‘ವಾಟ್ಸಾಪ್​’ ಜನಪ್ರಿಯತೆಗೆ ಠಕ್ಕರ್​ ನೀಡಲು ಬಂದಿದೆ ಸ್ವದೇಶಿ ನಿರ್ಮಿತ ‘ಸಂದೇಸ್​’ ಆಪ್​..!

ಭಾರತ ಸರ್ಕಾರವು ಸಂದೇಸ್​ ಎಂಬ ತ್ವರಿತ ಮೆಸೇಜಿಂಗ್​ ಪ್ಲಾಟ್​ಫಾರಂನ್ನು ಆರಂಭಿಸಿದೆ ಎಂದು ಕೇಂದ್ರದ ಎಲೆಕ್ಟ್ರಾನಿಕ್ಸ್​ ಹಾಗೂ ಐಟಿ ರಾಜ್ಯ ಸಚಿವ ರಾಜೀವ್​ ಚಂದ್ರಶೇಖರ್​​​ ಲೋಕಸಭೆಗೆ ಲಿಖಿತ ರೂಪದಲ್ಲಿ ಮಾಹಿತಿ ನೀಡಿದ್ದಾರೆ.

ಫೇಸ್​ಬುಕ್​ ಒಡೆತನದ ವಾಟ್ಸಾಪ್​ ಸೇರಿದಂತೆ ವಿವಿಧ ಖಾಸಗಿ ಮೆಸೆಜಿಂಗ್​ ಅಪ್ಲಿಕೇಶನ್​ಗಳಿಗೆ ಸೆಡ್ಡು ಹೊಡೆಯುವ ಸಲುವಾಗಿ ಕೇಂದ್ರ ಸರ್ಕಾರ ಈ ಪರ್ಯಾಯ ಮಾರ್ಗವನ್ನು ಹುಡುಕಿದೆ.

ಕೇಂದ್ರ ಸರ್ಕಾರದ ಮಾಹಿತಿ ತಂತ್ರಜ್ಞಾನ ವಿಭಾಗದ ರಾಷ್ಟ್ರೀಯ ಮಾಹಿತಿ ಕೇಂದ್ರವು ವಾಟ್ಸಾಪ್​ ಮಾದರಿಯಲ್ಲೇ ಕಾರ್ಯ ನಿರ್ವಹಿಸುವ ಈ ಹೊಸ ವೇದಿಕೆಯನ್ನು ಆರಂಭಿಸಿದೆ. ಮೊಬೈಲ್​ ಸಂಖ್ಯೆ ಅಥವಾ ಇಮೇಲ್​ ಐಡಿ ಸಹಾಯದಿಂದ ಎಲ್ಲಾ ರೀತಿಯ ಸಂವಹನ ಕಾರ್ಯಕ್ಕೆ ವೇದಿಕೆಯಾಗಿ ಬಳಕೆ ಮಾಡಬಹುದಾಗಿದೆ. ಈ ಸಂದೇಸ್​ ಅಪ್ಲಿಕೇಶನ್​ನ್ನು ಪ್ರಸ್ತುತ ಸರ್ಕಾರಿ ನೌಕರರು ಹಾಗೂ ಸರ್ಕಾರದೊಂದಿಗೆ ಸಂಪರ್ಕ ಹೊಂದಿರುವ ಏಜನ್ಸಿಗಳಲ್ಲಿ ಬಳಕೆ ಮಾಡಲಾಗುತ್ತಿದೆ.

