ಬಾಳೆ, ಅನಾನಸು, ಪಪ್ಪಾಯ ಬೆಳೆದ ರೈತರಿಂದ ಪರಿಹಾರಕ್ಕಾಗಿ ಅರ್ಜಿ ಆಹ್ವಾನ

ಮಂಗಳೂರು: ಕೋವಿಡ್-19 ಕಾರಣದಿಂದಾಗಿ ದೇಶದಲ್ಲಿ ವಿಧಿಸಿದ ಲಾಕ್‍ಡೌನ್‍ನಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಾಳೆ, ಅನಾನಸು ಹಾಗೂ ಪಪ್ಪಾಯ ಬೆಳೆ ಬೆಳೆದ ರೈತರು ದಿನಾಂಕ 24-03-2020 ರಿಂದ 31-05-2020 ರವರೆಗೆ ಕಟಾವಿಗೆ ಬಂದಿರುವ ಫಸಲುಗಳನ್ನು ಮಾರಾಟ ಮಾಡಲು ಆಗದೆ ಸಂಕಷ್ಟಕ್ಕೀಡಾಗಿರುತ್ತಾರೆ ಅಥವಾ ಮಾರಾಟ ಮಾಡಿದ ಫಸಲಿಗೆ ಸೂಕ್ತ ಬೆಲೆ ಸಿಗದೆ ನಷ್ಟ ಅನುಭವಿಸಿರುತ್ತಾರೆ.

ಈ ಕಾರಣಕ್ಕಾಗಿ ಕರ್ನಾಟಕ ಸರ್ಕಾರವು ಈ ಬೆಳೆಗಳನ್ನು ಬೆಳೆದು ನಷ್ಟ ಅನುಭವಿಸಿದ ರೈತರಿಗೆ ಹೆಕ್ಟೇರಿಗೆ ಗರಿಷ್ಠ ರೂ.15000 ಗಳಂತೆ (ಪ್ರತೀ ಸೆಂಟ್ಸ್‍ಗೆ ರೂ.60 ರಂತೆ) ಗರಿಷ್ಟ ಒಂದು ಹೆಕ್ಟೇರ್‍ವರೆಗೆ ಪರಿಹಾರ ನೀಡುವ ಕಾರ್ಯಕ್ರಮ ಜಾರಿಗೆ ತಂದಿರುತ್ತದೆ.

“ಬಾಳೆ, ಅನಾನಸು ಮತ್ತು ಪಪ್ಪಾಯ ಬೆಳೆ 2019-20ನೇ ಸಾಲಿನ ಮುಂಗಾರು ಹಂಗಾಮಿಗೆ ಬೆಳೆ ಸಮೀಕ್ಷೆಯಲ್ಲಿ ದಾಖಲಾಗಿರಬೇಕು. ಬಾಳೆ, ಅನಾನಸು ಮತ್ತು ಪಪ್ಪಾಯ ಬೆಳೆ ದಿನಾಂಕ 24-03-2020 ರಿಂದ 31-05-2020ರಲ್ಲಿ ಕಟಾವು ಮಾಡಿರುವ ರೈತರು ಮಾತ್ರ ಅರ್ಹರು. ಸದರಿ ಬೆಳೆಯನ್ನು ಶುದ್ದ ಬೆಳೆಯಾಗಿ ಬೆಳೆದಿರುವ ರೈತರು ಮಾತ್ರ ಅರ್ಜಿ ಸಲ್ಲಿಸಬಹುದು.”

ಈ ಹಿನ್ನೆಲೆಯಲ್ಲಿ ಬಾಳೆ, ಅನಾನಸು ಮತ್ತು ಪಪ್ಪಾಯ ಬೆಳೆ ಬೆಳೆದು 2019-20ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆಯಲ್ಲಿ ದಾಖಲಾಗಿರುವ ಹಾಗೂ ದಿನಾಂಕ 24-03-2020 ರಿಂದ 31-05-2020 ರವರೆಗಿನ ಅವಧಿಯಲ್ಲಿ ಫಸಲು ಕಟಾವು ಆಗಿರುವ, ಮೇಲಿನ ಬೆಳೆಯನ್ನು ಶುದ್ದ ಬೆಳೆಯಾಗಿ ಬೆಳೆದ ರೈತರು ಮಾತ್ರ ಪರಿಹಾರಕ್ಕೆ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.

