ಎತ್ತಿನಹೊಳೆ ಯೋಜನೆಗೆ ಬಾರಿ ಹಿನ್ನಡೆ, 423ಎಕರೆ ಅರಣ್ಯ ಬಳಕೆಗೆ ಕೇಂದ್ರ ಅರಣ್ಯ ಸಲಹಾ ಸಮಿತಿ ನಿರಾಕರಣೆ

ಹಾಸನ: ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಗಡಿಭಾಗದಿಂದ ಬಯಲುಸೀಮೆ ಜಿಲ್ಲೆಗಳಿಗೆ ಕುಡಿಯುವ ನೀರು ಪೂರೈಸುವ 23 ಸಾವಿರ ಕೋಟಿ ರೂ. ವೆಚ್ಚದ ಎತ್ತಿನಹೊಳೆ ಕುಡಿಯುವ ನೀರಿನ ಯೋಜನೆಗೆ ಹೆಚ್ಚುವರಿಯಾಗಿ 423 ಎಕ್ರೆ ಅರಣ್ಯ ಬಳಕೆಗೆ ಅನುಮೋದನೆ ನೀಡಬೇಕೆಂಬ ಕರ್ನಾಟಕ ಸರ್ಕಾರದ ಪ್ರಸ್ತಾವಕ್ಕೆ ಕೇಂದ್ರ ಅರಣ್ಯ, ಪರಿಸರ ಸಚಿವಾಲಯದ ಅರಣ್ಯ ಸಲಹಾ ಸಮಿತಿ ಅನುಮತಿ ನೀಡಲು ನಿರಾಕರಿಸಿದೆ.

ಗುರುತ್ವಾಕರ್ಷಣೆ ಕಾಲುವೆ ನಿರ್ಮಾಣಕ್ಕೆ ಹಾಸನ ಹಾಗೂ ತುಮಕೂರು ಜಿಲ್ಲೆಗಳಲ್ಲಿ 432 ಎಕ್ರೆ ಅರಣ್ಯ ಬಳಕೆಗೆ ಒಪ್ಪಿಗೆ ನೀಡುವಂತೆ ಕೋರಿ ರಾಜ್ಯ ಸರ್ಕಾರವು ಪರಿಸರ ಸಚಿವಾಲಯಕ್ಕೆ ಮಾರ್ಚ್‌ನಲ್ಲಿ ಪ್ರಸ್ತಾವನೆ ಸಲ್ಲಿಸಿತ್ತು. ಸಚಿವಾಲಯದ ಡಿಐಜಿಎಫ್‌ ಪ್ರಣಿತಾ ಪೌಲ್‌ ನೇತೃತ್ವದ ಅಧಿಕಾರಿಗಳ ತಂಡವು ಯೋಜನಾ ಸ್ಥಳದಲ್ಲಿ ಪರಿಶೀಲನೆ ನಡೆಸಿ ವರದಿ ಸಲ್ಲಿಸಿತ್ತು. ರಾಜ್ಯ ಸರ್ಕಾರವು ಲೋಪಗಳನ್ನು ಸರಿಪಡಿಸಿ ಸೂಕ್ತ ಸಮಜಾಯಿಷಿ ನೀಡಿದ ಬಳಿಕವೇ ಹೆಚ್ಚುವರಿ ಅರಣ್ಯ ಬಳಕೆಗೆ ಅನುಮೋದನೆ ನೀಡಬಹುದು ಎಂದು ಸಮಿತಿ ಶಿಫಾರಸು ಮಾಡಿತ್ತು.

ನವದೆಹಲಿಯಲ್ಲಿ ಜೂನ್‌ 26ರಂದು ನಡೆದ ಸಲಹಾ ಸಮಿತಿಯ ಸಭೆಯಲ್ಲಿ ಈ ಯೋಜನೆಗೆ ಹೆಚ್ಚುವರಿ ಅರಣ್ಯ ಭೂಮಿ ನೀಡುವ ಬಗ್ಗೆ ಚರ್ಚೆ ನಡೆಯಿತು. ‘ಕೇಂದ್ರದಿಂದ ಅನುಮೋದನೆ ಪಡೆಯುವ ಮುನ್ನವೇ ಈ ಯೋಜನೆಗಾಗಿ ಅರಣ್ಯ ಭೂಮಿಯನ್ನು ಬಳಕೆ ಮಾಡಲಾಗಿದೆ ಎಂಬುದನ್ನು ಅಧಿಕಾರಿಗಳ ತಂಡವು ಬೊಟ್ಟು ಮಾಡಿ ತೋರಿಸಿದೆ. ನಿಯಮ ಉಲ್ಲಂಘಿಸಿದ ಸರ್ಕಾರಿ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು ಹಾಗೂ ದಂಡ ವಿಧಿಸಬೇಕು’ ಎಂದು ಸಲಹಾ ಸಮಿತಿ ನಿರ್ದೇಶನ ನೀಡಿತು. ಬಳಿಕ ಪ್ರಸ್ತಾವವನ್ನು ಮುಂದಿನ ಸಭೆಗೆ ಮುಂದೂಡಿತು. ಪಶ್ಚಿಮ ಘಟ್ಟದ ಎತ್ತಿನಹೊಳೆಯಿಂದ 24 ಟಿಎಂಸಿ ನೀರು ಹರಿಸುವ ಈ ಯೋಜನೆಗೆ ಈ ಹಿಂದೆ 13.93 ಹೆಕ್ಟೇರ್ ಅರಣ್ಯ ಬಳಕೆಗೆ 2016ರಲ್ಲಿ ಪ್ರಸ್ತಾವ ಸಲ್ಲಿಸಲಾಗಿತ್ತು. 33 ಷರತ್ತುಗಳನ್ನು ವಿಧಿಸಿ 2016ರಲ್ಲಿ ಅನುಮೋದನೆ ಕೊಡಲಾಗಿತ್ತು. ಆದರೆ ಬಹುತೇಕ ಷರತ್ತುಗಳನ್ನು ಪಾಲನೆ ಮಾಡಿಲ್ಲ. ಕಾಮಗಾರಿ ಸಂದರ್ಭದಲ್ಲಿ ಭೂಕುಸಿತ ಹಾಗೂ ಮಣ್ಣಿನ ಕೊರೆತ ಉಂಟಾಗಿದೆ ಎಂದು ಎನ್‌ಜಿಟಿಯ ಮೇಲ್ವಿಚಾರಣಾ ತಂಡವು 2019ರಲ್ಲಿ ವರದಿ ಸಲ್ಲಿಸಿತ್ತು. ಭೂಕುಸಿತ ತಡೆಗೆ ಯಾವುದೇ ಕ್ರಮ ಕೈಗೊಂಡಿಲ್ಲ. ಇದರ ಜತೆಗೆ ಅನುಮೋದನೆಗಿಂತ ಹೆಚ್ಚುವರಿ ಅರಣ್ಯ ಬಳಸಲಾಗಿದೆ. ಕಾಮಗಾರಿಯಿಂದಾಗಿ ಅನೇಕ ಮನೆಗಳಿಗೆ ಹಾನಿಯಾಗಿದೆ. ಆದರೆ, ಸಂತ್ರಸ್ತರಿಗೆ ಯಾವುದೇ ಪರಿಹಾರ ನೀಡಿಲ್ಲ ಎಂದು ತಜ್ಞರ ತಂಡವು ಆಕ್ಷೇಪ ವ್ಯಕ್ತಪಡಿಸಿತ್ತು.