ಸಂದೇಸ್​ ಅಪ್ಲಿಕೇಶನ್​​ ಸುರಕ್ಷಿತ, ಓಪನ್​ ಸೋರ್ಸ್ ಆಧಾರಿತ ವೇದಿಕೆಯಾಗಿದೆ. ಇದು ಸರ್ಕಾರಿ ಸ್ವಾಮ್ಯದ ವೇದಿಕೆಯಾಗಿದ್ದು ಸಂಪೂರ್ಣ ನಿಯಂತ್ರಣವು ಕೇಂದ್ರದ ಕೈಯಲ್ಲಿ ಇರಲಿದೆ. ಈ ಅಪ್ಲಿಕೇಶನ್​ ಮೂಲಕ ಸಂದೇಶ ಕಳುಹಿಸುವಿಕೆ, ಫೈಲ್​​ ಹಾಗೂ ಫೋಟೋ, ವಿಡಿಯೋಗಳ ಹಂಚಿಕೆ ಮತ್ತು ಆಡಿಯೋ-ವಿಡಿಯೋ ಕರೆ ಮಾಡಬಹುದಾಗಿದೆ. ಗೂಗಲ್​ ಪ್ಲೇ ಸ್ಟೋರ್​ ಹಾಗೂ ಆಯಪ್​ ಸ್ಟೋರ್​ನಲ್ಲಿ ಈ ಅಪ್ಲಿಕೇಶನ್​ ಲಭ್ಯವಿದೆ ಎಂದು ಚಂದ್ರಶೇಖರ್​​ ಹೇಳಿದ್ದಾರೆ.

ಭಾರತೀಯ ಅಪ್ಲಿಕೇಶನ್​ ಹಾಗೂ ಸಾಫ್ಟ್​ವೇರ್​ಗಳ ಬಳಕೆಯನ್ನು ಉತ್ತೇಜಿಸುವ ಸರ್ಕಾರದ ಉಪಕ್ರಮದ ಭಾಗವಾಗಿ ಈ ಸಂದೇಸ್​ ಅಪ್ಲಿಕೇಶನ್​ ಅಭಿವೃದ್ಧಿ ಮಾಡಲಾಗಿದೆ. ಕಳೆದ ಅನೇಕ ತಿಂಗಳಿನಿಂದ ಖಾಸಗಿ ಮಾಹಿತಿ ಸೋರಿಕೆ ವಿಚಾರದಲ್ಲಿ ವಾಟ್ಸಾಪ್​ ಹಾಗೂ ಕೇಂದ್ರ ಸರ್ಕಾರದ ನಡುವೆ ಭಿನ್ನಾಭಿಪ್ರಾಯ ಮೂಡಿರುವ ನಡುವೆಯೇ ಕೇಂದ್ರ ಸರ್ಕಾರ ಸಂದೇಸ್​ ಅಪ್ಲಿಕೇಶನ್​ ಮೂಲಕ ಮೆಸೆಜಿಂಗ್​ ಅಪ್ಲಿಕೇಶನ್​ಗಳಿಗೆ ಸೆಡ್ಡು ಹೊಡೆಯಲು ಮುಂದಾಗಿದೆ.

Spread the love
  • Related Posts

    ಭಾರಿ ಮಳೆ ಹಿನ್ನೆಲೆ: ಪುತ್ತೂರು ಉಪವಿಭಾಗದ ವ್ಯಾಪ್ತಿಯ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಣೆ

    ಮಂಗಳೂರು, ಆಗಸ್ಟ್ 7: ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಹವಾಮಾನ ಮುನ್ಸೂಚನೆಯಂತೆ ಪುತ್ತೂರು ಉಪವಿಭಾಗ ವ್ಯಾಪ್ತಿಯಲ್ಲಿ ಭಾರೀ ಮಳೆ ಮುಂದುವರಿಯುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ, ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ…

    Spread the love

    ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ವಾರ್ಷಿಕ ಮಹಾಸಭೆ ಆ.29ರಂದು ನಡೆಯಲಿದೆ. ಶೇ.70ಕ್ಕಿಂತ ಹೆಚ್ಚು ಅಂಕ ಪಡೆದ ಸದಸ್ಯರ ಮಕ್ಕಳಿಗೆ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

    ಬಂಗಾಡಿ, ಆ.7: ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘ (ನಿ.) ಬಂಗಾಡಿಯ 2025–26ನೇ ಸಾಲಿನ ವಾರ್ಷಿಕ ಮಹಾಸಭೆಯು ಆಗಸ್ಟ್ 29, 2026ರ ಶನಿವಾರ ಬೆಳಿಗ್ಗೆ 9.30 ಗಂಟೆಗೆ ಕೊಲ್ಲಿ ಶ್ರೀ ದುರ್ಗಾದೇವಿ ದೇವಸ್ಥಾನದ ವಠಾರದಲ್ಲಿ ನಡೆಯಲಿದೆ. ಸಂಘದ ಅಧ್ಯಕ್ಷರು ಹಾಗೂ ಆಡಳಿತ ಮಂಡಳಿಯವರು…

    Spread the love

    You Missed

    ಭಾರಿ ಮಳೆ ಹಿನ್ನೆಲೆ: ಪುತ್ತೂರು ಉಪವಿಭಾಗದ ವ್ಯಾಪ್ತಿಯ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಣೆ

    • By admin
    • August 7, 2026
    • 4 views
    ಭಾರಿ ಮಳೆ ಹಿನ್ನೆಲೆ: ಪುತ್ತೂರು ಉಪವಿಭಾಗದ ವ್ಯಾಪ್ತಿಯ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಣೆ

    ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ವಾರ್ಷಿಕ ಮಹಾಸಭೆ ಆ.29ರಂದು ನಡೆಯಲಿದೆ. ಶೇ.70ಕ್ಕಿಂತ ಹೆಚ್ಚು ಅಂಕ ಪಡೆದ ಸದಸ್ಯರ ಮಕ್ಕಳಿಗೆ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

    • By admin
    • August 7, 2026
    • 5 views
    ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ವಾರ್ಷಿಕ ಮಹಾಸಭೆ ಆ.29ರಂದು ನಡೆಯಲಿದೆ. ಶೇ.70ಕ್ಕಿಂತ ಹೆಚ್ಚು ಅಂಕ ಪಡೆದ ಸದಸ್ಯರ ಮಕ್ಕಳಿಗೆ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

    “ಶಿಕ್ಷಣದ ಹೆಮ್ಮೆಗೆ ಡ್ರಗ್ಸ್ ಕರಿನೆರಳು: ಎಚ್ಚೆತ್ತುಕೊಳ್ಳಬೇಕಿದೆ ಬೆಳ್ತಂಗಡಿಯ ಜನತೆ!!!”

    • By admin
    • August 6, 2026
    • 11 views
    “ಶಿಕ್ಷಣದ ಹೆಮ್ಮೆಗೆ ಡ್ರಗ್ಸ್ ಕರಿನೆರಳು: ಎಚ್ಚೆತ್ತುಕೊಳ್ಳಬೇಕಿದೆ ಬೆಳ್ತಂಗಡಿಯ ಜನತೆ!!!”

    ಸಕಲೇಶಪುರ: ಬಾಳುಪೇಟೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ

    • By admin
    • August 6, 2026
    • 6 views
    ಸಕಲೇಶಪುರ: ಬಾಳುಪೇಟೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ

    ಬೆಸ್ಟ್ ಎಂಎಲ್ಎ ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂಂಜರಿಗೆ ಬಿಜೆಪಿ ಮೋರ್ಚಾಗಳಿಂದ ಅಭಿನಂದನೆ

    • By admin
    • August 6, 2026
    • 8 views
    ಬೆಸ್ಟ್ ಎಂಎಲ್ಎ ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂಂಜರಿಗೆ ಬಿಜೆಪಿ ಮೋರ್ಚಾಗಳಿಂದ ಅಭಿನಂದನೆ

    ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಕರಡು ಅಧಿಸೂಚನೆಗೆ ಆಕ್ಷೇಪಣೆ ಸಲ್ಲಿಸಿ: ಶಾಸಕ ಹರೀಶ್ ಪೂಂಜ ಕರೆ

    • By admin
    • August 6, 2026
    • 5 views
    ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಕರಡು ಅಧಿಸೂಚನೆಗೆ ಆಕ್ಷೇಪಣೆ ಸಲ್ಲಿಸಿ: ಶಾಸಕ ಹರೀಶ್ ಪೂಂಜ ಕರೆ