“ಆದಾಯಕ್ಕಿಂತ ಹೆಚ್ಚಿನ ಆಸ್ತಿ” ಆರೋಪಿಯ ನಿರೀಕ್ಷಣಾ ಜಾಮೀನು ಅರ್ಜಿ ವಜಾ!

ಮಂಗಳೂರು: ಬಂಟ್ವಾಳ ತಾಲೂಕು ಸಹಾಯಕ ಕೃಷಿ ನಿರ್ದೇಶಕರಾಗಿದ್ದ ಜೋಸೆಫ್ ಡೇನಿಸ್ ಮಿರಾಂಡ ರವರು ತಮ್ಮ ಸೇವಾ ಅವಧಿಯಲ್ಲಿ ನಿಗದಿತ ಆದಾಯಕ್ಕಿಂತಲೂ ಮೀರಿ ಹೆಚ್ಛಿನ ಆಸ್ತಿಗಳನ್ನು ಹೊಂದಿದ್ದಾರೆಂದು ದಿನಾಂಕ 12-12-2017 ರಂದು ಆಗಿನ ಭ್ರಷ್ಟಾಚಾರ ನಿಗ್ರಹದಳದ ಡಿ. ವೈ.ಎಸ್.ಪಿ. ಸುಧೀರ್ ಹೆಗ್ಡೆ ಮತ್ತು ಇನ್ಸ್ಪೆಕ್ಟರ್ ಯೋಗೀಶ್ ಕುಮಾರ್ ತಂಡ ಕೇಸು ದಾಖಲಿಸಿ ದಾಳಿ ನಡೆಸಿ ಹಲವು ಸ್ವತ್ತುಗಳನ್ನು ವಶ ಪಡಿಸಿಕೊಂಡಿದ್ದರು. ಸುಮಾರು ಒಂದು ಕೋಟಿ ಏಳು ಲಕ್ಷದಷ್ಟು ಆದಾಯಕ್ಕಿಂತ ಹೆಚ್ಚಿನ ಆಸ್ತಿ ಪತ್ತೆಯಾದ ಬಗ್ಗೆ ವರದಿಯಾಗಿತ್ತು.

ಬಂಧನದ ಭೀತಿಯಿಂದ ಆರೋಪಿ ಯು ಮಾನ್ಯ ಮೂರನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮತ್ತು ಭ್ರಷ್ಟಾಚಾರ ವಿರೋಧಿ ಖಾಯಿದೆಯ ಪ್ರಕರಣಗಳ ವಿಚಾರಣಾ ವಿಶೇಷ ನ್ಯಾಯಾಲಯ ದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಸದ್ರಿ ಅರ್ಜಿಯನ್ನು ಮಂಗಳೂರಿನ ಮೂರನೇ ಸೆಷೆನ್ಸ್ ನ್ಯಾಯಾಲಯದ ನ್ಯಾಯಾಧೀಶ ಬಿ. ಬಿ. ಜಕಾತಿ ರವರು ವಜಾಗೊಳಿಸಿ ದಿನಾಂಕ 09-06-2020 ರಂದು ಆದೇಶಿಸಿದರು.
ಭ್ರಷ್ಟಾಚಾರ ನಿಗ್ರಹದಳದ ಪರ ವಕೀಲರಾದ ವಿಶೇಷ ಸರಕಾರಿ ಅಭಿಯೋಜಕ ಕೆ. ಎಸ್.ಎನ್. ರಾಜೇಶ್ ಆರೋಪಿಯ ಜಾಮೀನು ಅರ್ಜಿಗೆ ಪ್ರಬಲ ಆಕ್ಷೇಪ ವ್ಯಕ್ತಪಡಿಸಿದ್ದರು. ವಾದ ಪ್ರತಿವಾದ ಆಲಿಸಿದ್ದ ನ್ಯಾಯಾಧೀಶರಾದ ಬಿ. ಬಿ. ಜಕಾತಿ ರವರು ಆರೋಪಿ ಜೋಸೆಫ್ ಡೇನಿಸ್ ಮಿರಾಂಡ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸಿ ಆದೇಶಿಸಿದ್ದಾರೆ.

