ವಿಶೇಷ ಭದ್ರತೆ ವಾಪಾಸ್ ಪಡೆದ ರಾಜ್ಯಸರ್ಕಾರದ ನಡೆಗೆ ಆಕ್ರೋಶ ವ್ಯಕ್ತಪಡಿಸಿದ ಯತ್ನಾಲ್! ‘ನನಗೆ ಏನೇ ಆದರೂ ಸರ್ಕಾರವೇ ಹೊಣೆ’

ವಿಜಯಪುರ: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ನೀಡಿದ್ದ ವಿಶೇಷ ವೈಯಕ್ತಿಕ ಭದ್ರತೆಯನ್ನು ರಾಜ್ಯ ಸರಕಾರ ವಾಪಸ್ ಪಡೆದಿದೆ. ಈ ಹಿನ್ನೆಲೆಯಲ್ಲಿ ಸರ್ಕಾರದ ವಿರುದ್ದ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಯತ್ನಾಳ್‌, ”ನನಗೆ ಏನಾದರೂ ತೊಂದರೆಗಳಾಗಲೀ ಅಥವಾ ಅನಾಹುತಗಳೇನಾದರೂ ಆದರೆ ಅದಕ್ಕೆ ಆಡಳಿತ ನಡೆಸುತ್ತಿರುವ ಬಿ ಎಸ್‌ ಯಡಿಯೂರಪ್ಪರ ಸರ್ಕಾರ ಹೊಣೆ” ಎಂದು ಹೇಳಿದ್ದಾರೆ.

ಈ ಸಂಬಂಧ ಸಿಎಂ ಯಡಿಯೂರಪ್ಪ, ಗೃಹ ಸಚಿವ, ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಪೊಲೀಸ್ ಆಯುಕ್ತರಿಗೆ ಪತ್ರ ಬರೆದಿರುವ ಅವರು, ”ನಾನು ಪ್ರಖರ ಹಿಂದುಪರವಾದ ಮತ್ತು ಜನಪರ ಹೋರಾಟ ಮತ್ತು ಸಂಘಟನೆಯಲ್ಲಿ ತೊಡಗಿಸಿಕೊಂಡಿರುವುದರಿಂದ ಹಿಂದೆ ನನ್ನ ಮೇಲೆ ಅನೇಕ ಬಾರಿ ಕೆಲವು ಹಿಂದು ವಿರೋಧಿ ಸಂಘಟನೆಗಳು ಮತ್ತು ಮತಾಂಧ ಶಕ್ತಿಗಳು ದಾಳಿ ಮಾಡುವ ದುರುದ್ದೇಶದ ಮುನ್ಸೂಚನೆಯನ್ನು ಅರಿತ ಸರ್ಕಾರದ ಪೊಲೀಸ್‌ ಗುಪ್ತಚರ ಇಲಾಖೆಯ ಆದೇಶದ ಮೇರೆಗೆ ನನಗೆ ಸೂಕ್ತ ಪೊಲೀಸ್‌ ಭದ್ರತೆಯನ್ನು ಒದಗಿಸಲಾಗಿತ್ತು. ಆದರೆ ನಾನು ಮುಖ್ಯಮಂತ್ರಿಯವರ ವಿರುದ್ದ ಹೇಳಿಕೆ ನೀಡಿದ್ದೇನೆ ಎಂಬ ಕಾರಣಕ್ಕೆ ಇಂದು ಮುಖ್ಯಮಂತ್ರಿಗಳು ಸೇಡಿನ ರಾಜಕಾರಣ ಮಾಡಿ ಪೊಲೀಸ್‌ ಭದ್ರತೆಯನ್ನು ಹಿಂಪಡೆದಿದ್ದಾರೆ” ಎಂದು ದೂರಿದ್ದಾರೆ.

”ನೀವು ನಿಮ್ಮ ಹಳೇ ಚಾಳಿಯನ್ನು ಮುಂದುವರೆಸಿ ದ್ವೇಷದ ರಾಜಕಾರಣಕ್ಕೆ ಮುಂದಾಗಿದ್ದೀರಿ ಎಂದು ಬಿಎಸ್‌ವೈನ್ನು ಉದ್ದೇಶಿಸಿ ಹೇಳಿರುವ ಅವರು, ಈ ಮೂಲಕ ನನ್ನ ಜನಪರ, ಹಿಂದೂಪರ, ಅನ್ಯಾಯದ ವಿರುದ್ದದ ಹೋರಾಟವನ್ನು ಹತ್ತಿಕ್ಕಲಾಗದು” ಎಂದು ಹೇಳಿದ್ದಾರೆ.

”ಹಾಗೆಯೇ ಮುಂದಿನ ದಿನಗಳಲ್ಲಿ ನನಗೆ ಏನಾದರೂ ತೊಂದರೆಯಾದರೆ ಅದಕ್ಕೆ ಸರ್ಕಾರ ಹೊಣೆಯಾಗುತ್ತದೆ. ನಿಮ್ಮ ಕೀಳುಮಟ್ಟದ ಕಾರ್ಯವೈಖರಿ ಹಾಗೂ ಸೇಡಿನ ರಾಜಕೀಯಕ್ಕೆ ನನ್ನ ಧಿಕ್ಕಾರವಿದೆ” ಎಂದು ಕೂಡಾ ಹೇಳಿದ್ದಾರೆ.

Spread the love
  • Related Posts

    ನಾಗರಪಂಚಮಿ ಪ್ರಯುಕ್ತ ಸೋಮವಾರ ದ.ಕ. ಜಿಲ್ಲೆಗೆ ಸಾರ್ವತ್ರಿಕ ರಜೆ

    ಮಂಗಳೂರು: ನಾಗರಪಂಚಮಿ ಹಬ್ಬದ ಪ್ರಯುಕ್ತ ಆಗಸ್ಟ್ 17ರಂದು ಸೋಮವಾರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ ಘೋಷಿಸಲಾಗಿದೆ. ಜಿಲ್ಲೆಯಾದ್ಯಂತ ಶಾಲಾ-ಕಾಲೇಜುಗಳು ಸೇರಿದಂತೆ ಎಲ್ಲಾ ಶಿಕ್ಷಣ ಸಂಸ್ಥೆಗಳು ಹಾಗೂ ಸರಕಾರಿ ಕಚೇರಿಗಳಿಗೆ ಸೋಮವಾರ ರಜೆ ಇರಲಿದೆ ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.…

    Spread the love

    ಮುಂಡಾಜೆ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದಲ್ಲಿ ಸ್ವಾತಂತ್ರ್ಯೋತ್ಸವ

    ಬೆಳ್ತಂಗಡಿ: ಮುಂಡಾಜೆಯ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಧ್ವಜಾರೋಹಣ ನೆರವೇರಿಸುವ ಮೂಲಕ ಆಚರಿಸಲಾಯಿತು.ಸಂಘದ ಅಧ್ಯಕ್ಷ ವಿಜಯ ಆರ್. ಧ್ವಜಾರೋಹಣ ನೆರವೇರಿಸಿ, ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.ಈ ಸಂದರ್ಭದಲ್ಲಿ ಒಂಜರೆಬೈಲು ಅಂಗನವಾಡಿ ಕೇಂದ್ರದ ಪುಷ್ಪಾ, ಕೊಟ್ರೊಟ್ಟು ಅಂಗನವಾಡಿ ಕೇಂದ್ರದ ಪುಷ್ಪಾ,…

    Spread the love

    You Missed

    ನಾಗರಪಂಚಮಿ ಪ್ರಯುಕ್ತ ಸೋಮವಾರ ದ.ಕ. ಜಿಲ್ಲೆಗೆ ಸಾರ್ವತ್ರಿಕ ರಜೆ

    • By admin
    • August 16, 2026
    • 3 views
    ನಾಗರಪಂಚಮಿ ಪ್ರಯುಕ್ತ ಸೋಮವಾರ ದ.ಕ. ಜಿಲ್ಲೆಗೆ ಸಾರ್ವತ್ರಿಕ ರಜೆ

