ರಾಜ್ಯದ ಎಲ್ಲಾ ಕಾಲೇಜುಗಳಲ್ಲಿ ”ಯುವನಿಧಿ” ವಿಶೇಷ ನೋಂದಣಿ ಅಭಿಯಾನ : ಸರ್ಕಾರ ಮಹತ್ವದ ಆದೇಶ.!

ಬೆಂಗಳೂರು : ಯುವನಿಧಿ ವಿಶೇಷ ನೋಂದಣಿ ಅಭಿಯಾನವನ್ನು ದಿನಾಂಕ:06.01.2025 ರಿಂದ 20.01.2025 ರವರೆಗೆ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖಾ ವ್ಯಾಪ್ತಿಯ ಕಾಲೇಜುಗಳಲ್ಲಿ ಆಯೋಜಿಸುವ ಕುರಿತು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.

ಸೂಚಿತ ವಿಷಯಕ್ಕೆ ಸಂಬಂಧಿಸಿದಂತೆ, ಕರ್ನಾಟಕ ಸರ್ಕಾರದ ಖಾತರಿ ಯೋಜನೆಗಳಲ್ಲಿ ಒಂದಾದ ಯುವನಿಧಿ ಯೋಜನೆ ರಾಜ್ಯದ ನಿರುದ್ಯೋಗಿ ಯುವಕ/ಯುವತಿಯರಿಗೆ ನಿರುದ್ಯೋಗಿ ಭತ್ಯೆಯನ್ನು ನೀಡಿ ಸಬಲೀಕರಣಗೊಳಿಸಲು ಜಾರಿಗೊಳಿಸಿದ ಮಹತ್ತರ ಯೋಜನೆಯಾಗಿರುತ್ತದೆ.

ಈ ಯೋಜನೆಯಡಿ ನೋಂದಣಿ ಆಗುವ ಪದವೀಧರರಿಗೆ/ಸ್ನಾತಕೋತ್ತರ ಪದವೀಧರರಿಗೆ ಮಾಹೆಯಾನ ರೂ.3000/- ಮತ್ತು ಡಿಪ್ಲೋಮಾ(6 ಬೋರ್ಡ್‌ಗಳಿಂದ) ತೇರ್ಗಡೆಯಾದವರಿಗೆ ಮಾಹೆಯಾನ ರೂ.1500/- ನಿರುದ್ಯೋಗ ಭತ್ಯೆಯನ್ನು ನೇರ ನಗದು ವರ್ಗಾವಣೆ ಮೂಲಕ ಪಾವತಿಸಲಾಗುತ್ತಿದೆ.

2023-24 ನೇ ಸಾಲಿನಲ್ಲಿ ತೇರ್ಗಡೆಯಾದ 527273 ಅಭ್ಯರ್ಥಿಗಳ ದತ್ತಾಂಶವು ನ್ಯಾಡ್ ಪೋರ್ಟಲ್ ನಲ್ಲಿ ಅಪ್ ಲೋಡ್ ಆಗಿದ್ದರೂ ಸಹ ನಿರೀಕ್ಷಿತ ಮಟ್ಟದಲ್ಲಿ ಯುವನಿಧಿ ಯೋಜನೆಗೆ ಅಭ್ಯರ್ಥಿಗಳು ನೋಂದಣಿಯಾಗಿರುವುದಿಲ್ಲ. ಈ ಹಿನ್ನಲೆಯಲ್ಲಿ ಯುವನಿಧಿ ಯೋಜನೆಗೆ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಅರ್ಹ ಅಭ್ಯರ್ಥಿಗಳನ್ನು ನೋಂದಾಯಿಸಲು “ಯುವನಿಧಿ ವಿಶೇಷ ನೋಂದಣಿ ಅಭಿಯಾನವನ್ನು ದಿನಾಂಕ:06.01.2025 ರಿಂದ 20.01.2025ರ ವರೆಗೆ ಹಮ್ಮಿಕೊಳ್ಳಲಾಗಿದ್ದು ಅಭ್ಯರ್ಥಿಗಳು ಈ ಕೆಳಕಂಡ ಅರ್ಹತೆಗಳನ್ನು ಹೊಂದಿರಬೇಕಾಗಿದೆ.

