‘ವಾಟ್ಸಾಪ್​’ ಜನಪ್ರಿಯತೆಗೆ ಠಕ್ಕರ್​ ನೀಡಲು ಬಂದಿದೆ ಸ್ವದೇಶಿ ನಿರ್ಮಿತ ‘ಸಂದೇಸ್​’ ಆಪ್​..!

ಭಾರತ ಸರ್ಕಾರವು ಸಂದೇಸ್​ ಎಂಬ ತ್ವರಿತ ಮೆಸೇಜಿಂಗ್​ ಪ್ಲಾಟ್​ಫಾರಂನ್ನು ಆರಂಭಿಸಿದೆ ಎಂದು ಕೇಂದ್ರದ ಎಲೆಕ್ಟ್ರಾನಿಕ್ಸ್​ ಹಾಗೂ ಐಟಿ ರಾಜ್ಯ ಸಚಿವ ರಾಜೀವ್​ ಚಂದ್ರಶೇಖರ್​​​ ಲೋಕಸಭೆಗೆ ಲಿಖಿತ ರೂಪದಲ್ಲಿ ಮಾಹಿತಿ ನೀಡಿದ್ದಾರೆ.

ಫೇಸ್​ಬುಕ್​ ಒಡೆತನದ ವಾಟ್ಸಾಪ್​ ಸೇರಿದಂತೆ ವಿವಿಧ ಖಾಸಗಿ ಮೆಸೆಜಿಂಗ್​ ಅಪ್ಲಿಕೇಶನ್​ಗಳಿಗೆ ಸೆಡ್ಡು ಹೊಡೆಯುವ ಸಲುವಾಗಿ ಕೇಂದ್ರ ಸರ್ಕಾರ ಈ ಪರ್ಯಾಯ ಮಾರ್ಗವನ್ನು ಹುಡುಕಿದೆ.

ಕೇಂದ್ರ ಸರ್ಕಾರದ ಮಾಹಿತಿ ತಂತ್ರಜ್ಞಾನ ವಿಭಾಗದ ರಾಷ್ಟ್ರೀಯ ಮಾಹಿತಿ ಕೇಂದ್ರವು ವಾಟ್ಸಾಪ್​ ಮಾದರಿಯಲ್ಲೇ ಕಾರ್ಯ ನಿರ್ವಹಿಸುವ ಈ ಹೊಸ ವೇದಿಕೆಯನ್ನು ಆರಂಭಿಸಿದೆ. ಮೊಬೈಲ್​ ಸಂಖ್ಯೆ ಅಥವಾ ಇಮೇಲ್​ ಐಡಿ ಸಹಾಯದಿಂದ ಎಲ್ಲಾ ರೀತಿಯ ಸಂವಹನ ಕಾರ್ಯಕ್ಕೆ ವೇದಿಕೆಯಾಗಿ ಬಳಕೆ ಮಾಡಬಹುದಾಗಿದೆ. ಈ ಸಂದೇಸ್​ ಅಪ್ಲಿಕೇಶನ್​ನ್ನು ಪ್ರಸ್ತುತ ಸರ್ಕಾರಿ ನೌಕರರು ಹಾಗೂ ಸರ್ಕಾರದೊಂದಿಗೆ ಸಂಪರ್ಕ ಹೊಂದಿರುವ ಏಜನ್ಸಿಗಳಲ್ಲಿ ಬಳಕೆ ಮಾಡಲಾಗುತ್ತಿದೆ.

ಸಂದೇಸ್​ ಅಪ್ಲಿಕೇಶನ್​​ ಸುರಕ್ಷಿತ, ಓಪನ್​ ಸೋರ್ಸ್ ಆಧಾರಿತ ವೇದಿಕೆಯಾಗಿದೆ. ಇದು ಸರ್ಕಾರಿ ಸ್ವಾಮ್ಯದ ವೇದಿಕೆಯಾಗಿದ್ದು ಸಂಪೂರ್ಣ ನಿಯಂತ್ರಣವು ಕೇಂದ್ರದ ಕೈಯಲ್ಲಿ ಇರಲಿದೆ. ಈ ಅಪ್ಲಿಕೇಶನ್​ ಮೂಲಕ ಸಂದೇಶ ಕಳುಹಿಸುವಿಕೆ, ಫೈಲ್​​ ಹಾಗೂ ಫೋಟೋ, ವಿಡಿಯೋಗಳ ಹಂಚಿಕೆ ಮತ್ತು ಆಡಿಯೋ-ವಿಡಿಯೋ ಕರೆ ಮಾಡಬಹುದಾಗಿದೆ. ಗೂಗಲ್​ ಪ್ಲೇ ಸ್ಟೋರ್​ ಹಾಗೂ ಆಯಪ್​ ಸ್ಟೋರ್​ನಲ್ಲಿ ಈ ಅಪ್ಲಿಕೇಶನ್​ ಲಭ್ಯವಿದೆ ಎಂದು ಚಂದ್ರಶೇಖರ್​​ ಹೇಳಿದ್ದಾರೆ.

ಭಾರತೀಯ ಅಪ್ಲಿಕೇಶನ್​ ಹಾಗೂ ಸಾಫ್ಟ್​ವೇರ್​ಗಳ ಬಳಕೆಯನ್ನು ಉತ್ತೇಜಿಸುವ ಸರ್ಕಾರದ ಉಪಕ್ರಮದ ಭಾಗವಾಗಿ ಈ ಸಂದೇಸ್​ ಅಪ್ಲಿಕೇಶನ್​ ಅಭಿವೃದ್ಧಿ ಮಾಡಲಾಗಿದೆ. ಕಳೆದ ಅನೇಕ ತಿಂಗಳಿನಿಂದ ಖಾಸಗಿ ಮಾಹಿತಿ ಸೋರಿಕೆ ವಿಚಾರದಲ್ಲಿ ವಾಟ್ಸಾಪ್​ ಹಾಗೂ ಕೇಂದ್ರ ಸರ್ಕಾರದ ನಡುವೆ ಭಿನ್ನಾಭಿಪ್ರಾಯ ಮೂಡಿರುವ ನಡುವೆಯೇ ಕೇಂದ್ರ ಸರ್ಕಾರ ಸಂದೇಸ್​ ಅಪ್ಲಿಕೇಶನ್​ ಮೂಲಕ ಮೆಸೆಜಿಂಗ್​ ಅಪ್ಲಿಕೇಶನ್​ಗಳಿಗೆ ಸೆಡ್ಡು ಹೊಡೆಯಲು ಮುಂದಾಗಿದೆ.

Spread the love
  • Related Posts

    ಕಟ್ಟಡ ಟೆಂಡರ್ ನಲ್ಲಿ ಆಗುತ್ತಿರುವ ಭ್ರಷ್ಟಾಚಾರ ಹಾಗೂ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಮರಳು, ಕೆಂಪುಕಲ್ಲು ಪೂರೈಕೆಯಲ್ಲಿ ಉಂಟಾದ ತೊಡಕುಗಳ ಕುರಿತು ಭಾರತೀಯ ಮಜ್ದೂರ್ ಸಂಘದ ವತಿಯಿಂದ ಸಮಾಲೋಚನಾ ಸಭೆ ಹಾಗೂ ಮನವಿ ಸಲ್ಲಿಕೆ

    ಬೆಳ್ತಂಗಡಿ: ಭಾರತೀಯ ಮಜ್ದೂರ್ ಸಂಘ ತಾಲೂಕು ಸಮಿತಿ ಬೆಳ್ತಂಗಡಿ ವತಿಯಿಂದ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರಿಗೆ ಮರಳು ಹಾಗೂ ಕೆಂಪು ಕಲ್ಲು ಪೂರೈಕೆಯಲ್ಲಿ ಆಗಿರುವ ತೊಂದರೆಯ ಕುರಿತು ಹಾಗೂ ಕಾರ್ಮಿಕ ಇಲಾಖೆಯ ಕಟ್ಟಡ ಮಂಡಳಿಯ ಟೆಂಡರ್ ಕೂಪದ ಭ್ರಷ್ಟಾಚಾರವನ್ನು ಖಂಡಿಸಲು…

    Spread the love

    ಚಿರಂಜೀವಿ ಯುವಕ ಮಂಡಲ ಕಾನರ್ಪ ಇದರ 34ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    ಬೆಳ್ತಂಗಡಿ: ಚಿರಂಜೀವಿ ಯುವಕ ಮಂಡಲ ಕಾನರ್ಪ ಕಡಿರುದ್ಯಾವರ ಇದರ 34ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮದ ನಿಮಿತ್ತ ಪೂರ್ವಭಾವಿ ಸಭೆಯನ್ನು ಯುವಕ ಮಂಡಲದ ವಠಾರದಲ್ಲಿ ನಡೆಸಲಾಯಿತು. ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ ಸಮಿತಿಯ ಅಧ್ಯಕ್ಷರಾಗಿ ರಾಘವೇಂದ್ರ ಭಟ್ ಪಣಿಕಲ್ ಹಾಗೂ…

    Spread the love

    You Missed

    ಕಟ್ಟಡ ಟೆಂಡರ್ ನಲ್ಲಿ ಆಗುತ್ತಿರುವ ಭ್ರಷ್ಟಾಚಾರ ಹಾಗೂ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಮರಳು, ಕೆಂಪುಕಲ್ಲು ಪೂರೈಕೆಯಲ್ಲಿ ಉಂಟಾದ ತೊಡಕುಗಳ ಕುರಿತು ಭಾರತೀಯ ಮಜ್ದೂರ್ ಸಂಘದ ವತಿಯಿಂದ ಸಮಾಲೋಚನಾ ಸಭೆ ಹಾಗೂ ಮನವಿ ಸಲ್ಲಿಕೆ

    • By admin
    • June 30, 2025
    • 8 views
    ಕಟ್ಟಡ  ಟೆಂಡರ್ ನಲ್ಲಿ ಆಗುತ್ತಿರುವ ಭ್ರಷ್ಟಾಚಾರ ಹಾಗೂ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಮರಳು, ಕೆಂಪುಕಲ್ಲು ಪೂರೈಕೆಯಲ್ಲಿ ಉಂಟಾದ ತೊಡಕುಗಳ ಕುರಿತು ಭಾರತೀಯ ಮಜ್ದೂರ್ ಸಂಘದ ವತಿಯಿಂದ ಸಮಾಲೋಚನಾ ಸಭೆ ಹಾಗೂ ಮನವಿ ಸಲ್ಲಿಕೆ

    ಚಿರಂಜೀವಿ ಯುವಕ ಮಂಡಲ ಕಾನರ್ಪ ಇದರ 34ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    • By admin
    • June 28, 2025
    • 269 views
    ಚಿರಂಜೀವಿ ಯುವಕ ಮಂಡಲ ಕಾನರ್ಪ ಇದರ 34ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    ವಕೀಲರ ಸಂಘ (ರಿ ) ಬಂಟ್ವಾಳ ಇದರ ನೂತನ ಪದಾಧಿಕಾರಿಗಳ ಪದಗ್ರಹಣ

    • By admin
    • June 26, 2025
    • 186 views
    ವಕೀಲರ ಸಂಘ (ರಿ ) ಬಂಟ್ವಾಳ ಇದರ ನೂತನ ಪದಾಧಿಕಾರಿಗಳ ಪದಗ್ರಹಣ

    ಭಾರಿಮಳೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿತ, ಶಿರಾಡಿ ಘಾಟ್ ನಲ್ಲಿ ವಾಹನ ಸಂಚಾರ ಬಂದ್

    • By admin
    • June 26, 2025
    • 291 views
    ಭಾರಿಮಳೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ  ಕುಸಿತ, ಶಿರಾಡಿ ಘಾಟ್ ನಲ್ಲಿ ವಾಹನ ಸಂಚಾರ ಬಂದ್

    ಮುಂದುವರಿದ ವರುಣಾರ್ಭಟ ಬೆಳ್ತಂಗಡಿ ತಾಲೂಕಿನ ಶಾಲೆಗಳಿಗೆ ಜೂನ್ 26 ಗುರುವಾರ ರಜೆ: ತಹಶಿಲ್ದಾರ್ ಫೋಷಣೆ

    • By admin
    • June 25, 2025
    • 154 views
    ಮುಂದುವರಿದ ವರುಣಾರ್ಭಟ ಬೆಳ್ತಂಗಡಿ ತಾಲೂಕಿನ  ಶಾಲೆಗಳಿಗೆ ಜೂನ್ 26 ಗುರುವಾರ ರಜೆ: ತಹಶಿಲ್ದಾರ್ ಫೋಷಣೆ

    ಹಾಸನದ ಸಕಲೇಶಪುರ ಎಡಕುಮೇರಿ ಎಂಬಲ್ಲಿ ರೈಲು ಹಳಿಗಳ ಮೇಲೆ ಬಿದ್ದ ಬಂಡೆ ಕಲ್ಲುಗಳು ರೈಲು ಸಂಚಾರದಲ್ಲಿ ವ್ಯತ್ಯಯ

    • By admin
    • June 21, 2025
    • 85 views
    ಹಾಸನದ ಸಕಲೇಶಪುರ ಎಡಕುಮೇರಿ ಎಂಬಲ್ಲಿ ರೈಲು ಹಳಿಗಳ ಮೇಲೆ ಬಿದ್ದ ಬಂಡೆ ಕಲ್ಲುಗಳು ರೈಲು ಸಂಚಾರದಲ್ಲಿ ವ್ಯತ್ಯಯ