ಅರ್ಜಿಗಳನ್ನು ಆಯಾ ತಾಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಛೇರಿಗೆ ಅಥವಾ ಆಯಾ ಹೋಬಳಿ ರೈತ ಸಂಪರ್ಕ ಕೇಂದ್ರ ವ್ಯಾಪ್ತಿಯ ಸಹಾಯಕ ತೋಟಗಾರಿಕೆ ಅಧಿಕಾರಿಗಳಿಗೆ ಸಲ್ಲಿಸಬಹುದು. ತಾಲೂಕು ಹಾಗೂ ಜಿಲ್ಲಾ ಸಮಿತಿಗಳಿಂದ ಅನುಮೋದಿತವಾದ ರೈತರಿಗೆ ಪರಿಹಾರಧನವನ್ನು ಅವರ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗುವುದು. ರೈತರು ಅರ್ಜಿಯೊಂದಿಗೆ ಆಧಾರ್ ಲಿಂಕ್ ಹಾಗೂ NPCI ಸೀಡಿಂಗ್ ಆಗಿರುವ ಬ್ಯಾಂಕ್ ಖಾತೆಯ ವಿವರಗಳನ್ನು ಆಧಾರ್ ಪ್ರತಿಯೊಂದಿಗೆ ಮತ್ತು ನಿಗದಿತ ಸ್ವಯಂ ಘೋಷಣೆ ಪತ್ರವನ್ನು ಸಲ್ಲಿಸಬೇಕಾಗಿರುತ್ತದೆ. ಅರ್ಜಿ ಸಲ್ಲಿಸಲು ಕೊನೆಯ ದಿನ ಜೂನ್ 25 ಆಗಿರುತ್ತದೆ.

ಈ ಕೆಳಗಿನ ರೈತರು ಮಾತ್ರ ಅರ್ಜಿ ಸಲ್ಲಿಸಬಹುದು.
ಬಾಳೆ, ಅನಾನಸು ಮತ್ತು ಪಪ್ಪಾಯ ಬೆಳೆ 2019-20ನೇ ಸಾಲಿನ ಮುಂಗಾರು ಹಂಗಾಮಿಗೆ ಬೆಳೆ ಸಮೀಕ್ಷೆಯಲ್ಲಿ ದಾಖಲಾಗಿರಬೇಕು. ಬಾಳೆ, ಅನಾನಸು ಮತ್ತು ಪಪ್ಪಾಯ ಬೆಳೆ ದಿನಾಂಕ 24-03-2020 ರಿಂದ 31-05-2020ರಲ್ಲಿ ಕಟಾವು ಮಾಡಿರುವ ರೈತರು ಮಾತ್ರ ಅರ್ಹರು. ಸದರಿ ಬೆಳೆಯನ್ನು ಶುದ್ದ ಬೆಳೆಯಾಗಿ ಬೆಳೆದಿರುವ ರೈತರು ಮಾತ್ರ ಅರ್ಜಿ ಸಲ್ಲಿಸಬಹುದು.

ಹೆಚ್ಚಿನ ವಿವರಗಳಿಗೆ:
ತೋಟಗಾರಿಕೆ ಉಪನಿರ್ದೇಶಕರು, ದ.ಕ.ಜಿ.ಪಂ., ಮಂಗಳೂರು – 9448999226 ,
ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ಜಿ.ಪಂ, ಮಂಗಳೂರು – 8277806378 (0824-2423615)
ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ಜಿ.ಪಂ., ಬಂಟ್ವಾಳ – 8277806371 (08255-234102)
ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ಜಿ.ಪಂ., ಪುತ್ತೂರು – 9731854527 (08251-230905)
ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ಜಿ.ಪಂ., ಸುಳ್ಯ 9880993238 (08257-232020)
ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ಜಿ.ಪಂ., ಬೆಳ್ತಂಗಡಿ – 8277806380 (08256-232148)
ಇವರನ್ನು ಸಂಪರ್ಕಿಸಲು ತೋಟಗಾರಿಕೆ ಉಪನಿರ್ದೇಶಕರ ಪ್ರಕಟಣೆ ತಿಳಿಸಿದೆ.

