‘ವಾಟ್ಸಾಪ್​’ ಜನಪ್ರಿಯತೆಗೆ ಠಕ್ಕರ್​ ನೀಡಲು ಬಂದಿದೆ ಸ್ವದೇಶಿ ನಿರ್ಮಿತ ‘ಸಂದೇಸ್​’ ಆಪ್​..!

ಭಾರತ ಸರ್ಕಾರವು ಸಂದೇಸ್​ ಎಂಬ ತ್ವರಿತ ಮೆಸೇಜಿಂಗ್​ ಪ್ಲಾಟ್​ಫಾರಂನ್ನು ಆರಂಭಿಸಿದೆ ಎಂದು ಕೇಂದ್ರದ ಎಲೆಕ್ಟ್ರಾನಿಕ್ಸ್​ ಹಾಗೂ ಐಟಿ ರಾಜ್ಯ ಸಚಿವ ರಾಜೀವ್​ ಚಂದ್ರಶೇಖರ್​​​ ಲೋಕಸಭೆಗೆ ಲಿಖಿತ ರೂಪದಲ್ಲಿ ಮಾಹಿತಿ ನೀಡಿದ್ದಾರೆ.

ಫೇಸ್​ಬುಕ್​ ಒಡೆತನದ ವಾಟ್ಸಾಪ್​ ಸೇರಿದಂತೆ ವಿವಿಧ ಖಾಸಗಿ ಮೆಸೆಜಿಂಗ್​ ಅಪ್ಲಿಕೇಶನ್​ಗಳಿಗೆ ಸೆಡ್ಡು ಹೊಡೆಯುವ ಸಲುವಾಗಿ ಕೇಂದ್ರ ಸರ್ಕಾರ ಈ ಪರ್ಯಾಯ ಮಾರ್ಗವನ್ನು ಹುಡುಕಿದೆ.

ಕೇಂದ್ರ ಸರ್ಕಾರದ ಮಾಹಿತಿ ತಂತ್ರಜ್ಞಾನ ವಿಭಾಗದ ರಾಷ್ಟ್ರೀಯ ಮಾಹಿತಿ ಕೇಂದ್ರವು ವಾಟ್ಸಾಪ್​ ಮಾದರಿಯಲ್ಲೇ ಕಾರ್ಯ ನಿರ್ವಹಿಸುವ ಈ ಹೊಸ ವೇದಿಕೆಯನ್ನು ಆರಂಭಿಸಿದೆ. ಮೊಬೈಲ್​ ಸಂಖ್ಯೆ ಅಥವಾ ಇಮೇಲ್​ ಐಡಿ ಸಹಾಯದಿಂದ ಎಲ್ಲಾ ರೀತಿಯ ಸಂವಹನ ಕಾರ್ಯಕ್ಕೆ ವೇದಿಕೆಯಾಗಿ ಬಳಕೆ ಮಾಡಬಹುದಾಗಿದೆ. ಈ ಸಂದೇಸ್​ ಅಪ್ಲಿಕೇಶನ್​ನ್ನು ಪ್ರಸ್ತುತ ಸರ್ಕಾರಿ ನೌಕರರು ಹಾಗೂ ಸರ್ಕಾರದೊಂದಿಗೆ ಸಂಪರ್ಕ ಹೊಂದಿರುವ ಏಜನ್ಸಿಗಳಲ್ಲಿ ಬಳಕೆ ಮಾಡಲಾಗುತ್ತಿದೆ.

