‘ಸ್ವಯಂ ಚಾಲಿತ ಹ್ಯಾಂಡ್ ಸ್ಯಾನಿಟೈಸರ್ ಡಿಸ್ಪೆನ್ಸರ್’ಗಳನ್ನು ತಯಾರಿಸಿದ SDM ಪಾಲಿಟೆಕ್ನಿಕ್​​ ಕಾಲೇಜು ಉಪನ್ಯಾಸಕರು


ಬೆಳ್ತಂಗಡಿ: ಉಜಿರೆ SDM ಪಾಲಿಟೆಕ್ನಿಕ್​​ ಕಾಲೇಜು ಉಪನ್ಯಾಸಕರು ‘ಸ್ವಯಂ ಚಾಲಿತ ಹ್ಯಾಂಡ್ ಸ್ಯಾನಿಟೈಸರ್ ಡಿಸ್ಪೆನ್ಸರ್’ಗಳನ್ನು ತಯಾರಿಸುವ ಮೂಲಕ ಪ್ರಶಂಸೆಗೆ ಪಾತ್ರರಾಗಿದ್ದಾರೆ.
ಮಾರುಕಟ್ಟೆ ಬೆಲೆಗಿಂತ ಅತ್ಯಂತ ಕಡಿಮೆ ದರದಲ್ಲಿ ಸಿದ್ಧಪಡಿಸಲಾಗಿದ್ದು, ಜನಸಾಮಾನ್ಯರಿಗೆ, ಸಂಘ, ಸಂಸ್ಥೆಗಳಿಗೆ ಹೀಗೆ ಎಲ್ಲರಿಗೂ ಬಳಕೆಗೆ ಯೋಗ್ಯವಾಗಿದೆ.ಮಾರುಕಟ್ಟೆಯಲ್ಲಿ ಕಾಲಿನಿಂದ ಬಳಸಬಹುದಾದ ಡಿಸ್ಪೆನ್ಸರ್‌ಗಳು ಲಭ್ಯವಿದ್ದರೂ ಬಳಕೆಯ ದೃಷ್ಟಿಯಿಂದ ಒಂದಷ್ಟು ಅನಾನುಕೂಲಗಳಿವೆ. ಎಸ್​​ಡಿಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ.ಬಿ.ಯಶೋವರ್ಮ ಮಾರ್ಗದರ್ಶನ ಮತ್ತು ಉಜಿರೆಯ ಎಸ್​​ಡಿಎಂ ಪಾಲಿಟೆಕ್ನಿಕ್ ಕಾಲೇಜಿನ ಪ್ರಾಂಶುಪಾಲರು ಹಾಗೂ ಉಪನ್ಯಾಸಕ ವರ್ಗದ ಕಾರ್ಯವೈಖರಿಯಿಂದ ಈ ಆಟೋಮ್ಯಾಟಿಕ್ ಹ್ಯಾಂಡ್ ಸ್ಯಾನಿಟೈಸರ್ ಡಿಸ್ಪೆನ್ಸೆರ್ ತಯಾರಾಗಿದೆ.

