‘ಸ್ವಯಂ ಚಾಲಿತ ಹ್ಯಾಂಡ್ ಸ್ಯಾನಿಟೈಸರ್ ಡಿಸ್ಪೆನ್ಸರ್’ಗಳನ್ನು ತಯಾರಿಸಿದ SDM ಪಾಲಿಟೆಕ್ನಿಕ್​​ ಕಾಲೇಜು ಉಪನ್ಯಾಸಕರು


ಬೆಳ್ತಂಗಡಿ: ಉಜಿರೆ SDM ಪಾಲಿಟೆಕ್ನಿಕ್​​ ಕಾಲೇಜು ಉಪನ್ಯಾಸಕರು ‘ಸ್ವಯಂ ಚಾಲಿತ ಹ್ಯಾಂಡ್ ಸ್ಯಾನಿಟೈಸರ್ ಡಿಸ್ಪೆನ್ಸರ್’ಗಳನ್ನು ತಯಾರಿಸುವ ಮೂಲಕ ಪ್ರಶಂಸೆಗೆ ಪಾತ್ರರಾಗಿದ್ದಾರೆ.
ಮಾರುಕಟ್ಟೆ ಬೆಲೆಗಿಂತ ಅತ್ಯಂತ ಕಡಿಮೆ ದರದಲ್ಲಿ ಸಿದ್ಧಪಡಿಸಲಾಗಿದ್ದು, ಜನಸಾಮಾನ್ಯರಿಗೆ, ಸಂಘ, ಸಂಸ್ಥೆಗಳಿಗೆ ಹೀಗೆ ಎಲ್ಲರಿಗೂ ಬಳಕೆಗೆ ಯೋಗ್ಯವಾಗಿದೆ.ಮಾರುಕಟ್ಟೆಯಲ್ಲಿ ಕಾಲಿನಿಂದ ಬಳಸಬಹುದಾದ ಡಿಸ್ಪೆನ್ಸರ್‌ಗಳು ಲಭ್ಯವಿದ್ದರೂ ಬಳಕೆಯ ದೃಷ್ಟಿಯಿಂದ ಒಂದಷ್ಟು ಅನಾನುಕೂಲಗಳಿವೆ. ಎಸ್​​ಡಿಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ.ಬಿ.ಯಶೋವರ್ಮ ಮಾರ್ಗದರ್ಶನ ಮತ್ತು ಉಜಿರೆಯ ಎಸ್​​ಡಿಎಂ ಪಾಲಿಟೆಕ್ನಿಕ್ ಕಾಲೇಜಿನ ಪ್ರಾಂಶುಪಾಲರು ಹಾಗೂ ಉಪನ್ಯಾಸಕ ವರ್ಗದ ಕಾರ್ಯವೈಖರಿಯಿಂದ ಈ ಆಟೋಮ್ಯಾಟಿಕ್ ಹ್ಯಾಂಡ್ ಸ್ಯಾನಿಟೈಸರ್ ಡಿಸ್ಪೆನ್ಸೆರ್ ತಯಾರಾಗಿದೆ.

ಯಂತ್ರದ ಕಾರ್ಯವೈಖರಿ: ಈ ಯಂತ್ರದ ತಾಂತ್ರಿಕ ಕಾರ್ಯವೈಖರಿ ಅತ್ಯುನ್ನತ ಮಟ್ಟದ್ದು. ಇದೊಂದು ವಿದ್ಯುತ್ ಚಾಲಿತ ಯಂತ್ರವಾಗಿದ್ದು, ಅಲ್ಟ್ರಾಸಾನಿಕ್ ಸೆನ್ಸರ್ ಮೂಲಕ ಕಾರ್ಯನಿರ್ವಹಿಸುತ್ತದೆ. ಯಂತ್ರದ ನಿರ್ದಿಷ್ಟ ಭಾಗದಲ್ಲಿ ಕೈಯನ್ನು ಹಿಡಿದಾಗ, ಇದರಲ್ಲಿರುವ ಸೆನ್ಸರ್‌ಗಳು ಚಲನೆಯನ್ನು ಗುರುತಿಸಿ ಹ್ಯಾಂಡ್ ಸ್ಯಾನಿಟೈಸರ್ ನ್ನು ಕೈಗಳಿಗೆ ಸಿಂಪಡಿಸುತ್ತದೆ. ಹೀಗಾಗಿ ಯಾರೊಬ್ಬರೂ ಈ ಯಂತ್ರವನ್ನು ಮುಟ್ಟುವ ಪ್ರಮೇಯವೇ ಇಲ್ಲ. ಈಗಾಗಲೇ ಲಭ್ಯವಿರುವ ಕಾಲಿನಿಂದ ಬಳಸುವ ಡಿಸ್ಪೆನ್ಸರ್‌ಗಳ ಸರಿ ಸುಮಾರು ದರದಲ್ಲಿ ಸಂಪೂರ್ಣ ಸ್ವಯಂಚಾಲಿತ ಡಿಸ್ಪೆನ್ಸರ್ ನಿರ್ಮಿಸಿರುವುದು ಬಳಕೆದಾರರಿಗೂ ಅನುಕೂಲವಾಗುತ್ತದೆ.

