ವಿಶೇಷ ಭದ್ರತೆ ವಾಪಾಸ್ ಪಡೆದ ರಾಜ್ಯಸರ್ಕಾರದ ನಡೆಗೆ ಆಕ್ರೋಶ ವ್ಯಕ್ತಪಡಿಸಿದ ಯತ್ನಾಲ್! ‘ನನಗೆ ಏನೇ ಆದರೂ ಸರ್ಕಾರವೇ ಹೊಣೆ’

ವಿಜಯಪುರ: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ನೀಡಿದ್ದ ವಿಶೇಷ ವೈಯಕ್ತಿಕ ಭದ್ರತೆಯನ್ನು ರಾಜ್ಯ ಸರಕಾರ ವಾಪಸ್ ಪಡೆದಿದೆ. ಈ ಹಿನ್ನೆಲೆಯಲ್ಲಿ ಸರ್ಕಾರದ ವಿರುದ್ದ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಯತ್ನಾಳ್‌, ”ನನಗೆ ಏನಾದರೂ ತೊಂದರೆಗಳಾಗಲೀ ಅಥವಾ ಅನಾಹುತಗಳೇನಾದರೂ ಆದರೆ ಅದಕ್ಕೆ ಆಡಳಿತ ನಡೆಸುತ್ತಿರುವ ಬಿ ಎಸ್‌ ಯಡಿಯೂರಪ್ಪರ ಸರ್ಕಾರ ಹೊಣೆ” ಎಂದು ಹೇಳಿದ್ದಾರೆ.

ಈ ಸಂಬಂಧ ಸಿಎಂ ಯಡಿಯೂರಪ್ಪ, ಗೃಹ ಸಚಿವ, ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಪೊಲೀಸ್ ಆಯುಕ್ತರಿಗೆ ಪತ್ರ ಬರೆದಿರುವ ಅವರು, ”ನಾನು ಪ್ರಖರ ಹಿಂದುಪರವಾದ ಮತ್ತು ಜನಪರ ಹೋರಾಟ ಮತ್ತು ಸಂಘಟನೆಯಲ್ಲಿ ತೊಡಗಿಸಿಕೊಂಡಿರುವುದರಿಂದ ಹಿಂದೆ ನನ್ನ ಮೇಲೆ ಅನೇಕ ಬಾರಿ ಕೆಲವು ಹಿಂದು ವಿರೋಧಿ ಸಂಘಟನೆಗಳು ಮತ್ತು ಮತಾಂಧ ಶಕ್ತಿಗಳು ದಾಳಿ ಮಾಡುವ ದುರುದ್ದೇಶದ ಮುನ್ಸೂಚನೆಯನ್ನು ಅರಿತ ಸರ್ಕಾರದ ಪೊಲೀಸ್‌ ಗುಪ್ತಚರ ಇಲಾಖೆಯ ಆದೇಶದ ಮೇರೆಗೆ ನನಗೆ ಸೂಕ್ತ ಪೊಲೀಸ್‌ ಭದ್ರತೆಯನ್ನು ಒದಗಿಸಲಾಗಿತ್ತು. ಆದರೆ ನಾನು ಮುಖ್ಯಮಂತ್ರಿಯವರ ವಿರುದ್ದ ಹೇಳಿಕೆ ನೀಡಿದ್ದೇನೆ ಎಂಬ ಕಾರಣಕ್ಕೆ ಇಂದು ಮುಖ್ಯಮಂತ್ರಿಗಳು ಸೇಡಿನ ರಾಜಕಾರಣ ಮಾಡಿ ಪೊಲೀಸ್‌ ಭದ್ರತೆಯನ್ನು ಹಿಂಪಡೆದಿದ್ದಾರೆ” ಎಂದು ದೂರಿದ್ದಾರೆ.

”ನೀವು ನಿಮ್ಮ ಹಳೇ ಚಾಳಿಯನ್ನು ಮುಂದುವರೆಸಿ ದ್ವೇಷದ ರಾಜಕಾರಣಕ್ಕೆ ಮುಂದಾಗಿದ್ದೀರಿ ಎಂದು ಬಿಎಸ್‌ವೈನ್ನು ಉದ್ದೇಶಿಸಿ ಹೇಳಿರುವ ಅವರು, ಈ ಮೂಲಕ ನನ್ನ ಜನಪರ, ಹಿಂದೂಪರ, ಅನ್ಯಾಯದ ವಿರುದ್ದದ ಹೋರಾಟವನ್ನು ಹತ್ತಿಕ್ಕಲಾಗದು” ಎಂದು ಹೇಳಿದ್ದಾರೆ.

”ಹಾಗೆಯೇ ಮುಂದಿನ ದಿನಗಳಲ್ಲಿ ನನಗೆ ಏನಾದರೂ ತೊಂದರೆಯಾದರೆ ಅದಕ್ಕೆ ಸರ್ಕಾರ ಹೊಣೆಯಾಗುತ್ತದೆ. ನಿಮ್ಮ ಕೀಳುಮಟ್ಟದ ಕಾರ್ಯವೈಖರಿ ಹಾಗೂ ಸೇಡಿನ ರಾಜಕೀಯಕ್ಕೆ ನನ್ನ ಧಿಕ್ಕಾರವಿದೆ” ಎಂದು ಕೂಡಾ ಹೇಳಿದ್ದಾರೆ.