Spread the love
  • Related Posts

    ಕಡಿರುದ್ಯಾವರ: ಗ್ರಾಮೀಣ ರಸ್ತೆಯಲ್ಲಿ ಮರ ಸಾಗಾಟದ ಲಾರಿಗಳ ಹಾವಳಿ — ರಸ್ತೆ ಹಾಳಾಗುತ್ತಿರುವ ಆರೋಪ

    ಕಾನರ್ಪ ನೂಜಿ ರಸ್ತೆಯಲ್ಲಿ ತಡರಾತ್ರಿ ರಸ್ತೆ ಮಧ್ಯೆ ಲಾರಿ ಬಾಕಿ; ಸ್ಥಳೀಯರಿಂದ ಪ್ರತಿಭಟನೆ ಕಡಿರುದ್ಯಾವರ: ಗ್ರಾಮೀಣ ಪ್ರದೇಶದ ರಸ್ತೆಗಳಲ್ಲಿ ನಿರಂತರವಾಗಿ ಮರ ಸಾಗಾಟದ ಲಾರಿಗಳು ಸಂಚರಿಸುತ್ತಿರುವುದರಿಂದ ರಸ್ತೆಗಳು ಸಂಪೂರ್ಣ ಹಾಳಾಗುತ್ತಿವೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಕಾನರ್ಪದಲ್ಲಿ ತಡರಾತ್ರಿ ಮರ ಸಾಗಾಟ ಮಾಡುತ್ತಿದ್ದ…

    Spread the love

    ಪದ್ಮುಂಜ: ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ವತಿಯಿಂದ ಮೊಸರು ಕುಡಿಕೆ ಉತ್ಸವ, ಸಾಧಕರಿಗೆ ಸನ್ಮಾನ,ಬಹುಮಾನ ವಿತರಣೆ ಕಾರ್ಯಕ್ರಮ

    ಪದ್ಮುಂಜ: ಸೆ 12 ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ವತಿಯಿಂದ ಮೊಸರು ಕುಡಿಕೆ ಉತ್ಸವ, ಸಾಧಕರಿಗೆ ಸನ್ಮಾನ, ವಿಜೇತರಿಗೆ ಬಹುಮಾನ ವಿತರಣೆ ಕಾರ್ಯಕ್ರಮ ಪದ್ಮುಂಜ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ವಠಾರದಲ್ಲಿ ವಿಜೃಂಭಣೆಯಿಂದ ನೆರವೇರಿತು.ಬೆಳಗ್ಗೆ ಉಮಾಮಹೇಶ್ವರ ಮಹಿಳಾ ಭಜನಾ ತಂಡ,…

    Spread the love

    You Missed

    ಕಡಿರುದ್ಯಾವರ: ಗ್ರಾಮೀಣ ರಸ್ತೆಯಲ್ಲಿ ಮರ ಸಾಗಾಟದ ಲಾರಿಗಳ ಹಾವಳಿ — ರಸ್ತೆ ಹಾಳಾಗುತ್ತಿರುವ ಆರೋಪ

    • By admin
    • September 13, 2026
    • 5 views
    ಕಡಿರುದ್ಯಾವರ: ಗ್ರಾಮೀಣ ರಸ್ತೆಯಲ್ಲಿ ಮರ ಸಾಗಾಟದ ಲಾರಿಗಳ ಹಾವಳಿ — ರಸ್ತೆ ಹಾಳಾಗುತ್ತಿರುವ ಆರೋಪ

    ಪದ್ಮುಂಜ: ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ವತಿಯಿಂದ ಮೊಸರು ಕುಡಿಕೆ ಉತ್ಸವ, ಸಾಧಕರಿಗೆ ಸನ್ಮಾನ,ಬಹುಮಾನ ವಿತರಣೆ ಕಾರ್ಯಕ್ರಮ

    • By admin
    • September 13, 2026
    • 11 views
    ಪದ್ಮುಂಜ: ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ವತಿಯಿಂದ ಮೊಸರು ಕುಡಿಕೆ ಉತ್ಸವ, ಸಾಧಕರಿಗೆ ಸನ್ಮಾನ,ಬಹುಮಾನ ವಿತರಣೆ ಕಾರ್ಯಕ್ರಮ

    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    • By admin
    • September 12, 2026
    • 6 views
    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    • By admin
    • September 8, 2026
    • 12 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    • By admin
    • September 8, 2026
    • 18 views
    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    • By admin
    • September 3, 2026
    • 14 views
    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು