ಬಾಳೆ, ಅನಾನಸು, ಪಪ್ಪಾಯ ಬೆಳೆದ ರೈತರಿಂದ ಪರಿಹಾರಕ್ಕಾಗಿ ಅರ್ಜಿ ಆಹ್ವಾನ

ಮಂಗಳೂರು: ಕೋವಿಡ್-19 ಕಾರಣದಿಂದಾಗಿ ದೇಶದಲ್ಲಿ ವಿಧಿಸಿದ ಲಾಕ್‍ಡೌನ್‍ನಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಾಳೆ, ಅನಾನಸು ಹಾಗೂ ಪಪ್ಪಾಯ ಬೆಳೆ ಬೆಳೆದ ರೈತರು ದಿನಾಂಕ 24-03-2020 ರಿಂದ 31-05-2020 ರವರೆಗೆ ಕಟಾವಿಗೆ ಬಂದಿರುವ ಫಸಲುಗಳನ್ನು ಮಾರಾಟ ಮಾಡಲು ಆಗದೆ ಸಂಕಷ್ಟಕ್ಕೀಡಾಗಿರುತ್ತಾರೆ ಅಥವಾ ಮಾರಾಟ ಮಾಡಿದ ಫಸಲಿಗೆ ಸೂಕ್ತ ಬೆಲೆ ಸಿಗದೆ ನಷ್ಟ ಅನುಭವಿಸಿರುತ್ತಾರೆ.

ಈ ಕಾರಣಕ್ಕಾಗಿ ಕರ್ನಾಟಕ ಸರ್ಕಾರವು ಈ ಬೆಳೆಗಳನ್ನು ಬೆಳೆದು ನಷ್ಟ ಅನುಭವಿಸಿದ ರೈತರಿಗೆ ಹೆಕ್ಟೇರಿಗೆ ಗರಿಷ್ಠ ರೂ.15000 ಗಳಂತೆ (ಪ್ರತೀ ಸೆಂಟ್ಸ್‍ಗೆ ರೂ.60 ರಂತೆ) ಗರಿಷ್ಟ ಒಂದು ಹೆಕ್ಟೇರ್‍ವರೆಗೆ ಪರಿಹಾರ ನೀಡುವ ಕಾರ್ಯಕ್ರಮ ಜಾರಿಗೆ ತಂದಿರುತ್ತದೆ.

“ಬಾಳೆ, ಅನಾನಸು ಮತ್ತು ಪಪ್ಪಾಯ ಬೆಳೆ 2019-20ನೇ ಸಾಲಿನ ಮುಂಗಾರು ಹಂಗಾಮಿಗೆ ಬೆಳೆ ಸಮೀಕ್ಷೆಯಲ್ಲಿ ದಾಖಲಾಗಿರಬೇಕು. ಬಾಳೆ, ಅನಾನಸು ಮತ್ತು ಪಪ್ಪಾಯ ಬೆಳೆ ದಿನಾಂಕ 24-03-2020 ರಿಂದ 31-05-2020ರಲ್ಲಿ ಕಟಾವು ಮಾಡಿರುವ ರೈತರು ಮಾತ್ರ ಅರ್ಹರು. ಸದರಿ ಬೆಳೆಯನ್ನು ಶುದ್ದ ಬೆಳೆಯಾಗಿ ಬೆಳೆದಿರುವ ರೈತರು ಮಾತ್ರ ಅರ್ಜಿ ಸಲ್ಲಿಸಬಹುದು.”

ಈ ಹಿನ್ನೆಲೆಯಲ್ಲಿ ಬಾಳೆ, ಅನಾನಸು ಮತ್ತು ಪಪ್ಪಾಯ ಬೆಳೆ ಬೆಳೆದು 2019-20ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆಯಲ್ಲಿ ದಾಖಲಾಗಿರುವ ಹಾಗೂ ದಿನಾಂಕ 24-03-2020 ರಿಂದ 31-05-2020 ರವರೆಗಿನ ಅವಧಿಯಲ್ಲಿ ಫಸಲು ಕಟಾವು ಆಗಿರುವ, ಮೇಲಿನ ಬೆಳೆಯನ್ನು ಶುದ್ದ ಬೆಳೆಯಾಗಿ ಬೆಳೆದ ರೈತರು ಮಾತ್ರ ಪರಿಹಾರಕ್ಕೆ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.

ಅರ್ಜಿಗಳನ್ನು ಆಯಾ ತಾಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಛೇರಿಗೆ ಅಥವಾ ಆಯಾ ಹೋಬಳಿ ರೈತ ಸಂಪರ್ಕ ಕೇಂದ್ರ ವ್ಯಾಪ್ತಿಯ ಸಹಾಯಕ ತೋಟಗಾರಿಕೆ ಅಧಿಕಾರಿಗಳಿಗೆ ಸಲ್ಲಿಸಬಹುದು. ತಾಲೂಕು ಹಾಗೂ ಜಿಲ್ಲಾ ಸಮಿತಿಗಳಿಂದ ಅನುಮೋದಿತವಾದ ರೈತರಿಗೆ ಪರಿಹಾರಧನವನ್ನು ಅವರ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗುವುದು. ರೈತರು ಅರ್ಜಿಯೊಂದಿಗೆ ಆಧಾರ್ ಲಿಂಕ್ ಹಾಗೂ NPCI ಸೀಡಿಂಗ್ ಆಗಿರುವ ಬ್ಯಾಂಕ್ ಖಾತೆಯ ವಿವರಗಳನ್ನು ಆಧಾರ್ ಪ್ರತಿಯೊಂದಿಗೆ ಮತ್ತು ನಿಗದಿತ ಸ್ವಯಂ ಘೋಷಣೆ ಪತ್ರವನ್ನು ಸಲ್ಲಿಸಬೇಕಾಗಿರುತ್ತದೆ. ಅರ್ಜಿ ಸಲ್ಲಿಸಲು ಕೊನೆಯ ದಿನ ಜೂನ್ 25 ಆಗಿರುತ್ತದೆ.