ಸಂದೇಸ್​ ಅಪ್ಲಿಕೇಶನ್​​ ಸುರಕ್ಷಿತ, ಓಪನ್​ ಸೋರ್ಸ್ ಆಧಾರಿತ ವೇದಿಕೆಯಾಗಿದೆ. ಇದು ಸರ್ಕಾರಿ ಸ್ವಾಮ್ಯದ ವೇದಿಕೆಯಾಗಿದ್ದು ಸಂಪೂರ್ಣ ನಿಯಂತ್ರಣವು ಕೇಂದ್ರದ ಕೈಯಲ್ಲಿ ಇರಲಿದೆ. ಈ ಅಪ್ಲಿಕೇಶನ್​ ಮೂಲಕ ಸಂದೇಶ ಕಳುಹಿಸುವಿಕೆ, ಫೈಲ್​​ ಹಾಗೂ ಫೋಟೋ, ವಿಡಿಯೋಗಳ ಹಂಚಿಕೆ ಮತ್ತು ಆಡಿಯೋ-ವಿಡಿಯೋ ಕರೆ ಮಾಡಬಹುದಾಗಿದೆ. ಗೂಗಲ್​ ಪ್ಲೇ ಸ್ಟೋರ್​ ಹಾಗೂ ಆಯಪ್​ ಸ್ಟೋರ್​ನಲ್ಲಿ ಈ ಅಪ್ಲಿಕೇಶನ್​ ಲಭ್ಯವಿದೆ ಎಂದು ಚಂದ್ರಶೇಖರ್​​ ಹೇಳಿದ್ದಾರೆ.

ಭಾರತೀಯ ಅಪ್ಲಿಕೇಶನ್​ ಹಾಗೂ ಸಾಫ್ಟ್​ವೇರ್​ಗಳ ಬಳಕೆಯನ್ನು ಉತ್ತೇಜಿಸುವ ಸರ್ಕಾರದ ಉಪಕ್ರಮದ ಭಾಗವಾಗಿ ಈ ಸಂದೇಸ್​ ಅಪ್ಲಿಕೇಶನ್​ ಅಭಿವೃದ್ಧಿ ಮಾಡಲಾಗಿದೆ. ಕಳೆದ ಅನೇಕ ತಿಂಗಳಿನಿಂದ ಖಾಸಗಿ ಮಾಹಿತಿ ಸೋರಿಕೆ ವಿಚಾರದಲ್ಲಿ ವಾಟ್ಸಾಪ್​ ಹಾಗೂ ಕೇಂದ್ರ ಸರ್ಕಾರದ ನಡುವೆ ಭಿನ್ನಾಭಿಪ್ರಾಯ ಮೂಡಿರುವ ನಡುವೆಯೇ ಕೇಂದ್ರ ಸರ್ಕಾರ ಸಂದೇಸ್​ ಅಪ್ಲಿಕೇಶನ್​ ಮೂಲಕ ಮೆಸೆಜಿಂಗ್​ ಅಪ್ಲಿಕೇಶನ್​ಗಳಿಗೆ ಸೆಡ್ಡು ಹೊಡೆಯಲು ಮುಂದಾಗಿದೆ.

Spread the love
  • Related Posts

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    ಬೆಳ್ತಂಗಡಿ: ತಾಲೂಕಿನ ಬೆಳಾಲು ಗ್ರಾಮದ ಮಿನಂದೇಲು ಬಸ್ ನಿಲ್ದಾಣದ ಸಮೀಪ ಸೆ. 3ರಂದು ರಾತ್ರಿ ವೇಳೆ ರಸ್ತೆಯಲ್ಲಿ ಸಂಚರಿಸುತ್ತಿದ್ದ ಬೈಕ್ ಸವಾರನಿಗೆ ಆನೆ ಪ್ರತ್ಯಕ್ಷವಾಗಿ ಆತಂಕ ಉಂಟುಮಾಡಿದ ಘಟನೆ ವರದಿಯಾಗಿದೆ. ಉಜಿರೆ–ಬೆಳಾಲು–ಬಂದಾರು ಮುಖ್ಯ ರಸ್ತೆಯ ಮಿನಂದೇಲು ಬಸ್ ನಿಲ್ದಾಣ ಹಾಗೂ ಡಿ.ಪಿ.…

