ರಾಜ್ಯದ ಎಲ್ಲಾ ಕಾಲೇಜುಗಳಲ್ಲಿ ”ಯುವನಿಧಿ” ವಿಶೇಷ ನೋಂದಣಿ ಅಭಿಯಾನ : ಸರ್ಕಾರ ಮಹತ್ವದ ಆದೇಶ.!

ಬೆಂಗಳೂರು : ಯುವನಿಧಿ ವಿಶೇಷ ನೋಂದಣಿ ಅಭಿಯಾನವನ್ನು ದಿನಾಂಕ:06.01.2025 ರಿಂದ 20.01.2025 ರವರೆಗೆ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖಾ ವ್ಯಾಪ್ತಿಯ ಕಾಲೇಜುಗಳಲ್ಲಿ ಆಯೋಜಿಸುವ ಕುರಿತು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.

ಸೂಚಿತ ವಿಷಯಕ್ಕೆ ಸಂಬಂಧಿಸಿದಂತೆ, ಕರ್ನಾಟಕ ಸರ್ಕಾರದ ಖಾತರಿ ಯೋಜನೆಗಳಲ್ಲಿ ಒಂದಾದ ಯುವನಿಧಿ ಯೋಜನೆ ರಾಜ್ಯದ ನಿರುದ್ಯೋಗಿ ಯುವಕ/ಯುವತಿಯರಿಗೆ ನಿರುದ್ಯೋಗಿ ಭತ್ಯೆಯನ್ನು ನೀಡಿ ಸಬಲೀಕರಣಗೊಳಿಸಲು ಜಾರಿಗೊಳಿಸಿದ ಮಹತ್ತರ ಯೋಜನೆಯಾಗಿರುತ್ತದೆ.

ಈ ಯೋಜನೆಯಡಿ ನೋಂದಣಿ ಆಗುವ ಪದವೀಧರರಿಗೆ/ಸ್ನಾತಕೋತ್ತರ ಪದವೀಧರರಿಗೆ ಮಾಹೆಯಾನ ರೂ.3000/- ಮತ್ತು ಡಿಪ್ಲೋಮಾ(6 ಬೋರ್ಡ್‌ಗಳಿಂದ) ತೇರ್ಗಡೆಯಾದವರಿಗೆ ಮಾಹೆಯಾನ ರೂ.1500/- ನಿರುದ್ಯೋಗ ಭತ್ಯೆಯನ್ನು ನೇರ ನಗದು ವರ್ಗಾವಣೆ ಮೂಲಕ ಪಾವತಿಸಲಾಗುತ್ತಿದೆ.

2023-24 ನೇ ಸಾಲಿನಲ್ಲಿ ತೇರ್ಗಡೆಯಾದ 527273 ಅಭ್ಯರ್ಥಿಗಳ ದತ್ತಾಂಶವು ನ್ಯಾಡ್ ಪೋರ್ಟಲ್ ನಲ್ಲಿ ಅಪ್ ಲೋಡ್ ಆಗಿದ್ದರೂ ಸಹ ನಿರೀಕ್ಷಿತ ಮಟ್ಟದಲ್ಲಿ ಯುವನಿಧಿ ಯೋಜನೆಗೆ ಅಭ್ಯರ್ಥಿಗಳು ನೋಂದಣಿಯಾಗಿರುವುದಿಲ್ಲ. ಈ ಹಿನ್ನಲೆಯಲ್ಲಿ ಯುವನಿಧಿ ಯೋಜನೆಗೆ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಅರ್ಹ ಅಭ್ಯರ್ಥಿಗಳನ್ನು ನೋಂದಾಯಿಸಲು “ಯುವನಿಧಿ ವಿಶೇಷ ನೋಂದಣಿ ಅಭಿಯಾನವನ್ನು ದಿನಾಂಕ:06.01.2025 ರಿಂದ 20.01.2025ರ ವರೆಗೆ ಹಮ್ಮಿಕೊಳ್ಳಲಾಗಿದ್ದು ಅಭ್ಯರ್ಥಿಗಳು ಈ ಕೆಳಕಂಡ ಅರ್ಹತೆಗಳನ್ನು ಹೊಂದಿರಬೇಕಾಗಿದೆ.

* ಕರ್ನಾಟಕದಲ್ಲಿ ವಾಸವಿರುವವರು (ಕನಿಷ್ಠ 06 ವರ್ಷಗಳ ವರೆಗೆ ಪದವಿ/ಸ್ನಾತಕೋತ್ತರ ಪದವಿ ಮತ್ತು ಡಿಪ್ಲೊಮದವರೆಗೆ ಅಧ್ಯಯನ ಮಾಡಿದವರು)

+ ತೇರ್ಗಡೆ ಹೊಂದಿರುವ 180 ದಿನಗಳ ನಂತರವೂ ಉದ್ಯೋಗ ದೊರಕದೆ, ಉನ್ನತ ವ್ಯಾಸಂಗಕ್ಕೆ ದಾಖಲಾಗದೆ ಇರುವ ಅಭ್ಯರ್ಥಿಗಳು ಈ ಯೋಜನೆಗೆ ಅರ್ಹರಿರುತ್ತಾರೆ.

+ ಸ್ವಯಂ ಉದ್ಯೋಗ ಹೊಂದಿಲ್ಲದ ಅಭ್ಯರ್ಥಿಗಳು.

+ ಉನ್ನತ ವಿದ್ಯಾಭ್ಯಾಸ ಮುಂದುವರಿಸದೇ ಇರುವ ಅಭ್ಯರ್ಥಿಗಳು,

ಈ ಹಿನ್ನೆಲೆಯಲ್ಲಿ ಇಲಾಖಾ ವ್ಯಾಪ್ತಿಯ ಎಲ್ಲಾ ಪದವಿ/ ಸ್ನಾತಕೋತ್ತರ ಪದವಿ, ಇಂಜಿನಿಯರಿಂಗ್ ಹಾಗೂ ಡಿಪ್ಲೋಮ ಕಾಲೇಜುಗಳ ಪ್ರಾಂಶುಪಾಲರುಗಳು 2023 ಹಾಗೂ 2024 ನೇ ಸಾಲಿನಲ್ಲಿ ತಮ್ಮ ಕಾಲೇಜುಗಳಲ್ಲಿ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳ ನೋಂದಣಿಗಾಗಿ ತಮ್ಮ ಕಾಲೇಜುಗಳಲ್ಲಿ ಯುವನಿಧಿ ವಿಶೇಷ ನೋಂದಣಿ ಸಹಾಯ ಕೇಂದ್ರಗಳನ್ನು ತೆರೆದು, ಕೇಂದ್ರಕ್ಕೆ ಅತ್ಯವಶ್ಯಕವಾಗಿ ಬೇಕಾದ ಗಣಕ ಯಂತ್ರ ವ್ಯವಸ್ಥೆ ಹಾಗೂ ಸಿಬ್ಬಂದಿ ನಿಯೋಜನೆ ಮಾಡಿಕೊಳ್ಳಲು ಸೂಚಿಸಲಾಗಿದೆ. ಕಾಲೇಜು ಹಾಗೂ ಸ್ಥಳೀಯ ಮಟ್ಟದಲ್ಲಿ ಬ್ಯಾನರ್/ಪೋಸ್ಮರ್‌ಗಳನ್ನು ಅಳವಡಿಸಿ, ವ್ಯಾಪಕ ಪ್ರಚಾರವನ್ನು ಕೈಗೊಂಡು ಅರ್ಹ ಅಭ್ಯರ್ಥಿಗಳಿಂದ ಗರಿಷ್ಠ ಮಟ್ಟದ ನೋಂದಣಿ ಮಾಡಿಸುವಂತೆ ಕ್ರಮ ವಹಿಸಲು ಸೂಚಿಸಲಾಗಿದೆ.

ಕಾಲೇಜುಗಳಲ್ಲಿ ಪ್ರಾಂಶುಪಾಲರು ಯುವನಿಧಿ ವಿಶೇಷ ನೋಂದಣಿ ಅಭಿಯಾನಕ್ಕಾಗಿ ಕಾಲೇಜಿನ ಪ್ಲೇಸ್‌ಮೆಂಟ್ ಸೆಲ್ ಅಧಿಕಾರಿಗಳು ಹಾಗೂ ಐ.ಟಿ ಕೋ-ಆರ್ಡಿನೇಟರ್ ಗಳಿಗೆ ಉಸ್ತುವರಿಯನ್ನು ವಹಿಸಿ ಅರ್ಹ ಅಭ್ಯರ್ಥಿಗಳಿಂದ ಅತಿ ಹೆಚ್ಚು ನೋಂದಣಿ ಮಾಡಿಕೊಳ್ಳಲು ಅನುಕೂಲ ಕಲ್ಪಿಸುವಂತೆ ಈ ಮೂಲಕ ಸೂಚಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಯುವನಿಧಿ ಯೋಜನೆಯ ವೆಬ್‌ಸೈಟನ್ನು ಸಂಪರ್ಕಿಸುವುದು: https://yuvanidhischeme.in/

