ಈ ಸ್ಮಾರ್ಟ್ ಪೋನ್ ನಲ್ಲಿ ಶೀಘ್ರವೇ ವಾಟ್ಸಾಪ್ ಕಾರ್ಯ ಸ್ಥಗಿತ!

ಬೆಂಗಳೂರು: ನಿಮ್ಮ ಮೊಬೈಲ್ ಫೋನ್ʼನಲ್ಲಿ ವಾಟ್ಸಾಪ್ʼನ್ನ ಬಳಸುತ್ತಿದ್ರೆ ಈ ಸುದ್ದಿಯನ್ನ ಓದಲೇಬೇಕು. ಯಾಕಂದ್ರೆ, ಕೆಲವು ಹಳೆಯ ಆಪರೇಟಿಂಗ್ ಸಿಸ್ಟಮ್ ಹೊಂದಿರೊ ಫೋನ್ʼಗಳಲ್ಲಿ ವಾಟ್ಸಾಪ್ ಶೀಘ್ರವೇ ತನ್ನ ಸೇವೆಯನ್ನ ಸ್ಥಗಿತಗೊಳಿಲಿದೆ. ಹಾಗಾದ್ರೆ, ಆಪರೇಟಿಂಗ್ ಸಿಸ್ಟಂ ಯಾವ್ಯಾವು ಅನ್ನೋ ಮಾಹಿತಿ ಇಲ್ಲಿದೆ.

1) ಆಂಡ್ರಾಯ್ಡ್ ಮತ್ತು iOS ಆಪರೇಟಿಂಗ್ ಸಿಸ್ಟಂಗಳಿಗೆ ಪ್ರಮುಖ ಸುದ್ದಿ
ವರದಿಗಳ ಪ್ರಕಾರ, ಕೆಲವು ಹಳೆಯ ಆಪರೇಟಿಂಗ್ ಸಿಸ್ಟಮ್ʼಗಳಿರುವ ಸ್ಮಾರ್ಟ್ ಫೋನ್ʼಗಳಲ್ಲಿ ವಾಟ್ಸಾಪ್ ಸೇವೆ ನಿಲ್ಲಿಸಬಹುದು.

2) ಕೆಲವು ಆಪಲ್ ಐಫೋನ್ʼಗಳ ಮೇಲೆ ಪರಿಣಾಮ ಬೀರುತ್ತೆ..!
ವರದಿಗಳ ಪ್ರಕಾರ, ಆಪಲ್ʼನ ಹಳೆಯ ಆಪರೇಟಿಂಗ್ ಸಿಸ್ಟಮ್ʼನಲ್ಲಿ ವಾಟ್ಸಾಪ್ ಕೆಲಸ ಮಾಡುವುದನ್ನ ಸದ್ಯದಲ್ಲೇ ನಿಲ್ಲಿಸಲಿದೆ. ಐಓಎಸ್ 9 ಮತ್ತು ಹಳೆಯ ಆಪರೇಟಿಂಗ್ ಸಿಸ್ಟಮ್ ಹೊಂದಿರುವ ಐಫೋನ್ʼಗಳಲ್ಲಿ ವಾಟ್ಸಾಪ್ ಕಾರ್ಯನಿರ್ವಹಿಸುವುದಿಲ್ಲ.

3) ಆಂಡ್ರಾಯ್ಡ್ ಫೋನ್ʼಗಳ ಮೇಲೂ ಪರಿಣಾಮ ಬೀರುತ್ತೆ..!
ಆಂಡ್ರಾಯ್ಡ್ ಆಪರೇಟಿಂಗ್ ಸಿಸ್ಟಮ್ʼನಲ್ಲೂ ಬದಲಾವಣೆ ಮಾಡಲಾಗಿದೆ ಎಂದು ವರದಿ ಹೇಳಿದ್ದು, ಆಂಡ್ರಾಯ್ಡ್ 4.0.3 ಗಿಂತ ಹಳೆಯ ಆಪರೇಟಿಂಗ್ ಸಿಸ್ಟಮ್ ಹೊಂದಿರುವ ಸ್ಮಾರ್ಟ್ ಫೋನ್ʼಗಳಲ್ಲಿ ವಾಟ್ಸಾಪ್ ಕಾರ್ಯನಿರ್ವಹಿಸುವುದಿಲ್ಲ.

