ಈ ಸ್ಮಾರ್ಟ್ ಪೋನ್ ನಲ್ಲಿ ಶೀಘ್ರವೇ ವಾಟ್ಸಾಪ್ ಕಾರ್ಯ ಸ್ಥಗಿತ!

ಬೆಂಗಳೂರು: ನಿಮ್ಮ ಮೊಬೈಲ್ ಫೋನ್ʼನಲ್ಲಿ ವಾಟ್ಸಾಪ್ʼನ್ನ ಬಳಸುತ್ತಿದ್ರೆ ಈ ಸುದ್ದಿಯನ್ನ ಓದಲೇಬೇಕು. ಯಾಕಂದ್ರೆ, ಕೆಲವು ಹಳೆಯ ಆಪರೇಟಿಂಗ್ ಸಿಸ್ಟಮ್ ಹೊಂದಿರೊ ಫೋನ್ʼಗಳಲ್ಲಿ ವಾಟ್ಸಾಪ್ ಶೀಘ್ರವೇ ತನ್ನ ಸೇವೆಯನ್ನ ಸ್ಥಗಿತಗೊಳಿಲಿದೆ. ಹಾಗಾದ್ರೆ, ಆಪರೇಟಿಂಗ್ ಸಿಸ್ಟಂ ಯಾವ್ಯಾವು ಅನ್ನೋ ಮಾಹಿತಿ ಇಲ್ಲಿದೆ.

1) ಆಂಡ್ರಾಯ್ಡ್ ಮತ್ತು iOS ಆಪರೇಟಿಂಗ್ ಸಿಸ್ಟಂಗಳಿಗೆ ಪ್ರಮುಖ ಸುದ್ದಿ
ವರದಿಗಳ ಪ್ರಕಾರ, ಕೆಲವು ಹಳೆಯ ಆಪರೇಟಿಂಗ್ ಸಿಸ್ಟಮ್ʼಗಳಿರುವ ಸ್ಮಾರ್ಟ್ ಫೋನ್ʼಗಳಲ್ಲಿ ವಾಟ್ಸಾಪ್ ಸೇವೆ ನಿಲ್ಲಿಸಬಹುದು.

2) ಕೆಲವು ಆಪಲ್ ಐಫೋನ್ʼಗಳ ಮೇಲೆ ಪರಿಣಾಮ ಬೀರುತ್ತೆ..!
ವರದಿಗಳ ಪ್ರಕಾರ, ಆಪಲ್ʼನ ಹಳೆಯ ಆಪರೇಟಿಂಗ್ ಸಿಸ್ಟಮ್ʼನಲ್ಲಿ ವಾಟ್ಸಾಪ್ ಕೆಲಸ ಮಾಡುವುದನ್ನ ಸದ್ಯದಲ್ಲೇ ನಿಲ್ಲಿಸಲಿದೆ. ಐಓಎಸ್ 9 ಮತ್ತು ಹಳೆಯ ಆಪರೇಟಿಂಗ್ ಸಿಸ್ಟಮ್ ಹೊಂದಿರುವ ಐಫೋನ್ʼಗಳಲ್ಲಿ ವಾಟ್ಸಾಪ್ ಕಾರ್ಯನಿರ್ವಹಿಸುವುದಿಲ್ಲ.

3) ಆಂಡ್ರಾಯ್ಡ್ ಫೋನ್ʼಗಳ ಮೇಲೂ ಪರಿಣಾಮ ಬೀರುತ್ತೆ..!
ಆಂಡ್ರಾಯ್ಡ್ ಆಪರೇಟಿಂಗ್ ಸಿಸ್ಟಮ್ʼನಲ್ಲೂ ಬದಲಾವಣೆ ಮಾಡಲಾಗಿದೆ ಎಂದು ವರದಿ ಹೇಳಿದ್ದು, ಆಂಡ್ರಾಯ್ಡ್ 4.0.3 ಗಿಂತ ಹಳೆಯ ಆಪರೇಟಿಂಗ್ ಸಿಸ್ಟಮ್ ಹೊಂದಿರುವ ಸ್ಮಾರ್ಟ್ ಫೋನ್ʼಗಳಲ್ಲಿ ವಾಟ್ಸಾಪ್ ಕಾರ್ಯನಿರ್ವಹಿಸುವುದಿಲ್ಲ.

4) ಲಿನಕ್ಸ್ ಆಪರೇಟಿಂಗ್ ಸಿಸ್ಟಮ್ʼನಿಂದ ಹೊಸ ನಿರ್ಧಾರ..!
ವಾಟ್ಸಾಪ್ʼನ ಹೊಸ ನಿರ್ಧಾರದಿಂದ ಲಿನಕ್ಸ್ʼನ ಹಳೆಯ ಆಪರೇಟಿಂಗ್ ಸಿಸ್ಟಮ್ʼಗಳ ಮೇಲೂ ಪರಿಣಾಮ ಬೀರಲಿದೆ. ವಾಟ್ಸಾಪ್ ಕಂಪನಿಯಿಂದ ಬಂದ ಮಾಹಿತಿ ಪ್ರಕಾರ, KaiOS 2.5.1 ಅಥವಾ ಇತ್ತೀಚಿನ ಆಪರೇಟಿಂಗ್ ಸಿಸ್ಟಮ್ ಕೇವಲ ವಾಟ್ಸಾಪ್ʼನ್ನ ಬೆಂಬಲಿಸುತ್ತದೆ.

5) ವಾಟ್ಸಾಪ್ ಬಳಸುವುದು ಹೇಗೆ..?
ತಜ್ಞರ ಪ್ರಕಾರ, ಯಾವುದೇ ಸಮಸ್ಯೆಯಿಲ್ಲದೆ ವಾಟ್ಸಾಪ್ ಬಳಸಲು ನೀವು ನಿಮ್ಮ ಆಪರೇಟಿಂಗ್ ಸಿಸ್ಟಮ್ʼನ್ನ ಅಪ್ಡೇಟ್ ಮಾಡಬೇಕಾಗುತ್ತದೆ. ಆಪಲ್ ಐಫೋನ್ʼನಲ್ಲಿ, ನೀವು ಇತ್ತೀಚಿನ ಆಪರೇಟಿಂಗ್ ಸಿಸ್ಟಂʼನ್ನ ಅಪ್ ಡೇಟ್ ಮಾಡಬೇಕು. ಆಂಡ್ರಾಯ್ಡ್ ಫೋನ್ ಬಳಕೆದಾರರು ಸೆಟ್ಟಿಂಗ್ಸ್ʼಗೆ ಹೋಗಿ ಇತ್ತೀಚಿನ ಆಪರೇಟಿಂಗ್ ಸಿಸ್ಟಂ ಡೌನ್ ಲೋಡ್ ಮಾಡಿಕೊಳ್ಳಬೋದು.

Spread the love
  • Related Posts

    ಕಡಿರುದ್ಯಾವರ: ಗ್ರಾಮೀಣ ರಸ್ತೆಯಲ್ಲಿ ಮರ ಸಾಗಾಟದ ಲಾರಿಗಳ ಹಾವಳಿ — ರಸ್ತೆ ಹಾಳಾಗುತ್ತಿರುವ ಆರೋಪ

    ಕಾನರ್ಪ ನೂಜಿ ರಸ್ತೆಯಲ್ಲಿ ತಡರಾತ್ರಿ ರಸ್ತೆ ಮಧ್ಯೆ ಲಾರಿ ಬಾಕಿ; ಸ್ಥಳೀಯರಿಂದ ಪ್ರತಿಭಟನೆ ಕಡಿರುದ್ಯಾವರ: ಗ್ರಾಮೀಣ ಪ್ರದೇಶದ ರಸ್ತೆಗಳಲ್ಲಿ ನಿರಂತರವಾಗಿ ಮರ ಸಾಗಾಟದ ಲಾರಿಗಳು ಸಂಚರಿಸುತ್ತಿರುವುದರಿಂದ ರಸ್ತೆಗಳು ಸಂಪೂರ್ಣ ಹಾಳಾಗುತ್ತಿವೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಕಾನರ್ಪದಲ್ಲಿ ತಡರಾತ್ರಿ ಮರ ಸಾಗಾಟ ಮಾಡುತ್ತಿದ್ದ…

    Spread the love

    ಪದ್ಮುಂಜ: ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ವತಿಯಿಂದ ಮೊಸರು ಕುಡಿಕೆ ಉತ್ಸವ, ಸಾಧಕರಿಗೆ ಸನ್ಮಾನ,ಬಹುಮಾನ ವಿತರಣೆ ಕಾರ್ಯಕ್ರಮ

    ಪದ್ಮುಂಜ: ಸೆ 12 ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ವತಿಯಿಂದ ಮೊಸರು ಕುಡಿಕೆ ಉತ್ಸವ, ಸಾಧಕರಿಗೆ ಸನ್ಮಾನ, ವಿಜೇತರಿಗೆ ಬಹುಮಾನ ವಿತರಣೆ ಕಾರ್ಯಕ್ರಮ ಪದ್ಮುಂಜ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ವಠಾರದಲ್ಲಿ ವಿಜೃಂಭಣೆಯಿಂದ ನೆರವೇರಿತು.ಬೆಳಗ್ಗೆ ಉಮಾಮಹೇಶ್ವರ ಮಹಿಳಾ ಭಜನಾ ತಂಡ,…

    Spread the love

    You Missed

    ಕಡಿರುದ್ಯಾವರ: ಗ್ರಾಮೀಣ ರಸ್ತೆಯಲ್ಲಿ ಮರ ಸಾಗಾಟದ ಲಾರಿಗಳ ಹಾವಳಿ — ರಸ್ತೆ ಹಾಳಾಗುತ್ತಿರುವ ಆರೋಪ

    • By admin
    • September 13, 2026
    • 4 views
    ಕಡಿರುದ್ಯಾವರ: ಗ್ರಾಮೀಣ ರಸ್ತೆಯಲ್ಲಿ ಮರ ಸಾಗಾಟದ ಲಾರಿಗಳ ಹಾವಳಿ — ರಸ್ತೆ ಹಾಳಾಗುತ್ತಿರುವ ಆರೋಪ

    ಪದ್ಮುಂಜ: ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ವತಿಯಿಂದ ಮೊಸರು ಕುಡಿಕೆ ಉತ್ಸವ, ಸಾಧಕರಿಗೆ ಸನ್ಮಾನ,ಬಹುಮಾನ ವಿತರಣೆ ಕಾರ್ಯಕ್ರಮ

    • By admin
    • September 13, 2026
    • 10 views
    ಪದ್ಮುಂಜ: ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ವತಿಯಿಂದ ಮೊಸರು ಕುಡಿಕೆ ಉತ್ಸವ, ಸಾಧಕರಿಗೆ ಸನ್ಮಾನ,ಬಹುಮಾನ ವಿತರಣೆ ಕಾರ್ಯಕ್ರಮ

    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    • By admin
    • September 12, 2026
    • 5 views
    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    • By admin
    • September 8, 2026
    • 10 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    • By admin
    • September 8, 2026
    • 17 views
    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    • By admin
    • September 3, 2026
    • 13 views
    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು