ಎತ್ತಿನಹೊಳೆ ಯೋಜನೆಗೆ ಬಾರಿ ಹಿನ್ನಡೆ, 423ಎಕರೆ ಅರಣ್ಯ ಬಳಕೆಗೆ ಕೇಂದ್ರ ಅರಣ್ಯ ಸಲಹಾ ಸಮಿತಿ ನಿರಾಕರಣೆ

ಹಾಸನ: ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಗಡಿಭಾಗದಿಂದ ಬಯಲುಸೀಮೆ ಜಿಲ್ಲೆಗಳಿಗೆ ಕುಡಿಯುವ ನೀರು ಪೂರೈಸುವ 23 ಸಾವಿರ ಕೋಟಿ ರೂ. ವೆಚ್ಚದ ಎತ್ತಿನಹೊಳೆ ಕುಡಿಯುವ ನೀರಿನ ಯೋಜನೆಗೆ ಹೆಚ್ಚುವರಿಯಾಗಿ 423 ಎಕ್ರೆ ಅರಣ್ಯ ಬಳಕೆಗೆ ಅನುಮೋದನೆ ನೀಡಬೇಕೆಂಬ ಕರ್ನಾಟಕ ಸರ್ಕಾರದ ಪ್ರಸ್ತಾವಕ್ಕೆ ಕೇಂದ್ರ ಅರಣ್ಯ, ಪರಿಸರ ಸಚಿವಾಲಯದ ಅರಣ್ಯ ಸಲಹಾ ಸಮಿತಿ ಅನುಮತಿ ನೀಡಲು ನಿರಾಕರಿಸಿದೆ.

ಗುರುತ್ವಾಕರ್ಷಣೆ ಕಾಲುವೆ ನಿರ್ಮಾಣಕ್ಕೆ ಹಾಸನ ಹಾಗೂ ತುಮಕೂರು ಜಿಲ್ಲೆಗಳಲ್ಲಿ 432 ಎಕ್ರೆ ಅರಣ್ಯ ಬಳಕೆಗೆ ಒಪ್ಪಿಗೆ ನೀಡುವಂತೆ ಕೋರಿ ರಾಜ್ಯ ಸರ್ಕಾರವು ಪರಿಸರ ಸಚಿವಾಲಯಕ್ಕೆ ಮಾರ್ಚ್‌ನಲ್ಲಿ ಪ್ರಸ್ತಾವನೆ ಸಲ್ಲಿಸಿತ್ತು. ಸಚಿವಾಲಯದ ಡಿಐಜಿಎಫ್‌ ಪ್ರಣಿತಾ ಪೌಲ್‌ ನೇತೃತ್ವದ ಅಧಿಕಾರಿಗಳ ತಂಡವು ಯೋಜನಾ ಸ್ಥಳದಲ್ಲಿ ಪರಿಶೀಲನೆ ನಡೆಸಿ ವರದಿ ಸಲ್ಲಿಸಿತ್ತು. ರಾಜ್ಯ ಸರ್ಕಾರವು ಲೋಪಗಳನ್ನು ಸರಿಪಡಿಸಿ ಸೂಕ್ತ ಸಮಜಾಯಿಷಿ ನೀಡಿದ ಬಳಿಕವೇ ಹೆಚ್ಚುವರಿ ಅರಣ್ಯ ಬಳಕೆಗೆ ಅನುಮೋದನೆ ನೀಡಬಹುದು ಎಂದು ಸಮಿತಿ ಶಿಫಾರಸು ಮಾಡಿತ್ತು.

ನವದೆಹಲಿಯಲ್ಲಿ ಜೂನ್‌ 26ರಂದು ನಡೆದ ಸಲಹಾ ಸಮಿತಿಯ ಸಭೆಯಲ್ಲಿ ಈ ಯೋಜನೆಗೆ ಹೆಚ್ಚುವರಿ ಅರಣ್ಯ ಭೂಮಿ ನೀಡುವ ಬಗ್ಗೆ ಚರ್ಚೆ ನಡೆಯಿತು. ‘ಕೇಂದ್ರದಿಂದ ಅನುಮೋದನೆ ಪಡೆಯುವ ಮುನ್ನವೇ ಈ ಯೋಜನೆಗಾಗಿ ಅರಣ್ಯ ಭೂಮಿಯನ್ನು ಬಳಕೆ ಮಾಡಲಾಗಿದೆ ಎಂಬುದನ್ನು ಅಧಿಕಾರಿಗಳ ತಂಡವು ಬೊಟ್ಟು ಮಾಡಿ ತೋರಿಸಿದೆ. ನಿಯಮ ಉಲ್ಲಂಘಿಸಿದ ಸರ್ಕಾರಿ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು ಹಾಗೂ ದಂಡ ವಿಧಿಸಬೇಕು’ ಎಂದು ಸಲಹಾ ಸಮಿತಿ ನಿರ್ದೇಶನ ನೀಡಿತು. ಬಳಿಕ ಪ್ರಸ್ತಾವವನ್ನು ಮುಂದಿನ ಸಭೆಗೆ ಮುಂದೂಡಿತು. ಪಶ್ಚಿಮ ಘಟ್ಟದ ಎತ್ತಿನಹೊಳೆಯಿಂದ 24 ಟಿಎಂಸಿ ನೀರು ಹರಿಸುವ ಈ ಯೋಜನೆಗೆ ಈ ಹಿಂದೆ 13.93 ಹೆಕ್ಟೇರ್ ಅರಣ್ಯ ಬಳಕೆಗೆ 2016ರಲ್ಲಿ ಪ್ರಸ್ತಾವ ಸಲ್ಲಿಸಲಾಗಿತ್ತು. 33 ಷರತ್ತುಗಳನ್ನು ವಿಧಿಸಿ 2016ರಲ್ಲಿ ಅನುಮೋದನೆ ಕೊಡಲಾಗಿತ್ತು. ಆದರೆ ಬಹುತೇಕ ಷರತ್ತುಗಳನ್ನು ಪಾಲನೆ ಮಾಡಿಲ್ಲ. ಕಾಮಗಾರಿ ಸಂದರ್ಭದಲ್ಲಿ ಭೂಕುಸಿತ ಹಾಗೂ ಮಣ್ಣಿನ ಕೊರೆತ ಉಂಟಾಗಿದೆ ಎಂದು ಎನ್‌ಜಿಟಿಯ ಮೇಲ್ವಿಚಾರಣಾ ತಂಡವು 2019ರಲ್ಲಿ ವರದಿ ಸಲ್ಲಿಸಿತ್ತು. ಭೂಕುಸಿತ ತಡೆಗೆ ಯಾವುದೇ ಕ್ರಮ ಕೈಗೊಂಡಿಲ್ಲ. ಇದರ ಜತೆಗೆ ಅನುಮೋದನೆಗಿಂತ ಹೆಚ್ಚುವರಿ ಅರಣ್ಯ ಬಳಸಲಾಗಿದೆ. ಕಾಮಗಾರಿಯಿಂದಾಗಿ ಅನೇಕ ಮನೆಗಳಿಗೆ ಹಾನಿಯಾಗಿದೆ. ಆದರೆ, ಸಂತ್ರಸ್ತರಿಗೆ ಯಾವುದೇ ಪರಿಹಾರ ನೀಡಿಲ್ಲ ಎಂದು ತಜ್ಞರ ತಂಡವು ಆಕ್ಷೇಪ ವ್ಯಕ್ತಪಡಿಸಿತ್ತು.

Spread the love
  • Related Posts

    “ಭಜನೆಯಿಂದ ಸಂಸ್ಕಾರ ವೃದ್ಧಿಯಾಗಿ, ಸಮಾಜಸೇವೆಯ ಮನೋಭಾವ ಬೆಳೆಯಲಿ; ವೃದ್ಧಾಶ್ರಮಗಳ ಸಂಖ್ಯೆ ಕಡಿಮೆಯಾಗಲಿ” : ಶಾಸಕ ಹರೀಶ್ ಪೂಂಜಾ

    ಕಡಿರುದ್ಯಾವರ ಗ್ರಾಮದ ಬೆಳ್ಳೂರುಬೈಲಿನಲ್ಲಿ ಶ್ರೀ ಮಾರಿಯಮ್ಮ ದೇವಿ ಭಜನಾ ಮಂದಿರದ ನೂತನ ಕಟ್ಟಡ ಉದ್ಘಾಟನೆ ಬೆಳ್ತಂಗಡಿ: ಕಡಿರುದ್ಯಾವರ ಗ್ರಾಮದ ಬೆಳ್ಳೂರುಬೈಲಿನಲ್ಲಿ ಶ್ರೀ ಮಾರಿಯಮ್ಮ ದೇವಿ ಭಜನಾ ಮಂದಿರದ ನೂತನ ಕಟ್ಟಡದ ಉದ್ಘಾಟನಾ ಕಾರ್ಯಕ್ರಮವು ಇಂದು ಭಕ್ತಿಭಾವ ಹಾಗೂ ಸಂಭ್ರಮದ ವಾತಾವರಣದಲ್ಲಿ ನೆರವೇರಿತು.…

    Spread the love

    ಎಕ್ಸೆಲ್ ಕಾಲೇಜಿಗೆ ಮತ್ತೊಂದು ಗರಿ: ಸಿಇಟಿಯಲ್ಲಿ ಮಿಂಚಿದ ಎಕ್ಸೆಲ್ ವಿದ್ಯಾರ್ಥಿಗಳು; ರಾಜ್ಯ ಮಟ್ಟದಲ್ಲಿ ಗಮನಾರ್ಹ ರ‍್ಯಾಂಕ್

    ಸಿಇಟಿ ಫಲಿತಾಂಶದಲ್ಲಿ ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿಗಳ ಅದ್ಭುತ ಸಾಧನೆ ಗುರುವಾಯನಕೆರೆ, ಜೂನ್ 7: ಇತ್ತೀಚೆಗೆ ಪ್ರಕಟಗೊಂಡ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಫಲಿತಾಂಶದಲ್ಲಿ ಗುರುವಾಯನಕೆರೆಯ ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿಗಳು ಮತ್ತೊಮ್ಮೆ ಗಮನಾರ್ಹ ಸಾಧನೆ ಮಾಡಿ ಶಿಕ್ಷಣ ಕ್ಷೇತ್ರದಲ್ಲಿ ತಮ್ಮ ಮೇಲುಗೈಯನ್ನು…

    Spread the love

    You Missed

    “ಭಜನೆಯಿಂದ ಸಂಸ್ಕಾರ ವೃದ್ಧಿಯಾಗಿ, ಸಮಾಜಸೇವೆಯ ಮನೋಭಾವ ಬೆಳೆಯಲಿ; ವೃದ್ಧಾಶ್ರಮಗಳ ಸಂಖ್ಯೆ ಕಡಿಮೆಯಾಗಲಿ” : ಶಾಸಕ ಹರೀಶ್ ಪೂಂಜಾ

    • By admin
    • June 7, 2026
    • 170 views

    ಎಕ್ಸೆಲ್ ಕಾಲೇಜಿಗೆ ಮತ್ತೊಂದು ಗರಿ: ಸಿಇಟಿಯಲ್ಲಿ ಮಿಂಚಿದ ಎಕ್ಸೆಲ್ ವಿದ್ಯಾರ್ಥಿಗಳು; ರಾಜ್ಯ ಮಟ್ಟದಲ್ಲಿ ಗಮನಾರ್ಹ ರ‍್ಯಾಂಕ್

    • By admin
    • June 6, 2026
    • 233 views
    ಎಕ್ಸೆಲ್ ಕಾಲೇಜಿಗೆ ಮತ್ತೊಂದು ಗರಿ: ಸಿಇಟಿಯಲ್ಲಿ ಮಿಂಚಿದ ಎಕ್ಸೆಲ್ ವಿದ್ಯಾರ್ಥಿಗಳು; ರಾಜ್ಯ ಮಟ್ಟದಲ್ಲಿ ಗಮನಾರ್ಹ ರ‍್ಯಾಂಕ್

    ಮನೆ ಮೇಲೆ ತೆಂಗಿನಮರ ಬಿದ್ದು ಹಾನಿ: ಧರ್ಮಸ್ಥಳ ಶೌರ್ಯ ಘಟಕದಿಂದ ನೆರವು

    • By admin
    • June 5, 2026
    • 98 views
    ಮನೆ ಮೇಲೆ ತೆಂಗಿನಮರ ಬಿದ್ದು ಹಾನಿ: ಧರ್ಮಸ್ಥಳ ಶೌರ್ಯ ಘಟಕದಿಂದ ನೆರವು

    “ಗಡಾಯಿಕಲ್ಲಿನಲ್ಲಿ ಚಾರಣಕ್ಕೆ ಬಂದ ಯುವಕನ ಕಾಲು ಟ್ವಿಸ್ಟ್: ಮೂರು ಗಂಟೆಗಳ ಸಾಹಸಮಯ ರಕ್ಷಣಾ ಕಾರ್ಯಾಚರಣೆ”

    • By admin
    • June 4, 2026
    • 86 views
    “ಗಡಾಯಿಕಲ್ಲಿನಲ್ಲಿ  ಚಾರಣಕ್ಕೆ ಬಂದ ಯುವಕನ ಕಾಲು ಟ್ವಿಸ್ಟ್: ಮೂರು ಗಂಟೆಗಳ ಸಾಹಸಮಯ ರಕ್ಷಣಾ ಕಾರ್ಯಾಚರಣೆ”

    “ಮಳೆಯ ಸವಿಯಲ್ಲಿ ಶಿರಾಡಿಯ ಕೆ.ಟಿ.: ರುಚಿ ಮತ್ತು ಸ್ನೇಹದ ಅಪೂರ್ವ ಸಂಗಮ”

    • By admin
    • June 2, 2026
    • 40 views
    “ಮಳೆಯ ಸವಿಯಲ್ಲಿ ಶಿರಾಡಿಯ ಕೆ.ಟಿ.: ರುಚಿ ಮತ್ತು ಸ್ನೇಹದ ಅಪೂರ್ವ ಸಂಗಮ”

    ಸಾಮಾಜಿಕ ಹಾಗೂ ಶೈಕ್ಷಣಿಕ ಕ್ಷೇತ್ರದ ಸಾಧಕ ಕೆ. ರವೀಂದ್ರ ಶೆಟ್ಟಿ ಉಳಿದೊಟ್ಟು ಅವರಿಗೆ ಗೌರವ ಸಮರ್ಪಣೆ

    • By admin
    • June 2, 2026
    • 36 views
    ಸಾಮಾಜಿಕ ಹಾಗೂ ಶೈಕ್ಷಣಿಕ ಕ್ಷೇತ್ರದ ಸಾಧಕ ಕೆ. ರವೀಂದ್ರ ಶೆಟ್ಟಿ ಉಳಿದೊಟ್ಟು ಅವರಿಗೆ ಗೌರವ ಸಮರ್ಪಣೆ