts

    ಶೈಕ್ಷಣಿಕ ಕ್ಷೇತ್ರದಲ್ಲಿ ವಿಶೇಷ ಕ್ರಾಂತಿ ಮಾಡುತ್ತಿರುವ ಎಕ್ಸೆಲ್ ಶಿಕ್ಷಣ ಸಂಸ್ಥೆಯಿಂದ ಉಚಿತ “ಎಕ್ಸೆಲ್ ಕನೆಕ್ಟ್ ಕ್ಲಾಸ್”

    ಗುರುವಾಯನಕೆರೆ: ಶೈಕ್ಷಣಿಕ ಕ್ಷೇತ್ರದಲ್ಲಿ ವಿಶೇಷ ಕ್ರಾಂತಿ ಮಾಡುತ್ತಿರುವ ಎಕ್ಸೆಲ್ ಶಿಕ್ಷಣ ಸಂಸ್ಥೆಯಿಂದ ಮತ್ತೊಂದು ಮಹತ್ತರವಾದ ಹೆಜ್ಜೆಯನ್ನಿಟ್ಟಿದೆ. ಈ ಬಾರಿಯ ಹತ್ತನೇ ತರಗತಿ ವಾರ್ಷಿಕ ಪರೀಕ್ಷೆ ಬರೆದು ಮುಗಿಸಿದ ವಿದ್ಯಾರ್ಥಿಗಳಿಗೆ ಗುರುವಾಯನಕೆರೆಯ ಎಕ್ಸೆಲ್ ಪದವಿ ಪೂರ್ವ ಕಾಲೇಜು ಅಪೂರ್ವ ಅವಕಾಶವೊಂದನ್ನು ಕಲ್ಪಿಸುತ್ತಿದೆ. ಪಿಯುಸಿಯಲ್ಲಿ…

    Spread the love

    ಗುರುವಾಯನಕೆರೆ ಎಕ್ಸೆಲ್ ಟೆಕ್ನೋ ಸ್ಕೂಲ್‌ಗೆ ಅಗ್ನಿಶಾಮಕ ಇಲಾಖೆಯ ಅನುಮತಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದ್ಯಾಸಂಸ್ಥೆಯ ಮುಖ್ಯಸ್ಥರ ಸ್ಪಷ್ಟನೆ

    ಬೆಳ್ತಂಗಡಿ: ಗುರುವಾಯನಕೆರೆಯಲ್ಲಿರುವ ಎಕ್ಸೆಲ್ ಟೆಕ್ನೋ ಸ್ಕೂಲ್ಗೆ ಅಗ್ನಿ ಶಾಮಕ ಹಾಗೂ ತುರ್ತು ಸೇವಾ ಇಲಾಖೆಯಿಂದ ಅಗತ್ಯ ಅನುಮತಿ ದೊರೆತಿರುವ ಬಗ್ಗೆ ಆಡಳಿತ ಮಂಡಳಿ ಸ್ಪಷ್ಟೀಕರಣ ನೀಡಿದೆ. ಇತ್ತೀಚೆಗೆ ಶಾಲೆಯ ಅನುಮತಿ ಕುರಿತಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಪಷ್ಟನೆ ನೀಡಲು ಸಂಸ್ಥೆಯ ಆಡಳಿತ ಮಂಡಳಿ…

    Spread the love

    You Missed

    ಶೈಕ್ಷಣಿಕ ಕ್ಷೇತ್ರದಲ್ಲಿ ವಿಶೇಷ ಕ್ರಾಂತಿ ಮಾಡುತ್ತಿರುವ ಎಕ್ಸೆಲ್ ಶಿಕ್ಷಣ ಸಂಸ್ಥೆಯಿಂದ ಉಚಿತ “ಎಕ್ಸೆಲ್ ಕನೆಕ್ಟ್ ಕ್ಲಾಸ್”

    • By admin
    • March 9, 2026
    • 15 views
    ಶೈಕ್ಷಣಿಕ ಕ್ಷೇತ್ರದಲ್ಲಿ ವಿಶೇಷ ಕ್ರಾಂತಿ ಮಾಡುತ್ತಿರುವ ಎಕ್ಸೆಲ್ ಶಿಕ್ಷಣ ಸಂಸ್ಥೆಯಿಂದ ಉಚಿತ “ಎಕ್ಸೆಲ್ ಕನೆಕ್ಟ್ ಕ್ಲಾಸ್”

    ನ್ಯೂಜಿಲ್ಯಾಂಡ್ ವಿರುದ್ಧ ಭಾರತಕ್ಕೆ ಐತಿಹಾಸಿಕ ಜಯ – ಟಿ20 ವಿಶ್ವಕಪ್ ಕಿರೀಟ ಭಾರತಕ್ಕೆ

    • By admin
    • March 8, 2026
    • 21 views
    ನ್ಯೂಜಿಲ್ಯಾಂಡ್ ವಿರುದ್ಧ ಭಾರತಕ್ಕೆ ಐತಿಹಾಸಿಕ ಜಯ – ಟಿ20 ವಿಶ್ವಕಪ್ ಕಿರೀಟ ಭಾರತಕ್ಕೆ

    ಗುರುವಾಯನಕೆರೆ ಎಕ್ಸೆಲ್ ಟೆಕ್ನೋ ಸ್ಕೂಲ್‌ಗೆ ಅಗ್ನಿಶಾಮಕ ಇಲಾಖೆಯ ಅನುಮತಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದ್ಯಾಸಂಸ್ಥೆಯ ಮುಖ್ಯಸ್ಥರ ಸ್ಪಷ್ಟನೆ

    • By admin
    • March 7, 2026
    • 50 views
    ಗುರುವಾಯನಕೆರೆ ಎಕ್ಸೆಲ್ ಟೆಕ್ನೋ ಸ್ಕೂಲ್‌ಗೆ ಅಗ್ನಿಶಾಮಕ ಇಲಾಖೆಯ ಅನುಮತಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದ್ಯಾಸಂಸ್ಥೆಯ ಮುಖ್ಯಸ್ಥರ ಸ್ಪಷ್ಟನೆ

    ಮರೋಡಿ ಗ್ರಾಮದ ಮಾವಿನಕಟ್ಟೆ ಎಂಬಲ್ಲಿ ನಿರ್ಮಾಣಗೊಳ್ಳಲಿರುವ ಅಂಗನವಾಡಿ ಕೇಂದ್ರದ ನೂತನ ಕಟ್ಟಡ ಕಾಮಗಾರಿಗೆ ಶಿಲಾನ್ಯಾಸ

    • By admin
    • March 7, 2026
    • 79 views
    ಮರೋಡಿ ಗ್ರಾಮದ ಮಾವಿನಕಟ್ಟೆ ಎಂಬಲ್ಲಿ ನಿರ್ಮಾಣಗೊಳ್ಳಲಿರುವ ಅಂಗನವಾಡಿ ಕೇಂದ್ರದ ನೂತನ ಕಟ್ಟಡ ಕಾಮಗಾರಿಗೆ  ಶಿಲಾನ್ಯಾಸ

    ದಕ್ಷಿಣಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದಲ್ಲಿ 12ನೂತನ ಪೋಲೀಸ್ ಠಾಣೆಗಳ ಸ್ಥಾಪನೆಗೆ ಸರ್ಕಾರದ ನಿರ್ಧಾರ

    • By admin
    • March 6, 2026
    • 35 views
    ದಕ್ಷಿಣಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದಲ್ಲಿ 12ನೂತನ ಪೋಲೀಸ್ ಠಾಣೆಗಳ ಸ್ಥಾಪನೆಗೆ ಸರ್ಕಾರದ ನಿರ್ಧಾರ

    ಇಂಗ್ಲೆಂಡ್ ವಿರುದ್ಧ ಗೆದ್ದು ಫೈನಲ್‌ಗೆ ಭಾರತ ಪ್ರವೇಶ

    • By admin
    • March 5, 2026
    • 21 views
    ಇಂಗ್ಲೆಂಡ್ ವಿರುದ್ಧ ಗೆದ್ದು ಫೈನಲ್‌ಗೆ ಭಾರತ ಪ್ರವೇಶ