ಈ ಮೊದಲು ಮಾನ್ಯ ಮೂರನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮತ್ತು ಭ್ರಷ್ಟಾಚಾರ ಕಾಯಿದೆಯ ಪ್ರಕರಣಗಳ ವಿಚಾರಣಾ ವಿಶೇಷ ನ್ಯಾಯಾದೀಶರಾಗಿದ್ದ ಶ್ರೀ ಬಿ. ಮುರಳೀಧರ ಪೈ ಯವರು ವರ್ಗಾವಣೆಗೊಂಡ ಬಳಿಕ ಶ್ರೀ. ಬಿ.ಬಿ. ಜಕಾತಿ ಯವರು ಬೆಂಗಳೂರಿನಿಂದ ವರ್ಗಾವಣೆ ಗೊಂಡು ಬಂದಿದ್ದು ದಿನಾಂಕ 01-06-2020 ರಂದು ಅಧಿಕಾರ ವಹಿಸಿಕೊಂಡಿರುತ್ತಾರೆ.

ದೊಡ್ಡ ಮೊತ್ತದ ಆದಾಯಕ್ಕಿಂತ ಹೆಚ್ಚಿನ ಆಸ್ತಿಯನ್ನು ಹೊಂದಿದ ಬಗ್ಗೆ ಆರೋಪವಿದ್ದು ಆರೋಪಿಯನ್ನು ಹೆಚ್ಚಿನ ವಿಚಾರಣೆಗೆ ಅಗತ್ಯವಿದ್ದಲ್ಲಿ ಬಂಧಿಸಬೇಕಾಗುವ ಸನ್ನಿವೇಶವನ್ನು ತಳ್ಳಿ ಹಾಕುವಂತಿಲ್ಲ ಎಂದು ಅಭಿಪ್ರಾಯ ಪಟ್ಟ ನ್ಯಾಯಧೀಶ ಬಿ.ಬಿ. ಜಕಾತಿ ಯವರು ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸಿದರು.

ಮಂಗಳೂರಿನ ಭ್ರಷ್ಟಾಚಾರ ನಿಗ್ರಹ ದಳದ ಪರ ವಿಶೇಷ ಸರಕಾರಿ ಅಭಿಯೋಜಕ ಮತ್ತು ನ್ಯಾಯವಾದಿ ಕೆ. ಎಸ್. ಎನ್. ರಾಜೇಶ್ ವಾದಿಸಿದ್ದರು.

Spread the love
  • Related Posts

    ಬೆಳ್ತಂಗಡಿ: ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನಕ್ಕೆ ಯುವ ಕಾಂಗ್ರೆಸ್ ಚಾಲನೆ

    ಬೆಳ್ತಂಗಡಿ:ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಯುವಜನರಲ್ಲಿ ಜಾಗೃತಿ ಮೂಡಿಸುವ ಹಾಗೂ ಬೆಳ್ತಂಗಡಿ ತಾಲೂಕನ್ನು ಮಾದಕ ವಸ್ತು ಮುಕ್ತಗೊಳಿಸುವ ಉದ್ದೇಶದಿಂದ ಯುವ ಕಾಂಗ್ರೆಸ್ ಬೆಳ್ತಂಗಡಿ ವತಿಯಿಂದ ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗಿದೆ. “ನಶೆ ಬೇಡ… ನಾಳೆಯ ಭವಿಷ್ಯ ಬೇಕು” ಹಾಗೂ…

