ಕೊರೋನಾ ವಿರುದ್ಧ ಜಾಗೃತಿ ಸಂದೇಶ ಮೂಡಿಸಲು ಮುಂದಾದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ: ಶಿಡ್ಲಘಟ್ಟದಲ್ಲಿ ಕೋವಿಡ್-19 ಮಾಹಿತಿ ಪತ್ರ ಬಿಡುಗಡೆ

ಶಿಡ್ಲಘಟ್ಟ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಕೋವಿಡ್-19 ಮಾಹಿತಿ ಪತ್ರ ಬಿಡುಗಡೆಯನ್ನು ಶಿಡ್ಲಘಟ್ಟ ಯೋಜನಾ ಕಛೇರಿಯಲ್ಲಿ ನಡೆಸಲಾಯಿತು.

ಕಾರ್ಯಕ್ರಮವನ್ನು ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಶಿವಕುಮಾರ್ ರವರು ಉದ್ಘಾಟಿಸಿ ಮಾತನಾಡುತ್ತಾ ವಿಶ್ವಾದ್ಯಂತ ಕೊರೋನ ಮಹಾಮಾರಿಯು ತನ್ನ ಅಟ್ಟಹಾಸವನ್ನು ತೋರುತ್ತಿದ್ದು ನಮ್ಮ ದೇಶದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸೋಂಕಿತ ಪ್ರಕರಣಗಳು ಬೆಳಕಿಗೆ ಬಂದಿದೆ ಆದರೆ ನಮ್ಮ ದೇಶದಲ್ಲಿ ಸಾವಿನ ಸಂಖ್ಯೆ ಕಡಿಮೆಯಿದ್ದು ಇದಕ್ಕೆ ನಮ್ಮ ದೇಶದ ಆಹಾರ ಪದ್ಧತಿ ಮೂಲ ಕಾರಣವಾಗಿದೆ ರೋಗರುಜಿನಗಳನ್ನು ತಡೆಯುವ ಶಕ್ತಿ ನಮ್ಮ ಆರೋಗ್ಯದಲ್ಲಿ ಇದ್ದಷ್ಟು ದಿನ ನಮಗೆ ಯಾವುದೇ ತೊಂದರೆಗಳು ಆಗೋದಿಲ್ಲ ಪೌಷ್ಠಿಕ ಆಹಾರಗಳ ಸೇವನೆಯ ಜೊತೆಗೆ ರೋಗನಿರೋಧಕ ಶಕ್ತಿಗಳನ್ನು ಹೆಚ್ಚಿಸುವ ಆಹಾರಗಳ ಸೇವನೆಯ ಅವಶ್ಯಕತೆಯಿದೆ ಕೊರೋನಾದ ಬಗ್ಗೆ ಭಯ ಬೇಡ ಆದರೆ ಜಾಗೃತಿ ಇರಲಿ ಇಂತಹ ಜಾಗೃತಿ ಕಾರ್ಯಕ್ರಮಗಳನ್ನು ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಮಾಡುತ್ತಾ ಬರುತ್ತಿರುವುದು ಶ್ಲಾಘನೀಯ ಎಂದರು.

ಈ ಸಂದರ್ಭದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರಾದ ತ್ಯಾಗರಾಜ ರವರು ಕೋವಿಡ್ 19 ಮಾಹಿತಿ ಪತ್ರವನ್ನು ಬಿಡುಗಡೆ ಮಾಡಿದರು.

ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ಪ್ರಕಾಶ್ ಕುಮಾರ್ ರವರು ಮಾತನಾಡುತ್ತಾ ಕೊರೋನಾ ವೈರಸ್ ರೋಗಾಣುಗಳು ಮನುಷ್ಯರಲ್ಲಿ ಉಸಿರಾಟದ ಸೋಂಕನ್ನು ಉಂಟುಮಾಡುತ್ತದೆ, ಅದು ಸಾಮಾನ್ಯವಾಗಿ ಸೌಮ್ಯವಾಗಿರುತ್ತದೆ, ಆದರೆ ವಿರಳವಾಗಿ ಮಾರಕವಾಗಬಹುದು. ಇದನ್ನು ತಡೆಗಟ್ಟುವಿಕೆ ಅಥವಾ ಚಿಕಿತ್ಸೆಗಾಗಿ ಅನುಮೋದಿಸಲಾದ ಯಾವುದೇ ಲಸಿಕೆಗಳು ಅಥವಾ ಆಂಟಿವೈರಲ್ ಔಷಧಿಗಳಿಲ್ಲ. ಇದಕ್ಕಾಗಿ ನಾವು ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಬೇಕಾಗುತ್ತದೆ ಸಾಮಾಜಿಕ ಅಂತರಗಳನ್ನು ಕಾಪಾಡುವುದರ ಜೊತೆಗೆ ಮಾಸ್ಕ್, ಸ್ಯಾನಿಟೈಸರ್ ಬಳಕೆಯನ್ನು ಮಾಡಬೇಕಾಗುತ್ತದೆ ಮಕ್ಕಳು ಹಾಗೂ ಹಿರಿಯ ವಯಸ್ಕರು ಮನೆಯಲ್ಲೇ ಇದ್ದು ಅವಶ್ಯಕತೆಗನುಗುಣವಾಗಿ ಮಾತ್ರ ಹೊರಗಡೆ ಓಡಾಟ ಮಾಡಿದಲ್ಲಿ ಇಂತಹ ಸಾಂಕ್ರಾಮಿಕ ರೋಗವನ್ನು ನಿರ್ಣಾಮ ಮಾಡಬಹುದು ಇದರ ಜಾಗೃತಿಗಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು 10 ಲಕ್ಷಕ್ಕೂ ಅಧಿಕ ಕರಪತ್ರಗಳನ್ನು ಮುದ್ರಿಸಿ ಜಾಗೃತಿ ಮೂಡಿಸುತ್ತಿದೆ ಎಂದು ಹೇಳಿದರು.

