ದೇಶಾದ್ಯಂತ ಮತ್ತೆ ಮುಂದುವರಿದ ಲಾಕ್ ಡೌನ್

ನವದೆಹಲಿ: ಕೊರೋನಾ ವೈರಸ್ ಹರಡುವ ಭೀತಿಯ ಹಿನ್ನೆಲೆಯಲ್ಲಿ ಲಾಕ್ ಡೌನ್ ಅವಧಿಯನ್ನು ಮತ್ತಷ್ಟು ವಿಸ್ತರಣೆ ಮಾಡಿರುವ ಕೇಂದ್ರ ಗೃಹ ಇಲಾಖೆ ಹೊಸದಾಗಿ ಒಂದು ಕಠಿಣ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದ್ದು, ಇದನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಎಲ್ಲಾ ರಾಜ್ಯ ಸರ್ಕಾರಗಳಿಗೆ ಸೂಚಿಸಿದೆ.

ಮೇ 3ರಂದು ಎರಡನೇ ಹಂತದ ಲಾಕ್​ಡೌನ್ ಅವಧಿ ಮುಗಿಯಬೇಕಿತ್ತು. ಆದರೆ ದಿನೇದಿನೆ ಭಾರತದಲ್ಲಿ ಕೊರೋನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಲಾಕ್​ ಡೌನ್​ ನ್ನು ಮೇ 17ರವರೆಗೆ ವಿಸ್ತರಿಸುವುದಾಗಿ ಕೇಂದ್ರ ಗೃಹ ಸಚಿವಾಲಯ ಆದೇಶ ನೀಡಿದೆ. ಹೊಸ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ

ಇದೇ ವೇಳೆ ದೇಶದ ಜಿಲ್ಲೆಗಳನ್ನು ಕೆಂಪು (ಹಾಟ್‌ಸ್ಪಾಟ್), ಹಸಿರು ಮತ್ತು ಅರೇಂಜ್ ವಲಯಗಳಾಗಿ ಅಪಾಯದ ವಿವರಗಳ ಆಧಾರದ ಮೇಲೆ ಈ ಅವಧಿಯಲ್ಲಿ ವಿವಿಧ ಚಟುವಟಿಕೆಗಳನ್ನು ನಿಯಂತ್ರಿಸಲು ಎಂಹೆಚ್‌ಎ ಹೊಸ ಮಾರ್ಗಸೂಚಿಗಳನ್ನು ಸಹ ನೀಡಿದೆ.

ಏನಿದೆ ಮಾರ್ಗಸೂಚಿಯಲ್ಲಿ?

ಮತ್ತೆ 2 ವಾರಗಳ ಕಾಲ ಲಾಕ್ ಡೌನ್ ವಿಸ್ತರಣೆ
ಸಾಮಾಜಿಕ, ಧಾರ್ಮಿಕ ಕಾರ್ಯಕ್ರಮ ರದ್ದು
ಬಸ್, ರೈಲು ಹಾಗೂ ವಿಮಾನ ಸಂಚಾರ ರದ್ದು
ಮಹಾನಗರಗಳಲ್ಲಿ ಮೆಟ್ರೋ ರೈಲು ಸಂಚಾರ ಇಲ್ಲ
ಟ್ಯಾಕ್ಸಿ ಹಾಗೂ ಆಟೋ ಸಂಚಾರ ಇಲ್ಲ
ಕಟಿಂಗ್ ಶಾಪ್’ಗಳನ್ನು ಎಲ್ಲಿಯೂ ತೆರೆಯುವಂತಿಲ್ಲ
ಅಗತ್ಯ ವಸ್ತು ಪೂರೈಕೆಯ ಗೂಡ್ಸ್‌ ರೈಲು, ವಾಹನಕ್ಕೆ ಮಾತ್ರ ಅವಕಾಶ
ಗರ್ಭಿಣಿ, ಮಕ್ಕಳು ಹಾಗೂ ವೃದ್ದರು ಕಡ್ಡಾಯವಾಗಿ ಮನೆಯಲ್ಲೇ ಇರಬೇಕು
ಅಗತ್ಯ ವಸ್ತು ಖರೀದಿಗೆ ಮಾತ್ರ ರಸ್ತೆಗೆ ಬರಬೇಕು
ಅನಗತ್ಯವಾಗಿ ಯಾರೂ ಮನೆಯಿಂದ ಹೊರಕ್ಕೆ ಓಡಾಡುವಂತಿಲ್ಲ
ಥಿಯೇಟರ್, ಮಾಲ್, ಜಿಮ್, ಸ್ವಿಮ್ಮಿಂಗ್ ಪೂಲ್ ತೆರೆಯುವಂತಿಲ್ಲ
ಸಂಜೆ 7ರಿಂದ ಮುಂಜಾನೆ 7ರವರೆಗೂ ಕಡ್ಡಾಯವಾಗಿ ಯಾರೂ ಓಡಾಡುವಂತಿಲ್ಲ
ಅಂತಾರಾಜ್ಯ ವಾಹನ ಸಂಚಾರ ಸಂಪೂರ್ಣ ಬಂದ್
ಯಾವುದೇ ಶಾಲಾ-ಕಾಲೇಜುಗಳನ್ನು ತೆರೆಯುವಂತಿಲ್ಲ
ಕೈಗಾರಿಕೆಗಳಿಗೆ ಷರತ್ತುಬದ್ದ ಅನುಮತಿ
ಬಾರ್ ಅಂಡ್ ರೆಸ್ಟೋರೆಂಟ್’ಗಳಿಗೆ ಅನುಮತಿ ಇಲ್ಲ

