ತುಳುನಾಡ ದೈವಸ್ಥಾನಗಳ ಸನ್ನಿಧಾನವನ್ನು ಅಪವಿತ್ರಗೊಳಿಸಿದವರಿಗೆ ತಕ್ಕ ಶಾಸ್ತ್ರೀ ಮಾಡಿ ಕಾರಣಿಕ ಮೆರೆದ “ಕೊರಗಜ್ಜ”

ಮಂಗಳೂರು: ಮಂಗಳೂರಿನ ಎಮ್ಮೆಕೆರೆಯಲ್ಲಿರುವ ಕೊರಗಜ್ಜನ ಸನ್ನಿಧಾನವನ್ನು ಮೂತ್ರ ಮಾಡಿ ಗಲೀಜು ಮಾಡಿದ್ದಲ್ಲದ್ದೆ ಲಕ್ಷಾಂತರ ಕೊರಗಜ್ಜನ ಭಕ್ತರಿಗೆ ನೋವುಂಟು ಮಾಡಿದ ಆರೋಪಿಗಳಿಗೆ ಕಾರಣಿಕ ಶಕ್ತಿ ಕೊರಗಜ್ಜನ ಮಹಿಮೆ ಅರಿವಾಗಿದ್ದು ,ಅಪರಾಧಿಗಳಲ್ಲಿ ಓರ್ವ ಹುಚ್ಚು ಹಿಡಿದು ಸಾವನ್ನಪ್ಪಿದ್ದರೆ,ಉಳಿದಿಬ್ಬರು ಪ್ರಾಣ ಭೀತಿಯಿಂದ ನಿನ್ನೆ ಕ್ಷೇತ್ರದಲ್ಲಿ ಕೋಲ ನಡೆಯುವ ಸಂದರ್ಭ ಆಗಮಿಸಿ ಕೊರಗಜ್ಜನ ಮುಂದೆ ತಪ್ಪು ಕೇಳಿದ್ದಾರೆ.ಇನ್ನೋರ್ವ ಅನಾರೋಗ್ಯದಿಂದಾಗಿ ಬಂದಿರಲಿಲ್ಲ.

ಕಳೆದ ತಿಂಗಳು ದುಷ್ಕರ್ಮಿಗಳು ಕೊರಗಜ್ಜನ ಕ್ಷೇತ್ರವನ್ನು ಮೂತ್ರ ಮಾಡಿ ಮಲಿನಗೊಳಿಸಿದ್ದರು. ಇದು ಕೊರಗಜ್ಜನ ಅಸಂಖ್ಯಾತ ಭಕ್ತರ ಆಕ್ರೋಶಕ್ಕೆ ಕಾರಣವಾಗಿತ್ತು. ಅಲ್ಲದೇ ಹಿಂದೂ ಸಂಘಟನೆಗಳು ಕಾಲ್ನಡಿಗೆ ಜಾಥಾ ಸಹಿತ ಹಲವು ಕಾರ್ಯಕ್ರಮ ಹಮ್ಮಿಕೊಂಡು ಕ್ಷೇತ್ರಕ್ಕೆ ಅಪಚಾರ ಮಾಡಿದವರಿಗೆ ತಕ್ಕ ಶಾಸ್ತಿಯಾಗಲಿ ಎಂದು ಹರಕೆ ,ದೂರು ಸಲ್ಲಿದ್ದರು. ಕಾಕತಾಳೀಯ ಎಂಬಂತೆ ಓರ್ವ ಅಪರಾಧಿ ಮೂರ್ನಾಲ್ಕು ದಿನಗಳ ಹಿಂದೆ ಮನೆಯಲ್ಲಿಯೇ ತಲೆಯನ್ನು ಗೋಡೆಗೆ ಬಡಿದುಕೊಂಡು ಮೃತಪಟ್ಟಿದ್ದಾನೆ.