ಈ ಸಂಧರ್ಭದಲ್ಲಿ ಯೋಜನೆಯ ಕಾರ್ಯಕರ್ತರು ಉಪಸ್ಥಿತರಿದ್ದರು.

Spread the love
  • Related Posts

    ರುಡ್ ಸೆಟ್ ಸಂಸ್ಥೆ, ಸಿದ್ಧವನ ಉಜಿರೆ ಇದರ ವತಿಯಿಂದ ಹಪ್ಪಳ, ಉಪ್ಪಿನಕಾಯಿ ಮತ್ತು ಮಸಾಲ ಪೌಡರ್‌ ತಯಾರಿಕೆ ತರಬೇತಿಯನ್ನು ಹಮ್ಮಿಕೊಂಡಿದೆ

    ಉಜಿರೆ: ರುಡ್ ಸೆಟ್ ಸಂಸ್ಥೆ, ಸಿದ್ಧವನ ಉಜಿರೆ, ಬೆಳ್ತಂಗಡಿ ತಾಲೂಕು ಇದರ ವತಿಯಿಂದ ಸ್ವ ಉದ್ಯೋಗ ಅಥವಾ ಉದ್ಯೋಗ ಮಾಡುವುದಾದರೆ ಹಪ್ಪಳ, ಉಪ್ಪಿನಕಾಯಿ ಮತ್ತು ಮಸಾಲ ಪೌಡರ್‌ ತಯಾರಿಕೆ ತರಬೇತಿಯನ್ನು ಆಯೋಜಿಸಿದ್ದು ದಿನಾಂಕ 15.10.24 ರಿಂದ 24.10.24ರ ವರೆಗೆ (10ದಿನ) ಪ್ರತಿ…

    Spread the love

    ನವರಾತ್ರಿಯ 9ನೇ ದಿನ ಸಿದ್ಧಿದಾತ್ರಿ ದೇವಿಯನ್ನು ಆರಾಧಿಸುವ ಪದ್ಧತಿ ಹಾಗೂ ಮಹತ್ವ

    ನವರಾತ್ರಿ 9ನೇ ದಿನ: ಸಿದ್ಧಿದಾತ್ರಿ ದೇವಿಯನ್ನು ಈ ಮಂತ್ರಗಳನ್ನು ಹೇಳುತ್ತಾ ಪೂಜಿಸಿದರೆ ಒಳ್ಳೆಯದು ನವರಾತ್ರಿಯ 9ನೇ ಹಾಗೂ ಕೊನೆಯ ದಿನದಂದು ತಾಯಿ ಸಿದ್ಧಿದಾತ್ರಿ ಯ ಪೂಜೆ ಮಾಡಲಾಗುವುದು. ಈ ದಿನವನ್ನು ತುಂಬಾ ಸಂಭ್ರಮ ಹಾಗೂ ಸಡಗರಿಂದ ಆಚರಣೆ ಮಾಡಲಾಗುತ್ತದೆ.ದುರ್ಗಾದೇವಿಯು ಈಶ್ವರ ದೇವರ…

    Spread the love

    You Missed

    ವಕೀಲರ ಸಂಘ (ರಿ) ಬೆಳ್ತಂಗಡಿ ನೇತೃತ್ವದಲ್ಲಿ ಶ್ರೀ ಮಂಜು ಇಂಡೇನ್ ಗ್ಯಾಸ್ ವತಿಯಿಂದ ಸೇಫ್ಟಿ ಕ್ಲಿನಿಕ್ ಕಾರ್ಯಾಗಾರ

    • By admin
    • October 16, 2024
    • 32 views
    ವಕೀಲರ ಸಂಘ (ರಿ) ಬೆಳ್ತಂಗಡಿ ನೇತೃತ್ವದಲ್ಲಿ ಶ್ರೀ ಮಂಜು ಇಂಡೇನ್ ಗ್ಯಾಸ್ ವತಿಯಿಂದ ಸೇಫ್ಟಿ ಕ್ಲಿನಿಕ್ ಕಾರ್ಯಾಗಾರ

    ರುಡ್ ಸೆಟ್ ಸಂಸ್ಥೆ, ಸಿದ್ಧವನ ಉಜಿರೆ ಇದರ ವತಿಯಿಂದ ಹಪ್ಪಳ, ಉಪ್ಪಿನಕಾಯಿ ಮತ್ತು ಮಸಾಲ ಪೌಡರ್‌ ತಯಾರಿಕೆ ತರಬೇತಿಯನ್ನು ಹಮ್ಮಿಕೊಂಡಿದೆ

    • By admin
    • October 11, 2024
    • 59 views
    ರುಡ್ ಸೆಟ್ ಸಂಸ್ಥೆ, ಸಿದ್ಧವನ ಉಜಿರೆ ಇದರ ವತಿಯಿಂದ ಹಪ್ಪಳ, ಉಪ್ಪಿನಕಾಯಿ ಮತ್ತು ಮಸಾಲ ಪೌಡರ್‌ ತಯಾರಿಕೆ ತರಬೇತಿಯನ್ನು ಹಮ್ಮಿಕೊಂಡಿದೆ

    ನವರಾತ್ರಿಯ 9ನೇ ದಿನ ಸಿದ್ಧಿದಾತ್ರಿ ದೇವಿಯನ್ನು ಆರಾಧಿಸುವ ಪದ್ಧತಿ ಹಾಗೂ ಮಹತ್ವ

    • By admin
    • October 11, 2024
    • 25 views
    ನವರಾತ್ರಿಯ 9ನೇ ದಿನ ಸಿದ್ಧಿದಾತ್ರಿ ದೇವಿಯನ್ನು ಆರಾಧಿಸುವ ಪದ್ಧತಿ ಹಾಗೂ ಮಹತ್ವ

    ಕುವೆಂಪು ವಿವಿಯಲ್ಲಿ ತಡವಾಗಿ ಪ್ರಕಟವಾಗುವ ಫಲಿತಾಂಶ ವಿದ್ಯಾರ್ಥಿಗಳ ಭವಿಷ್ಯ ಅತಂತ್ರ

    • By admin
    • October 7, 2024
    • 81 views
    ಕುವೆಂಪು ವಿವಿಯಲ್ಲಿ ತಡವಾಗಿ ಪ್ರಕಟವಾಗುವ ಫಲಿತಾಂಶ ವಿದ್ಯಾರ್ಥಿಗಳ ಭವಿಷ್ಯ ಅತಂತ್ರ

    ನಾಗರಿಕ ಅಭಿನಂದನಾ ಸಮಿತಿಯಿಂದ ಯೋಧ ಮಂಜುನಾಥ ಹಾಗೂ ಶಿಕ್ಷಕ ವಿ.ಕೆ ವಿಟ್ಲ ಅವರಿಗೆ ನಾಗರಿಕ ಸನ್ಮಾನ

    • By admin
    • October 2, 2024
    • 44 views
    ನಾಗರಿಕ ಅಭಿನಂದನಾ ಸಮಿತಿಯಿಂದ ಯೋಧ ಮಂಜುನಾಥ ಹಾಗೂ ಶಿಕ್ಷಕ ವಿ.ಕೆ ವಿಟ್ಲ ಅವರಿಗೆ ನಾಗರಿಕ ಸನ್ಮಾನ

    ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡ ಸೇವಾ ಟ್ರಸ್ಟ್(ರಿ) ವತಿಯಿಂದ ನಿಡ್ಲೆ ಗ್ರಾಮದಲ್ಲಿ ಸಿಡಿಲು ಬಡಿದು ಮನೆ ಹಾನಿಯಾದ ಕುಟುಂಬಕ್ಕೆ ಆರ್ಥಿಕ ನೆರವು

    • By admin
    • October 1, 2024
    • 428 views
    ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡ ಸೇವಾ ಟ್ರಸ್ಟ್(ರಿ) ವತಿಯಿಂದ ನಿಡ್ಲೆ ಗ್ರಾಮದಲ್ಲಿ ಸಿಡಿಲು ಬಡಿದು ಮನೆ ಹಾನಿಯಾದ ಕುಟುಂಬಕ್ಕೆ ಆರ್ಥಿಕ ನೆರವು