ಬದುಕಿನಲ್ಲಿ ಕೆಟ್ಟದ್ದನ್ನು ದೂರ ಮಾಡಿ ಒಳ್ಳೆಯ ವಿಚಾರಗಳನ್ನು ಬಿತ್ತುವ ಕಾರ್ಯವಾಗಬೇಕು: ಸೋನಿಯಾ ಯಶೋವರ್ಮ

ಬೆಳ್ತಂಗಡಿ : ಕೃಷಿ ನಮ್ಮ ಸಂಸ್ಕೃತಿ, ಪ್ರಕೃತಿ ಮತ್ತು ಕೃಷಿಗೆ ಅವಿನಾಭಾವ ಸಂಬಂಧವಿದೆ. ಕೃಷಿಯಲ್ಲಿ ತೊಡಗಿಸಿಕೊಳ್ಳುವುದು ಅನ್ನದಾನದ ಶ್ರೇಷ್ಠ ಕಾರ್ಯವಾಗಿದೆ. ಇಂತಹ ಬದುಕು ಕಟ್ಟುವ ಬದುಕು ಕಾಪಾಡುವ ನೇಜಿ ನೆಡುವ ಕೆಲಸದಲ್ಲಿ ವಿದ್ಯಾರ್ಥಿಗಳ ಕೈ ಜೋಡನೆ ಶ್ಲಾಘನೀಯ ಕಾರ್ಯ’ ಎಂದು ಸೋನಿಯಾ ಯಶೋವರ್ಮ ಹೇಳಿದರು.

ಅವರು ಭಾನುವಾರ ಬೆಳಾಲು ಅನಂತೋಡಿ ಅನಂತ ಪದ್ಮನಾಭ ದೇವಸ್ಥಾನದ ಬಳಿಯ ಗದ್ದೆಯಲ್ಲಿ ಶ್ರೀ ಧರ್ಮಸ್ಥಳ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಮಂಜುನಾಥೇಶ್ವರ ಕಾಲೇಜು (ಸ್ವಾಯತ್ತ) ಉಜಿರೆ ಇದರ ರಾಷ್ಟ್ರೀಯ ಸೇವಾ ಯೋಜನೆಯ ಸುವರ್ಣ ಸಂಭ್ರಮಾಚರಣೆ ಹಿನ್ನೆಲೆಯಲ್ಲಿ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ (ರಿ) ಉಜಿರ, ಇದರ ನೇತೃತ್ವದಲ್ಲಿ ಉಜಿರೆ ಎಸ್.ಡಿ.ಎಂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕಗಳು, ಉಜರೆ ಎಸ್.ಡಿ.ಎಂ. ಕಾಲೇಜಿನ ಸ್ಪೋಟ್ಸ್ ಕ್ಲಬ್, ಬೆಳ್ತಂಗಡಿ ರೋಟರಿ ಕ್ಲಬ್, ಬೆಳ್ತಂಗಡಿ ತಾಲ್ಲೂಕು ಪತ್ರಕರ್ತರ ಸಂಘ (ರಿ.) ಶ್ರೀ ಅನಂತ ಪದ್ಮನಾಭ ದೇವಸ್ಥಾನ ಅನಂತೋಡಿ ಇದರ ವ್ಯವಸ್ಥಾಪನಾ ಸಮಿತಿ, ಅನಂತ ಪದ್ಮನಾಭ ದೇವಸ್ಥಾನ ಅನಂತೋಡಿ ಬೆಳಾಲು ಇವುಗಳ ಸಂಯುಕ್ತ ಆಶ್ರಯದಲ್ಲಿ ಸುಮಾರು 500 ಕ್ಕೂ ಅಧಿಕ ವಿದ್ಯಾರ್ಥಿಗಳಿಂದ ‘ಯುವ ಸಿರಿ – ರೈತ ಭಾರತದ ಐಸಿರಿ’ ನೇಜಿ ನಾಟಿ ಕಾರ್ಯಕ್ರಮದ ಸಭಾ ಕಾರ್ಯಕ್ರಮ ಉದ್ಘಾಟಿಸಿ ಗದ್ದೆಗೆ ಹಾಲೆರೆದು ನೇಜಿ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು‌.

‘ಯುವ ಜನತೆಯಲ್ಲಿ ಅಪಾರ ಶಕ್ತಿಯಿದೆ. ಅವರಿಗೆ ಸರಿಯಾದ ಮಾರ್ಗದರ್ಶನ ಸಿಕ್ಕಾಗ ಸಮೃದ್ಧವಾದ ಸಂಸ್ಕಾರಭರಿತ ಸಮಾಜ ನಿರ್ಮಾಣವಾಗುತ್ತದೆ. ಬಿತ್ತನೆಯ ಭತ್ತವನ್ನು ಮೊಳಕೆಗಾಗಿ ನೀರಿನಲ್ಲಿ ನೆನೆಸುವ ಸಂದರ್ಭ ಅದರ ಜೊಲ್ಲು ಬೇರ್ಪಡಿಸುವಂತೆ ಬದುಕಿನಲ್ಲಿ ಕೆಟ್ಟದ್ದನ್ನು ದೂರ ಮಾಡಿ ಒಳ್ಳೆಯ ವಿಚಾರಗಳನ್ನು ಬಿತ್ತುವ ಕಾರ್ಯವಾಗಬೇಕು’ ಎಂದರು.

ಶಾಸಕ ಹರೀಶ್ ಪೂಂಜ ನೇಜಿ ನೆಡುವ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿ, ‘ಶಿಸ್ತು ಮತ್ತು ಬದ್ಧತೆಗೆ ಇನ್ನೊಂದು ರೂಪವೇ ಬದುಕು ಕಟ್ಟೋಣ ತಂಡವಾಗಿದೆ. ಈ ತಂಡದಿಂದ ರಾಜ್ಯಕ್ಕೆ ಮಾದರಿಯಾದ ಕೆಲಸವಾಗುತ್ತಿದೆ. ಯುವ ಪೀಳಿಗೆ ಹಾಗೂ ಹಿರಿಯರನ್ನು ಒಟ್ಟು ಸೇರಿಸಿಕೊಂಡು ತುಳುನಾಡಿನ ಸತ್ವವನ್ನು ಸಾರುವ ಕೆಲಸವಾಗುತ್ತಿದೆ’ ಎಂದರು.

ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ್ ಕುಮಾರ್ ಪ್ರಸ್ತಾವಿಸಿಕವಾಗಿ ಮಾತನಾಡಿ, ಈ ಕಾರ್ಯಕ್ರಮದ ಹಿಂದೆ ಒಂದು ತಿಂಗಳ ಶ್ರಮ ಇದೆ. ನೇಜಿ ನೆಡುವ ಕೆಲಸ ಮಾತ್ರವಲ್ಲ ಅದನ್ನು ಮುಂದಕ್ಕೆ ಚೆನ್ನಾಗಿ ಬೆಳೆಸಿ ಕಟಾವು ಮಾಡಿ ಭತ್ತ ಮತ್ತು ಬೈ ಹುಲ್ಲನ್ನು ಬೇರ್ಪಡಿಸುವವರೆಗಿನ ಕೆಲಸವೂ ನಮ್ಮಿಂದ ನಡೆಯುತ್ತದೆ. ಇದು ಎಲ್ಲರಿಗೂ ಪ್ರೇರಣೆಯಾಗಬೇಕು. ಎಲ್ಲರ ಸಹಕಾರದಿಂದ ಮಾತ್ರ ಇದು ಸಾಧ್ಯವಾಗಿದೆ. ಈ ಕೆಲಸದಿಂದ ತಾಲ್ಲೂಕಿನ ಬೇರೆ ಬೇರೆ ಕಡೆಗಳಿಂದ ನಮ್ಮಲ್ಲೂ ಇಂತಹ ಕಾರ್ಯ ಮಾಡಬೇಕು ಎಂಬ ಕರೆಗಳ ಸಾಲು ಬರುತ್ತಿದೆ’ ಎಂದರು.

ವೇದಿಕೆಯಲ್ಲಿ ಉಜಿರೆ ಜನಾರ್ದನ ಸ್ವಾಮಿ ದೇವಸ್ಥಾನದ ಆಡಳಿತ ಮೊಕ್ತಸರ ಶರತ್ ಕೃಷ್ಣ ಪಡ್ಡೆಟ್ನಾಯ, ವಿಧಾನ ಪರಿಷತ್ ಸದಸ್ಯ ಪ್ರತಾಪ ಸಿಂಹ ನಾಯಕ್, ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ರಾದ ಮೋಹನ್ ಕುಮಾರ್, ರಾಜೇಶ್ ಪೈ, ಎಸ್.ಡಿ.ಎಂ. ಕಾಲೇಜಿನ ಪ್ರಾಂಶುಪಾಲ ಡಾ.ಬಿ.ಎ.ಕುಮಾರ ಹೆಗ್ಡೆ, ಎಸ್.ಡಿ.ಎಂ. ಎಂಜಿನಿಯರಿಂಗ್ ಕಾಲೇಜಿನ ಸಿವಿಲ್ ವಿಭಾಗದ ವಿಭಾಗ ಮುಖ್ಯಸ್ಥ ರವೀಶ್ ಪಡುಮಲೆ, ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ಅಧ್ಯಕ್ಷ ಬಿ.ಕೆ.ಧನಂಜಯ ರಾವ್, ತಾಲ್ಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಚೈತೇಶ್ ಇಳಂತಿಲ, ಅನಂತೋಡಿ ಅನಂತ ಪದ್ಮನಾಭ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಶ್ರೀನಿವಾಸ ಗೌಡ, ಕಾರ್ಯದರ್ಶಿ ದುರ್ಗಾ ಪ್ರಸಾದ್‌, ಗ್ರಾಮ ಪಂಚಾಯಿತಿ ಅಧ್ಯಕ್ಷೆ ವಿದ್ಯಾ ಶ್ರೀನಿವಾಸ ಗೌಡ,, ಧರ್ಮಸ್ಥಳ ಕೃಷಿ ವಿಭಾಗದ ಬಾಲಕೃಷ್ಣ ಪೂಜಾರಿ, ಎಸ್.ಡಿ.ಎಂ.ಕಾಲೇಜಿನ ಎನ್.ಎಸ್.ಎಸ್. ಯೋಜನಾಧಿಕಾರಿಗಳಾದ ಮಹೇಶ್ ಶೆಟ್ಟಿ, ದೀಪಾ ಆರ್ ರಾವ್, ಎಸ್.ಡಿ.ಎಂ. ಸ್ಪೋರ್ಟ್ ಕ್ಲಬ್ ನ ಮುಖ್ಯಸ್ಥ ರಮೇಶ್ ಮುಂತಾದವರಿದ್ದರು.

Spread the love
  • Related Posts

    ನ್ಯಾಯವಾದಿಗಳ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ಬಂಟ್ವಾಳದ ನೂತನ ಶಾಖೆ ಉದ್ಘಾಟನೆ

    ಮಂಗಳೂರು: ನ್ಯಾಯವಾದಿಗಳ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ಬಂಟ್ವಾಳದ ನೂತನ ಶಾಖೆಯು ಬಂಟ್ವಾಳದ ನ್ಯಾಯಾಲಯದ ಆವರಣದಲ್ಲಿ ಇಂದು ಉದ್ಘಾಟನೆಗೊಂಡಿದ್ದು, ಬಂಟ್ವಾಳದ ನೂತನ ಶಾಖೆಯ ಕಚೇರಿಯನ್ನು ಮಂಗಳೂರು ವಕೀಲರ ಸಂಘದ ಮಾಜಿ ಅಧ್ಯಕ್ಷರಾದ ಶ್ರೀ ಎಸ್ ಪಿ ಚಂಗಪ್ಪ ರವರು ಉದ್ಘಾಟಿಸಿದರು.…

    Spread the love

    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದ ವೈಭವ,106ಜೋಡಿ ಸಪ್ತಪದಿ ತುಳಿದು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ

    ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಬುಧವಾರ ಸಂಜೆ ಗಂಟೆ 6.40ರ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ ಅಮೃತವರ್ಷಿಣಿ ಸಭಾಭವನದಲ್ಲಿ ನಡೆದ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದಲ್ಲಿ 106 ಜೊತೆ ವಧೂ-ವರರು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ ಮಾಡಿದರು. ಬುಧವಾರ ಬೆಳಿಗ್ಗೆ ಧರ್ಮಾಧಿಕಾರಿ…

    Spread the love

    You Missed

    ನ್ಯಾಯವಾದಿಗಳ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ಬಂಟ್ವಾಳದ ನೂತನ ಶಾಖೆ ಉದ್ಘಾಟನೆ

    • By admin
    • April 30, 2026
    • 200 views
    ನ್ಯಾಯವಾದಿಗಳ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ಬಂಟ್ವಾಳದ ನೂತನ ಶಾಖೆ ಉದ್ಘಾಟನೆ

    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದ ವೈಭವ,106ಜೋಡಿ ಸಪ್ತಪದಿ ತುಳಿದು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ

    • By admin
    • April 29, 2026
    • 44 views
    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದ ವೈಭವ,106ಜೋಡಿ ಸಪ್ತಪದಿ ತುಳಿದು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ

    ಬೆಂಗಳೂರಿನಲ್ಲಿ ಘನಘೋರ ದುರಂತ ಬೌರಿಂಗ್ ಆಸ್ಪತ್ರೆಯ ಕೌಂಪೌಂಡು ಕುಸಿದು ಮೂವರು ಮಕ್ಕಳ ಸಹಿತ 8ಮಂದಿಯ ದುರ್ಮರಣ

    • By admin
    • April 29, 2026
    • 50 views
    ಬೆಂಗಳೂರಿನಲ್ಲಿ ಘನಘೋರ ದುರಂತ ಬೌರಿಂಗ್ ಆಸ್ಪತ್ರೆಯ ಕೌಂಪೌಂಡು ಕುಸಿದು ಮೂವರು ಮಕ್ಕಳ ಸಹಿತ 8ಮಂದಿಯ   ದುರ್ಮರಣ

    ಕುಂಟುತ್ತಿರುವ ಕಾಮಗಾರಿಯಿಂದ ಬಿಸಿಲ ಬೇಗೆಗೆ ಬೆಂಡಾದ ಜನ: ಟ್ರಾಫಿಕ್ ಜಾಮ್ ನಿಂದ ಹೈರಾಣಾದ ಜನ

    • By admin
    • April 29, 2026
    • 109 views
    ಕುಂಟುತ್ತಿರುವ ಕಾಮಗಾರಿಯಿಂದ ಬಿಸಿಲ ಬೇಗೆಗೆ ಬೆಂಡಾದ ಜನ: ಟ್ರಾಫಿಕ್ ಜಾಮ್ ನಿಂದ ಹೈರಾಣಾದ ಜನ

    ಬಿರು ಬಿಸಿಲಿನಲ್ಲಿ ಪ್ರಾಣಿ–ಪಕ್ಷಿಗಳಿಗೆ ನೀರುಣಿಸುವ ಮಹತ್ವದ ಕಾರ್ಯಕ್ಕೆ ಮುಂದಾಗೋಣ

    • By admin
    • April 29, 2026
    • 46 views
    ಬಿರು ಬಿಸಿಲಿನಲ್ಲಿ ಪ್ರಾಣಿ–ಪಕ್ಷಿಗಳಿಗೆ ನೀರುಣಿಸುವ ಮಹತ್ವದ ಕಾರ್ಯಕ್ಕೆ ಮುಂದಾಗೋಣ

    ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ಬೆಳ್ತಂಗಡಿ ಇದರ ವತಿಯಿಂದ ಕು.ಪ್ರಾಪ್ತಿ ಎಂ ಗೌಡರಿಗೆ ಗೌರವ ಸನ್ಮಾನ

    • By admin
    • April 28, 2026
    • 88 views
    ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ಬೆಳ್ತಂಗಡಿ ಇದರ ವತಿಯಿಂದ ಕು.ಪ್ರಾಪ್ತಿ ಎಂ ಗೌಡರಿಗೆ ಗೌರವ ಸನ್ಮಾನ