ರಾಜ್ಯದ ಎಲ್ಲಾ ಕಾಲೇಜುಗಳಲ್ಲಿ ”ಯುವನಿಧಿ” ವಿಶೇಷ ನೋಂದಣಿ ಅಭಿಯಾನ : ಸರ್ಕಾರ ಮಹತ್ವದ ಆದೇಶ.!

ಬೆಂಗಳೂರು : ಯುವನಿಧಿ ವಿಶೇಷ ನೋಂದಣಿ ಅಭಿಯಾನವನ್ನು ದಿನಾಂಕ:06.01.2025 ರಿಂದ 20.01.2025 ರವರೆಗೆ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖಾ ವ್ಯಾಪ್ತಿಯ ಕಾಲೇಜುಗಳಲ್ಲಿ ಆಯೋಜಿಸುವ ಕುರಿತು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.

ಸೂಚಿತ ವಿಷಯಕ್ಕೆ ಸಂಬಂಧಿಸಿದಂತೆ, ಕರ್ನಾಟಕ ಸರ್ಕಾರದ ಖಾತರಿ ಯೋಜನೆಗಳಲ್ಲಿ ಒಂದಾದ ಯುವನಿಧಿ ಯೋಜನೆ ರಾಜ್ಯದ ನಿರುದ್ಯೋಗಿ ಯುವಕ/ಯುವತಿಯರಿಗೆ ನಿರುದ್ಯೋಗಿ ಭತ್ಯೆಯನ್ನು ನೀಡಿ ಸಬಲೀಕರಣಗೊಳಿಸಲು ಜಾರಿಗೊಳಿಸಿದ ಮಹತ್ತರ ಯೋಜನೆಯಾಗಿರುತ್ತದೆ.

ಈ ಯೋಜನೆಯಡಿ ನೋಂದಣಿ ಆಗುವ ಪದವೀಧರರಿಗೆ/ಸ್ನಾತಕೋತ್ತರ ಪದವೀಧರರಿಗೆ ಮಾಹೆಯಾನ ರೂ.3000/- ಮತ್ತು ಡಿಪ್ಲೋಮಾ(6 ಬೋರ್ಡ್‌ಗಳಿಂದ) ತೇರ್ಗಡೆಯಾದವರಿಗೆ ಮಾಹೆಯಾನ ರೂ.1500/- ನಿರುದ್ಯೋಗ ಭತ್ಯೆಯನ್ನು ನೇರ ನಗದು ವರ್ಗಾವಣೆ ಮೂಲಕ ಪಾವತಿಸಲಾಗುತ್ತಿದೆ.

2023-24 ನೇ ಸಾಲಿನಲ್ಲಿ ತೇರ್ಗಡೆಯಾದ 527273 ಅಭ್ಯರ್ಥಿಗಳ ದತ್ತಾಂಶವು ನ್ಯಾಡ್ ಪೋರ್ಟಲ್ ನಲ್ಲಿ ಅಪ್ ಲೋಡ್ ಆಗಿದ್ದರೂ ಸಹ ನಿರೀಕ್ಷಿತ ಮಟ್ಟದಲ್ಲಿ ಯುವನಿಧಿ ಯೋಜನೆಗೆ ಅಭ್ಯರ್ಥಿಗಳು ನೋಂದಣಿಯಾಗಿರುವುದಿಲ್ಲ. ಈ ಹಿನ್ನಲೆಯಲ್ಲಿ ಯುವನಿಧಿ ಯೋಜನೆಗೆ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಅರ್ಹ ಅಭ್ಯರ್ಥಿಗಳನ್ನು ನೋಂದಾಯಿಸಲು “ಯುವನಿಧಿ ವಿಶೇಷ ನೋಂದಣಿ ಅಭಿಯಾನವನ್ನು ದಿನಾಂಕ:06.01.2025 ರಿಂದ 20.01.2025ರ ವರೆಗೆ ಹಮ್ಮಿಕೊಳ್ಳಲಾಗಿದ್ದು ಅಭ್ಯರ್ಥಿಗಳು ಈ ಕೆಳಕಂಡ ಅರ್ಹತೆಗಳನ್ನು ಹೊಂದಿರಬೇಕಾಗಿದೆ.

* ಕರ್ನಾಟಕದಲ್ಲಿ ವಾಸವಿರುವವರು (ಕನಿಷ್ಠ 06 ವರ್ಷಗಳ ವರೆಗೆ ಪದವಿ/ಸ್ನಾತಕೋತ್ತರ ಪದವಿ ಮತ್ತು ಡಿಪ್ಲೊಮದವರೆಗೆ ಅಧ್ಯಯನ ಮಾಡಿದವರು)

+ ತೇರ್ಗಡೆ ಹೊಂದಿರುವ 180 ದಿನಗಳ ನಂತರವೂ ಉದ್ಯೋಗ ದೊರಕದೆ, ಉನ್ನತ ವ್ಯಾಸಂಗಕ್ಕೆ ದಾಖಲಾಗದೆ ಇರುವ ಅಭ್ಯರ್ಥಿಗಳು ಈ ಯೋಜನೆಗೆ ಅರ್ಹರಿರುತ್ತಾರೆ.

+ ಸ್ವಯಂ ಉದ್ಯೋಗ ಹೊಂದಿಲ್ಲದ ಅಭ್ಯರ್ಥಿಗಳು.

+ ಉನ್ನತ ವಿದ್ಯಾಭ್ಯಾಸ ಮುಂದುವರಿಸದೇ ಇರುವ ಅಭ್ಯರ್ಥಿಗಳು,

ಈ ಹಿನ್ನೆಲೆಯಲ್ಲಿ ಇಲಾಖಾ ವ್ಯಾಪ್ತಿಯ ಎಲ್ಲಾ ಪದವಿ/ ಸ್ನಾತಕೋತ್ತರ ಪದವಿ, ಇಂಜಿನಿಯರಿಂಗ್ ಹಾಗೂ ಡಿಪ್ಲೋಮ ಕಾಲೇಜುಗಳ ಪ್ರಾಂಶುಪಾಲರುಗಳು 2023 ಹಾಗೂ 2024 ನೇ ಸಾಲಿನಲ್ಲಿ ತಮ್ಮ ಕಾಲೇಜುಗಳಲ್ಲಿ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳ ನೋಂದಣಿಗಾಗಿ ತಮ್ಮ ಕಾಲೇಜುಗಳಲ್ಲಿ ಯುವನಿಧಿ ವಿಶೇಷ ನೋಂದಣಿ ಸಹಾಯ ಕೇಂದ್ರಗಳನ್ನು ತೆರೆದು, ಕೇಂದ್ರಕ್ಕೆ ಅತ್ಯವಶ್ಯಕವಾಗಿ ಬೇಕಾದ ಗಣಕ ಯಂತ್ರ ವ್ಯವಸ್ಥೆ ಹಾಗೂ ಸಿಬ್ಬಂದಿ ನಿಯೋಜನೆ ಮಾಡಿಕೊಳ್ಳಲು ಸೂಚಿಸಲಾಗಿದೆ. ಕಾಲೇಜು ಹಾಗೂ ಸ್ಥಳೀಯ ಮಟ್ಟದಲ್ಲಿ ಬ್ಯಾನರ್/ಪೋಸ್ಮರ್‌ಗಳನ್ನು ಅಳವಡಿಸಿ, ವ್ಯಾಪಕ ಪ್ರಚಾರವನ್ನು ಕೈಗೊಂಡು ಅರ್ಹ ಅಭ್ಯರ್ಥಿಗಳಿಂದ ಗರಿಷ್ಠ ಮಟ್ಟದ ನೋಂದಣಿ ಮಾಡಿಸುವಂತೆ ಕ್ರಮ ವಹಿಸಲು ಸೂಚಿಸಲಾಗಿದೆ.

ಕಾಲೇಜುಗಳಲ್ಲಿ ಪ್ರಾಂಶುಪಾಲರು ಯುವನಿಧಿ ವಿಶೇಷ ನೋಂದಣಿ ಅಭಿಯಾನಕ್ಕಾಗಿ ಕಾಲೇಜಿನ ಪ್ಲೇಸ್‌ಮೆಂಟ್ ಸೆಲ್ ಅಧಿಕಾರಿಗಳು ಹಾಗೂ ಐ.ಟಿ ಕೋ-ಆರ್ಡಿನೇಟರ್ ಗಳಿಗೆ ಉಸ್ತುವರಿಯನ್ನು ವಹಿಸಿ ಅರ್ಹ ಅಭ್ಯರ್ಥಿಗಳಿಂದ ಅತಿ ಹೆಚ್ಚು ನೋಂದಣಿ ಮಾಡಿಕೊಳ್ಳಲು ಅನುಕೂಲ ಕಲ್ಪಿಸುವಂತೆ ಈ ಮೂಲಕ ಸೂಚಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಯುವನಿಧಿ ಯೋಜನೆಯ ವೆಬ್‌ಸೈಟನ್ನು ಸಂಪರ್ಕಿಸುವುದು: https://yuvanidhischeme.in/

Spread the love
  • Related Posts

    ಕಟ್ಟಡ ಟೆಂಡರ್ ನಲ್ಲಿ ಆಗುತ್ತಿರುವ ಭ್ರಷ್ಟಾಚಾರ ಹಾಗೂ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಮರಳು, ಕೆಂಪುಕಲ್ಲು ಪೂರೈಕೆಯಲ್ಲಿ ಉಂಟಾದ ತೊಡಕುಗಳ ಕುರಿತು ಭಾರತೀಯ ಮಜ್ದೂರ್ ಸಂಘದ ವತಿಯಿಂದ ಸಮಾಲೋಚನಾ ಸಭೆ ಹಾಗೂ ಮನವಿ ಸಲ್ಲಿಕೆ

    ಬೆಳ್ತಂಗಡಿ: ಭಾರತೀಯ ಮಜ್ದೂರ್ ಸಂಘ ತಾಲೂಕು ಸಮಿತಿ ಬೆಳ್ತಂಗಡಿ ವತಿಯಿಂದ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರಿಗೆ ಮರಳು ಹಾಗೂ ಕೆಂಪು ಕಲ್ಲು ಪೂರೈಕೆಯಲ್ಲಿ ಆಗಿರುವ ತೊಂದರೆಯ ಕುರಿತು ಹಾಗೂ ಕಾರ್ಮಿಕ ಇಲಾಖೆಯ ಕಟ್ಟಡ ಮಂಡಳಿಯ ಟೆಂಡರ್ ಕೂಪದ ಭ್ರಷ್ಟಾಚಾರವನ್ನು ಖಂಡಿಸಲು…

    Spread the love

    ಚಿರಂಜೀವಿ ಯುವಕ ಮಂಡಲ ಕಾನರ್ಪ ಇದರ 34ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    ಬೆಳ್ತಂಗಡಿ: ಚಿರಂಜೀವಿ ಯುವಕ ಮಂಡಲ ಕಾನರ್ಪ ಕಡಿರುದ್ಯಾವರ ಇದರ 34ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮದ ನಿಮಿತ್ತ ಪೂರ್ವಭಾವಿ ಸಭೆಯನ್ನು ಯುವಕ ಮಂಡಲದ ವಠಾರದಲ್ಲಿ ನಡೆಸಲಾಯಿತು. ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ ಸಮಿತಿಯ ಅಧ್ಯಕ್ಷರಾಗಿ ರಾಘವೇಂದ್ರ ಭಟ್ ಪಣಿಕಲ್ ಹಾಗೂ…

    Spread the love

    You Missed

    ಕಟ್ಟಡ ಟೆಂಡರ್ ನಲ್ಲಿ ಆಗುತ್ತಿರುವ ಭ್ರಷ್ಟಾಚಾರ ಹಾಗೂ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಮರಳು, ಕೆಂಪುಕಲ್ಲು ಪೂರೈಕೆಯಲ್ಲಿ ಉಂಟಾದ ತೊಡಕುಗಳ ಕುರಿತು ಭಾರತೀಯ ಮಜ್ದೂರ್ ಸಂಘದ ವತಿಯಿಂದ ಸಮಾಲೋಚನಾ ಸಭೆ ಹಾಗೂ ಮನವಿ ಸಲ್ಲಿಕೆ

    • By admin
    • June 30, 2025
    • 20 views
    ಕಟ್ಟಡ  ಟೆಂಡರ್ ನಲ್ಲಿ ಆಗುತ್ತಿರುವ ಭ್ರಷ್ಟಾಚಾರ ಹಾಗೂ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಮರಳು, ಕೆಂಪುಕಲ್ಲು ಪೂರೈಕೆಯಲ್ಲಿ ಉಂಟಾದ ತೊಡಕುಗಳ ಕುರಿತು ಭಾರತೀಯ ಮಜ್ದೂರ್ ಸಂಘದ ವತಿಯಿಂದ ಸಮಾಲೋಚನಾ ಸಭೆ ಹಾಗೂ ಮನವಿ ಸಲ್ಲಿಕೆ

    ಚಿರಂಜೀವಿ ಯುವಕ ಮಂಡಲ ಕಾನರ್ಪ ಇದರ 34ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    • By admin
    • June 28, 2025
    • 271 views
    ಚಿರಂಜೀವಿ ಯುವಕ ಮಂಡಲ ಕಾನರ್ಪ ಇದರ 34ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    ವಕೀಲರ ಸಂಘ (ರಿ ) ಬಂಟ್ವಾಳ ಇದರ ನೂತನ ಪದಾಧಿಕಾರಿಗಳ ಪದಗ್ರಹಣ

    • By admin
    • June 26, 2025
    • 186 views
    ವಕೀಲರ ಸಂಘ (ರಿ ) ಬಂಟ್ವಾಳ ಇದರ ನೂತನ ಪದಾಧಿಕಾರಿಗಳ ಪದಗ್ರಹಣ

    ಭಾರಿಮಳೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿತ, ಶಿರಾಡಿ ಘಾಟ್ ನಲ್ಲಿ ವಾಹನ ಸಂಚಾರ ಬಂದ್

    • By admin
    • June 26, 2025
    • 292 views
    ಭಾರಿಮಳೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ  ಕುಸಿತ, ಶಿರಾಡಿ ಘಾಟ್ ನಲ್ಲಿ ವಾಹನ ಸಂಚಾರ ಬಂದ್

    ಮುಂದುವರಿದ ವರುಣಾರ್ಭಟ ಬೆಳ್ತಂಗಡಿ ತಾಲೂಕಿನ ಶಾಲೆಗಳಿಗೆ ಜೂನ್ 26 ಗುರುವಾರ ರಜೆ: ತಹಶಿಲ್ದಾರ್ ಫೋಷಣೆ

    • By admin
    • June 25, 2025
    • 154 views
    ಮುಂದುವರಿದ ವರುಣಾರ್ಭಟ ಬೆಳ್ತಂಗಡಿ ತಾಲೂಕಿನ  ಶಾಲೆಗಳಿಗೆ ಜೂನ್ 26 ಗುರುವಾರ ರಜೆ: ತಹಶಿಲ್ದಾರ್ ಫೋಷಣೆ

    ಹಾಸನದ ಸಕಲೇಶಪುರ ಎಡಕುಮೇರಿ ಎಂಬಲ್ಲಿ ರೈಲು ಹಳಿಗಳ ಮೇಲೆ ಬಿದ್ದ ಬಂಡೆ ಕಲ್ಲುಗಳು ರೈಲು ಸಂಚಾರದಲ್ಲಿ ವ್ಯತ್ಯಯ

    • By admin
    • June 21, 2025
    • 87 views
    ಹಾಸನದ ಸಕಲೇಶಪುರ ಎಡಕುಮೇರಿ ಎಂಬಲ್ಲಿ ರೈಲು ಹಳಿಗಳ ಮೇಲೆ ಬಿದ್ದ ಬಂಡೆ ಕಲ್ಲುಗಳು ರೈಲು ಸಂಚಾರದಲ್ಲಿ ವ್ಯತ್ಯಯ