    ಮುಂಡಾಜೆ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದಲ್ಲಿ ಸ್ವಾತಂತ್ರ್ಯೋತ್ಸವ

    • By admin
    • August 15, 2026
    • 7 views
    ಮುಂಡಾಜೆ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದಲ್ಲಿ ಸ್ವಾತಂತ್ರ್ಯೋತ್ಸವ

    ನೀಟ್‌ನಲ್ಲಿ ಅತ್ಯುತ್ತಮ ಸಾಧನೆ: ಎಕ್ಸೆಲ್ ಪಿಯು ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ‘ಆರೋಗ್ಯ ರತ್ನ’ ಪ್ರಶಸ್ತಿ

    • By admin
    • August 14, 2026
    • 22 views
    ನೀಟ್‌ನಲ್ಲಿ ಅತ್ಯುತ್ತಮ ಸಾಧನೆ: ಎಕ್ಸೆಲ್ ಪಿಯು ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ‘ಆರೋಗ್ಯ ರತ್ನ’ ಪ್ರಶಸ್ತಿ

    ಬಂಟ್ವಾಳ ಕಾವಳ ಪಡೂರಿನಲ್ಲಿ ಪೊಲೀಸ್‌ ದಾಳಿ: ನಿಷೇಧಿತ ಎಂ.ಡಿ.ಎಂ.ಎ ಸೇರಿದಂತೆ 4 ಲಕ್ಷ 90 ಸಾವಿರ ಮೌಲ್ಯದ ಸೊತ್ತುಗಳು ವಶಕ್ಕೆ

    • By admin
    • August 14, 2026
    • 12 views
    ಬಂಟ್ವಾಳ ಕಾವಳ ಪಡೂರಿನಲ್ಲಿ ಪೊಲೀಸ್‌ ದಾಳಿ: ನಿಷೇಧಿತ ಎಂ.ಡಿ.ಎಂ.ಎ ಸೇರಿದಂತೆ 4 ಲಕ್ಷ 90 ಸಾವಿರ ಮೌಲ್ಯದ ಸೊತ್ತುಗಳು ವಶಕ್ಕೆ

    ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ 80ನೇ ಸ್ವಾತಂತ್ರ್ಯ ಸಂಭ್ರಮದಲ್ಲಿ ಆಗಸ್ಟ್ 15-16ರಂದು ಶೈಕ್ಷಣಿಕ ಸಾಧಕರ ಅಭಿನಂದನೆ ಮತ್ತು “ರಕ್ಷಕ ನಮನ-2026” ಕಾರ್ಯಕ್ರಮ

    • By admin
    • August 14, 2026
    • 7 views
    ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ 80ನೇ ಸ್ವಾತಂತ್ರ್ಯ ಸಂಭ್ರಮದಲ್ಲಿ ಆಗಸ್ಟ್ 15-16ರಂದು ಶೈಕ್ಷಣಿಕ ಸಾಧಕರ ಅಭಿನಂದನೆ ಮತ್ತು “ರಕ್ಷಕ ನಮನ-2026” ಕಾರ್ಯಕ್ರಮ

    ವೈದ್ಯಕೀಯ ವಿದ್ಯಾರ್ಥಿಗಳ ಕನಸು ನನಸಾಗಿಸುವ ‘ಎಕ್ಸೆಲ್ ನೀಟ್ ಅಕಾಡೆಮಿ’ ವೈದ್ಯರಾಗಲು ವಿಶ್ವಾಸದ ಆಯ್ಕೆ – ಎಕ್ಸೆಲ್ ಗುರುವಾಯನಕೆರೆ

    • By admin
    • August 11, 2026
    • 13 views
    ವೈದ್ಯಕೀಯ ವಿದ್ಯಾರ್ಥಿಗಳ ಕನಸು ನನಸಾಗಿಸುವ ‘ಎಕ್ಸೆಲ್ ನೀಟ್ ಅಕಾಡೆಮಿ’ ವೈದ್ಯರಾಗಲು ವಿಶ್ವಾಸದ ಆಯ್ಕೆ – ಎಕ್ಸೆಲ್  ಗುರುವಾಯನಕೆರೆ