    Spread the love

    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    ಬೆಳ್ತಂಗಡಿ: ಧರ್ಮಸ್ಥಳ- ಕೊಕ್ಕಡ ರಸ್ತೆಯ ಧರ್ಮಸ್ಥಳ ಸಮೀಪದ ಕಲ್ಲೇರಿ ಪರಿಸರದ ಪುದುವೆಟ್ಟು ಕ್ರಾಸ್ ಬಳಿ ಗುರುವಾರ ರಾತ್ರಿ ಕಾಡಾನೆಯೊಂದು ಕಾಣಿಸಿಕೊಂಡಿದ್ದು, ಸ್ಥಳೀಯರು ಹಾಗೂ ವಾಹನ ಸವಾರರಲ್ಲಿ ಆತಂಕ ಮೂಡಿಸಿದೆ. ಗುರುವಾರ ರಾತ್ರಿ ಸುಮಾರು 9 ಗಂಟೆಯ ವೇಳೆಗೆ ಕಾಡಾನೆ ಹೆದ್ದಾರಿ ಬದಿಯಲ್ಲಿ…

    Spread the love

    You Missed

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    • By admin
    • September 3, 2026
    • 3 views
    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    • By admin
    • September 3, 2026
    • 3 views
    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    • By admin
    • September 3, 2026
    • 4 views
    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    ಚಿರಂಜೀವಿ ಯುವಕ ಮಂಡಲ ಕಾನರ್ಪದಲ್ಲಿ ಸೆ.6ರಂದು 35ನೇ ವರ್ಷದ ಮೊಸರು ಕುಡಿಕೆ ಅಷ್ಟಮಿ ಉತ್ಸವ ಹಾಗೂ ಕೆಸರುಗದ್ದೆಯಲ್ಲಿ ಗ್ರಾಮೀಣ ಕ್ರೀಡಾಕೂಟ ಆಯೋಜನೆ

    • By admin
    • September 3, 2026
    • 10 views
    ಚಿರಂಜೀವಿ ಯುವಕ ಮಂಡಲ ಕಾನರ್ಪದಲ್ಲಿ ಸೆ.6ರಂದು 35ನೇ ವರ್ಷದ ಮೊಸರು ಕುಡಿಕೆ ಅಷ್ಟಮಿ ಉತ್ಸವ ಹಾಗೂ ಕೆಸರುಗದ್ದೆಯಲ್ಲಿ ಗ್ರಾಮೀಣ ಕ್ರೀಡಾಕೂಟ ಆಯೋಜನೆ

    ಬೆಳ್ತಂಗಡಿ : ಲಾಯಿಲ ಗ್ರಾಮಸಭೆಯಲ್ಲಿ ಅಕ್ರಮಗಳ ಆರೋಪಕ್ಕೆ ಕಿಡಿ, ನಿವೇಶನದಿಂದ ಸರ್ಕಾರಿ ಜಮೀನು, ಕಳಪೆ ಕಾಮಗಾರಿವರೆಗೆ ಸಮಗ್ರ ತನಿಖೆಗೆ ಒತ್ತಾಯ

    • By admin
    • August 31, 2026
    • 5 views
    ಬೆಳ್ತಂಗಡಿ : ಲಾಯಿಲ ಗ್ರಾಮಸಭೆಯಲ್ಲಿ ಅಕ್ರಮಗಳ ಆರೋಪಕ್ಕೆ ಕಿಡಿ, ನಿವೇಶನದಿಂದ ಸರ್ಕಾರಿ ಜಮೀನು, ಕಳಪೆ ಕಾಮಗಾರಿವರೆಗೆ ಸಮಗ್ರ ತನಿಖೆಗೆ ಒತ್ತಾಯ

    ನಾಟ ಫಲಿತಾಂಶ: ಎಕ್ಸೆಲ್ ವಿದ್ಯಾರ್ಥಿಗಳ ಅಪೂರ್ವ ಸಾಧನೆ

    • By admin
    • August 27, 2026
    • 7 views
    ನಾಟ ಫಲಿತಾಂಶ: ಎಕ್ಸೆಲ್ ವಿದ್ಯಾರ್ಥಿಗಳ ಅಪೂರ್ವ ಸಾಧನೆ