Spread the love
  • Related Posts

    ಬೆಳ್ತಂಗಡಿ : ಅತಿ ಹಿಂದುಳಿದ ಮಠಾಧೀಶರ ಮಹಾಸಭಾವತಿಯಿಂದ ಡಾ.ಡಿ. ವೀರೇಂದ್ರ ಹೆಗ್ಗಡೆಯವರ ಭೇಟಿ

    ಬೆಳ್ತಂಗಡಿ: ಇತ್ತೀಚಿನ ದಿನಗಳಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ವಿರುದ್ಧ ಕೇಳಿಬರುತ್ತಿರುವ ಆರೋಪಗಳ ಹಿನ್ನೆಲೆಯಲ್ಲಿ ಅತಿ ಹಿಂದುಳಿದ ಮಠಾಧೀಶರ ಮಹಾಸಭೆ (ರಿ.) ಕೋರ್ ಕಮಿಟಿಯ ಸದಸ್ಯರಾದ ಸ್ವಾಮೀಜಿಗಳು ಧರ್ಮಸ್ಥಳಕ್ಕೆ ಜು.10 ರಂದು ಭೇಟಿ ನೀಡಿ,…

    Spread the love

    ಬೆಳ್ತಂಗಡಿ ತಹಶೀಲ್ದಾರ್ ಆಗಿ ಎಸ್.ಎನ್.ನರಗುಂದ ಅಧಿಕಾರ ಸ್ವೀಕಾರ

    ಬೆಳ್ತಂಗಡಿ : ತಹಶೀಲ್ದಾರ್ ಪೃಥ್ವಿ ಸಾನಿಕಂ ವರ್ಗಾವಣೆಯಾದ ಜಾಗಕ್ಕೆ ಹೊಸ ತಹಶೀಲ್ದಾರ್ ಆಗಿ ಎಸ್.ಎನ್.ನರಗುಂದ ಅವರನ್ನು ಸರಕಾರ ನೇಮಕ ಮಾಡಿ ಜು.2 ರಂದು ಆದೇಶ ಹೊರಡಿಸಿತ್ತು.‌ ಇದೀಗ ಮೈಸೂರು ಜಿಲ್ಲೆಯ ಅಭಿವೃದ್ಧಿ ಪ್ರಾಧಿಕಾರದ ವಿಶೇಷ ಗ್ರೇಡ್-1 ತಹಶೀಲ್ದಾರ್ ಆಗಿರುವ ಎಸ್.ಎನ್.ನರಗುಂದ ಅವರು…

    Spread the love

    You Missed

    ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಪತ್ನಿ ಚನ್ನಮ್ಮ ವಿಧಿವಶ

    • By admin
    • July 18, 2026
    • 4 views
    ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಪತ್ನಿ ಚನ್ನಮ್ಮ ವಿಧಿವಶ

    ಭಾರಿ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಜು.18ರಂದು ರಜೆ ಘೋಷಣೆ

    • By admin
    • July 17, 2026
    • 5 views
    ಭಾರಿ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಜು.18ರಂದು ರಜೆ ಘೋಷಣೆ

    ಮಹಿಳಾ ಸಬಲೀಕರಣ ಮತ್ತು ಸಮಾಜ ಸೇವೆಗೆ ಜಾಗತಿಕ ಮನ್ನಣೆ: ಹೇಮಾವತಿ ವಿ. ಹೆಗ್ಗಡೆಗೆ ಗೌರವ ಡಾಕ್ಟರೇಟ್

    • By admin
    • July 17, 2026
    • 9 views
    ಮಹಿಳಾ ಸಬಲೀಕರಣ ಮತ್ತು ಸಮಾಜ ಸೇವೆಗೆ ಜಾಗತಿಕ ಮನ್ನಣೆ:  ಹೇಮಾವತಿ ವಿ. ಹೆಗ್ಗಡೆಗೆ ಗೌರವ ಡಾಕ್ಟರೇಟ್

    ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ನೀಟ್ 2026ರಲ್ಲಿ ಐತಿಹಾಸಿಕ ಸಾಧನೆ – ಅಖಿಲ ಭಾರತ ಮಟ್ಟದಲ್ಲಿ 271ನೇ ರ್ಯಾಂಕ್

    • By admin
    • July 17, 2026
    • 8 views
    ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ನೀಟ್ 2026ರಲ್ಲಿ ಐತಿಹಾಸಿಕ ಸಾಧನೆ – ಅಖಿಲ ಭಾರತ ಮಟ್ಟದಲ್ಲಿ 271ನೇ ರ್ಯಾಂಕ್

    ಚಿರಂಜೀವಿ ಯುವಕ ಮಂಡಲ(ರಿ), ಕಾನರ್ಪ ಇದರ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    • By admin
    • July 16, 2026
    • 14 views
    ಚಿರಂಜೀವಿ ಯುವಕ ಮಂಡಲ(ರಿ), ಕಾನರ್ಪ ಇದರ 35ನೇ ವರ್ಷದ  ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    ಬಂಟ್ವಾಳದಲ್ಲಿ ಬೆಚ್ಚಿಬೀಳಿಸಿದ ಭೀಕರ ಹತ್ಯೆ: ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲೇ ಯುವತಿ ಕೊಲೆ, ಆರೋಪಿ ಪರಾರಿ

    • By admin
    • July 16, 2026
    • 15 views
    ಬಂಟ್ವಾಳದಲ್ಲಿ ಬೆಚ್ಚಿಬೀಳಿಸಿದ ಭೀಕರ ಹತ್ಯೆ: ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲೇ ಯುವತಿ ಕೊಲೆ, ಆರೋಪಿ ಪರಾರಿ