    Spread the love

    ಚಾರ್ಮಾಡಿ ಘಾಟಿಯಲ್ಲಿ ನಿರಂತರವಾಗಿ ಕಾಣಿಸಿಕೊಳ್ಳುತ್ತಿರುವ ಏಕದಂತ

    ಬೆಳ್ತಂಗಡಿ: ಚಾರ್ಮಾಡಿ ಘಾಟಿಯಲ್ಲಿ ಭಾನುವಾರ ರಾತ್ರಿ ಮತ್ತೆ ದೈತ್ಯ ಗಾತ್ರದ ಕಾಡಾನೆ ಕಂಡುಬಂದಿದೆ. ಘಾಟಿ ಭಾಗದಲ್ಲಿ ಆಗಾಗ ಕಾಣಸಿಗುವ ಈ ಕಾಡಾನೆ ರಸ್ತೆ ಬದಿ ನಿಂತಿದ್ದು ವಾಹನ ಸಂಚಾರಕ್ಕೆ ವ್ಯತ್ಯಯ ಉಂಟಾಗಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ತೆರಳಿದ್ದು ಕಾಡಾನೆಯನ್ನು ಕಾಡಿಗಟ್ಟುವ…

    Spread the love

    You Missed

    ಬೆಳ್ತಂಗಡಿ: ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನಕ್ಕೆ ಯುವ ಕಾಂಗ್ರೆಸ್ ಚಾಲನೆ

    • By admin
    • August 10, 2026
    • 3 views
    ಬೆಳ್ತಂಗಡಿ: ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನಕ್ಕೆ ಯುವ ಕಾಂಗ್ರೆಸ್ ಚಾಲನೆ

    ಚಾರ್ಮಾಡಿ ಘಾಟಿಯಲ್ಲಿ ನಿರಂತರವಾಗಿ ಕಾಣಿಸಿಕೊಳ್ಳುತ್ತಿರುವ ಏಕದಂತ

    • By admin
    • August 10, 2026
    • 5 views
    ಚಾರ್ಮಾಡಿ ಘಾಟಿಯಲ್ಲಿ ನಿರಂತರವಾಗಿ ಕಾಣಿಸಿಕೊಳ್ಳುತ್ತಿರುವ ಏಕದಂತ

    ಪಶ್ಚಿಮ ಘಟ್ಟದ ಪ್ರಕೃತಿ ಮಡಿಲಿನ ‘ನೇತ್ರಾವತಿ ಹೋಂ ಸ್ಟೇ’ – ಪ್ರವಾಸಿಗರಿಗಾಗಿ ಪರಿಪೂರ್ಣ ತಾಣ

    • By admin
    • August 9, 2026
    • 6 views

    ಬೆಳ್ತಂಗಡಿ: ಅನಾರೋಗ್ಯದಿಂದ ಬಳಲುತ್ತಿರುವ 2 ತಿಂಗಳ ಮಗುವಿನ ಚಿಕಿತ್ಸೆಗೆ ಸಹೃದಯಿಗಳ ತುರ್ತು ನೆರವಿನ ಹಸ್ತ ಅಗತ್ಯ

    • By admin
    • August 8, 2026
    • 11 views
    ಬೆಳ್ತಂಗಡಿ: ಅನಾರೋಗ್ಯದಿಂದ ಬಳಲುತ್ತಿರುವ 2 ತಿಂಗಳ ಮಗುವಿನ ಚಿಕಿತ್ಸೆಗೆ ಸಹೃದಯಿಗಳ ತುರ್ತು ನೆರವಿನ ಹಸ್ತ ಅಗತ್ಯ

    “ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮ: ವಿದ್ಯಾರ್ಥಿಗಳಲ್ಲಿ ಪರಿಸರ ಕಾಳಜಿ ಬೆಳೆಸಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ”

    • By admin
    • August 8, 2026
    • 7 views
    “ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮ: ವಿದ್ಯಾರ್ಥಿಗಳಲ್ಲಿ ಪರಿಸರ ಕಾಳಜಿ ಬೆಳೆಸಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ”

    ಭಾರಿ ಮಳೆ ಹಿನ್ನೆಲೆ: ಪುತ್ತೂರು ಉಪವಿಭಾಗದ ವ್ಯಾಪ್ತಿಯ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಣೆ

    • By admin
    • August 7, 2026
    • 10 views
    ಭಾರಿ ಮಳೆ ಹಿನ್ನೆಲೆ: ಪುತ್ತೂರು ಉಪವಿಭಾಗದ ವ್ಯಾಪ್ತಿಯ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಣೆ