ಮಿಡತೆಗಳಿಂದ ಕೃಷಿಗೆ ಉಂಟಾಗುವ ಹಾನಿ ತಪ್ಪಿಸಲು ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಸೂಚನೆ

ಮಂಡ್ಯ: ರಾಜ್ಯದ ವಿವಿದೆಡೆ ಮಿಡತೆ ಹಾವಳಿಯುಂಟಾಗಿದ್ದು ಮಿಡತೆಗಳಿಂದ ಕೃಷಿ ಬೆಳೆಗಳಿಗೆ ಉಂಟಾಗುವ ಹಾನಿಯನ್ನು ತಪ್ಪಿಸುವ ಅಗತ್ಯವಾದ ಮುನ್ನೆಚ್ಚರಿಕೆ ಹಾಗೂ ಹತೋಟಿ ಕ್ರಮಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ. ಎಂ. ವಿ. ವೆಂಕಟೇಶ್ ಕೃಷಿ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಮರುಭೂಮಿ ಮಿಡತೆ ಅಥವಾ ಸಣ್ಣ ಕೊಂಬಿನ ಮಿಡತೆಯಿಂದ ಕೃಷಿ ಬೆಳೆಗಳಿಗೆ ಉಂಟಾಗುವ ಹಾನಿಯನ್ನು ತಪ್ಪಿಸುವ ಮುನ್ನೆಚ್ಚರಿಕೆ ಕ್ರಮಗಳು ಹಾಗೂ ಹತೋಟಿ ಕ್ರಮಗಳ ಬಗ್ಗೆ ಸಭೆಯಲ್ಲಿ ಚರ್ಚಿಸಿ ಮಾತನಾಡಿದರು.

ಮರುಭೂಮಿ ಮಿಡತೆಯನ್ನು ಸಣ್ಣ ಕೊಂಬಿನ ಮಿಡತೆ ಯೆಂದು ಕರೆಯುತ್ತಾರೆ. ಇದು ವಿಶ್ವದ ಅತ್ಯಂತ ವಿನಾಶಕಾರಕ ಕೀಟಗಳಲ್ಲೊಂದಾಗಿದೆ. ಇದು ಹೆಚ್ಚು ಸಕ್ರಿಯವಿರುವ ಕೀಟವಾಗಿದ್ದು, ಬೆಳೆಗಳು, ಹುಲ್ಲುಗಾವಲು ಮರದರೆಂಬೆ, ಕಾಂಡ ಮತ್ತು ಹಸಿರೆಲೆಯನ್ನು ಸಂಪೂರ್ಣವಾಗಿ ತಿಂದು ನಾಶಮಾಡುತ್ತದೆ ಎಂದರು.

ಪ್ರಮುಖವಾಗಿ ಗಾಳಿಯ ದಿಕ್ಕನ್ನೆ ಅವಲಂಬಿಸಿ ಮುನ್ನಗ್ಗುವ ಈ ಕೀಟ ಹಾದಿಯಲ್ಲಿ ಯಾವ ಆಹಾರವನ್ನು ಬಿಡದೆ ತಿನ್ನುತ್ತದೆ. ಮಿಡತೆಯ ಹಿಂಡು ಕರ್ನಾಟಕಕ್ಕೆ ಬರುವುದಿಲ್ಲ. ರಾಜ್ಯಕ್ಕೆ ಆಕಸ್ಮಿಕವಾಗಿ ಪ್ರವೇಶಿಸಿದರೆ ಕೃಷಿ ಹಾಗೂ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ತುಂಬಾ ಜಾಗೃತರಾಗಿರಿ ಹಾಗೂ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವುದು ಅತ್ಯವಶ್ಯಕವಾಗಿದೆ ಮತ್ತು ಇದರ ಬಗ್ಗೆ ರೈತರಿಗೆ ಜಾಗೃತಿ ಮೂಡಿಸಬೇಕೆ ಹೊರತು ಯಾವುದೇ ರೀತಿಯಲ್ಲಿಯೂ ಆತಂಕ ಮೂಡಿಸಬಾರದು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಮುನ್ನೆಚ್ಚರಿಕೆ ಕ್ರಮಗಳು ಮತ್ತು ಹತೋಟಿ ಕ್ರಮಗಳು:-

ಗಾಳಿಯ ದಿಕ್ಕು ಆಧಾರಿಸಿ ಇವುಗಳು ಚಲಿಸುವುದರಿಂದ ಇವುಗಳ ಚಲನ ವಲನಗಳ ಮೇಲೆ ನಿಗಾ ವಹಿಸುವುದು, ಕೀಟ ಬಾಧಿತ ಪ್ರದೇಶದಲ್ಲಿ ಹೊಗೆ ಮತ್ತು ಬೆಂಕಿಯನ್ನು ಹಾಕುವುದರಿಂದ ಕೀಟವನ್ನು ಬೇರೆಡೆಗೆ ಓಡಿಸಬಹುದು, ಬೇವಿನ ಮೂಲದ ಕೀಟನಾಶಕಗಳನ್ನು ಬೆಳೆಗಳಲ್ಲಿ ಸಿಂಪಡಿಸುವುದರಿಂದ ಕೀಟವು ಬೆಳೆ ಹಾನಿ ಮಾಡುವುದು ಕಡಿಮೆ ಆಗುತ್ತದೆ ಎಂದು ತಿಳಿಸಿದರು.

ಕೃಷಿ ವಿಜ್ಞಾನಿಗಳ ಸಲಹೆ ಪಡೆದು ಸೂಕ್ತ ರಸಾಯನಿಕಗಳನ್ನು ಬಳಸಿ ಕೀಟಗಳ ಹತೋಟಿ ಮಾಡಬಹುದು. ಈ ಕುರಿತು ರೈತರು ಹೆಚ್ಚಿನ ಮಾಹಿತಿಗಾಗಿ ಸಮೀಪದ ರೈತ ಸಂಪರ್ಕ ಕೇಂದ್ರ, ಸಹಾಯಕ ಕೃಷಿ ನಿರ್ದೇಶಕರ ಕಚೇರಿ, ಕೃಷಿ ವಿಜ್ಞಾನ ಕೇಂದ್ರಗಳಿಗೆ ಭೇಟಿ ನೀಡಿ ಮಾಹಿತಿಯನ್ನು ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಹೇಳಿದರು.

ಸಭೆಯಲ್ಲಿ ಜಂಟಿ ಕೃಷಿ ನಿರ್ದೇಶಕ ಚಂದ್ರ ಶೇಖರ್, ತೋಟಗಾರಿಕೆ ಉಪನಿರ್ದೇಶಕ ರಾಜು, ರೇಷ್ಮೆ ಇಲಾಖೆ ಉಪನಿರ್ದೇಶಕಿ ಪ್ರತಿಭಾ, ಕೃಷಿ ಮಹಾವಿದ್ಯಾಲಯದ ಸಹಾಯಕಚಪ್ರಾಧ್ಯಾಪಕ ಡಾ.ವಿಜಯ್‍ಕುಮಾರ್ ಸೇರಿದಂತೆ ಉಪ ಕೃಷಿ ನಿರ್ದೇಶಕರು ಉಪಸ್ಥಿತರಿದ್ದರು.

Spread the love
  • Related Posts

    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    ಧರ್ಮಸ್ಥಳ: ಧರ್ಮಸ್ಥಳ ಕಡೆಯಿಂದ ಬೆಂಗಳೂರಿನತ್ತ ಸಾಗುತ್ತಿದ್ದ ಟಾಟಾ ಸಫಾರಿ ಕಾರು ಹಾಗೂ ಕುಕ್ಕೆ ಸುಬ್ರಹ್ಮಣ್ಯದಿಂದ ಧರ್ಮಸ್ಥಳದತ್ತ ಬರುತ್ತಿದ್ದ ಸರ್ಕಾರಿ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದ ಘಟನೆ ಇಂದು ಕೊಕ್ಕಡ ಸಮೀಪ ನಡೆದಿದೆ. ಅಪಘಾತದ ತೀವ್ರತೆಗೆ ಬಸ್ ಹಾಗೂ ಕಾರು ಸಂಪೂರ್ಣ…

    Spread the love

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ರಂಜನ್ ರಾವ್ ಯರ್ಡೂರು ಸುಪ್ರಿಂ ಕೋರ್ಟ್ ನಲ್ಲಿ ಸಲ್ಲಿಸಿದ್ದ ಮೇಲ್ಮನವಿಯನ್ನು ಆಲಿಸಿದ ನ್ಯಾಯಾಲಯ ದೂರುದಾರರು ನೀಡಿದ ಈ ದೂರು ಆಧಾರ ರಹಿತವಾಗಿದೆ ಎಂದು, ದಾವೆಯನ್ನು ಪ್ರಾಥಮಿಕ ಹಂತದಲ್ಲೇ ವಜಾಗೊಳಿಸಿದೆ. ಶ್ರೀ ಕ್ಷೇತ್ರ…

    Spread the love

    You Missed

    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    • By admin
    • September 12, 2026
    • 2 views
    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    • By admin
    • September 8, 2026
    • 8 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    • By admin
    • September 8, 2026
    • 14 views
    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    • By admin
    • September 3, 2026
    • 12 views
    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    • By admin
    • September 3, 2026
    • 8 views
    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    • By admin
    • September 3, 2026
    • 11 views
    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