ಇದೀಗ ಕ್ಷೇತ್ರದ ಕಾರಣಿಕ ಗೋಚರಿಸಿದ್ದು ಅಪರಾಧಿಗಳು ದೈವದ ಮುಂದೆ ಕ್ಷಮಾಪಣೆ ಕೇಳಿಕೊಂಡಿದ್ದಾರೆ. ಅಂದಾಜು 25-35ರ ಹರೆಯದ ಯುವಕರೇ ಗಲಭೆ ಸೃಷ್ಟಿಸುವ ಉದ್ದೇಶ ಇಲ್ಲವೇ ಧಾರ್ಮಿಕ ಭಾವನೆಗೆ ಧಕ್ಕೆ ಉಂಟು ಮಾಡುವ ಉದ್ದೇಶದಿಂದ ಬೇರೆ ಕೋಮಿನ ಒಟ್ಟು ಹದಿಮೂರು ಜನರ ತಂಡ ಕೊರಗಜ್ಜ ಕ್ಷೇತ್ರ ಅಪವಿತ್ರಗೊಳಿಸುವ ಈ ಕೃತ್ಯ ಎಸಗಿರುವುದು ಕಂಡು ಬಂದಿದ್ದು,ಕ್ಷಮಾಪಣೆ ಆದ ಕೂಡಲೇ ಪೊಲೀಸರ ತಂಡ ಆರೋಪಿಗಳನ್ನು ವಶಕ್ಕೆ ಪಡೆದಿದೆ.
ಇನ್ನು ಪ್ರಕರಣದ ಒಬ್ಬ ಆರೋಪಿ ಸಾವನ್ನಪ್ಪಿರೋದು ಉಳಿದ ಆರೋಪಿಗಳಲ್ಲಿ ಭಯ ಉಂಟು ಮಾಡಿದ್ದು, ಉಳಿದ ಆರೋಪಿಗಳಿಗೆ ನಡುಕ ಶುರುವಾಗಿದೆ.

Spread the love
  • Related Posts

    ಎಳ್ಳು ಬೆಲ್ಲ ಸವಿಯುವ ಸಂಕ್ರಾಂತಿ ಹಬ್ಬದ ವೈಶಿಷ್ಟ್ಯ ಆಚರಣೆಗಳ ಮಹತ್ವ

    ದೈನಂದಿನ ಸಮಾಜಿಕ ಧಾರ್ಮಿಕ ಜೀವನದಲ್ಲಿ ಹಾಸುಹೊಕ್ಕಾಗಿ ಸೇರಿಕೊಂಡಿರುವಂತಹದ್ದೆ “ಹಬ್ಬಗಳು”. ಇಡೀ ಮನುಷ್ಯ ಸಮೂಹಕ್ಕೆ ಸಂತೋಷ, ಸಡಗರ ಸಹಜ ಪ್ರೀತಿಯ ವಿಷಯವಾಗಿರುವುದೇ ಹಬ್ಬಗಳು. ಇಂದಿನ ಆಧುನಿಕ ಒತ್ತಡಯುಕ್ತ ಜೀವನದಲ್ಲಿ ತೊಡಗಿದ್ದಾಗಲೂ, ಹಬ್ಬಹರಿದಿನಗಳ ಬಗೆಗಿನ ಆಸಕ್ತಿಯು ಕಳೆದುಕೊಂಡಿಲ್ಲದ್ದನ್ನು ಕಾಣಬಹುದು. ಹಬ್ಬವೆಂಬುದು ಕೆಲವೇ ಧರ್ಮ ಸಂಪ್ರದಾಯಕ್ಕೆ…

    Spread the love

    ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಚೈತ್ರೇಶ್ ಇಳಂತಿಲ ಆಯ್ಕೆ

    ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಮಹಾಸಭೆ ಜ.5 ರಂದು ಸಂಘದ ಕಚೇರಿಯಲ್ಲಿ ನಡೆದು 2024 ನೇ ಸಾಲಿಗೆ ಪದಾಧಿಕಾರಿಗಳ ಆಯ್ಕೆ ನಡೆಯಿತು. ಅಧ್ಯಕ್ಷರಾಗಿ ಉದಯವಾಣಿ ವರದಿಗಾರ ಚೈತ್ರೇಶ್ ಇಳಂತಿಲ, ಉಪಾಧ್ಯಕ್ಷರಾಗಿ ವಾರ್ತಾಭಾರತಿ ವರದಿಗಾರ ಶಿಬಿ ಧರ್ಮಸ್ಥಳ, ಕಾರ್ಯದರ್ಶಿಯಾಗಿ ಪ್ರಜಾವಾಣಿ ವರದಿಗಾರ…

    Spread the love

    You Missed

    ನಾಗರಪಂಚಮಿ ಪ್ರಯುಕ್ತ ಸೋಮವಾರ ದ.ಕ. ಜಿಲ್ಲೆಗೆ ಸಾರ್ವತ್ರಿಕ ರಜೆ

    • By admin
    • August 16, 2026
    • 4 views
    ನಾಗರಪಂಚಮಿ ಪ್ರಯುಕ್ತ ಸೋಮವಾರ ದ.ಕ. ಜಿಲ್ಲೆಗೆ ಸಾರ್ವತ್ರಿಕ ರಜೆ