Spread the love
  • Related Posts

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    ಬೆಳ್ತಂಗಡಿ: ತಾಲೂಕಿನ ಬೆಳಾಲು ಗ್ರಾಮದ ಮಿನಂದೇಲು ಬಸ್ ನಿಲ್ದಾಣದ ಸಮೀಪ ಸೆ. 3ರಂದು ರಾತ್ರಿ ವೇಳೆ ರಸ್ತೆಯಲ್ಲಿ ಸಂಚರಿಸುತ್ತಿದ್ದ ಬೈಕ್ ಸವಾರನಿಗೆ ಆನೆ ಪ್ರತ್ಯಕ್ಷವಾಗಿ ಆತಂಕ ಉಂಟುಮಾಡಿದ ಘಟನೆ ವರದಿಯಾಗಿದೆ. ಉಜಿರೆ–ಬೆಳಾಲು–ಬಂದಾರು ಮುಖ್ಯ ರಸ್ತೆಯ ಮಿನಂದೇಲು ಬಸ್ ನಿಲ್ದಾಣ ಹಾಗೂ ಡಿ.ಪಿ.…

    Spread the love

    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    ಬೆಳ್ತಂಗಡಿ: ಧರ್ಮಸ್ಥಳ- ಕೊಕ್ಕಡ ರಸ್ತೆಯ ಧರ್ಮಸ್ಥಳ ಸಮೀಪದ ಕಲ್ಲೇರಿ ಪರಿಸರದ ಪುದುವೆಟ್ಟು ಕ್ರಾಸ್ ಬಳಿ ಗುರುವಾರ ರಾತ್ರಿ ಕಾಡಾನೆಯೊಂದು ಕಾಣಿಸಿಕೊಂಡಿದ್ದು, ಸ್ಥಳೀಯರು ಹಾಗೂ ವಾಹನ ಸವಾರರಲ್ಲಿ ಆತಂಕ ಮೂಡಿಸಿದೆ. ಗುರುವಾರ ರಾತ್ರಿ ಸುಮಾರು 9 ಗಂಟೆಯ ವೇಳೆಗೆ ಕಾಡಾನೆ ಹೆದ್ದಾರಿ ಬದಿಯಲ್ಲಿ…

    Spread the love

    You Missed

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    • By admin
    • September 3, 2026
    • 5 views
    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    • By admin
    • September 3, 2026
    • 3 views
    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    • By admin
    • September 3, 2026
    • 5 views
    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    ಚಿರಂಜೀವಿ ಯುವಕ ಮಂಡಲ ಕಾನರ್ಪದಲ್ಲಿ ಸೆ.6ರಂದು 35ನೇ ವರ್ಷದ ಮೊಸರು ಕುಡಿಕೆ ಅಷ್ಟಮಿ ಉತ್ಸವ ಹಾಗೂ ಕೆಸರುಗದ್ದೆಯಲ್ಲಿ ಗ್ರಾಮೀಣ ಕ್ರೀಡಾಕೂಟ ಆಯೋಜನೆ

    • By admin
    • September 3, 2026
    • 12 views
    ಚಿರಂಜೀವಿ ಯುವಕ ಮಂಡಲ ಕಾನರ್ಪದಲ್ಲಿ ಸೆ.6ರಂದು 35ನೇ ವರ್ಷದ ಮೊಸರು ಕುಡಿಕೆ ಅಷ್ಟಮಿ ಉತ್ಸವ ಹಾಗೂ ಕೆಸರುಗದ್ದೆಯಲ್ಲಿ ಗ್ರಾಮೀಣ ಕ್ರೀಡಾಕೂಟ ಆಯೋಜನೆ

    ಬೆಳ್ತಂಗಡಿ : ಲಾಯಿಲ ಗ್ರಾಮಸಭೆಯಲ್ಲಿ ಅಕ್ರಮಗಳ ಆರೋಪಕ್ಕೆ ಕಿಡಿ, ನಿವೇಶನದಿಂದ ಸರ್ಕಾರಿ ಜಮೀನು, ಕಳಪೆ ಕಾಮಗಾರಿವರೆಗೆ ಸಮಗ್ರ ತನಿಖೆಗೆ ಒತ್ತಾಯ

    • By admin
    • August 31, 2026
    • 6 views
    ಬೆಳ್ತಂಗಡಿ : ಲಾಯಿಲ ಗ್ರಾಮಸಭೆಯಲ್ಲಿ ಅಕ್ರಮಗಳ ಆರೋಪಕ್ಕೆ ಕಿಡಿ, ನಿವೇಶನದಿಂದ ಸರ್ಕಾರಿ ಜಮೀನು, ಕಳಪೆ ಕಾಮಗಾರಿವರೆಗೆ ಸಮಗ್ರ ತನಿಖೆಗೆ ಒತ್ತಾಯ

    ನಾಟ ಫಲಿತಾಂಶ: ಎಕ್ಸೆಲ್ ವಿದ್ಯಾರ್ಥಿಗಳ ಅಪೂರ್ವ ಸಾಧನೆ

    • By admin
    • August 27, 2026
    • 9 views
    ನಾಟ ಫಲಿತಾಂಶ: ಎಕ್ಸೆಲ್ ವಿದ್ಯಾರ್ಥಿಗಳ ಅಪೂರ್ವ ಸಾಧನೆ