ಆರೆಂಜ್ ಝೋನ್’ನಲ್ಲಿ ಯಾವುದಕ್ಕೆಲ್ಲ ಅವಕಾಶ?

ನಿಗದಿತ ಪಾಸ್ ಹೊಂದಿರುವವರು ಮಾತ್ರ ಓಡಾಡಬಹುದು
ಅಗತ್ಯವಿದ್ದಲ್ಲಿ ಕಾರು ಬಳಸಬಹುದು. ಆದರೆ, ಕಾರಿನಲ್ಲಿ ಚಾಲಕ ಸೇರಿ ಇಬ್ಬರಿಗೆ ಮಾತ್ರ ಅವಕಾಶ
ಬೈಕ್’ನಲ್ಲಿ ಕೇವಲ ಒಬ್ಬರು ಮಾತ್ರ ಸಂಚರಿಸಬಹುದು
ಬಸ್ ಸಂಚಾರ ಇರುವುದಿಲ್ಲ.

ಗ್ರೀನ್ ಝೋನ್’ನಲ್ಲಿ ಯಾವುದಕ್ಕೆ ಅವಕಾಶ?

ಈ ಜಿಲ್ಲಾ ವ್ಯಾಪ್ತಿಯಲ್ಲಿ ಬಸ್ ಓಡಾಟಕ್ಕೆ ಅವಕಾಶವಿದ್ದು, ಶೇ.50ರಷ್ಟು ಪ್ರಯಾಣಿಕರಿಗೆ ಮಾತ್ರ ಅವಕಾಶ
ಟ್ಯಾಕ್ಸಿ ಓಡಾಟಕ್ಕೆ ಅವಕಾಶವಿದ್ದು, ಚಾಲಕ ಸೇರಿ ಇಬ್ಬರಿಗೆ ಮಾತ್ರ ಅವಕಾಶ

Spread the love
  • Related Posts

    ಧರ್ಮಸ್ಥಳದ ಶೌರ್ಯ ಪಡೆಗೆ NDRF ತರಬೇತಿ: ವಿಪತ್ತು ನಿರ್ವಹಣೆಯಲ್ಲಿ ಸಮಾಜಸೇವೆಗೆ ಸಜ್ಜು, ವಿಪತ್ತು ನಿರ್ವಹಣೆಯಲ್ಲಿ ಶೌರ್ಯ ತಂಡಗಳ ಸೇವೆ ಶ್ಲಾಘನೀಯ: ಉಪವಿಭಾಗಾಧಿಕಾರಿ ಹುಲ್ಲುಮನಿ ತಿಮ್ಮಣ್ಣ

    ಸಕಲೇಶಪುರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್, ಸಕಲೇಶಪುರ ಹಾಗೂ ಜನಜಾಗೃತಿ ಪ್ರಾದೇಶಿಕ ವಿಭಾಗ, ಬೆಳ್ತಂಗಡಿ ಇವರ ಸಂಯುಕ್ತ ಆಶ್ರಯದಲ್ಲಿ ಸಕಲೇಶಪುರ ತಾಲೂಕಿನ ಶೌರ್ಯ ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣಾ ಘಟಕದ ಸ್ವಯಂಸೇವಕರಿಗಾಗಿ ಒಂದು ದಿನದ ವಿಶೇಷ ತರಬೇತಿ…

    Spread the love

    ಓ ಮಾನವರೇ, ಯಾವಾಗ ಬರುವುದೋ ಒಳ್ಳೆಯ ಬುದ್ಧಿ! “ಪ್ರಕೃತಿಯ ಮಡಿಲಲ್ಲಿ ಸ್ವಚ್ಛಂದವಾಗಿ ಬದುಕುವ ವಾನರಗಳಿಗೆ ಕುರುಕುರೆ ಏಕೆ?”