Spread the love
  • Related Posts

    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    ಕಡಿರುದ್ಯಾವರ: ಚಿರಂಜೀವಿ ಯುವಕ ಮಂಡಲ (ರಿ) ಕಾನರ್ಪ, ಶ್ರೀ ದುರ್ಗಾಶಕ್ತಿ ಮಹಿಳಾ ಸಂಘ ಮತ್ತು 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ಇದರ ವತಿಯಿಂದ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಧಾರ್ಮಿಕ ಪೂಜಾ ಕಾರ್ಯಕ್ರಮ ಹಾಗೂ ವಿವಿಧ ಗ್ರಾಮೀಣ ಕ್ರೀಡಾಕೂಟಗಳು…

    Spread the love

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    ಬೆಳ್ತಂಗಡಿ: ತಾಲೂಕಿನ ಬೆಳಾಲು ಗ್ರಾಮದ ಮಿನಂದೇಲು ಬಸ್ ನಿಲ್ದಾಣದ ಸಮೀಪ ಸೆ. 3ರಂದು ರಾತ್ರಿ ವೇಳೆ ರಸ್ತೆಯಲ್ಲಿ ಸಂಚರಿಸುತ್ತಿದ್ದ ಬೈಕ್ ಸವಾರನಿಗೆ ಆನೆ ಪ್ರತ್ಯಕ್ಷವಾಗಿ ಆತಂಕ ಉಂಟುಮಾಡಿದ ಘಟನೆ ವರದಿಯಾಗಿದೆ. ಉಜಿರೆ–ಬೆಳಾಲು–ಬಂದಾರು ಮುಖ್ಯ ರಸ್ತೆಯ ಮಿನಂದೇಲು ಬಸ್ ನಿಲ್ದಾಣ ಹಾಗೂ ಡಿ.ಪಿ.…

    Spread the love

    You Missed

    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    • By admin
    • September 8, 2026
    • 6 views
    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    • By admin
    • September 3, 2026
    • 8 views
    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    • By admin
    • September 3, 2026
    • 6 views
    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    • By admin
    • September 3, 2026
    • 9 views
    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    ಚಿರಂಜೀವಿ ಯುವಕ ಮಂಡಲ ಕಾನರ್ಪದಲ್ಲಿ ಸೆ.6ರಂದು 35ನೇ ವರ್ಷದ ಮೊಸರು ಕುಡಿಕೆ ಅಷ್ಟಮಿ ಉತ್ಸವ ಹಾಗೂ ಕೆಸರುಗದ್ದೆಯಲ್ಲಿ ಗ್ರಾಮೀಣ ಕ್ರೀಡಾಕೂಟ ಆಯೋಜನೆ

    • By admin
    • September 3, 2026
    • 14 views
    ಚಿರಂಜೀವಿ ಯುವಕ ಮಂಡಲ ಕಾನರ್ಪದಲ್ಲಿ ಸೆ.6ರಂದು 35ನೇ ವರ್ಷದ ಮೊಸರು ಕುಡಿಕೆ ಅಷ್ಟಮಿ ಉತ್ಸವ ಹಾಗೂ ಕೆಸರುಗದ್ದೆಯಲ್ಲಿ ಗ್ರಾಮೀಣ ಕ್ರೀಡಾಕೂಟ ಆಯೋಜನೆ

    ಬೆಳ್ತಂಗಡಿ : ಲಾಯಿಲ ಗ್ರಾಮಸಭೆಯಲ್ಲಿ ಅಕ್ರಮಗಳ ಆರೋಪಕ್ಕೆ ಕಿಡಿ, ನಿವೇಶನದಿಂದ ಸರ್ಕಾರಿ ಜಮೀನು, ಕಳಪೆ ಕಾಮಗಾರಿವರೆಗೆ ಸಮಗ್ರ ತನಿಖೆಗೆ ಒತ್ತಾಯ

    • By admin
    • August 31, 2026
    • 9 views
    ಬೆಳ್ತಂಗಡಿ : ಲಾಯಿಲ ಗ್ರಾಮಸಭೆಯಲ್ಲಿ ಅಕ್ರಮಗಳ ಆರೋಪಕ್ಕೆ ಕಿಡಿ, ನಿವೇಶನದಿಂದ ಸರ್ಕಾರಿ ಜಮೀನು, ಕಳಪೆ ಕಾಮಗಾರಿವರೆಗೆ ಸಮಗ್ರ ತನಿಖೆಗೆ ಒತ್ತಾಯ