    ಮುಂಡಾಜೆ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದಲ್ಲಿ ಸ್ವಾತಂತ್ರ್ಯೋತ್ಸವ

    • By admin
    • August 15, 2026
    • 7 views
    ಮುಂಡಾಜೆ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದಲ್ಲಿ ಸ್ವಾತಂತ್ರ್ಯೋತ್ಸವ

    ನೀಟ್‌ನಲ್ಲಿ ಅತ್ಯುತ್ತಮ ಸಾಧನೆ: ಎಕ್ಸೆಲ್ ಪಿಯು ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ‘ಆರೋಗ್ಯ ರತ್ನ’ ಪ್ರಶಸ್ತಿ

    • By admin
    • August 14, 2026
    • 22 views
    ನೀಟ್‌ನಲ್ಲಿ ಅತ್ಯುತ್ತಮ ಸಾಧನೆ: ಎಕ್ಸೆಲ್ ಪಿಯು ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ‘ಆರೋಗ್ಯ ರತ್ನ’ ಪ್ರಶಸ್ತಿ

    ಬಂಟ್ವಾಳ ಕಾವಳ ಪಡೂರಿನಲ್ಲಿ ಪೊಲೀಸ್‌ ದಾಳಿ: ನಿಷೇಧಿತ ಎಂ.ಡಿ.ಎಂ.ಎ ಸೇರಿದಂತೆ 4 ಲಕ್ಷ 90 ಸಾವಿರ ಮೌಲ್ಯದ ಸೊತ್ತುಗಳು ವಶಕ್ಕೆ

    • By admin
    • August 14, 2026
    • 12 views
    ಬಂಟ್ವಾಳ ಕಾವಳ ಪಡೂರಿನಲ್ಲಿ ಪೊಲೀಸ್‌ ದಾಳಿ: ನಿಷೇಧಿತ ಎಂ.ಡಿ.ಎಂ.ಎ ಸೇರಿದಂತೆ 4 ಲಕ್ಷ 90 ಸಾವಿರ ಮೌಲ್ಯದ ಸೊತ್ತುಗಳು ವಶಕ್ಕೆ

    ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ 80ನೇ ಸ್ವಾತಂತ್ರ್ಯ ಸಂಭ್ರಮದಲ್ಲಿ ಆಗಸ್ಟ್ 15-16ರಂದು ಶೈಕ್ಷಣಿಕ ಸಾಧಕರ ಅಭಿನಂದನೆ ಮತ್ತು “ರಕ್ಷಕ ನಮನ-2026” ಕಾರ್ಯಕ್ರಮ

    • By admin
    • August 14, 2026
    • 7 views
    ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ 80ನೇ ಸ್ವಾತಂತ್ರ್ಯ ಸಂಭ್ರಮದಲ್ಲಿ ಆಗಸ್ಟ್ 15-16ರಂದು ಶೈಕ್ಷಣಿಕ ಸಾಧಕರ ಅಭಿನಂದನೆ ಮತ್ತು “ರಕ್ಷಕ ನಮನ-2026” ಕಾರ್ಯಕ್ರಮ

    ವೈದ್ಯಕೀಯ ವಿದ್ಯಾರ್ಥಿಗಳ ಕನಸು ನನಸಾಗಿಸುವ ‘ಎಕ್ಸೆಲ್ ನೀಟ್ ಅಕಾಡೆಮಿ’ ವೈದ್ಯರಾಗಲು ವಿಶ್ವಾಸದ ಆಯ್ಕೆ – ಎಕ್ಸೆಲ್ ಗುರುವಾಯನಕೆರೆ

    • By admin
    • August 11, 2026
    • 13 views
    ವೈದ್ಯಕೀಯ ವಿದ್ಯಾರ್ಥಿಗಳ ಕನಸು ನನಸಾಗಿಸುವ ‘ಎಕ್ಸೆಲ್ ನೀಟ್ ಅಕಾಡೆಮಿ’ ವೈದ್ಯರಾಗಲು ವಿಶ್ವಾಸದ ಆಯ್ಕೆ – ಎಕ್ಸೆಲ್  ಗುರುವಾಯನಕೆರೆ