    🖊️• ಬರಹ: ರಾಜೇಶ್ ಎಂ ಕಾನರ್ಪ ಮಂಗಗಳ ಕೈಯಲ್ಲಿ ಕುರುಕುರೇ ಪ್ಯಾಕೇಟ್!!! ಪ್ರೀತಿಯ ಹೆಸರಿನಲ್ಲಿ ವಾನರಗಳಿಗೆ ವಿಷವಿಕ್ಕುತ್ತಿರುವ ಮನುಜಕುಲ??? ವಾನರಗಳಿಗೆ ಪ್ಯಾಕೆಟ್‌ ತಿಂಡಿ ಬೇಡ, ಪ್ರಕೃತಿಯ ಆಹಾರ ಬೇಕು!!! ಪ್ರಕೃತಿಯ ಮಡಿಲಲ್ಲಿ ಸ್ವತಂತ್ರವಾಗಿ ಬದುಕಬೇಕಾದ ವಾನರಗಳು ಇಂದು ಮನುಷ್ಯರ ಕೈಯಲ್ಲಿರುವ ಕುರುಕುರೆ,…

    Spread the love

    You Missed

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    • By admin
    • September 3, 2026
    • 4 views
    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    • By admin
    • September 3, 2026
    • 3 views
    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    • By admin
    • September 3, 2026
    • 4 views
    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    ಚಿರಂಜೀವಿ ಯುವಕ ಮಂಡಲ ಕಾನರ್ಪದಲ್ಲಿ ಸೆ.6ರಂದು 35ನೇ ವರ್ಷದ ಮೊಸರು ಕುಡಿಕೆ ಅಷ್ಟಮಿ ಉತ್ಸವ ಹಾಗೂ ಕೆಸರುಗದ್ದೆಯಲ್ಲಿ ಗ್ರಾಮೀಣ ಕ್ರೀಡಾಕೂಟ ಆಯೋಜನೆ

    • By admin
    • September 3, 2026
    • 11 views
    ಚಿರಂಜೀವಿ ಯುವಕ ಮಂಡಲ ಕಾನರ್ಪದಲ್ಲಿ ಸೆ.6ರಂದು 35ನೇ ವರ್ಷದ ಮೊಸರು ಕುಡಿಕೆ ಅಷ್ಟಮಿ ಉತ್ಸವ ಹಾಗೂ ಕೆಸರುಗದ್ದೆಯಲ್ಲಿ ಗ್ರಾಮೀಣ ಕ್ರೀಡಾಕೂಟ ಆಯೋಜನೆ

    ಬೆಳ್ತಂಗಡಿ : ಲಾಯಿಲ ಗ್ರಾಮಸಭೆಯಲ್ಲಿ ಅಕ್ರಮಗಳ ಆರೋಪಕ್ಕೆ ಕಿಡಿ, ನಿವೇಶನದಿಂದ ಸರ್ಕಾರಿ ಜಮೀನು, ಕಳಪೆ ಕಾಮಗಾರಿವರೆಗೆ ಸಮಗ್ರ ತನಿಖೆಗೆ ಒತ್ತಾಯ

    • By admin
    • August 31, 2026
    • 5 views
    ಬೆಳ್ತಂಗಡಿ : ಲಾಯಿಲ ಗ್ರಾಮಸಭೆಯಲ್ಲಿ ಅಕ್ರಮಗಳ ಆರೋಪಕ್ಕೆ ಕಿಡಿ, ನಿವೇಶನದಿಂದ ಸರ್ಕಾರಿ ಜಮೀನು, ಕಳಪೆ ಕಾಮಗಾರಿವರೆಗೆ ಸಮಗ್ರ ತನಿಖೆಗೆ ಒತ್ತಾಯ

    ನಾಟ ಫಲಿತಾಂಶ: ಎಕ್ಸೆಲ್ ವಿದ್ಯಾರ್ಥಿಗಳ ಅಪೂರ್ವ ಸಾಧನೆ

    • By admin
    • August 27, 2026
    • 8 views
    ನಾಟ ಫಲಿತಾಂಶ: ಎಕ್ಸೆಲ್ ವಿದ್ಯಾರ್ಥಿಗಳ ಅಪೂರ್ವ ಸಾಧನೆ