ಎತ್ತಿನಹೊಳೆ ಯೋಜನೆಗೆ ಬಾರಿ ಹಿನ್ನಡೆ, 423ಎಕರೆ ಅರಣ್ಯ ಬಳಕೆಗೆ ಕೇಂದ್ರ ಅರಣ್ಯ ಸಲಹಾ ಸಮಿತಿ ನಿರಾಕರಣೆ

ಹಾಸನ: ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಗಡಿಭಾಗದಿಂದ ಬಯಲುಸೀಮೆ ಜಿಲ್ಲೆಗಳಿಗೆ ಕುಡಿಯುವ ನೀರು ಪೂರೈಸುವ 23 ಸಾವಿರ ಕೋಟಿ ರೂ. ವೆಚ್ಚದ ಎತ್ತಿನಹೊಳೆ ಕುಡಿಯುವ ನೀರಿನ ಯೋಜನೆಗೆ ಹೆಚ್ಚುವರಿಯಾಗಿ 423 ಎಕ್ರೆ ಅರಣ್ಯ ಬಳಕೆಗೆ ಅನುಮೋದನೆ ನೀಡಬೇಕೆಂಬ ಕರ್ನಾಟಕ ಸರ್ಕಾರದ ಪ್ರಸ್ತಾವಕ್ಕೆ ಕೇಂದ್ರ ಅರಣ್ಯ, ಪರಿಸರ ಸಚಿವಾಲಯದ ಅರಣ್ಯ ಸಲಹಾ ಸಮಿತಿ ಅನುಮತಿ ನೀಡಲು ನಿರಾಕರಿಸಿದೆ.

ಗುರುತ್ವಾಕರ್ಷಣೆ ಕಾಲುವೆ ನಿರ್ಮಾಣಕ್ಕೆ ಹಾಸನ ಹಾಗೂ ತುಮಕೂರು ಜಿಲ್ಲೆಗಳಲ್ಲಿ 432 ಎಕ್ರೆ ಅರಣ್ಯ ಬಳಕೆಗೆ ಒಪ್ಪಿಗೆ ನೀಡುವಂತೆ ಕೋರಿ ರಾಜ್ಯ ಸರ್ಕಾರವು ಪರಿಸರ ಸಚಿವಾಲಯಕ್ಕೆ ಮಾರ್ಚ್‌ನಲ್ಲಿ ಪ್ರಸ್ತಾವನೆ ಸಲ್ಲಿಸಿತ್ತು. ಸಚಿವಾಲಯದ ಡಿಐಜಿಎಫ್‌ ಪ್ರಣಿತಾ ಪೌಲ್‌ ನೇತೃತ್ವದ ಅಧಿಕಾರಿಗಳ ತಂಡವು ಯೋಜನಾ ಸ್ಥಳದಲ್ಲಿ ಪರಿಶೀಲನೆ ನಡೆಸಿ ವರದಿ ಸಲ್ಲಿಸಿತ್ತು. ರಾಜ್ಯ ಸರ್ಕಾರವು ಲೋಪಗಳನ್ನು ಸರಿಪಡಿಸಿ ಸೂಕ್ತ ಸಮಜಾಯಿಷಿ ನೀಡಿದ ಬಳಿಕವೇ ಹೆಚ್ಚುವರಿ ಅರಣ್ಯ ಬಳಕೆಗೆ ಅನುಮೋದನೆ ನೀಡಬಹುದು ಎಂದು ಸಮಿತಿ ಶಿಫಾರಸು ಮಾಡಿತ್ತು.

ನವದೆಹಲಿಯಲ್ಲಿ ಜೂನ್‌ 26ರಂದು ನಡೆದ ಸಲಹಾ ಸಮಿತಿಯ ಸಭೆಯಲ್ಲಿ ಈ ಯೋಜನೆಗೆ ಹೆಚ್ಚುವರಿ ಅರಣ್ಯ ಭೂಮಿ ನೀಡುವ ಬಗ್ಗೆ ಚರ್ಚೆ ನಡೆಯಿತು. ‘ಕೇಂದ್ರದಿಂದ ಅನುಮೋದನೆ ಪಡೆಯುವ ಮುನ್ನವೇ ಈ ಯೋಜನೆಗಾಗಿ ಅರಣ್ಯ ಭೂಮಿಯನ್ನು ಬಳಕೆ ಮಾಡಲಾಗಿದೆ ಎಂಬುದನ್ನು ಅಧಿಕಾರಿಗಳ ತಂಡವು ಬೊಟ್ಟು ಮಾಡಿ ತೋರಿಸಿದೆ. ನಿಯಮ ಉಲ್ಲಂಘಿಸಿದ ಸರ್ಕಾರಿ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು ಹಾಗೂ ದಂಡ ವಿಧಿಸಬೇಕು’ ಎಂದು ಸಲಹಾ ಸಮಿತಿ ನಿರ್ದೇಶನ ನೀಡಿತು. ಬಳಿಕ ಪ್ರಸ್ತಾವವನ್ನು ಮುಂದಿನ ಸಭೆಗೆ ಮುಂದೂಡಿತು. ಪಶ್ಚಿಮ ಘಟ್ಟದ ಎತ್ತಿನಹೊಳೆಯಿಂದ 24 ಟಿಎಂಸಿ ನೀರು ಹರಿಸುವ ಈ ಯೋಜನೆಗೆ ಈ ಹಿಂದೆ 13.93 ಹೆಕ್ಟೇರ್ ಅರಣ್ಯ ಬಳಕೆಗೆ 2016ರಲ್ಲಿ ಪ್ರಸ್ತಾವ ಸಲ್ಲಿಸಲಾಗಿತ್ತು. 33 ಷರತ್ತುಗಳನ್ನು ವಿಧಿಸಿ 2016ರಲ್ಲಿ ಅನುಮೋದನೆ ಕೊಡಲಾಗಿತ್ತು. ಆದರೆ ಬಹುತೇಕ ಷರತ್ತುಗಳನ್ನು ಪಾಲನೆ ಮಾಡಿಲ್ಲ. ಕಾಮಗಾರಿ ಸಂದರ್ಭದಲ್ಲಿ ಭೂಕುಸಿತ ಹಾಗೂ ಮಣ್ಣಿನ ಕೊರೆತ ಉಂಟಾಗಿದೆ ಎಂದು ಎನ್‌ಜಿಟಿಯ ಮೇಲ್ವಿಚಾರಣಾ ತಂಡವು 2019ರಲ್ಲಿ ವರದಿ ಸಲ್ಲಿಸಿತ್ತು. ಭೂಕುಸಿತ ತಡೆಗೆ ಯಾವುದೇ ಕ್ರಮ ಕೈಗೊಂಡಿಲ್ಲ. ಇದರ ಜತೆಗೆ ಅನುಮೋದನೆಗಿಂತ ಹೆಚ್ಚುವರಿ ಅರಣ್ಯ ಬಳಸಲಾಗಿದೆ. ಕಾಮಗಾರಿಯಿಂದಾಗಿ ಅನೇಕ ಮನೆಗಳಿಗೆ ಹಾನಿಯಾಗಿದೆ. ಆದರೆ, ಸಂತ್ರಸ್ತರಿಗೆ ಯಾವುದೇ ಪರಿಹಾರ ನೀಡಿಲ್ಲ ಎಂದು ತಜ್ಞರ ತಂಡವು ಆಕ್ಷೇಪ ವ್ಯಕ್ತಪಡಿಸಿತ್ತು.

Spread the love
  • Related Posts

    ಗ್ರಾಹಕರ ದೂರುಗಳ ಬೆನ್ನಿಗೆ ಕ್ರಮ: ಗ್ಯಾಸ್ ಏಜೆನ್ಸಿಗೆ ಅಂತಿಮ ಎಚ್ಚರಿಕೆ, ಬೆಳ್ತಂಗಡಿ ಆಹಾರ ಇಲಾಖೆಯಿಂದ ಶ್ರೀ ಮಂಜು ಇಂಡೇನ್ ಗ್ಯಾಸ್ ಏಜೆನ್ಸಿಗೆ ನೋಟೀಸ್ ಜಾರಿ

    ಬೆಳ್ತಂಗಡಿ : ಗ್ರಾಹಕರಿಗೆ ಸರಿಯಾದ ಸಮಯಕ್ಕೆ ಗ್ಯಾಸ್ ಸರಬರಾಜು ಮಾಡದೆ ಕಚೇರಿಗೆ ಹೋದಾಗ ಪ್ರತಿನಿತ್ಯ ಗಲಾಟೆ ಮಾಡುತ್ತಿರುವ ಬಗ್ಗೆ ಬೆಳ್ತಂಗಡಿ ಆಹಾರ ಇಲಾಖೆಗೆ ಬಂದ ದೂರಿನ ಆಧಾರದಲ್ಲಿ ಕೊನೆಯ ಎಚ್ಚರಿಕೆಯ ನೋಟಿಸ್ ಜಾರಿ ಮಾಡಲಾಗಿದೆ. ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ಲಾಯಿಲ…

    Spread the love

    ನಾಳೆ ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶ ಪ್ರಕಟ

    ಬೆಂಗಳೂರು: 2026ರ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ನಾಳೆ (ಏಪ್ರಿಲ್ 23) ಪ್ರಕಟಗೊಳ್ಳಲಿದೆ. ಏ.22 ರಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರು ಈ ಪ್ರಮುಖ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಫಲಿತಾಂಶದ ಮುಖ್ಯಾಂಶಗಳು: ದಿನಾಂಕ…

    Spread the love

    You Missed

    ಗ್ರಾಹಕರ ದೂರುಗಳ ಬೆನ್ನಿಗೆ ಕ್ರಮ: ಗ್ಯಾಸ್ ಏಜೆನ್ಸಿಗೆ ಅಂತಿಮ ಎಚ್ಚರಿಕೆ, ಬೆಳ್ತಂಗಡಿ ಆಹಾರ ಇಲಾಖೆಯಿಂದ ಶ್ರೀ ಮಂಜು ಇಂಡೇನ್ ಗ್ಯಾಸ್ ಏಜೆನ್ಸಿಗೆ ನೋಟೀಸ್ ಜಾರಿ

    • By admin
    • April 23, 2026
    • 76 views
    ಗ್ರಾಹಕರ ದೂರುಗಳ ಬೆನ್ನಿಗೆ ಕ್ರಮ: ಗ್ಯಾಸ್ ಏಜೆನ್ಸಿಗೆ ಅಂತಿಮ ಎಚ್ಚರಿಕೆ,  ಬೆಳ್ತಂಗಡಿ ಆಹಾರ ಇಲಾಖೆಯಿಂದ ಶ್ರೀ ಮಂಜು ಇಂಡೇನ್ ಗ್ಯಾಸ್ ಏಜೆನ್ಸಿಗೆ ನೋಟೀಸ್ ಜಾರಿ

    ನಾಳೆ ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶ ಪ್ರಕಟ

    • By admin
    • April 22, 2026
    • 30 views
    ನಾಳೆ ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶ ಪ್ರಕಟ

    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಭಕ್ತಿಭಾವದೊಂದಿಗೆ ವಿಷು ಜಾತ್ರಾ ಮಹೋತ್ಸವ ಸಂಪನ್ನ

    • By admin
    • April 22, 2026
    • 16 views
    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಭಕ್ತಿಭಾವದೊಂದಿಗೆ ವಿಷು ಜಾತ್ರಾ ಮಹೋತ್ಸವ ಸಂಪನ್ನ

    ಗೂಡ್ಸ್ ವಾಹನದಲ್ಲಿ ಪ್ರಯಾಣಿಕರು – ಚಾರ್ಮಾಡಿ ಘಾಟಿಯಲ್ಲಿ ಪಿಕಪ್ ವಾಹನ ಪಲ್ಟಿ, 10ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

    • By admin
    • April 22, 2026
    • 40 views
    ಗೂಡ್ಸ್ ವಾಹನದಲ್ಲಿ ಪ್ರಯಾಣಿಕರು – ಚಾರ್ಮಾಡಿ ಘಾಟಿಯಲ್ಲಿ  ಪಿಕಪ್ ವಾಹನ ಪಲ್ಟಿ, 10ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

    ತ್ರಿಶೂರ್ನ ಪಟಾಕಿ ಶೆಡ್ನಲ್ಲಿ ಸ್ಫೋಟ: 10ಮಂದಿ ಸಜೀವ ದಹನ ಹಲವರಿಗೆ ಗಂಭೀರ ಗಾಯ

    • By admin
    • April 21, 2026
    • 27 views
    ತ್ರಿಶೂರ್ನ ಪಟಾಕಿ ಶೆಡ್ನಲ್ಲಿ ಸ್ಫೋಟ: 10ಮಂದಿ ಸಜೀವ ದಹನ ಹಲವರಿಗೆ ಗಂಭೀರ ಗಾಯ

    ಬೃಹತ್ ಪ್ರಮಾಣದ ಎಂಡಿಎಂಎ ಮಾರಾಟ ಮಾಡುತ್ತಿದ್ದ ಇಬ್ಬರು ಡ್ರಗ್ ಪೆಡ್ಲರ್ ಗಳ ಬಂಧನ: 46.50ಲಕ್ಷ ಮೌಲ್ಯದ ಡ್ರಗ್ಸ್ ವಶಕ್ಕೆ

    • By admin
    • April 20, 2026
    • 59 views
    ಬೃಹತ್ ಪ್ರಮಾಣದ ಎಂಡಿಎಂಎ ಮಾರಾಟ ಮಾಡುತ್ತಿದ್ದ ಇಬ್ಬರು ಡ್ರಗ್ ಪೆಡ್ಲರ್ ಗಳ ಬಂಧನ: 46.50ಲಕ್ಷ ಮೌಲ್ಯದ ಡ್ರಗ್ಸ್ ವಶಕ್ಕೆ