ಯಂತ್ರದ ಕಾರ್ಯವೈಖರಿ: ಈ ಯಂತ್ರದ ತಾಂತ್ರಿಕ ಕಾರ್ಯವೈಖರಿ ಅತ್ಯುನ್ನತ ಮಟ್ಟದ್ದು. ಇದೊಂದು ವಿದ್ಯುತ್ ಚಾಲಿತ ಯಂತ್ರವಾಗಿದ್ದು, ಅಲ್ಟ್ರಾಸಾನಿಕ್ ಸೆನ್ಸರ್ ಮೂಲಕ ಕಾರ್ಯನಿರ್ವಹಿಸುತ್ತದೆ. ಯಂತ್ರದ ನಿರ್ದಿಷ್ಟ ಭಾಗದಲ್ಲಿ ಕೈಯನ್ನು ಹಿಡಿದಾಗ, ಇದರಲ್ಲಿರುವ ಸೆನ್ಸರ್‌ಗಳು ಚಲನೆಯನ್ನು ಗುರುತಿಸಿ ಹ್ಯಾಂಡ್ ಸ್ಯಾನಿಟೈಸರ್ ನ್ನು ಕೈಗಳಿಗೆ ಸಿಂಪಡಿಸುತ್ತದೆ. ಹೀಗಾಗಿ ಯಾರೊಬ್ಬರೂ ಈ ಯಂತ್ರವನ್ನು ಮುಟ್ಟುವ ಪ್ರಮೇಯವೇ ಇಲ್ಲ. ಈಗಾಗಲೇ ಲಭ್ಯವಿರುವ ಕಾಲಿನಿಂದ ಬಳಸುವ ಡಿಸ್ಪೆನ್ಸರ್‌ಗಳ ಸರಿ ಸುಮಾರು ದರದಲ್ಲಿ ಸಂಪೂರ್ಣ ಸ್ವಯಂಚಾಲಿತ ಡಿಸ್ಪೆನ್ಸರ್ ನಿರ್ಮಿಸಿರುವುದು ಬಳಕೆದಾರರಿಗೂ ಅನುಕೂಲವಾಗುತ್ತದೆ.

ಡಾ.ಡಿ ವೀರೇಂದ್ರ ಹೆಗ್ಗಡೆ ಸಾಧನೆಗೆ ಮೆಚ್ಚುಗೆ: ಸದ್ಯ ಪ್ರಥಮ ಆಟೋಮ್ಯಾಟಿಕ್ ಸ್ಯಾನಿಟೈಸರ್ ಡಿಸ್ಪೆನ್ಸರ್ ಯಂತ್ರವನ್ನು ಧರ್ಮಸ್ಥಳಕ್ಕೆ ಅರ್ಪಿಸಲಾಗಿದೆ. ಇದನ್ನು ಪರೀಕ್ಷಿಸಿದ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಮೆಚ್ಚುಗೆ ವ್ಯಕ್ತಪಡಿಸಿ, ಮತ್ತಷ್ಟು ಅನ್ವೇಷಣೆಗಳನ್ನು ನಡೆಸಲು ಪ್ರೋತ್ಸಾಹಿಸಿದ್ದಾರೆ.

ಶಿಕ್ಷಣ ಸಂಸ್ಥೆಗಳಂತಹ ಕೇಂದ್ರಗಳಲ್ಲಿ ಹ್ಯಾಂಡ್ ಸ್ಯಾನಿಟೈಸೇಷನ್‌ಗೆ ಪೂರಕವಾಗಿ ಸ್ಯಾನಿಟೈಸರ್‌ಗಳ ಬಳಕೆಗೆ ಮಾರ್ಗಸೂಚಿಗಳೂ ಬಂದಿವೆ. ಸ್ಯಾನಿಟರಿ ಬಾಟಲ್‌ಗಳನ್ನು ಮುಟ್ಟುವ ಪ್ರಸಂಗ ಬರಬಹುದು. ಇದೂ ಅಪಾಯಕಾರಿ. ಇದಕ್ಕಾಗಿ ತಂತ್ರಜ್ಞಾನ ಬಳಸಿ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಯೋಚಿಸಿದಾಗ ’ಸ್ವಯಂ ಚಾಲಿತ ಹ್ಯಾಂಡ್ ಸ್ಯಾನಿಟೈಸರ್ ಡಿಸ್ಪೆನ್ಸರ್’ಗಳನ್ನು ಬಳಸುವ ಕುರಿತು ಯೋಚನೆ ಬಂತು. ಮಾರುಕಟ್ಟೆಗಳಲ್ಲಿ ವಿಚಾರಿಸಿದಾಗ 6 ಸಾವಿರಕ್ಕಿಂತ ಕಡಿಮೆ ಬೆಲೆಯ ಯಾವುದೇ ಸ್ವಯಂ ಚಾಲಿತ ಡಿಸ್ಪೆನ್ಸರ್‌ಗಳು ಲಭ್ಯವಿರಲಿಲ್ಲ ಎಂದು ಕಾಲೇಜಿನ ಪ್ರಿನ್ಸಿಪಾಲ್ ಕೆ. ಪಿ. ಪ್ರಸಾದ್ ಮಾಹಿತಿ ನೀಡಿದರು.

ವೀಡಿಯೋಗಾಗಿ ಇಲ್ಲಿ ಕ್ಲಿಕ್ಕಿಸಿ👇🏼👇🏼👇🏼👇🏼

Spread the love
  • Related Posts

    ಗುರುವಾಯನಕೆರೆ ಎಕ್ಸೆಲ್ ಟೆಕ್ನೋ ಸ್ಕೂಲ್‌ಗೆ ಅಗ್ನಿಶಾಮಕ ಇಲಾಖೆಯ ಅನುಮತಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದ್ಯಾಸಂಸ್ಥೆಯ ಮುಖ್ಯಸ್ಥರ ಸ್ಪಷ್ಟನೆ

    ಬೆಳ್ತಂಗಡಿ: ಗುರುವಾಯನಕೆರೆಯಲ್ಲಿರುವ ಎಕ್ಸೆಲ್ ಟೆಕ್ನೋ ಸ್ಕೂಲ್ಗೆ ಅಗ್ನಿ ಶಾಮಕ ಹಾಗೂ ತುರ್ತು ಸೇವಾ ಇಲಾಖೆಯಿಂದ ಅಗತ್ಯ ಅನುಮತಿ ದೊರೆತಿರುವ ಬಗ್ಗೆ ಆಡಳಿತ ಮಂಡಳಿ ಸ್ಪಷ್ಟೀಕರಣ ನೀಡಿದೆ. ಇತ್ತೀಚೆಗೆ ಶಾಲೆಯ ಅನುಮತಿ ಕುರಿತಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಪಷ್ಟನೆ ನೀಡಲು ಸಂಸ್ಥೆಯ ಆಡಳಿತ ಮಂಡಳಿ…

    Spread the love

    ಮರೋಡಿ ಗ್ರಾಮದ ಮಾವಿನಕಟ್ಟೆ ಎಂಬಲ್ಲಿ ನಿರ್ಮಾಣಗೊಳ್ಳಲಿರುವ ಅಂಗನವಾಡಿ ಕೇಂದ್ರದ ನೂತನ ಕಟ್ಟಡ ಕಾಮಗಾರಿಗೆ ಶಿಲಾನ್ಯಾಸ

    ಮರೋಡಿ : ಮಾ 07 ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರವರು ಮರೋಡಿ ಗ್ರಾಮದ ಮಾವಿನಕಟ್ಟೆ ಎಂಬಲ್ಲಿ ರೂ. 17.00 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಅಂಗನವಾಡಿ ಕೇಂದ್ರದ ನೂತನ ಕಟ್ಟಡ ಕಾಮಗಾರಿಗೆ ಮಾ 07 ರಂದು ಶಿಲಾನ್ಯಾಸ ನೆರವೇರಿಸಿದರು. ಈ ಸಂದರ್ಭದಲ್ಲಿಮಾಜಿ…

    Spread the love

    You Missed

    ಗುರುವಾಯನಕೆರೆ ಎಕ್ಸೆಲ್ ಟೆಕ್ನೋ ಸ್ಕೂಲ್‌ಗೆ ಅಗ್ನಿಶಾಮಕ ಇಲಾಖೆಯ ಅನುಮತಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದ್ಯಾಸಂಸ್ಥೆಯ ಮುಖ್ಯಸ್ಥರ ಸ್ಪಷ್ಟನೆ

    • By admin
    • March 7, 2026
    • 22 views
    ಗುರುವಾಯನಕೆರೆ ಎಕ್ಸೆಲ್ ಟೆಕ್ನೋ ಸ್ಕೂಲ್‌ಗೆ ಅಗ್ನಿಶಾಮಕ ಇಲಾಖೆಯ ಅನುಮತಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದ್ಯಾಸಂಸ್ಥೆಯ ಮುಖ್ಯಸ್ಥರ ಸ್ಪಷ್ಟನೆ

    ಮರೋಡಿ ಗ್ರಾಮದ ಮಾವಿನಕಟ್ಟೆ ಎಂಬಲ್ಲಿ ನಿರ್ಮಾಣಗೊಳ್ಳಲಿರುವ ಅಂಗನವಾಡಿ ಕೇಂದ್ರದ ನೂತನ ಕಟ್ಟಡ ಕಾಮಗಾರಿಗೆ ಶಿಲಾನ್ಯಾಸ

    • By admin
    • March 7, 2026
    • 54 views
    ಮರೋಡಿ ಗ್ರಾಮದ ಮಾವಿನಕಟ್ಟೆ ಎಂಬಲ್ಲಿ ನಿರ್ಮಾಣಗೊಳ್ಳಲಿರುವ ಅಂಗನವಾಡಿ ಕೇಂದ್ರದ ನೂತನ ಕಟ್ಟಡ ಕಾಮಗಾರಿಗೆ  ಶಿಲಾನ್ಯಾಸ

    ದಕ್ಷಿಣಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದಲ್ಲಿ 12ನೂತನ ಪೋಲೀಸ್ ಠಾಣೆಗಳ ಸ್ಥಾಪನೆಗೆ ಸರ್ಕಾರದ ನಿರ್ಧಾರ

    • By admin
    • March 6, 2026
    • 16 views
    ದಕ್ಷಿಣಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದಲ್ಲಿ 12ನೂತನ ಪೋಲೀಸ್ ಠಾಣೆಗಳ ಸ್ಥಾಪನೆಗೆ ಸರ್ಕಾರದ ನಿರ್ಧಾರ

    ಇಂಗ್ಲೆಂಡ್ ವಿರುದ್ಧ ಗೆದ್ದು ಫೈನಲ್‌ಗೆ ಭಾರತ ಪ್ರವೇಶ

    • By admin
    • March 5, 2026
    • 19 views
    ಇಂಗ್ಲೆಂಡ್ ವಿರುದ್ಧ ಗೆದ್ದು ಫೈನಲ್‌ಗೆ ಭಾರತ ಪ್ರವೇಶ

    ಶ್ರೀರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಮಹಾಸ್ವಾಮಿಗಳಿಂದ ಶಾಸಕ ಹರೀಶ್ ಪೂಂಜಾ ರವರ ನಿವಾಸ ಮಿಥಿಲಾಗೆ ಭೇಟಿ

    • By admin
    • March 5, 2026
    • 41 views
    ಶ್ರೀರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಮಹಾಸ್ವಾಮಿಗಳಿಂದ ಶಾಸಕ ಹರೀಶ್ ಪೂಂಜಾ ರವರ ನಿವಾಸ ಮಿಥಿಲಾಗೆ ಭೇಟಿ

    ಬೆಳ್ತಂಗಡಿ : ಕಡಿರುದ್ಯಾವರ ಅಕ್ರಮ ಮರಳು ಸಾಗಾಟಕ್ಕೆ ಯತ್ನ, ಬೆಳ್ತಂಗಡಿ ಪೊಲೀಸರಿಂದ ಇಬ್ಬರ ವಿರುದ್ಧ ಪ್ರಕರಣ ದಾಖಲು

    • By admin
    • March 5, 2026
    • 56 views
    ಬೆಳ್ತಂಗಡಿ : ಕಡಿರುದ್ಯಾವರ ಅಕ್ರಮ ಮರಳು ಸಾಗಾಟಕ್ಕೆ ಯತ್ನ, ಬೆಳ್ತಂಗಡಿ ಪೊಲೀಸರಿಂದ ಇಬ್ಬರ ವಿರುದ್ಧ ಪ್ರಕರಣ ದಾಖಲು