ಯಾಸ್ ಚಂಡಮಾರುತ ತೀವ್ರ ರೂಪ ಪಡೆಯುವ ಸಾಧ್ಯತೆ ಮುನ್ನೆಚ್ಚರಿಕೆ ಕ್ರಮ ವಹಿಸುವಂತೆ ಹವಮಾನ ಇಲಾಖೆಯ ಸೂಚನೆ!

ಬೆಂಗಳೂರು: ಬಂಗಾಳಕೊಲ್ಲಿಯ ಪೂರ್ವಮಧ್ಯ ಭಾಗದಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ತೀವ್ರ ಚಂಡಮಾರುತದ ಸ್ವರೂಪ ಪಡೆದು ಮೇ 26ರಂದು ಒಡಿಶಾ ಮತ್ತು ಪಶ್ಚಿಮ ಬಂಗಾಳ ತೀರವನ್ನು ಹಾದುಹೋಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ವಾಯುಭಾರ ಕುಸಿತವು ಚಂಡಮಾರುತವಾಗಿ ಬದಲಾಗಲೇಬೇಕು ಎಂದು ಹೇಳಲಾಗದು. ಈಗಿನ ಸೂಚನೆಯಂತೆ ಮೇ 23ರಂದು ಬೆಳಿಗ್ಗೆ ಬಂಗಾಳಕೊಲ್ಲಿಯ ಪೂರ್ವಮಧ್ಯ ಭಾಗದಲ್ಲಿ ಕೇಂದ್ರೀಕೃತಗೊಳ್ಳುವ ವಾಯುಭಾರ ಕುಸಿತ ಬಳಿಕ ಉತ್ತರ-ವಾಯವ್ಯದತ್ತ ಚಲಿಸಿ, ಮೇ 24ರ ವೇಳೆಗೆ ತೀವ್ರ ಬಿರುಗಾಳಿಯ ರೂಪ ಪಡೆಯುತ್ತದೆ. ಬಳಿಕ ಮುಂದಿನ 24 ಗಂಟೆಯ ಅವಧಿಯಲ್ಲಿ ತೀವ್ರ ಚಂಡಮಾರುತವಾಗಿ ಮಾರ್ಪಡಲಿದೆ. ಬಳಿಕ ಮುಂದುವರಿದು ಮೇ 26ರ ಸಂಜೆ ವೇಳೆಗೆ ಪಶ್ಚಿಮ ಬಂಗಾಳ ಮತ್ತು ಒಡಿಶಾ ಕರಾವಳಿಯನ್ನು ಹಾದುಹೋಗಲಿದೆ ಎಂದು ಇಲಾಖೆ ಹೇಳಿದೆ.
ಯಾಸ್ ಚಂಡಮಾರುತ: ಒಡಿಶಾ, ಬಂಗಾಳದಲ್ಲಿ ಕಟ್ಟೆಚ್ಚರ

ಪಶ್ಚಿಮ ಕರಾವಳಿ ತೀರದ ಪ್ರದೇಶಗಳು ತೌಕ್ತೆ ಚಂಡಮಾರುತದ ಅಬ್ಬರದಿಂದ ಚೇತರಿಸಿಕೊಳ್ಳುವ ಮೊದಲೇ ದೇಶದ ಪೂರ್ವ ಕರಾವಳಿಗೆ ಮತ್ತೊಂದು ಚಂಡಮಾರುತದ ಭೀತಿ ಎದುರಾಗಿದೆ. ಯಾಸ್ ಎಂಬ ಹೆಸರಿವ ಚಂಡಮಾರುತ ಪಶ್ಚಿಮ ಬಂಗಾಳ ಮತ್ತು ಒಡಿಶಾ ಕರಾವಳಿಯನ್ನು ಮೇ 26ರಂದು ಹಾದುಹೋಗುವ ಸಾಧ್ಯತೆ ಇರುವುದರಿಂದ ಎರಡೂ ರಾಜ್ಯಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಈ ನಿಟ್ಟಿನಲ್ಲಿ ಈ ಕೆಳಗಿನ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ.

ಚಂಡ ಮಾರುತದ ಹಿನ್ನೆಲೆಯಲ್ಲಿ ಎದುರಾಗಲಿರುವ ಯಾವುದೇ ತುರ್ತು ಸಂದರ್ಭಗಳನ್ನು ಎದುರಿಸಲು ಆರೋಗ್ಯ ವ್ಯವಸ್ಥೆ ಹಾಗೂ ಔಷಧಗಳನ್ನು ಅಗತ್ಯದ ಪ್ರಮಾಣದಲ್ಲಿ ದಾಸ್ತಾನು ಇಡುವಂತೆ ಆಂಧ್ರಪ್ರದೇಶ, ಒಡಿಶಾ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಂಡಮಾನ್-ನಿಕೊಬಾರ್ ದ್ವೀಪಗಳಿಗೆ ಕೇಂದ್ರ ಸರಕಾರ ಸೂಚಿಸಿದೆ.

ಒಡಿಶಾದ 30 ಜಿಲ್ಲೆಗಳ ಪೈಕಿ 14ರಲ್ಲಿ ಕಟ್ಟೆಚ್ಚರದ ಸ್ಥಿತಿ ಘೋಷಿಸಲಾಗಿದೆ. ಪರಿಸ್ಥಿತಿಯನ್ನು ಎದುರಿಸಲು ಸನ್ನದ್ಧ ಸ್ಥಿತಿಯಲ್ಲಿರುವಂತೆ ಒಡಿಶಾ ಸರಕಾರ ನೌಕಾಪಡೆ ಹಾಗೂ ತಟರಕ್ಷಕ ಪಡೆಯನ್ನು ವಿನಂತಿಸಿದೆ.

ಮುಂದಿನ ವಾರ ಪಶ್ಚಿಮ ಬಂಗಾಳ, ಒಡಿಶಾ ಮತ್ತು ಆಂಧ್ರಪ್ರದೇಶದಲ್ಲಿ 22 ವಿಶೇಷ ರೈಲುಗಳನ್ನು ರದ್ದುಗೊಳಿಸಲಾಗಿದೆ ಎಂದು ಭಾರತೀಯ ರೈಲ್ವೇ ಹೇಳಿದೆ.

ಅಂಡಮಾನ್-ನಿಕೊಬಾರ್ ದ್ವೀಪಗಳಲ್ಲಿ ಹಾಗೂ ಪೂರ್ವತೀರದ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು ಮುನ್ನೆಚ್ಚರಿಕೆ ವಹಿಸಲು ಸೂಚಿಸಲಾಗಿದೆ.

ಪಶ್ಚಿಮ ಬಂಗಾಳ ಮತ್ತು ಒಡಿಶಾ ಕರಾವಳಿಯಲ್ಲಿ ರಾಷ್ಟ್ರೀಯ ವಿಪತ್ತು ನಿರ್ವಹಣೆ ದಳದ ತಂಡಗಳನ್ನು ನಿಯೋಜಿಸಲಾಗಿದೆ. ತೌಕ್ತೆ ಚಂಡಮಾರುತದ ಪ್ರಭಾವಕ್ಕೆ ಒಳಗಾದ ಪ್ರದೇಶಗಳಲ್ಲಿ ರಕ್ಷಣಾ ಕಾರ್ಯಕ್ಕೆ ನಿಯೋಜಿಸಲಾಗಿದ್ದ ವಿಪತ್ತು ನಿರ್ವಹಣಾ ದಳದ ತುಕಡಿಯನ್ನು ವಾಪಾಸು ಕರೆಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

Spread the love
  • Related Posts

    ಬೆಳ್ತಂಗಡಿ: ಗುರುವಾಯನಕೆರೆ-ವೇಣೂರಿನ ಹದಗೆಟ್ಟ ರಸ್ತೆಯ ತುರ್ತು ದುರಸ್ತಿ ಕಾರ್ಯ, ಶಾಸಕರ ತುರ್ತು ಸ್ಪಂದನೆ

    ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಗುರುವಾಯನಕೆರೆ–ವೇಣೂರು ಮುಖ್ಯರಸ್ತೆಯ ಪಡಂಗಡಿ ಭಾಗದಲ್ಲಿ ಇತ್ತೀಚಿನ ಭಾರೀ ಮಳೆಯಿಂದ ರಸ್ತೆ ಹದಗೆಟ್ಟು ಸಾರ್ವಜನಿಕರು ಹಾಗೂ ವಾಹನ ಸವಾರರು ಸಂಚಾರಕ್ಕೆ ತೊಂದರೆ ಅನುಭವಿಸುತ್ತಿದ್ದರು. ಈ ಕುರಿತು ಶಾಸಕ ಶ್ರೀ ಹರೀಶ್ ಪೂಂಜ ಅವರ ಮುತುವರ್ಜಿಯಿಂದ ಸ್ಥಳವನ್ನು ಪರಿಶೀಲಿಸಿ, ಸಾರ್ವಜನಿಕರ…

    Spread the love

    30 ವರ್ಷಗಳಿಂದ ಶಾಪಗ್ರಸ್ತವಾಗಿರುವ ಮುಂಡಾಜೆ ಗ್ರಾಮದ ಸೀಟು–ಕಾಯರ್ತೋಡಿ–ಕೊಡಂಗೆ–ಮೂಲಾರು ಕುಡೆಂಚಿ ರಸ್ತೆ: ಚುನಾವಣೆ ಬಂದಾಗ ಶಿಲಾನ್ಯಾಸ, ಬಳಿಕ ಮರೆತುಬಿಡುವ ಆರೋಪ

    ಬೆಳ್ತಂಗಡಿ: ಮುಂಡಾಜೆ ಗ್ರಾಮದ ಸೀಟು–ಕಾಯರ್ತೋಡಿ–ಕೊಡಂಗೆ–ಮೂಲಾರು ಕುಡೆಂಚಿ ಸಂಪರ್ಕ ರಸ್ತೆ ಕಳೆದ ಹಲವು ದಶಕಗಳಿಂದ ಅಭಿವೃದ್ಧಿಯ ನಿರೀಕ್ಷೆಯಲ್ಲೇ ಉಳಿದಿದ್ದು, ಸ್ಥಳೀಯ ನಿವಾಸಿಗಳ ಆಕ್ರೋಶಕ್ಕೆ ಕಾರಣವಾಗಿದೆ. ಸುಮಾರು 200ಕ್ಕೂ ಹೆಚ್ಚು ಮನೆಗಳಿಗೆ ಪ್ರಮುಖ ಸಂಪರ್ಕ ಕಲ್ಪಿಸುವ 6 ಕಿಲೋಮೀಟರ್ ಉದ್ದದ ಈ ರಸ್ತೆಗೆ ಸಮರ್ಪಕ…

    Spread the love

    You Missed

    ಬೆಳ್ತಂಗಡಿ: ಗುರುವಾಯನಕೆರೆ-ವೇಣೂರಿನ ಹದಗೆಟ್ಟ ರಸ್ತೆಯ ತುರ್ತು ದುರಸ್ತಿ ಕಾರ್ಯ, ಶಾಸಕರ ತುರ್ತು ಸ್ಪಂದನೆ

    • By admin
    • July 29, 2026
    • 4 views
    ಬೆಳ್ತಂಗಡಿ: ಗುರುವಾಯನಕೆರೆ-ವೇಣೂರಿನ  ಹದಗೆಟ್ಟ ರಸ್ತೆಯ ತುರ್ತು ದುರಸ್ತಿ ಕಾರ್ಯ, ಶಾಸಕರ ತುರ್ತು ಸ್ಪಂದನೆ

    30 ವರ್ಷಗಳಿಂದ ಶಾಪಗ್ರಸ್ತವಾಗಿರುವ ಮುಂಡಾಜೆ ಗ್ರಾಮದ ಸೀಟು–ಕಾಯರ್ತೋಡಿ–ಕೊಡಂಗೆ–ಮೂಲಾರು ಕುಡೆಂಚಿ ರಸ್ತೆ: ಚುನಾವಣೆ ಬಂದಾಗ ಶಿಲಾನ್ಯಾಸ, ಬಳಿಕ ಮರೆತುಬಿಡುವ ಆರೋಪ

    • By admin
    • July 29, 2026
    • 5 views
    30 ವರ್ಷಗಳಿಂದ ಶಾಪಗ್ರಸ್ತವಾಗಿರುವ ಮುಂಡಾಜೆ ಗ್ರಾಮದ ಸೀಟು–ಕಾಯರ್ತೋಡಿ–ಕೊಡಂಗೆ–ಮೂಲಾರು ಕುಡೆಂಚಿ ರಸ್ತೆ: ಚುನಾವಣೆ ಬಂದಾಗ ಶಿಲಾನ್ಯಾಸ, ಬಳಿಕ ಮರೆತುಬಿಡುವ ಆರೋಪ

    ಸಕಲೇಶಪುರ: ಅಕ್ರಮ ಭೂ ಮಂಜೂರಾತಿ ಹಗರಣ – ಬಂಧನ ಭೀತಿಯಿಂದ ನೂರಕ್ಕೂ ಹೆಚ್ಚು ಅಧಿಕಾರಿಗಳು ಸಾಮೂಹಿಕ ರಜೆ!

    • By admin
    • July 25, 2026
    • 10 views
    ಸಕಲೇಶಪುರ: ಅಕ್ರಮ ಭೂ ಮಂಜೂರಾತಿ ಹಗರಣ – ಬಂಧನ ಭೀತಿಯಿಂದ ನೂರಕ್ಕೂ ಹೆಚ್ಚು ಅಧಿಕಾರಿಗಳು ಸಾಮೂಹಿಕ ರಜೆ!

    ಕಲ್ಪವೃಕ್ಷ ಜ್ಞಾನ ವಿಕಾಸ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಪ್ರಾತ್ಯಕ್ಷಿಕೆ: ಆರೋಗ್ಯಕರ ಜೀವನಕ್ಕೆ ಸಮತೋಲಿತ ಆಹಾರ ಹಾಗೂ ಸ್ವಚ್ಛತೆ ಅಗತ್ಯ – ಡಾ. ನಿಶ್ಚಯ್ ಎಚ್.ಎನ್.

    • By admin
    • July 24, 2026
    • 7 views
    ಕಲ್ಪವೃಕ್ಷ ಜ್ಞಾನ ವಿಕಾಸ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಪ್ರಾತ್ಯಕ್ಷಿಕೆ: ಆರೋಗ್ಯಕರ ಜೀವನಕ್ಕೆ ಸಮತೋಲಿತ ಆಹಾರ ಹಾಗೂ ಸ್ವಚ್ಛತೆ ಅಗತ್ಯ – ಡಾ. ನಿಶ್ಚಯ್ ಎಚ್.ಎನ್.

    ಕರಾವಳಿಯಲ್ಲಿ ಮುಂದುವರಿದ ಮಳೆ, ಉಡುಪಿ ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

    • By admin
    • July 24, 2026
    • 7 views
    ಕರಾವಳಿಯಲ್ಲಿ ಮುಂದುವರಿದ ಮಳೆ, ಉಡುಪಿ ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

    ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಹಿನ್ನೆಲೆಯಲ್ಲಿ ಶುಕ್ರವಾರ 24ರಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

    • By admin
    • July 23, 2026
    • 9 views
    ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಹಿನ್ನೆಲೆಯಲ್ಲಿ ಶುಕ್ರವಾರ 24ರಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