* ಕರ್ನಾಟಕದಲ್ಲಿ ವಾಸವಿರುವವರು (ಕನಿಷ್ಠ 06 ವರ್ಷಗಳ ವರೆಗೆ ಪದವಿ/ಸ್ನಾತಕೋತ್ತರ ಪದವಿ ಮತ್ತು ಡಿಪ್ಲೊಮದವರೆಗೆ ಅಧ್ಯಯನ ಮಾಡಿದವರು)

+ ತೇರ್ಗಡೆ ಹೊಂದಿರುವ 180 ದಿನಗಳ ನಂತರವೂ ಉದ್ಯೋಗ ದೊರಕದೆ, ಉನ್ನತ ವ್ಯಾಸಂಗಕ್ಕೆ ದಾಖಲಾಗದೆ ಇರುವ ಅಭ್ಯರ್ಥಿಗಳು ಈ ಯೋಜನೆಗೆ ಅರ್ಹರಿರುತ್ತಾರೆ.

+ ಸ್ವಯಂ ಉದ್ಯೋಗ ಹೊಂದಿಲ್ಲದ ಅಭ್ಯರ್ಥಿಗಳು.

+ ಉನ್ನತ ವಿದ್ಯಾಭ್ಯಾಸ ಮುಂದುವರಿಸದೇ ಇರುವ ಅಭ್ಯರ್ಥಿಗಳು,

ಈ ಹಿನ್ನೆಲೆಯಲ್ಲಿ ಇಲಾಖಾ ವ್ಯಾಪ್ತಿಯ ಎಲ್ಲಾ ಪದವಿ/ ಸ್ನಾತಕೋತ್ತರ ಪದವಿ, ಇಂಜಿನಿಯರಿಂಗ್ ಹಾಗೂ ಡಿಪ್ಲೋಮ ಕಾಲೇಜುಗಳ ಪ್ರಾಂಶುಪಾಲರುಗಳು 2023 ಹಾಗೂ 2024 ನೇ ಸಾಲಿನಲ್ಲಿ ತಮ್ಮ ಕಾಲೇಜುಗಳಲ್ಲಿ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳ ನೋಂದಣಿಗಾಗಿ ತಮ್ಮ ಕಾಲೇಜುಗಳಲ್ಲಿ ಯುವನಿಧಿ ವಿಶೇಷ ನೋಂದಣಿ ಸಹಾಯ ಕೇಂದ್ರಗಳನ್ನು ತೆರೆದು, ಕೇಂದ್ರಕ್ಕೆ ಅತ್ಯವಶ್ಯಕವಾಗಿ ಬೇಕಾದ ಗಣಕ ಯಂತ್ರ ವ್ಯವಸ್ಥೆ ಹಾಗೂ ಸಿಬ್ಬಂದಿ ನಿಯೋಜನೆ ಮಾಡಿಕೊಳ್ಳಲು ಸೂಚಿಸಲಾಗಿದೆ. ಕಾಲೇಜು ಹಾಗೂ ಸ್ಥಳೀಯ ಮಟ್ಟದಲ್ಲಿ ಬ್ಯಾನರ್/ಪೋಸ್ಮರ್‌ಗಳನ್ನು ಅಳವಡಿಸಿ, ವ್ಯಾಪಕ ಪ್ರಚಾರವನ್ನು ಕೈಗೊಂಡು ಅರ್ಹ ಅಭ್ಯರ್ಥಿಗಳಿಂದ ಗರಿಷ್ಠ ಮಟ್ಟದ ನೋಂದಣಿ ಮಾಡಿಸುವಂತೆ ಕ್ರಮ ವಹಿಸಲು ಸೂಚಿಸಲಾಗಿದೆ.

ಕಾಲೇಜುಗಳಲ್ಲಿ ಪ್ರಾಂಶುಪಾಲರು ಯುವನಿಧಿ ವಿಶೇಷ ನೋಂದಣಿ ಅಭಿಯಾನಕ್ಕಾಗಿ ಕಾಲೇಜಿನ ಪ್ಲೇಸ್‌ಮೆಂಟ್ ಸೆಲ್ ಅಧಿಕಾರಿಗಳು ಹಾಗೂ ಐ.ಟಿ ಕೋ-ಆರ್ಡಿನೇಟರ್ ಗಳಿಗೆ ಉಸ್ತುವರಿಯನ್ನು ವಹಿಸಿ ಅರ್ಹ ಅಭ್ಯರ್ಥಿಗಳಿಂದ ಅತಿ ಹೆಚ್ಚು ನೋಂದಣಿ ಮಾಡಿಕೊಳ್ಳಲು ಅನುಕೂಲ ಕಲ್ಪಿಸುವಂತೆ ಈ ಮೂಲಕ ಸೂಚಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಯುವನಿಧಿ ಯೋಜನೆಯ ವೆಬ್‌ಸೈಟನ್ನು ಸಂಪರ್ಕಿಸುವುದು: https://yuvanidhischeme.in/

Spread the love
  • Related Posts

    ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಯೆಲ್ಲೊ – ಅಲರ್ಟ್ ಘೋಷಣೆಯಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ

    ಮಂಗಳೂರು: ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ, ಬೆಂಗಳೂರು ಹೊರಡಿಸಿರುವ ಮುನ್ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಳೆಯಾಗುತ್ತಿದ್ದು. ಇದೇ ಹವಾಮಾನ ಪರಿಸ್ಥಿತಿಯ ಮುಂದುವರಿಯುವ ಸೂಚನೆಯಿದ್ದು ಜಿಲ್ಲೆಯಾದ್ಯಂತ ಯೆಲ್ಲೊ – ಅಲರ್ಟ್ ಘೋಷಣೆಯಾಗಿದ್ದು, ಮುಂಜಾಗ್ರತಾ ಕ್ರಮವಾಗಿ…

    Spread the love

    ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಪತ್ನಿ ಚನ್ನಮ್ಮ ವಿಧಿವಶ

    ಬೆಂಗಳೂರು: ತೀವ್ರ ಉಸಿರಾಟದ ಸಮಸ್ಯೆಯಿಂದ ನಗರದ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಪತ್ನಿ ಚನ್ನಮ್ಮ ಅವರು ಚಿಕಿತ್ಸೆ ಫಲಕಾರಿಯಾಗದೆ ಶನಿವಾರ (ಜು.18) ನಿಧನ ಹೊಂದಿದರು, ಅವರಿಗೆ 85 ವರ್ಷ ವಯಸ್ಸಾಗಿತ್ತು. ಚೆನ್ನಮ್ಮ ಅವರಿಗೆ ಕಳೆದ ಮೂರು ದಿನಗಳಿಂದ…

    Spread the love

    You Missed

    ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಯೆಲ್ಲೊ – ಅಲರ್ಟ್ ಘೋಷಣೆಯಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ

    • By admin
    • July 22, 2026
    • 2 views
    ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಯೆಲ್ಲೊ – ಅಲರ್ಟ್ ಘೋಷಣೆಯಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ

    ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಪತ್ನಿ ಚನ್ನಮ್ಮ ವಿಧಿವಶ

    • By admin
    • July 18, 2026
    • 7 views
    ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಪತ್ನಿ ಚನ್ನಮ್ಮ ವಿಧಿವಶ

    ಭಾರಿ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಜು.18ರಂದು ರಜೆ ಘೋಷಣೆ

    • By admin
    • July 17, 2026
    • 9 views
    ಭಾರಿ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಜು.18ರಂದು ರಜೆ ಘೋಷಣೆ

    ಮಹಿಳಾ ಸಬಲೀಕರಣ ಮತ್ತು ಸಮಾಜ ಸೇವೆಗೆ ಜಾಗತಿಕ ಮನ್ನಣೆ: ಹೇಮಾವತಿ ವಿ. ಹೆಗ್ಗಡೆಗೆ ಗೌರವ ಡಾಕ್ಟರೇಟ್

    • By admin
    • July 17, 2026
    • 11 views
    ಮಹಿಳಾ ಸಬಲೀಕರಣ ಮತ್ತು ಸಮಾಜ ಸೇವೆಗೆ ಜಾಗತಿಕ ಮನ್ನಣೆ:  ಹೇಮಾವತಿ ವಿ. ಹೆಗ್ಗಡೆಗೆ ಗೌರವ ಡಾಕ್ಟರೇಟ್

    ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ನೀಟ್ 2026ರಲ್ಲಿ ಐತಿಹಾಸಿಕ ಸಾಧನೆ – ಅಖಿಲ ಭಾರತ ಮಟ್ಟದಲ್ಲಿ 271ನೇ ರ್ಯಾಂಕ್

    • By admin
    • July 17, 2026
    • 10 views
    ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ನೀಟ್ 2026ರಲ್ಲಿ ಐತಿಹಾಸಿಕ ಸಾಧನೆ – ಅಖಿಲ ಭಾರತ ಮಟ್ಟದಲ್ಲಿ 271ನೇ ರ್ಯಾಂಕ್

    ಚಿರಂಜೀವಿ ಯುವಕ ಮಂಡಲ(ರಿ), ಕಾನರ್ಪ ಇದರ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    • By admin
    • July 16, 2026
    • 16 views
    ಚಿರಂಜೀವಿ ಯುವಕ ಮಂಡಲ(ರಿ), ಕಾನರ್ಪ ಇದರ 35ನೇ ವರ್ಷದ  ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