ಎತ್ತಿನಹೊಳೆ ಯೋಜನೆಗೆ ಬಾರಿ ಹಿನ್ನಡೆ, 423ಎಕರೆ ಅರಣ್ಯ ಬಳಕೆಗೆ ಕೇಂದ್ರ ಅರಣ್ಯ ಸಲಹಾ ಸಮಿತಿ ನಿರಾಕರಣೆ

ಹಾಸನ: ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಗಡಿಭಾಗದಿಂದ ಬಯಲುಸೀಮೆ ಜಿಲ್ಲೆಗಳಿಗೆ ಕುಡಿಯುವ ನೀರು ಪೂರೈಸುವ 23 ಸಾವಿರ ಕೋಟಿ ರೂ. ವೆಚ್ಚದ ಎತ್ತಿನಹೊಳೆ ಕುಡಿಯುವ ನೀರಿನ ಯೋಜನೆಗೆ ಹೆಚ್ಚುವರಿಯಾಗಿ 423 ಎಕ್ರೆ ಅರಣ್ಯ ಬಳಕೆಗೆ ಅನುಮೋದನೆ ನೀಡಬೇಕೆಂಬ ಕರ್ನಾಟಕ ಸರ್ಕಾರದ ಪ್ರಸ್ತಾವಕ್ಕೆ ಕೇಂದ್ರ ಅರಣ್ಯ, ಪರಿಸರ ಸಚಿವಾಲಯದ ಅರಣ್ಯ ಸಲಹಾ ಸಮಿತಿ ಅನುಮತಿ ನೀಡಲು ನಿರಾಕರಿಸಿದೆ.

ಗುರುತ್ವಾಕರ್ಷಣೆ ಕಾಲುವೆ ನಿರ್ಮಾಣಕ್ಕೆ ಹಾಸನ ಹಾಗೂ ತುಮಕೂರು ಜಿಲ್ಲೆಗಳಲ್ಲಿ 432 ಎಕ್ರೆ ಅರಣ್ಯ ಬಳಕೆಗೆ ಒಪ್ಪಿಗೆ ನೀಡುವಂತೆ ಕೋರಿ ರಾಜ್ಯ ಸರ್ಕಾರವು ಪರಿಸರ ಸಚಿವಾಲಯಕ್ಕೆ ಮಾರ್ಚ್‌ನಲ್ಲಿ ಪ್ರಸ್ತಾವನೆ ಸಲ್ಲಿಸಿತ್ತು. ಸಚಿವಾಲಯದ ಡಿಐಜಿಎಫ್‌ ಪ್ರಣಿತಾ ಪೌಲ್‌ ನೇತೃತ್ವದ ಅಧಿಕಾರಿಗಳ ತಂಡವು ಯೋಜನಾ ಸ್ಥಳದಲ್ಲಿ ಪರಿಶೀಲನೆ ನಡೆಸಿ ವರದಿ ಸಲ್ಲಿಸಿತ್ತು. ರಾಜ್ಯ ಸರ್ಕಾರವು ಲೋಪಗಳನ್ನು ಸರಿಪಡಿಸಿ ಸೂಕ್ತ ಸಮಜಾಯಿಷಿ ನೀಡಿದ ಬಳಿಕವೇ ಹೆಚ್ಚುವರಿ ಅರಣ್ಯ ಬಳಕೆಗೆ ಅನುಮೋದನೆ ನೀಡಬಹುದು ಎಂದು ಸಮಿತಿ ಶಿಫಾರಸು ಮಾಡಿತ್ತು.

ನವದೆಹಲಿಯಲ್ಲಿ ಜೂನ್‌ 26ರಂದು ನಡೆದ ಸಲಹಾ ಸಮಿತಿಯ ಸಭೆಯಲ್ಲಿ ಈ ಯೋಜನೆಗೆ ಹೆಚ್ಚುವರಿ ಅರಣ್ಯ ಭೂಮಿ ನೀಡುವ ಬಗ್ಗೆ ಚರ್ಚೆ ನಡೆಯಿತು. ‘ಕೇಂದ್ರದಿಂದ ಅನುಮೋದನೆ ಪಡೆಯುವ ಮುನ್ನವೇ ಈ ಯೋಜನೆಗಾಗಿ ಅರಣ್ಯ ಭೂಮಿಯನ್ನು ಬಳಕೆ ಮಾಡಲಾಗಿದೆ ಎಂಬುದನ್ನು ಅಧಿಕಾರಿಗಳ ತಂಡವು ಬೊಟ್ಟು ಮಾಡಿ ತೋರಿಸಿದೆ. ನಿಯಮ ಉಲ್ಲಂಘಿಸಿದ ಸರ್ಕಾರಿ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು ಹಾಗೂ ದಂಡ ವಿಧಿಸಬೇಕು’ ಎಂದು ಸಲಹಾ ಸಮಿತಿ ನಿರ್ದೇಶನ ನೀಡಿತು. ಬಳಿಕ ಪ್ರಸ್ತಾವವನ್ನು ಮುಂದಿನ ಸಭೆಗೆ ಮುಂದೂಡಿತು. ಪಶ್ಚಿಮ ಘಟ್ಟದ ಎತ್ತಿನಹೊಳೆಯಿಂದ 24 ಟಿಎಂಸಿ ನೀರು ಹರಿಸುವ ಈ ಯೋಜನೆಗೆ ಈ ಹಿಂದೆ 13.93 ಹೆಕ್ಟೇರ್ ಅರಣ್ಯ ಬಳಕೆಗೆ 2016ರಲ್ಲಿ ಪ್ರಸ್ತಾವ ಸಲ್ಲಿಸಲಾಗಿತ್ತು. 33 ಷರತ್ತುಗಳನ್ನು ವಿಧಿಸಿ 2016ರಲ್ಲಿ ಅನುಮೋದನೆ ಕೊಡಲಾಗಿತ್ತು. ಆದರೆ ಬಹುತೇಕ ಷರತ್ತುಗಳನ್ನು ಪಾಲನೆ ಮಾಡಿಲ್ಲ. ಕಾಮಗಾರಿ ಸಂದರ್ಭದಲ್ಲಿ ಭೂಕುಸಿತ ಹಾಗೂ ಮಣ್ಣಿನ ಕೊರೆತ ಉಂಟಾಗಿದೆ ಎಂದು ಎನ್‌ಜಿಟಿಯ ಮೇಲ್ವಿಚಾರಣಾ ತಂಡವು 2019ರಲ್ಲಿ ವರದಿ ಸಲ್ಲಿಸಿತ್ತು. ಭೂಕುಸಿತ ತಡೆಗೆ ಯಾವುದೇ ಕ್ರಮ ಕೈಗೊಂಡಿಲ್ಲ. ಇದರ ಜತೆಗೆ ಅನುಮೋದನೆಗಿಂತ ಹೆಚ್ಚುವರಿ ಅರಣ್ಯ ಬಳಸಲಾಗಿದೆ. ಕಾಮಗಾರಿಯಿಂದಾಗಿ ಅನೇಕ ಮನೆಗಳಿಗೆ ಹಾನಿಯಾಗಿದೆ. ಆದರೆ, ಸಂತ್ರಸ್ತರಿಗೆ ಯಾವುದೇ ಪರಿಹಾರ ನೀಡಿಲ್ಲ ಎಂದು ತಜ್ಞರ ತಂಡವು ಆಕ್ಷೇಪ ವ್ಯಕ್ತಪಡಿಸಿತ್ತು.

Spread the love
  • Related Posts

    ಯುವಜನತೆ ದುಶ್ಚಟಗಳಿಂದ ದೂರವಿದ್ದು ಸ್ವಾಸ್ಥ್ಯ ಸಮಾಜ ನಿರ್ಮಾಣಕ್ಕೆ ಕೈಜೋಡಿಸಿ: ಡಾ.ನವೀನ್ ಚಂದ್ರ ಶೆಟ್ಟಿ

    ಸಕಲೇಶಪುರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್, ಹಾಗೂ ಅಖಿಲ ಕರ್ನಾಟಕ ಜಿಲ್ಲಾ ಜನಜಾಗೃತಿ ವೇದಿಕೆ ಹಾಸನ ಜಿಲ್ಲೆ ಇದರ ವತಿಯಿಂದ, ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮವನ್ನು ತಾಲೂಕಿನ JSS ಕಾಲೇಜನಲ್ಲಿ ಹಮ್ಮಿಕೊಳ್ಳಲಾಯಿತು. ಜಿಲ್ಲಾ ಜನಜಾಗೃತಿ ವೇದಿಕೆ ಜಿಲ್ಲಾಧ್ಯಕ್ಷರಾದ…

    Spread the love

    ಉಜಿರೆ ರಬ್ಬರ್ ಟ್ಯಾಪರ್ ಮತ್ತು ಕೃಷಿ ಮಜ್ದೂರ್ ಸಂಘದಿಂದ ಸಂಸದರಾದ ಬ್ರಿಜೇಶ್ ಚೌಟ ಅವರಿಗೆ ಮನವಿ ಸಲ್ಲಿಕೆ

    Ujire: ರಬ್ಬರ್ ಮತ್ತು ಇತರ ಕೃಷಿ ಕಾರ್ಮಿಕರಿಗೆ ಹಾಗೂ ಸ್ವಂತ ತೋಟದ ಸ್ವಂತ ಬೆಳೆಗಾರ ಟ್ಯಾಪರ್ ಗಳಿಗೆ ರಬ್ಬರ್ ಮಂಡಳಿಯಿಂದ ಕೆಲವೊಂದು ಸೌಲಭ್ಯಗಳಿದ್ದು ಈ ಸೌಲಭ್ಯಗಳು ಅಲ್ಪ ಮಟ್ಟದ್ದಾಗಿದ್ದು ಇದನ್ನು ಹೆಚ್ಚು ಗೊಳಿಸುವಂತೆ ಹಾಗೂ ಕಾರ್ಮಿಕರಿಗೆ ಇನ್ನಿತರ ಸೌಲಭ್ಯಗಳನ್ನು ನೀಡುವಂತೆ ಮಾನ್ಯ…

    Spread the love

    You Missed

    ಯುವಜನತೆ ದುಶ್ಚಟಗಳಿಂದ ದೂರವಿದ್ದು ಸ್ವಾಸ್ಥ್ಯ ಸಮಾಜ ನಿರ್ಮಾಣಕ್ಕೆ ಕೈಜೋಡಿಸಿ: ಡಾ.ನವೀನ್ ಚಂದ್ರ ಶೆಟ್ಟಿ

    • By admin
    • December 2, 2025
    • 52 views
    ಯುವಜನತೆ ದುಶ್ಚಟಗಳಿಂದ ದೂರವಿದ್ದು ಸ್ವಾಸ್ಥ್ಯ ಸಮಾಜ ನಿರ್ಮಾಣಕ್ಕೆ ಕೈಜೋಡಿಸಿ: ಡಾ.ನವೀನ್ ಚಂದ್ರ ಶೆಟ್ಟಿ

    ಉಜಿರೆ ರಬ್ಬರ್ ಟ್ಯಾಪರ್ ಮತ್ತು ಕೃಷಿ ಮಜ್ದೂರ್ ಸಂಘದಿಂದ ಸಂಸದರಾದ ಬ್ರಿಜೇಶ್ ಚೌಟ ಅವರಿಗೆ ಮನವಿ ಸಲ್ಲಿಕೆ

    • By admin
    • December 1, 2025
    • 38 views
    ಉಜಿರೆ ರಬ್ಬರ್ ಟ್ಯಾಪರ್ ಮತ್ತು ಕೃಷಿ ಮಜ್ದೂರ್ ಸಂಘದಿಂದ ಸಂಸದರಾದ  ಬ್ರಿಜೇಶ್ ಚೌಟ ಅವರಿಗೆ ಮನವಿ ಸಲ್ಲಿಕೆ

    ಅಳದಂಗಡಿ ಶ್ರೀ ಸತ್ಯ ದೇವತೆ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ. ವೈ. ವಿಜಯೇಂದ್ರ ಭೇಟಿ

    • By admin
    • November 28, 2025
    • 36 views
    ಅಳದಂಗಡಿ ಶ್ರೀ ಸತ್ಯ ದೇವತೆ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ. ವೈ. ವಿಜಯೇಂದ್ರ ಭೇಟಿ

    ಉಜಿರೆ ಶ್ರೀ ಜನಾರ್ಧನ ಸ್ವಾಮಿ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ. ವೈ. ವಿಜಯೇಂದ್ರರವರು ಭೇಟಿ

    • By admin
    • November 28, 2025
    • 32 views
    ಉಜಿರೆ ಶ್ರೀ ಜನಾರ್ಧನ ಸ್ವಾಮಿ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ. ವೈ. ವಿಜಯೇಂದ್ರರವರು ಭೇಟಿ

    ರಾಷ್ಟ್ರ ಮಟ್ಟದ ವ್ಯಂಗ್ಯ ಭಾವಚಿತ್ರ ಸ್ಪರ್ಧೆಯಲ್ಲಿ ಉಜಿರೆ ಶೈಲೇಶ್‌ ಕುಮಾ‌ರ್ ರವರಿಗೆ ರಾಷ್ಟ್ರ ಮಟ್ಟದ ಪುರಸ್ಕಾರ

    • By admin
    • November 28, 2025
    • 41 views
    ರಾಷ್ಟ್ರ ಮಟ್ಟದ ವ್ಯಂಗ್ಯ ಭಾವಚಿತ್ರ ಸ್ಪರ್ಧೆಯಲ್ಲಿ ಉಜಿರೆ ಶೈಲೇಶ್‌ ಕುಮಾ‌ರ್ ರವರಿಗೆ ರಾಷ್ಟ್ರ ಮಟ್ಟದ ಪುರಸ್ಕಾರ

    ಕಡಲತಡಿ ಕೃಷ್ಣನಗರಿಗೆ ಪ್ರಧಾನಿ ಮೋದಿ ಆಗಮನ

    • By admin
    • November 28, 2025
    • 36 views
    ಕಡಲತಡಿ ಕೃಷ್ಣನಗರಿಗೆ ಪ್ರಧಾನಿ ಮೋದಿ ಆಗಮನ