ಡಾ.ಡಿ ವೀರೇಂದ್ರ ಹೆಗ್ಗಡೆ ಸಾಧನೆಗೆ ಮೆಚ್ಚುಗೆ: ಸದ್ಯ ಪ್ರಥಮ ಆಟೋಮ್ಯಾಟಿಕ್ ಸ್ಯಾನಿಟೈಸರ್ ಡಿಸ್ಪೆನ್ಸರ್ ಯಂತ್ರವನ್ನು ಧರ್ಮಸ್ಥಳಕ್ಕೆ ಅರ್ಪಿಸಲಾಗಿದೆ. ಇದನ್ನು ಪರೀಕ್ಷಿಸಿದ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಮೆಚ್ಚುಗೆ ವ್ಯಕ್ತಪಡಿಸಿ, ಮತ್ತಷ್ಟು ಅನ್ವೇಷಣೆಗಳನ್ನು ನಡೆಸಲು ಪ್ರೋತ್ಸಾಹಿಸಿದ್ದಾರೆ.

ಶಿಕ್ಷಣ ಸಂಸ್ಥೆಗಳಂತಹ ಕೇಂದ್ರಗಳಲ್ಲಿ ಹ್ಯಾಂಡ್ ಸ್ಯಾನಿಟೈಸೇಷನ್‌ಗೆ ಪೂರಕವಾಗಿ ಸ್ಯಾನಿಟೈಸರ್‌ಗಳ ಬಳಕೆಗೆ ಮಾರ್ಗಸೂಚಿಗಳೂ ಬಂದಿವೆ. ಸ್ಯಾನಿಟರಿ ಬಾಟಲ್‌ಗಳನ್ನು ಮುಟ್ಟುವ ಪ್ರಸಂಗ ಬರಬಹುದು. ಇದೂ ಅಪಾಯಕಾರಿ. ಇದಕ್ಕಾಗಿ ತಂತ್ರಜ್ಞಾನ ಬಳಸಿ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಯೋಚಿಸಿದಾಗ ’ಸ್ವಯಂ ಚಾಲಿತ ಹ್ಯಾಂಡ್ ಸ್ಯಾನಿಟೈಸರ್ ಡಿಸ್ಪೆನ್ಸರ್’ಗಳನ್ನು ಬಳಸುವ ಕುರಿತು ಯೋಚನೆ ಬಂತು. ಮಾರುಕಟ್ಟೆಗಳಲ್ಲಿ ವಿಚಾರಿಸಿದಾಗ 6 ಸಾವಿರಕ್ಕಿಂತ ಕಡಿಮೆ ಬೆಲೆಯ ಯಾವುದೇ ಸ್ವಯಂ ಚಾಲಿತ ಡಿಸ್ಪೆನ್ಸರ್‌ಗಳು ಲಭ್ಯವಿರಲಿಲ್ಲ ಎಂದು ಕಾಲೇಜಿನ ಪ್ರಿನ್ಸಿಪಾಲ್ ಕೆ. ಪಿ. ಪ್ರಸಾದ್ ಮಾಹಿತಿ ನೀಡಿದರು.

ವೀಡಿಯೋಗಾಗಿ ಇಲ್ಲಿ ಕ್ಲಿಕ್ಕಿಸಿ👇🏼👇🏼👇🏼👇🏼

Spread the love
  • Related Posts

    ಕಡಿರುದ್ಯಾವರ ಗ್ರಾಮದ ಬಸವದಡ್ಡು ಎಂಬಲ್ಲಿ ಮರಬಿದ್ದು ಧರೆಗುರುಳಿದ ವಿದ್ಯುತ್ ಕಂಬಗಳು

    ಬೆಳ್ತಂಗಡಿ: ತಾಲೂಕಿನ ಕಡಿರುದ್ಯಾವರ ಗ್ರಾಮದ ಬಸವದಡ್ಡು ಎಂಬಲ್ಲಿ ಮರ ಬಿದ್ದು ವಿದ್ಯುತ್ ಕಂಬಗಳು ಧರೆಗುರುಳಿದ್ದು ಸಂಚಾರಕ್ಕೆ ತೊಡಕಾಗಿದ್ದು ತಕ್ಷಣವೇ ಕಾರ್ಯಪ್ರವೃತ್ತರಾದ ಮೆಸ್ಕಾಂ ಸಿಬ್ಬಂದಿ ಹಾಗೂ ಸ್ಥಳೀಯರ ಸಹಕಾರದೊಂದಿಗೆ ಸಂಚಾರಕ್ಕೆ ಅನುವುಮಾಡಿಕೊಡಲಾಗಿದೆ. Spread the love

    Spread the love

    ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಈ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಪ್ರವೇಶಕ್ಕೆ ನಿಷೇಧ

    ಬೆಳ್ತಂಗಡಿ : ನರಸಿಂಹಗಡ ಕೋಟೆ (ಗಡಾಯಿಕಲ್ಲು), ಕಡಮಗುಂಡಿ, ಬೊಳ್ಳೆ, ಮತ್ತು ಬಂಡಾಜೆ ಜಲಪಾತ ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರಿಗೆ ಮುಂದಿನ ಆದೇಶದ ವರೆಗೆ ಪ್ರವೇಶವನ್ನು ನಿಷೇದಿಸಿದ ಬೆಳ್ತಂಗಡಿ ವನ್ಯಜೀವಿ ವಿಭಾಗದಿಂದ ಆದೇಶ ಮಾಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು ಹವಮಾನ ಇಲಾಖೆಯ…

    Spread the love

    You Missed

    ಜ್ವರ ಕೆಮ್ಮು ನೆಗಡಿ ಇರುವ ಮಕ್ಕಳನ್ನು ಶಾಲೆಗೆ ಕಳುಹಿಸದಂತೆ ಸೂಚನೆ

    • By admin
    • June 1, 2025
    • 37 views
    ಜ್ವರ ಕೆಮ್ಮು ನೆಗಡಿ ಇರುವ ಮಕ್ಕಳನ್ನು ಶಾಲೆಗೆ ಕಳುಹಿಸದಂತೆ ಸೂಚನೆ

    ಕಡಿರುದ್ಯಾವರ ಗ್ರಾಮದ ಬಸವದಡ್ಡು ಎಂಬಲ್ಲಿ ಮರಬಿದ್ದು ಧರೆಗುರುಳಿದ ವಿದ್ಯುತ್ ಕಂಬಗಳು

    • By admin
    • June 1, 2025
    • 142 views
    ಕಡಿರುದ್ಯಾವರ ಗ್ರಾಮದ ಬಸವದಡ್ಡು ಎಂಬಲ್ಲಿ ಮರಬಿದ್ದು ಧರೆಗುರುಳಿದ ವಿದ್ಯುತ್ ಕಂಬಗಳು

    ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಈ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಪ್ರವೇಶಕ್ಕೆ ನಿಷೇಧ

    • By admin
    • May 31, 2025
    • 106 views
    ಭಾರಿ  ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಈ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಪ್ರವೇಶಕ್ಕೆ ನಿಷೇಧ

    ಮುಂಡಾಜೆ ಸೀಟು ಬಳಿ ಧರೆಗುರುಳಲು ಸಿದ್ಧಗೊಂಡ ಮರಗಳು ಸಂಬಂಧ ಪಟ್ಟವರು ಕೂಡಲೇ ತೆರವುಗೊಳಿಸಿ ಸಂಭಾವ್ಯ ಅಪಾಯವನ್ನು ತಪ್ಪಿಸಿ

    • By admin
    • May 30, 2025
    • 78 views
    ಮುಂಡಾಜೆ ಸೀಟು ಬಳಿ ಧರೆಗುರುಳಲು ಸಿದ್ಧಗೊಂಡ ಮರಗಳು ಸಂಬಂಧ ಪಟ್ಟವರು ಕೂಡಲೇ ತೆರವುಗೊಳಿಸಿ ಸಂಭಾವ್ಯ ಅಪಾಯವನ್ನು ತಪ್ಪಿಸಿ

    ದ.ಕ ಉಡುಪಿ ಜಿಲ್ಲೆಯಾದ್ಯಂತ ಮುಂದುವರಿದ ವರುಣಾರ್ಭಟ ಮುನ್ನೆಚ್ಚರಿಕೆ ಕ್ರಮವಾಗಿ ಶಾಲೆಗಳಿಗೆ ರಜೆ ಘೋಷಣೆ

    • By admin
    • May 30, 2025
    • 83 views
    ದ.ಕ ಉಡುಪಿ ಜಿಲ್ಲೆಯಾದ್ಯಂತ ಮುಂದುವರಿದ ವರುಣಾರ್ಭಟ ಮುನ್ನೆಚ್ಚರಿಕೆ ಕ್ರಮವಾಗಿ ಶಾಲೆಗಳಿಗೆ ರಜೆ ಘೋಷಣೆ

    ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಇಬ್ಬರು ಶಾಸಕರ ಉಚ್ಛಾಟನೆ

    • By admin
    • May 27, 2025
    • 59 views
    ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಇಬ್ಬರು ಶಾಸಕರ ಉಚ್ಛಾಟನೆ