ಈ ಕೆಳಗಿನ ರೈತರು ಮಾತ್ರ ಅರ್ಜಿ ಸಲ್ಲಿಸಬಹುದು.
ಬಾಳೆ, ಅನಾನಸು ಮತ್ತು ಪಪ್ಪಾಯ ಬೆಳೆ 2019-20ನೇ ಸಾಲಿನ ಮುಂಗಾರು ಹಂಗಾಮಿಗೆ ಬೆಳೆ ಸಮೀಕ್ಷೆಯಲ್ಲಿ ದಾಖಲಾಗಿರಬೇಕು. ಬಾಳೆ, ಅನಾನಸು ಮತ್ತು ಪಪ್ಪಾಯ ಬೆಳೆ ದಿನಾಂಕ 24-03-2020 ರಿಂದ 31-05-2020ರಲ್ಲಿ ಕಟಾವು ಮಾಡಿರುವ ರೈತರು ಮಾತ್ರ ಅರ್ಹರು. ಸದರಿ ಬೆಳೆಯನ್ನು ಶುದ್ದ ಬೆಳೆಯಾಗಿ ಬೆಳೆದಿರುವ ರೈತರು ಮಾತ್ರ ಅರ್ಜಿ ಸಲ್ಲಿಸಬಹುದು.

ಹೆಚ್ಚಿನ ವಿವರಗಳಿಗೆ:
ತೋಟಗಾರಿಕೆ ಉಪನಿರ್ದೇಶಕರು, ದ.ಕ.ಜಿ.ಪಂ., ಮಂಗಳೂರು – 9448999226 ,
ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ಜಿ.ಪಂ, ಮಂಗಳೂರು – 8277806378 (0824-2423615)
ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ಜಿ.ಪಂ., ಬಂಟ್ವಾಳ – 8277806371 (08255-234102)
ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ಜಿ.ಪಂ., ಪುತ್ತೂರು – 9731854527 (08251-230905)
ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ಜಿ.ಪಂ., ಸುಳ್ಯ 9880993238 (08257-232020)
ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ಜಿ.ಪಂ., ಬೆಳ್ತಂಗಡಿ – 8277806380 (08256-232148)
ಇವರನ್ನು ಸಂಪರ್ಕಿಸಲು ತೋಟಗಾರಿಕೆ ಉಪನಿರ್ದೇಶಕರ ಪ್ರಕಟಣೆ ತಿಳಿಸಿದೆ.

Spread the love
  • Related Posts

    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    Belthangady: ತಾಲೂಕಿನ ಹಲವೆಡೆ ಶನಿವಾರ ಸಂಜೆ ಉತ್ತಮ ಮಳೆಯಾಗಿದೆ.Shishila, Kokkada, Dharmasthala, Arasinamakki, Ujire ಹಾಗೂ Nidle ಮೊದಲಾದ ಕಡೆಗಳಲ್ಲಿ ಗುಡುಗು-ಸಿಡಿಲು ಸಹಿತ ಉತ್ತಮ ಮಳೆ ಸುರಿದಿದೆ. ಉಳಿದ ಕೆಲವು ಪ್ರದೇಶಗಳಲ್ಲಿ ತುಂತುರು ಹಾಗೂ ಸಾಮಾನ್ಯ ಮಳೆಯಾಗಿದೆ.ತಾಲೂಕಿನಲ್ಲಿ ಫೆಬ್ರವರಿ 21ರಂದು ಕೆಲವೆಡೆ…

    Spread the love

    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    ಬಂಗಾಡಿ: ಸೂರ್ಯ-ಚಂದ್ರ ಹೋಡುಕರೆ ಕಂಬಳ ಸಮಿತಿ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ಕಂಬಳ ಅಸೋಸಿಯೇಶನ್, ಕರ್ನಾಟಕ ಸರಕಾರ ಮತ್ತು ಯುವಜನ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಹಭಾಗಿತ್ವದೊಂದಿಗೆ 28ನೇ ವರ್ಷದ ಹೊನಲು ಬೆಳಕಿನ ಸೂರ್ಯ-ಚಂದ್ರ ಜೋಡುಕರೆ “ಬಂಗಾಡಿ ಕೊಲ್ಲಿ” ಬಯಲು ಕಂಬಳವು ಶ್ರೀ…

    Spread the love

    You Missed

    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    • By admin
    • March 15, 2026
    • 62 views
    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    • By admin
    • March 14, 2026
    • 101 views
    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

    • By admin
    • March 14, 2026
    • 43 views
    ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ  ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    • By admin
    • March 13, 2026
    • 610 views
    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

    • By admin
    • March 10, 2026
    • 150 views
    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ  ಅರ್ಜಿ ಆಹ್ವಾನ

    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ

    • By admin
    • March 10, 2026
    • 63 views
    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