4) ಲಿನಕ್ಸ್ ಆಪರೇಟಿಂಗ್ ಸಿಸ್ಟಮ್ʼನಿಂದ ಹೊಸ ನಿರ್ಧಾರ..!
ವಾಟ್ಸಾಪ್ʼನ ಹೊಸ ನಿರ್ಧಾರದಿಂದ ಲಿನಕ್ಸ್ʼನ ಹಳೆಯ ಆಪರೇಟಿಂಗ್ ಸಿಸ್ಟಮ್ʼಗಳ ಮೇಲೂ ಪರಿಣಾಮ ಬೀರಲಿದೆ. ವಾಟ್ಸಾಪ್ ಕಂಪನಿಯಿಂದ ಬಂದ ಮಾಹಿತಿ ಪ್ರಕಾರ, KaiOS 2.5.1 ಅಥವಾ ಇತ್ತೀಚಿನ ಆಪರೇಟಿಂಗ್ ಸಿಸ್ಟಮ್ ಕೇವಲ ವಾಟ್ಸಾಪ್ʼನ್ನ ಬೆಂಬಲಿಸುತ್ತದೆ.

5) ವಾಟ್ಸಾಪ್ ಬಳಸುವುದು ಹೇಗೆ..?
ತಜ್ಞರ ಪ್ರಕಾರ, ಯಾವುದೇ ಸಮಸ್ಯೆಯಿಲ್ಲದೆ ವಾಟ್ಸಾಪ್ ಬಳಸಲು ನೀವು ನಿಮ್ಮ ಆಪರೇಟಿಂಗ್ ಸಿಸ್ಟಮ್ʼನ್ನ ಅಪ್ಡೇಟ್ ಮಾಡಬೇಕಾಗುತ್ತದೆ. ಆಪಲ್ ಐಫೋನ್ʼನಲ್ಲಿ, ನೀವು ಇತ್ತೀಚಿನ ಆಪರೇಟಿಂಗ್ ಸಿಸ್ಟಂʼನ್ನ ಅಪ್ ಡೇಟ್ ಮಾಡಬೇಕು. ಆಂಡ್ರಾಯ್ಡ್ ಫೋನ್ ಬಳಕೆದಾರರು ಸೆಟ್ಟಿಂಗ್ಸ್ʼಗೆ ಹೋಗಿ ಇತ್ತೀಚಿನ ಆಪರೇಟಿಂಗ್ ಸಿಸ್ಟಂ ಡೌನ್ ಲೋಡ್ ಮಾಡಿಕೊಳ್ಳಬೋದು.

Spread the love
  • Related Posts

    ಬೆಳ್ತಂಗಡಿ ನೂತನ ನ್ಯಾಯಾಲಯ ಸಂಕೀರ್ಣದ ಶಂಕುಸ್ಥಾಪನೆ

    ಬೆಳ್ತಂಗಡಿ: ಜಿಲ್ಲಾ ನ್ಯಾಯಾಂಗ, ದ.ಕ ಲೋಕೋಪಯೋಗಿ ಇಲಾಖೆ ಹಾಗೂ ವಕೀಲರ ಸಂಘ ಬೆಳ್ತಂಗಡಿ ಇವರ ಸಂಯುಕ್ತ ಆಶ್ರಯದಲ್ಲಿ ಬೆಳ್ತಂಗಡಿ ತಾಲೂಕಿನ ಜನತೆ ಮತ್ತು ವಕೀಲರ ಸಂಘದ ಬಹುದಿನಗಳ ಬೇಡಿಕೆಯಾಗಿದ್ದ ನೂತನ ನ್ಯಾಯಾಲಯ ಸಂಕೀರ್ಣಕ್ಕೆ ಕರ್ನಾಟಕ ಸರಕಾರಕ್ಕೆ ಸಲ್ಲಿಸಲಾದ ಸುಮಾರು 23 ಕೋಟಿ…

    Spread the love

    ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಬೆಳ್ತಂಗಡಿ ತಾಲೂಕು ಘಟಕ ರಚನೆ: ನಿಶಾನ್ ಬಂಗೇರ ನಾರ್ಯ ಅಧ್ಯಕ್ಷರಾಗಿ ಆಯ್ಕೆ

    ಬೆಳ್ತಂಗಡಿ, ಜೂನ್ 13: ಸ್ಥಳೀಯ ಪತ್ರಿಕೋದ್ಯಮವನ್ನು ಮತ್ತಷ್ಟು ಬಲಪಡಿಸುವ ಹಾಗೂ ಪತ್ರಕರ್ತರ ಹಿತರಕ್ಷಣೆಗೆ ಒತ್ತು ನೀಡುವ ಉದ್ದೇಶದಿಂದ ಕರ್ನಾಟಕ ಜರ್ನಲಿಸ್ಟ್ ಯೂನಿಯನ್‌ನ ಬೆಳ್ತಂಗಡಿ ತಾಲೂಕು ಘಟಕದ 2026-27ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಯಶಸ್ವಿಯಾಗಿ ನಡೆಯಿತು. ಸಂಘದ ಮುಂದಿನ ಅವಧಿಗೆ…

    Spread the love

    You Missed

    ಬೆಳ್ತಂಗಡಿ ನೂತನ ನ್ಯಾಯಾಲಯ ಸಂಕೀರ್ಣದ ಶಂಕುಸ್ಥಾಪನೆ

    • By admin
    • June 14, 2026
    • 30 views
    ಬೆಳ್ತಂಗಡಿ ನೂತನ ನ್ಯಾಯಾಲಯ ಸಂಕೀರ್ಣದ ಶಂಕುಸ್ಥಾಪನೆ

    ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಬೆಳ್ತಂಗಡಿ ತಾಲೂಕು ಘಟಕ ರಚನೆ: ನಿಶಾನ್ ಬಂಗೇರ ನಾರ್ಯ ಅಧ್ಯಕ್ಷರಾಗಿ ಆಯ್ಕೆ

    • By admin
    • June 13, 2026
    • 76 views
    ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಬೆಳ್ತಂಗಡಿ ತಾಲೂಕು ಘಟಕ ರಚನೆ: ನಿಶಾನ್ ಬಂಗೇರ ನಾರ್ಯ ಅಧ್ಯಕ್ಷರಾಗಿ ಆಯ್ಕೆ

    ಓರಿಯಂಟೇಶನ್ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಯಶಸ್ಸಿನ ಮಂತ್ರ, ಶ್ರದ್ಧೆ ಮತ್ತು ಪರಿಶ್ರಮದಿಂದ ಉಜ್ವಲ ಭವಿಷ್ಯ ಸಾಧ್ಯ: ಸ್ಮಿತೇಶ್ ಬಾರ್ಯ

    • By admin
    • June 13, 2026
    • 25 views
    ಓರಿಯಂಟೇಶನ್ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಯಶಸ್ಸಿನ ಮಂತ್ರ, ಶ್ರದ್ಧೆ ಮತ್ತು ಪರಿಶ್ರಮದಿಂದ ಉಜ್ವಲ ಭವಿಷ್ಯ ಸಾಧ್ಯ: ಸ್ಮಿತೇಶ್ ಬಾರ್ಯ

    ಸ್ಪರ್ಧಾತ್ಮಕ ಪರೀಕ್ಷೆಗಳತ್ತ ವಿದ್ಯಾರ್ಥಿಗಳನ್ನು ಪ್ರೇರೇಪಿಸುವ ಒಲಿಂಪಿಯಾಡ್ ಕಾರ್ಯಕ್ರಮ,ಸಾಧಕ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ವಿತರಣೆ

    • By admin
    • June 13, 2026
    • 62 views
    ಸ್ಪರ್ಧಾತ್ಮಕ ಪರೀಕ್ಷೆಗಳತ್ತ ವಿದ್ಯಾರ್ಥಿಗಳನ್ನು ಪ್ರೇರೇಪಿಸುವ ಒಲಿಂಪಿಯಾಡ್ ಕಾರ್ಯಕ್ರಮ,ಸಾಧಕ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ವಿತರಣೆ

    ಬೆಳ್ತಂಗಡಿ ನರಸಿಂಹಗಡ (ಗಡಾಯಿಕಲ್ಲು) ಚಾರಣಕ್ಕೆ ಪ್ರವಾಸಿಗರಿಗೆ ನಿಷೇಧ ಹೇರಿದ ಅರಣ್ಯ ಇಲಾಖೆ!!!

    • By admin
    • June 13, 2026
    • 21 views
    ಬೆಳ್ತಂಗಡಿ ನರಸಿಂಹಗಡ (ಗಡಾಯಿಕಲ್ಲು) ಚಾರಣಕ್ಕೆ ಪ್ರವಾಸಿಗರಿಗೆ ನಿಷೇಧ ಹೇರಿದ ಅರಣ್ಯ ಇಲಾಖೆ!!!

    ಲ್ಯಾಂಡಿಂಗ್ ವೇಳೆ ದುರಂತ: ಬೆಂಕಿಗಾಹುತಿಯಾದ ವಾಯುಪಡೆಯ AN-32 ವಿಮಾನ

    • By admin
    • June 13, 2026
    • 191 views
    ಲ್ಯಾಂಡಿಂಗ್ ವೇಳೆ ದುರಂತ: ಬೆಂಕಿಗಾಹುತಿಯಾದ ವಾಯುಪಡೆಯ AN-32 ವಿಮಾನ